Advertisement

Category: ಸರಣಿ

ಛಲದ ಮುಂದೆ ನ್ಯೂನತೆಗಳು ನಿಲ್ಲೋಲ್ಲ: ಕಾರ್ತಿಕ್ ಕೃಷ್ಣ ಸರಣಿ

ನನಗೆ ಎಲ್ಲಕ್ಕಿಂತ ಇಷ್ಟವಾದದ್ದು ಲೈಲ್ಸ್‌ನ ಖತರ್ನಾಕ್ ಎಂಟ್ರಿ. ಅವನು ಟ್ರ್ಯಾಕ್‌ಗೆ ಬರುವ ಕಾನ್ಫಿಡೆನ್ಸನ್ನು ನೀವೊಮ್ಮೆ ನೋಡಬೇಕು. ಆ ಕಾಂಫಿಡೆನ್ಸಿನಿಂದಲೇ ಅವನು ಅರ್ಧ ಪಂದ್ಯವನ್ನು ಗೆಲ್ಲುತ್ತಾನೆ ಎಂದು ನನಗನ್ನಿಸುತ್ತದೆ. ಹೆಸರು ಕೂಗಿದೊಡನೆ ವೇಗವಾಗಿ ಓಡಿ ಬಂದು, ಕುದುರೆಯಂತೆ ನೆಗೆದು ಇಡೀ ಪ್ರಪಂಚದ ಗಮನವನ್ನು ತನ್ನತ್ತ ಸೆಳೆಯುವ ಅವನ ಆತ್ಮವಿಶ್ವಾಸ ಎಂತವರನ್ನೂ ಹುಬ್ಬೇರಿಸುವಂತೆ ಮಾಡುತ್ತದೆ. ನೂತನ ಒಲಿಂಪಿಕ್ ಚಾಂಪಿಯನ್ ನೋಅ ಲೈಲ್ಸ್ ನಮ್ಮ ಆತ್ಮವಿಶ್ವಾಸವನ್ನೂ ಒಂದಷ್ಟು ಹೆಚ್ಚಿಸಲಿ ಅಲ್ಲವೇ?
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಮಧ್ಯಮ ವರ್ಗ ಮತ್ತು ಬೆಲೆಬಾಳುವ ಕಾಗದದ ಚೂರುಗಳು: ರಾಮ್ ಪ್ರಕಾಶ್ ರೈ ಕೆ. ಸರಣಿ

‘ಪ್ರತಿಯೊಬ್ಬ ಮನುಷ್ಯನಲ್ಲಿಯೂ ಒಬ್ಬ ಕಳ್ಳನಿದ್ದಾನೆ’ ಎಂಬ ವಾಕ್ಯ, ‘ಪ್ರತಿಯೊಬ್ಬ ಮನುಷ್ಯನಲ್ಲಿಯೂ ಒಂದು ಮಗುವಿದೆ’ ಎಂದು ಕೋಟಿಯ ಕೈಗಳಲ್ಲಿ ಬದಲಾಗುವುದೇ ಆತನ ವ್ಯಕ್ತಿತ್ವದ ಹೆಚ್ಚುಗಾರಿಕೆಯ ಸಂಕೇತ. ಚಿತ್ರದ ತುಂಬೆಲ್ಲಾ ರೂಪಕಗಳ ಬಳಕೆ ಹೇರಳವಾಗಿದೆ. ಕೋಟಿಯೆಂಬ ಹೆಸರು ಅದರಲ್ಲೊಂದು. ಇಲ್ಲಿ ಎಲ್ಲರೂ ಸಾಗುತ್ತಲೇ ಇರುತ್ತಾರೆ. ಥೇಟು ಪಟ್ಟಣದ ಯಾಂತ್ರಿಕ ಬದುಕಿನಂತೆ. ಆದರೆ ಆ ಪಯಣಕ್ಕೊಂದು ವೇಗ ನಿಯಂತ್ರಕ ಎದುರಾದಾಗ, ಹೇಗೆ ಉತ್ತರಿಸುತ್ತೇವೆ ಎನ್ನುವುದರ ಮೇಲೆ ಬದುಕು ನಿರ್ಧರಿತವಾಗುತ್ತದೆ ಎಂಬುದನ್ನು ನಿರೂಪಿಸಲಾಗಿದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಇರುವಲ್ಲೇ ಖುಷಿ ಕಾಣುವ ಪಾಠ: ಗುರುಪ್ರಸಾದ ಕುರ್ತಕೋಟಿ ಸರಣಿ

ಅಲ್ಲಿ ಇರೋದೇ ಬೇಡ, ನನ್ನ ದೇಶವೇ ನನಗೆ ಚಂದ, ಅಲ್ಲಿಯೇ ಸುಖ ಇದೆ, ವಾಪಸ್ಸು ಹೋಗಿಯೇ ತೀರುತ್ತೇನೆ ಅಂತೆಲ್ಲ ಬಡಬಡಿಸುತ್ತಿದ್ದ ನನಗೆ, ನಲವತ್ತು ವರ್ಷಗಳಿಗಿಂತ ಹೆಚ್ಚು ಕಾಲ ಅಲ್ಲಿದ್ದು, ತಾವು ಅಲ್ಲಿ ಸುಖವಾಗಿ ಇದ್ದೇವೆ, ಯಾವುದೇ ವಿಷಾದ ಇಲ್ಲ ಅಂತ ಮಾತು ಹಾಗೂ ಕೃತಿಯಿಂದ ತೋರಿಸಿದ ನನ್ನ ಅಕ್ಕ ಬೆರಗು ಮೂಡಿಸಿದ್ದಳು! ಆ ಕ್ಷಣದಿಂದ ಬೇರೆಯವರಿಗೆ, ನೀವ್ಯಾಕೆ ಅಮೆರಿಕೆಯಲ್ಲಿಯೇ ಇರಲು ಬಯಸುತ್ತೀರಿ…?
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ಮೂರನೆಯ ಬರಹ

Read More

ಕದಿರಪ್ಪನ ಪರಿಷೆ: ಸುಮಾ ಸತೀಶ್ ಸರಣಿ

ಸ್ಯಾನೆ ವಿಸೇಸವಾದ್ದು ಅಂದ್ರೆ ಆಟುದ್ ಸಾಮಾನಿನ ಬುಟ್ಟಿಗ್ಳು. ಕಾರು ಬೈಕು ಅಲ್ಲ ಬುಡಿ. ಆ ಬುಟ್ಟಿಗ್ಳಾಗೆ ಬುಡಿಗೆಗಳು ಇರ್ತಿದ್ವು. ಎಲ್ಡು-ಮೂರು ಬೆಟ್ಟಿನ ಗಾತ್ರದ ಮಣ್ಣಿನ‌‌ ಮಡಿಕೆ ಕುಡಿಕೆಗಳು, ಒಲೆ, ಬಟ್ಟಲು, ಮುಚ್ಚಳ, ಸೌಟು, ಹಂಚು ಇಂತಾ ಅಡ್ಗೆ ಮನೆ ಸಾಮಾನು. ಹುಡುಗೀರೆಲ್ಲಾ ಅಲ್ಲೇ ಸೇರ್ಕಂಡು ಒಬ್ಬಳು ಬಟ್ಟಲು ತಕಂಡ್ರೆ, ಇನ್ನೊಬ್ಬಳು ಒಲೆ ತಕಣಾದು. ಐದು ಪೈಸೆ, ಹತ್ತು ಪೈಸೆ, ಜಾಸ್ತಿ ಅಂದ್ರೆ ನಾಕಾಣೆ ಇರ್ತಿದ್ವು. ನಮ್ಗೋ ತಲಾಕೈವತ್ತು ಪೈಸೇ ಸಿಕ್ತಿದ್ರೆ ಹೆಚ್ಚು.‌
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ನಾವೆಂದೂ ಮರೆಯಲಾಗದ ಹಾಸ್ಟೆಲ್ ಕಲಿಸಿದ ಪಾಠ…: ಬಸವನಗೌಡ ಹೆಬ್ಬಳಗೆರೆ ಸರಣಿ

ಶನಿವಾರ ಶಾಲೆ ಬಿಟ್ಟಾಗಿನಿಂದ ಹಿಡಿದು ಸಂಜೆ 5;30 ವರೆಗೂ ನಾವು ವಿಶ್ರಾಂತಿ ತೆಗೆದುಕೊಳ್ಳದೆ ಕ್ಲೀನ್ ಮಾಡಿದರೆ ಮಾತ್ರ ಎಲ್ಲಾ ತೊಟ್ಟಿಗಳು ಕ್ಲೀನ್ ಮಾಡೋಕೆ ಸಾಧ್ಯ ಆಗ್ತಾ ಇತ್ತು. ಆ ನಂತರ ಸ್ನಾನ ಮಾಡಿ ನಮಗೆ ಸಿಕ್ಕ ಮೆಸ್ಸಿನಲ್ಲಿ ರಾತ್ರಿ ಊಟ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ತಾ ಇದ್ವಿ!! ‘ಭೂತಯ್ಯನ ಮಗ ಅಯ್ಯ’ ಫಿಲಮ್ಮಿನಲ್ಲಿ ಬರೋ ಸೀನಿನ ತರಹ ಕೆಲವರು ಸಾಕಷ್ಟು ಬಡಿಸಿಕೊಂಡು ತಿನ್ತಾ ಇದ್ರು. ನಮಗೆ ತುಂಬಾ ಖುಷಿ ಆಗ್ತಾ ಇತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ