Advertisement

Category: ಸರಣಿ

ವಾರಂಟ್ ಎಂಬ ಮಾಯಾ ಬಜಾರ್

ಆಗ ರಸ್ತೆಗಳು ಅಷ್ಟು ಸರಿ ಇಲ್ಲದ್ದರಿಂದ ಮಡಿಕೇರಿಯಿಂದ ಬೆಂಗಳೂರಿಗೆ ಸಾಧಾರಣ ಏಳರಿಂದ ಎಂಟು ಗಂಟೆ ಸಮಯ ಬೇಕಿತ್ತು. ನಮ್ಮ ಸರಕಾರಿ ಕೆಂಪು ಬಸ್ಸಿನ ಪ್ರಯಾಣ ನಿಮಗೆಲ್ಲರಿಗೂ ಖಂಡಿತ ತಿಳಿದೇ ಇರುತ್ತದೆ. ಸೊಂಟ ಕುಲುಕಿಸಿಕೊಂಡು, ರಸ್ತೆಯ ಗುಂಡಿಗಳಲ್ಲಿ ಏಳುತ್ತಾ ಬೀಳುತ್ತಾ ಮುಂದೆ ಸಾಗಿದ ಬಸ್ಸನ್ನು ಮಂಡ್ಯದಲ್ಲಿ ತಿಂಡಿಗೆಂದು ನಿಲ್ಲಿಸಿದರು. ನಾನು ಕೆಳಗೆ ಇಳಿದು ಬಂದೆ. ಚಂದ್ರಶೇಖರನು ನನ್ನ ಜೊತೆಯಲ್ಲಿ ಬಂದು ನನ್ನ ಪಕ್ಕದಲ್ಲೇ ನಿಂತ.

Read More

ಅಮ್ಮನ ನಂಬಿಕೆ, ಔಷಧಿಗಳ ಮಹಿಮೆಯಲ್ಲಿ ಕಳೆದ ಬಾಲ್ಯ

ಬಡ ಗಿರಾಕಿಗಳಿಂದ ಹಿಡಿದು ಶ್ರೀಮಂತ ಗಿರಾಕಿಗಳವರೆಗೆ ಅವರ ಶಕ್ತ್ಯನುಸಾರ ಹಣ್ಣುಗಳನ್ನು ಕೊಳ್ಳುತ್ತಿದ್ದರು. ಹಣ್ಣುಗಳನ್ನು ಕೊಳ್ಳುವಾಗ ರೇಟಿಗೆ ಸಂಬಂಧಿಸಿದ ಕೊಸರಾಟ ಮಜಾ ಅನಿಸುತ್ತಿತ್ತು. ಗಿರಾಕಿಗಳು ತಮ್ಮ ಎಲ್ಲ ತರ್ಕ ಉಪಯೋಗಿಸಿ ಕಡಿಮೆ ಬೆಲೆಗೆ ಕೇಳುತ್ತಿದ್ದರು. ಆ ಹಣ್ಣುಗಳನ್ನು ತರುವ ಕಷ್ಟ, ಅದಕ್ಕಾಗಿ ಮಾಡಿದ ಖರ್ಚು, ಗಿರಾಕಿಗಳು ಕೇಳುವ ಬೆಲೆಗಿಂತ ಹೆಚ್ಚಾಗಿದೆ ಎಂಬುದನ್ನು ಅಜ್ಜಿ ವಿವರಿಸುತ್ತಿದ್ದಳು. ಇಷ್ಟಕ್ಕಾದರೆ ಕೊಡು ಎಂದು ಹೇಳುತ್ತ ಗಿರಾಕಿಗಳು ಮುಂದೆ ಹೋದಂತೆ ಮಾಡುತ್ತಿದ್ದರು. ಅಜ್ಜಿ ಕರೆಯದೆ ಇದ್ದಾಗ ಮತ್ತೆ ವಾಪಸ್ ಬರುತ್ತಿದ್ದರು.

Read More

ಸಮಾಜ ವಿಮರ್ಶಕ ಕವಿ ಅ.ಗೌ.ಕಿನ್ನಿಗೋಳಿ

ಕರಾವಳಿಯಲ್ಲಿ ಖಂಡಕಾವ್ಯಗಳನ್ನು ಬರೆದ ನವೋದಯ ಕವಿಪರಂಪರೆಯ ಕೊನೆಯ ಕೊಂಡಿ ಅಂದರೆ, ಕರಾವಳಿಯ ಮೊದಲನೆಯ ಗಣ್ಯ ದಲಿತ ಕವಿ ಅಚ್ಯುತಗೌಡ ಕಿನ್ನಿಗೋಳಿ.  ಅ.ಗೌ.ಕಿನ್ನಿಗೋಳಿ ಎಂಬ ಹೃಸ್ವ ಹೆಸರೇ ಅವರ ಕಾವ್ಯನಾಮ.  ಸಮಕಾಲೀನ ಕವಿಗಳ ಕಾವ್ಯವಸ್ತುವನ್ನೇ ಮುಂದುವರೆಸಿ, ಅದಕ್ಕೆ ಬೇರೊಂದು ಮುಕ್ತಾಯ ನೀಡುವ ಅವರ ಶೈಲಿ ವಿಭಿನ್ನವಾದುದು.  ಕನ್ನಡ ಮತ್ತು ಸಂಸ್ಕೃತ ಪದವಿ ಪಡೆದಿದ್ದ ಅವರು ಯಕ್ಷಗಾನ ಅರ್ಥಧಾರಿಯಾರಿಯೂ ಆಗಿದ್ದರು.

Read More

ಅಳುಕು… ಹುಳುಕು.. ತಳುಕು…

ಸ್ವಿದ್ರಿಗೈಲೋವ್‌ನನ್ನು ಭೇಟಿ ಮಾಡಲು ಧಾವಿಸುತ್ತಿದ್ದ ಅವನಿಂದ ಹೊಸದೇನನ್ನಾದರೂ ನಿರೀಕ್ಷೆ ಮಾಡಿದ್ದನೋ? ತಪ್ಪಿಸಿಕೊಳ್ಳುವ ಹೊಸ ದಿಕ್ಕು, ದಾರಿ? ಮುಳುಗುತ್ತಿರುವಾಗ ಹುಲ್ಲುಕಡ್ಡಿಯನ್ನೂ ಗಟ್ಟಿಯಾಗಿ ಹಿಡಿಯುತ್ತಾರೆ! ವಿಧಿಯೋ ಮತ್ತೇನೋ ಅವರಿಬ್ಬರನ್ನೂ ಒಟ್ಟಿಗೆ ತರುತ್ತಿತ್ತೋ? ಬರೀ ದಣಿವು, ಹತಾಶೆ ಇರಬಹುದು; ಸ್ವಿದ್ರಿಗೈಲೋವ್‍ ಅಲ್ಲದೆ ಬೇರೆ ಇನ್ಯಾರೋ ಅವನಿಗೆ ಬೇಕಾಗಿದ್ದು, ಈ ಕ್ಷಣದಲ್ಲಿ ಸ್ವಿದ್ರಿಗೈಲೋವ್ ಅಲ್ಲಿದ್ದಿರಬಹುದು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಲುಪ್ತವಾಗಿ ಹೋದ ‘ಪ್ರಸಂಗ ಕಥಾಸಾರ’ ಕುರಿತ ವಿಚಾರಗಳು

ಹಿಂದಿನ ಕಾಲದಲ್ಲಿ ಭಾಗವತರು ಪ್ರಸಂಗದ ಮೊದಲಿನಿಂದ ಕೊನೆಯವರೆಗಿನ ಪದ್ಯಗಳನ್ನು ಬಾಯಿಪಾಠ ಮಾಡಿಕೊಂಡೇ ತಯಾರಾಗಿರಬೇಕಾಗಿತ್ತು. ಇಂತಹಾ ಆದಿಯ ಪದ್ಯಗಳಿಗೆ ಕಥಾಸಾರ ಎಂಬ ಹೆಸರು. ಇದನ್ನು ಕಥಾನುಸಾರವೆಂದೂ ಕರೆಯುತ್ತಿದ್ದರು. ಅಜ್ಜ ಬಲಿಪ ನಾರಾಯಣ ಭಾಗವತರ ಕಾಲ ಮತ್ತು ಅದಕ್ಕೂ ಮೊದಲು ಪ್ರಸಂಗದ ಕಥಾಸಾರವನ್ನು ಪ್ರದರ್ಶನದ ವೇಳೆ ಕೈ ಬಿಡುವ ಪದ್ಧತಿ ಇರಲಿಲ್ಲ.ಸದ್ಯದ ಸಂದರ್ಭ ಕಥಾಸಾರ ಅಂದರೇನೆಂಬುದೇ ಅರಿವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ