ಹಂಗೂ ಹಿಂಗೂ ತೇಜಸ್ವಿ ಇಂಗು ತಂದದ್ದು
ಈ ಮೂಡಿಗೆರೆ ಒಂದು ವಿಚಿತ್ರ ‘ಊರು ಮಾರಾಯರ್ರೆ’. ಇಂಥ ಮಾತಿನ ಶೈಲಿ ಗಮನಿಸಿ ಏನೋ ಆತ್ಮೀಯತೆ ಅನ್ನಿಸೊಲ್ವೆ. ಈ ಊರಿನ ಪೇಟೆ ಅಂಗಡಿಯವರ ರೀತಿನೇ ಹಾಗೆ. ಕಳೆದ ವರ್ಷ ನಮ್ಮ ತೋಟದಲ್ಲಿ ಭರ್ಜರಿ ಮಾವಿನಕಾಯಿ ದೊಡ್ಡ ಸೈಜಿನವು ಹಿಡಿದಿತ್ತು. ಆಪ್ತರಿಗೂ ಕೊಡಲಿಕ್ಕಾಗುತ್ತೆಂದು ಹೆಚ್ಚಿಗೆನೇ ಉಪ್ಪಿನಕಾಯಿ ಹಾಕಿದ್ದೆ. ಆಂಧ್ರ ಬಗೆಯಂತೆ. ಒಗ್ಗರಣೆ ಬೇಕೆಂದು ನನ್ನವರಿಗೆ ಹೇಳಿ ಇಂಗು ತರಿಸಿಕೊಂಡೆ. ಯಾಕೋ ಚೆನ್ನಾಗಿಲ್ಲ ಅನಿಸಿತ್ತು. ತೇಜಸ್ವಿ ಒಳ್ಳೆಯ ಇಂಗು ಬೇಕೆಂದದು ಒಂದೆರಡು ಅಂಗಡಿಯಲ್ಲಿ ಕೇಳಿದರು. ಆಗ ಸಿಗಲಿಲ್ಲವೆನ್ನಿ. ಆದರೆ ಕೆಲದಿನಗಳು ಕಳೆಯುವಷ್ಟರಲ್ಲಿ ಇಂಗಿನ ಸರಕೇ ಮನೆಗೆ ಬಂದು ಬಿದ್ದಿತ್ತು.
Read More