Advertisement

Category: ಸರಣಿ

ಸರ್ಕಾರಿ ಸಿಬ್ಬಂದಿಯೊಂದಿಗೆ ನಡೆದ ಜಟಾಪಟಿ: ಎಚ್. ಗೋಪಾಲಕೃಷ್ಣ ಸರಣಿ

ಬೆಳಿಗ್ಗೆಯಿಂದ ಸುತ್ತಿದ್ದು, ಹಸಿವಿನ ಹೊಟ್ಟೆ, ನಾಲ್ಕು ಮಹಡಿ ಹತ್ತು ಎರಡು ಮಾಡಿ ಇಳಿ… ಬಿಪಿ ಏರಿತು ಕಾಣಿರಿ… ವಾಚಾಮಗೋಚರ ಪುಂಖಾನು ಪುಂಖವಾಗಿ ಬಾಯಿಂದ ಬೈಗುಳ ಹೆಂಗೆ ಯಾವ ಡೆಸಿಮಲ್‌ನಲ್ಲಿ ಉಕ್ಕಿತು ಅಂದರೆ ಮೇಲಿನ ಮಹಡಿ ಕೆಳಗಿನ ಮಹಡಿ ನಾನು ನಿಂತಿದ್ದ ಮಹಡಿ ಜನ ಸುತ್ತಲೂ ಸೇರಿಬಿಟ್ಟರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೆಂಟನೆಯ ಕಂತು

Read More

ಗಣಪನ ಸಂಗಡ ವ್ಯಾಕರಣ: ಸುಮಾವೀಣಾ ಸರಣಿ

ರುಚಿನೋಡಿ ರವೆಯನ್ನು ನೋಡುತ್ತಿದ್ದಂತೆ 12 ವರ್ಷದ ಮಗನ ನೆನಪಿಗೆ ಬಂದದ್ದೆ “ರವೆ ಉಂಡೆ ರವೆ ಉಂಡೆ ಬೀರಿನಲ್ಲಿ ಕಂಡೆ” ಎಂಬ ಶಿಶುಪದ್ಯದ ಸಾಲುಗಳು ಬಂದರೆ ನನಗೆಂತೂ ಆ ರವಮಂ ನಿರ್ಜಿತ ಕಂಠೀರವಮಂ ನಿರಸ್ತಘನ ರವಮಂ ಕೋಪಾರುಣ ನೇತ್ರಂ ಕೇಳ್ದಾ ನೀರೊಳಗಿರ್ದುಂ ಬೆಮರ್ತನ್ ಉರಗಪತಾಕಂ ಎಂಬ ರನ್ನನ ಕೃತಿಯ 6ನೇ ಸಂಧಿಯ 22 ನೆಯ ಪದ್ಯ. ಇದು ದುರ್ಯೋಧನನ್ನು ಆತನ ಕೋಪವನ್ನು ವಿವರಿಸುವ ಪದ್ಯ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ನಾಲ್ಕನೆಯ ಬರಹ ನಿಮ್ಮ ಓದಿಗೆ

Read More

ಪುಸ್ತಕ ಕೊಳ್ಳಲು ಹೋದವನಿಗೆ ಲೈಬ್ರರಿ ಕೊಟ್ಟವರು: ದರ್ಶನ್‌ ಜಯಣ್ಣ ಸರಣಿ

ಮಾತು ಕಥೆಯೆಲ್ಲ ಮುಗಿದಮೇಲೆ ಕಾರಿನ ಡಿಕ್ಕಿ ಮತ್ತೊಮ್ಮೆ ತೆಗೆಯಲು ಹೇಳಿದರು. ನಾನೂ ಹಾಗೆಯೇ ಮಾಡಲಾಗಿ ಸಾರಾ ಮತ್ತು ಆಲ್ವಿನ್ ದಂಪತಿಗಳು ತಮ್ಮ ಕಾರಿನಿಂದ ಹಲವು ಬ್ಯಾಗುಗಳಲ್ಲಿದ್ದ ನೂರಾರು ಪುಸ್ತಕಗಳನ್ನು ನಾನು ಕೇಳದೆಯೇ ಉಚಿತವಾಗಿ ನನ್ನ ಕಾರಿಗೆ ಸೇರಿಸಿದರು. ನಾನು ಇವೆಲ್ಲವನ್ನೂ ಯಾವಾಗ ಓದುವುದು ಎಂದು ಯೋಚಿಸುತ್ತಿದ್ದೆ! ಬೇಡವೆಂದರೂ ಅವರು ಕೇಳಲಿಲ್ಲ. ಹೀಗೆ ಪುಸ್ತಕ ಕೊಳ್ಳಲು ಹೊರಟವನಿಗೆ ಲೈಬ್ರರಿಯೇ ದೊರಕಿದ್ದು ಅತ್ಯಂತ ಚೇತೋಹಾರಿ ಸಂಗತಿ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಗೌರಮ್ಮನ ಜತ್ಯಾಗೇ ಬರಾ ಗಣಪ್ಪ: ಸುಮಾ ಸತೀಶ್ ಸರಣಿ

ನಮ್ಮೂರಿನ್ ಗೌರೀಗೆ ಪೂಜೆ ಮಾಡ್ತಿದ್ದಿದ್ದು ವಸಿ ಜನ್ವೇಯಾ. ಆದ್ರೆ ಗಣೇಶುನ್ನ ಬಿಡಾಕೇಂತ್ಲೇ ಊರಿನ್ ಜನ್ವೆಲ್ಲಾ ಮೇಲ್ ಬಿದ್ದು ಕಾದ್ಕಂಡು ಕುಂತಿರ್ತಿದ್ವಿ. ಐದನೇ ದಿನ ಸಂಜೀ ಹೊತ್ನಾಗೆ, ಗೌರಮ್ಮುಂಗೆ ಮಡ್ಲು ತುಂಬಿ, ಮಗುನ್ನ ಮುಂದಿಟ್ಗಂಡು, ಅವ್ವನ್ನ ಹಿಂದ್ ಕುಂಡ್ರಿಸಿ ಮೆರೋಣಿಗೆ ಹೊಂಡುತಿತ್ತು. ರಾಮ ದ್ಯಾವ್ರ ಗುಡೀಗ್ಳಿಂದ ನಮ್ಮನೆ ಆಸಿ, ಕೆರೆ ಏರಿ ಕಡೆ ಊರ ಗಂಡಸರು, ಹೆಂಗಸರು, ಚಳ್ಳೆ ಪಿಳ್ಳೆಗ್ಳು ಜೈಕಾರ ಹಾಕ್ಕಂಡು ಗಣಪತಿ ಬಾಪ್ಪ ಮೋರ್ಯಾ ಅಂತ ಕಿರುಚ್ಕಂಡು ಅವುರ್ ಹಿಂದಿಂದ್ಲೇ ಸಾಗುಸ್ಕಂಡು ಹೋಗ್ತಿದ್ವಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಗಣೇಶ ಚತುರ್ಥಿಯ ಆಚರಣೆಯ ಕುರಿತು ಹೇಳುತ್ತಲೇ ಈ ಸರಣಿ ಇಲ್ಲಿಗೆ ಮುಕ್ತಾಯವಾಗುತ್ತದೆ

Read More

ಮಲೆನಾಡಿನ ಹಬ್ಬಗಳ ಸಂಭ್ರಮ: ರೂಪಾ ರವೀಂದ್ರ ಜೋಶಿ ಸರಣಿ

ಅಂಥ ಬಡತನದಲ್ಲೂ, ಅಪ್ಪಯ್ಯ ಉಮೇದಿಯಿಂದ, ಅದಕ್ಕೆ ಬೇಕಾಗುವ ವಿವಿಧ ಬಣ್ಣದ ಹಾಳೆ, ಝರಿ ಎಲ್ಲವನ್ನೂ ಕೊಂಡು ತರುತ್ತಿದ್ದರು. ಆಗೆಲ್ಲ ಈಗಿನಂತೆ ವಿದ್ಯುತ್ ಸೌಲಭ್ಯ ನಮ್ಮಲ್ಲಿ ಇರಲಿಲ್ಲ. ಆದರೂ ಅದೊಂದು ಬಗೆಯ ಬಣ್ಣದ ಹಾಳೆಗಳನ್ನು ಕಲಾತ್ಮಕವಾಗಿ ಕತ್ತರಿಸಿ ಅಂಟಿಸಿ, ಕೇವಲ ಎಣ್ಣೆಯ ದೀಪದಲ್ಲೂ ಆ ಮಂಟಪ ಝಗಮಗಿಸುವಂತೆ ಮಾಡುತ್ತಿದ್ದರು. ಕೈಲಿ ಹಿಡಿದರೆ, ಸಣ, ಸಣ ಎಂದು ಸದ್ದಾಗುವಂತಿದ್ದ ಆ ಬಣ್ಣದ ಕಾಗದವನ್ನು “ಸಂತ್ರ ತಗಡು” ಅಂತ ಕರೆಯುತ್ತಿದ್ದರು. ಅದನ್ನು ಕಲಾತ್ಮಕವಾಗಿ ಕತ್ತರಿಸಿ, ಗುಬ್ಬಿ ಮಾಡಿ, ಮಂಟಪದ ಕಂಬಕ್ಕೆ, ಅಕ್ಕ ಪಕ್ಕದ ಪಟ್ಟಿಗಳಿಗೆ ಅಂಟಿಸಿ, ಅದಕ್ಕೆ ಝರಿಯ ಪುಡಿಯನ್ನು ಅಂಟಿಸಿ, ನಮ್ಮಣ್ಣ ಅದ್ಭುತವಾದ ಝಗಮಗ ಮಂಟಪ ಮಾಡುತ್ತಿದ್ದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ