Advertisement

Category: ಸರಣಿ

ಕಾಶ್ಮೀರ ಪ್ರವಾಸದ ನೆನಪುಗಳು…: ರಂಜಾನ್‌ ದರ್ಗಾ ಸರಣಿ

ಸೋನ್‌ ಮಾರ್ಗ ಪ್ರದೇಶದ ಕಡೆ ಹೋಗುವಾಗ ಭಾರಿ ಪ್ರಮಾಣದ ಹಿಮ ಬಿದ್ದ ಕಾರಣ ನಮ್ಮ ವಾಹನ ಮುಂದೆ ಸಾಗದ ಸ್ಥಿತಿಯುಂಟಾಯಿತು. ನಂತರ ಹಿಮದಲ್ಲಿ ಮುನ್ನುಗ್ಗುವ ಬೇರೆ ವಾಹನಗಳನ್ನು ಬಾಡಿಗೆ ಪಡೆಯಲಾಯಿತು. ಎತ್ತ ನೋಡಿದಡತ್ತ ಹಿಮ. ಸುತ್ತೆಲ್ಲ ಹಿಮ ಪರ್ವತಗಳು. ಆ ಪ್ರದೇಶದ ಕುರಿಗಾಯಿಗಳ ಪುಟ್ಟ ಪುಟ್ಟ ಮನೆಗಳೆಲ್ಲ ಹಿಮದ ರಾಶಿಯ ಹಾಗೆ ಕಾಣುತ್ತಿದ್ದವು. ಹಿಮ ಬೀಳುವ ಋತುವಿನಲ್ಲಿ ಆ ಕುರಿಗಾರರು ತಮ್ಮ ಕುರಿಗಳೊಂದಿಗೆ ಬೇರೆಡೆ ಹೋಗಿ ವಾಸಿಸುವರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಸಂಗೀತ ವಿಶಾರದರ ನೆಲೆವೀಡು…: ಎಚ್. ಗೋಪಾಲಕೃಷ್ಣ ಸರಣಿ

ಬೆಂಗಳೂರಿನಲ್ಲಿ ಹಿಂದೂಸ್ತಾನಿ ಸಂಗೀತದ ಬಗ್ಗೆ ಅಷ್ಟು ಒಲವು ಇಲ್ಲದ್ದಿದ್ದ ಕಾಲದಲ್ಲಿ ಅದರ ನೆಲೆಗೆ ಒಂದು ಸಾಂಘಟಿಕ ಶಕ್ತಿ ಬೇಕಿತ್ತು. ಅಂತಹ ಶಕ್ತಿ ಒದಗಲು ದತ್ತಾತ್ರೇಯ ಗರುಡರು ಒಂದು ಪ್ರೇರಕ ವ್ಯಕ್ತಿ. ಬೆಂಗಳೂರಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ನೆಲೆನಿಲ್ಲಲು, ಶ್ರೀ ರಾಮರಾವ್ ನಾಯಕ್ ಮತ್ತು ಶ್ರೀ ಶೇಷಾದ್ರಿ ಗವಾಯಿ ಅವರೊಡನೆ ದತ್ತಾತ್ರೇಯ ಗರುಡರು ಶ್ರಮಿಸಿದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಹೂವೆಂಬ ವಿಸ್ಮಯ: ಚಂದ್ರಮತಿ ಸೋಂದಾ ಸರಣಿ

ಅದು ಸಂಜೆಯಲ್ಲಿ ಬಿರಿಯುವ ಹೂವು. ಬೆಳಗ್ಗೆವರೆಗೆ ಬಿಟ್ಟರೆ ಪೂರ್ತಿಯಾಗಿ ಅರಳುತ್ತದೆ. ಅರಳಿದ ಮೇಲೆ ಕಟ್ಟಿದರೆ ಹೂವಿನ ಎಸಳು ಉದುರುತ್ತದೆ. ಹಾಗಾಗಿ, ರಾತ್ರಿ ಹೊತ್ತಿನಲ್ಲಿ ದೀಪದ ಬೆಳಕಿನಲ್ಲಿ ಕಟ್ಟಬೇಕಿತ್ತು. ಹೀಗೆ ಕಟ್ಟಿದ ಮಾಲೆಯನ್ನು ಮಾರನೆಯ ಬೆಳಗ್ಗೆ ಮುಡಿಯಬೇಕು/ದೇವರಿಗೆ ಅರ್ಪಿಸಬೇಕು ಇಲ್ಲವೆ ಬಿಸಿಲಿನಲ್ಲಿ ಬತ್ತದ ಹುಲ್ಲಿನ ಮೇಲೆ ಒಣಗಿಸಿ ಅದನ್ನು ಕಾಪಿಡಬೇಕು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಇದು ರಾಜಕೀಯ ಕಾಲ: ಚೈತ್ರಾ ಶಿವಯೋಗಿಮಠ ಸರಣಿ

ಶಿಂಬೋರ್ಸ್ಕಾರ ಜನಪ್ರಿಯತೆ ಮತ್ತು ಯಶಸ್ಸಿಗೆ ಕಾರಣವೇನು ಗೊತ್ತೇ? ವಿಶಿಷ್ಟ ಕಾವ್ಯ ಶೈಲಿ, ವಿಭಿನ್ನತೆ. ಯಾವುದೇ ಒಂದು ಕಾವ್ಯ ಶೈಲಿಗೆ ಜೋತು ಬೀಳದೆ, ತನ್ನದೇ ಆದ ನುಡಿಗಟ್ಟನ್ನು ಮತ್ತು ತನ್ನದೇ ಆದ ಭಾಷೆಯನ್ನು ಠಂಕಿಸಿದರು. ದೊಡ್ಡ ಐತಿಹಾಸಿಕ ಘಟನೆಗಳು, ಮಾನವ ಅಸ್ತಿತ್ವದ ಜೈವಿಕ ಸ್ಥಿತಿಗತಿ, ಕವಿಯ ಸಾಮಾಜಿಕ ಪಾತ್ರ ಮತ್ತು ತಾತ್ವಿಕ ವ್ಯವಸ್ಥೆಗಳು, ಸಿದ್ಧಾಂತಗಳಿಂದ ದೂರವೇ ಉಳಿಯಿತು ಅವರ ಕಾವ್ಯ.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಮಕ್ಕಳ ಶಿಕ್ಷಣದಲ್ಲಿ ಕುಟುಂಬದ ಜವಾಬ್ದಾರಿ: ಅನುಸೂಯ ಯತೀಶ್ ಸರಣಿ

ನೋಡಿ ಮೇಡಮ್ ನೀವು ಮೊದಲು ಅವನಿಗೆ ಟಿವಿ ನೋಡೋದು ಬಿಡಿಸಿ. ಶಾಲೆಯಿಂದ ಬಂದಾಗ ಟಿವಿ ಮುಂದೆ ಕೂತ್ರೆ ಅರ್ಧ ರಾತ್ರಿವರೆಗೂ ಒಂದಾದ ಮೇಲೆ ಒಂದರಂತೆ ಧಾರವಾಹಿ ನೋಡ್ತಾನೆ. ಮಲಗೋದು ಸರಿ ರಾತ್ರಿ ಆಗಿರುತ್ತೆ. ಬೆಳಗ್ಗೆ ಏಳಲು ತಲೆಸುತ್ತು ಅಂತಾನೆ. ನಿದ್ದೆ ಬರುತ್ತೆ ಅಂತ ಹತ್ತು ಗಂಟೆಯಾದರೂ ಮಲಕೊಂಡವ್ನೆ. ಅದಕ್ಕೆ ನಿಮ್ಮ ಮೇಲೆ ಕೋಪ ಬಂದಿದೆ. ನಿಮ್ಮ ಮೇಲೆ ಕೂಗಾಡಿದ್ದು ಇನ್ಯಾಕೆ ಅಂದುಕೊಂಡ್ರಿ ಅಂತ ಆಕೆಯ ಕಿರುಚಾಟ, ಹಾರಾಟದ ಹಿಂದಿನ ಸತ್ಯ ಬಾಯ್ಬಿಟ್ಟಳು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ