Advertisement

Category: ಸರಣಿ

ಸೌತ್‌ ಕೊರಿಯಾದ ʻಓಲ್ಡ್‌ಬಾಯ್’: ಚುರುಕು ನಿರೂಪಣೆಯ ಚೌಕಟ್ಟುಗಳು

ಕೋಣೆಯೊಳಗೆ ಅತ್ತಿಂದಿತ್ತ ಓಡಾಡಲು ಒಂದಿಷ್ಟು ಜಾಗ ಮತ್ತು ಹೊರಗಿನಿಂದ ಊಟ ಕೊಡಲು ಉಕ್ಕಿನ ಬಾಗಿಲಿನಲ್ಲಿ ಅಂಗೈ ಅಗಲದ ಕಿಂಡಿ. ಇಷ್ಟಲ್ಲದೆ ಉರುಳುವ ಗಂಟೆಗಳು ಸುಮ್ಮನೆ ಅವನನ್ನು ಸುತ್ತಿ ಚಿಂದಿ ಮಾಡುವುದನ್ನು ತಪ್ಪಿಸಿ, ಬೇರೆ ಕಡೆ ದೃಷ್ಟಿ ಹರಿಸುವಂತೆ ಮಾಡಲು ಸದಾ ಕಾಲ ಆನ್‌ ಆಗಿಯೇ ಇರುವ ಟೀವಿ. ಅದೇ ಅವನ ಸಂಗಾತಿ. ಉಳಿದಂತೆ ಆಗಾಗ ಹೊರಗೆಲ್ಲೋ ದೂರದಿಂದ ಅವನಿಗೆ ಆಗಾಗ ವಾಹನಗಳ ಓಡಾಟ ಇತ್ಯಾದಿಗಳ ಶಬ್ದ.

Read More

ಎ ಪ್ಯಾಸೇಜ್ ಟು ನಾವಿಗಲ್ಲಿ…

ನಮ್ಮ ಕೆಲ ಜನ ಎಷ್ಟೊಂದು ವಿಚಿತ್ರವಾಗಿರುತ್ತಾರೆ ಎನ್ನುವುದಕ್ಕೆ ಗೌಸ್ ಮತ್ತು ಖೈರುನ್ನೀಸಾಳ ನಿಶ್ಚಿತಾರ್ಥವೇ ಸಾಕ್ಷಿ. ತನ್ನ ಮಗಳನ್ನು ತಮ್ಮನಿಗೆ ಕೊಡಬೇಕೆಂದು ಗೌಸ್ ಅಕ್ಕ ನಿರ್ಧರಿಸಿದಳು. ಆತನೋ ಗಂಡನಾಗುವ ಸಾಧ್ಯತೆ ಇಲ್ಲದವನು. ಆತನ ನಡಿಗೆ, ಮಾತು ಮುಂತಾದವು ಹೆಂಗಸರ ಹಾಗೇ ಇದ್ದವು. ಅವನ ಸಹವಾಸವೂ ಹೆಣ್ಣುಮಕ್ಕಳ ಜೊತೆಗೇ ಇತ್ತು. ಕಂಡ ಕಂಡವರ ಮನೆಯಲ್ಲಿ ಕಲಬತ್ತಿನಲ್ಲಿ ಚಟ್ನಿ ಕುಟ್ಟೋದು ಮತ್ತು ಮಸಾಲೆ ಅರಿದು ಕೊಡೋದು ಎಂದರೆ ಆತನಿಗೆ…

Read More

ಯಾವುದು ಕನಸು? ಯಾವುದು ನನಸು?

ಸೋನ್ಯಾಳನ್ನು ಅವಳ ದಿಗ್ಭ್ರಾಂತಿ, ಅಸ್ಪಷ್ಟ ಭಯಗಳಲ್ಲಿ, ಅಪಶಕುನದ ಹೆದರಿಕೆಗಳಲ್ಲಿ ಹಾಗೇ ಬಿಟ್ಟು ಅವನು ಹೊರಟು ಹೋದ. ಅವನು ಇನ್ನೊಂದು ವಿಚಿತ್ರವಾದ, ಅನಿರೀಕ್ಷಿತವಾದ ಭೇಟಿ ನೀಡಿದ್ದ ಅನ್ನುವುದು ಆನಂತರ ತಿಳಿಯಿತು. ಹನ್ನೊಂದು ಗಂಟೆಯ ನಂತರ ತಿಳಿಯಿತು. ಮಳೆ ಇನ್ನೂ ನಿಂತಿರಲಿಲ್ಲ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಮುಸುಕಿನ ಮರೆಯ ಪಾಡು

ನಾವು ಹುಟ್ಟಿ ಬೆಳೆದಿದ್ದ ಊರಲ್ಲಿ ಚಿಕ್ಕಪ್ಪ ಎಂಬುವವನೊಬ್ಬ ಇದ್ದ. ರಭಸವಾದ ಕುಡುಕ. ಎಣ್ಣೆ ಕೊಡಿಸಿದರೆ ಎಲ್ಲಾ ನ್ಯಾಯವನ್ನು ತಲೆಕೆಳಗೆ ಮಾಡುತ್ತಿದ್ದ. ಆ ಮನೆಯಲ್ಲಿ ನನ್ನ ತಮ್ಮನಿಗೂ ನನಗೂ ಭಾಗ ಬರಬೇಕಿತ್ತು. ನಾನದರತ್ತ ತಿರುಗಿಯೂ ನೋಡಿರಲಿಲ್ಲ. ತಮ್ಮ ಬೆಂಗಳೂರು ಸೇರಿ ಅಲ್ಲೇ ಸಂಸಾರ ಹೂಡಿ ಒಂದು ಪುಟ್ಟ ಮನೆಯನ್ನು ಮಾಡಿಕೊಂಡಿದ್ದ. ಅವನಿಗೂ ಅಂತಹ ಆಸಕ್ತಿ ಇರಲಿಲ್ಲ. ಆದರೆ ನನ್ನಕ್ಕ ಬಿಟ್ಟಿರಲಿಲ್ಲ. ನಾವು ಭಾಗ ಕೊಡುವುದಿಲ್ಲ ಎಂದು ಅವನ ಮಗ ಹಾಗೂ ಹೆಂಡತಿ ಎಗರಾಡುತ್ತಿದ್ದರು.
ಮೊಗಳ್ಳಿ ಗಣೇಶ್‌ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ಮೂರನೆಯ ಕಂತು

Read More

ವಿಪರೀತ ನಡೆಯ ಅಜ್ಜ ಬಲಿಪರೂ, ಅವರ ವಿಪರೀತ ಪ್ರೀತಿಯೂ

ಅಜ್ಜ ಬಲಿಪರು ಸ್ವಲ್ಪ ವಿಕ್ಷಿಪ್ತ ಸ್ವಭಾವದವರೂ ಹೌದು. ನಾಲ್ಕಾರು ದಿನಗಳ ಕಾಲು ಉಪವಾಸ ಇರಬಲ್ಲರು, ನಾಲ್ಕಾರು ದಿನದ ಭೋಜನವನ್ನು ಒಮ್ಮೆಗೇ ಮಾಡಬಲ್ಲರು. ಬಡತನ, ತಿರುಗಾಟದ ಬದುಕು ಅವರದ್ದಾಗಿತ್ತು. ಹಾಗಾಗಿ ಜೀವನ ಕ್ರಮದಲ್ಲಿಯೂ ಈ ರೀತಿಯ ವ್ಯತ್ಯಾಸಗಳಿದ್ದವು. ಅದರಿಂದ ಅವರ ಆರೋಗ್ಯವೂ ಏರುಪೇರಾದುದುಂಟು. ಆದರೆ ಅವರಿಗೆ ಮೊಮ್ಮಗನ ಕಂಠ ಶಕ್ತಿಯ ಮೇಲೆ…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ