Advertisement

Category: ಸರಣಿ

ಕುಂಡೆಹಬ್ಬ ತಂದ ಮಂಡೆಬಿಸಿ

ಕೊಡಗಿನ ಬುಡಕಟ್ಟು ಜನರ ಒಂದು ವಿಶಿಷ್ಟವಾದ ಹಬ್ಬ ‘ಬೋಡ್ ನಮ್ಮೆ’  ಅಥವಾ ‘ಕುಂಡೆ’ ಹಬ್ಬ. ಈ ಹಬ್ಬದಲ್ಲಿ ಇವರು ವಿಚಿತ್ರ ವೇಷ ಭೂಷಣಗಳನ್ನು ಧರಿಸುತ್ತಾರೆ. ಕೆಲವರು ಮೈಯ್ಯನ್ನು ಸೊಪ್ಪಿನಿಂದ ಮುಚ್ಚಿ, ಇನ್ನು ಕೆಲವರು ನವೀನ ಪೋಷಾಕುಗಳ ಜೊತೆಗೆ, ಕಪ್ಪು ಕನ್ನಡಕ, ತಲೆಗೆ ಚಿತ್ರ ವಿಚಿತ್ರವಾದ ಟೋಪಿಗಳನ್ನು ಹಾಕಿಕೊಂಡು ವೇಷ ಕಟ್ಟುತ್ತಾರೆ. ಹಬ್ಬವೆಂದ ಮೇಲೆ ಕುಡಿತ ಕುಣಿತ, ತಿನಿಸುಗಳಿರಬೇಕಲ್ಲವೇ. ಆದರೆ ಈ ಹಬ್ಬಕ್ಕೆ ಸಂಬಂಧಿಸಿದ ಘಟನೆಯೊಂದು ನನ್ನ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದುಕೊಂಡಿದೆ. ಅಷ್ಟೇನೂ ಒಳ್ಳೆಯ ಘಟನೆಯಲ್ಲ ಅದು. ಹಬ್ಬ ತಂದಿಟ್ಟ ದುರಂತವು ಅನಾವರಣಗೊಳಿಸಿದ ಸತ್ಯಗಳನ್ನು  ಡಾ. ಕೆ.ಬಿ. ಸೂರ್ಯಕುಮಾರ್ ‘ನೆನಪುಗಳ ಮೆರವಣಿಗೆ’ ಅಂಕಣದಲ್ಲಿ ಪ್ರಸ್ತುತಪಡಿಸಿದ್ದಾರೆ. 

Read More

‘ಭಕ್ತರಿಗೆ ಭಾಗ್ಯ ಕೊಡು. ಮಕ್ಕಳಿಗೆ ಬಡತನ ಕೊಡು’

ಒಬ್ಬ ವ್ಯಕ್ತಿ ಹೀಗೆ ದೇವನಾಗಲು ಹೇಗೆ ಸಾಧ್ಯ ಎಂದು ವಿಚಾರವಾದಿಗಳಿಗೆ ಅನಿಸದೆ ಇರದು. ಜನಸಮುದಾಯಗಳ ಬಗ್ಗೆ ಅತೀವ ಕಾಳಜಿಯುಳ್ಳ ಸಾಮಾಜಿಕ ಮನುಷ್ಯ ಜನಪದರ ಕಣ್ಣಲ್ಲಿ ದೇವರಾಗಿ ಕಾಣುತ್ತಾನೆ. ತಮ್ಮ ಮೇಲೆ ನಿಷ್ಕಾಮ ಪ್ರೀತಿಯ ಮಳೆಗೆರೆಯುವವನನ್ನು ಜನಸಾಮಾನ್ಯರು ಹೀಗೆ ದೇವರಾಗಿಸುತ್ತಾರೆ. ಅಮೋಘಸಿದ್ಧನಂಥ ಅಖಂಡ ಪ್ರೀತಿಯೇ ದೈವೀ ಗುಣ. ಅಂಥ ಗುಣವುಳ್ಳವರೇ ದೇವರು. ಅದ್ದರಿಂದ ಇಂಥ ಸಿದ್ಧರ ಕುರಿತ ಡೊಳ್ಳಿನ ಪದಗಳೆಲ್ಲ “ನಮ್ಮಯ ದೇವರು ಬಂದಾರ ಬನ್ನಿರೇ” ಎಂದೇ ಪ್ರಾರಂಭವಾಗುತ್ತವೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಅಪರಾಧ ಮತ್ತು ಶಿಕ್ಷೆ: ನಾನೆಲ್ಲಿರುವೆ….!

ರಾಸ್ಕೋಲ್ನಿಕೋವ್ ಬಲ ಮೊಳಕೈಯನ್ನು ಟೇಬಲ್ಲಿನ ಮೇಲೆ ಆರಾಮವಾಗಿರಿಸಿ, ಎಡ ಮೊಳಕೈಯನ್ನು ಊರಿ ಅಂಗೈಯಲ್ಲಿ ಮುಖ ಇರಿಸಿ ಸ್ವಿದ್ರಿಗೈಲೋವ್‍ನನ್ನು ದಿಟ್ಟಿಸಿದ. ಒಂದು ನಿಮಿಷದಷ್ಟು ಹೊತ್ತು ಅವನ ಮುಖ ನೋಡುತ್ತಲೇ ಇದ್ದ. ಯಾಕೋ ಅದು ವಿಚಿತ್ರವಾದ ಮುಖ, ಮುಖವಾಡದಂಥ ಮುಖ, ಕೆಂಪು ತುಟಿ, ಬಿಳಿಯ ಮುಖ, ನಸುಗೆಂಪು ಕೆನ್ನೆ, ದಟ್ಟವಾದ ಹೊಂಬಣ್ಣದ ಕೂದಲು, ಗಂಭೀರವಾದ ನೀಲಿ ಕಣ್ಣು, ಭಾರ ಅನಿಸುವ ನಿಶ್ಚಲ ದೃಷ್ಟಿ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ತಗಡಿನ ಸಂದಿಯಿಂದಲೇ ರಂಗೇರಿಸುತ್ತಿದ್ದ ವಸ್ತು ಪ್ರದರ್ಶನ

ನಮಗೂ ಒಂದು ದಿನ ಅದೃಷ್ಟ ಖುಲಾಯಿಸಿ ಬಿಟ್ಟಿತು. ಸೆಕ್ಯುರಿಟಿಯ ಮನಕರಗಿ ಓನರ್ ಇಲ್ಲದ ಸಮಯ ನೋಡಿ ನಮ್ಮನ್ನು ಒಳ ಬಿಟ್ಟಿದ್ದ. ಆ ಸೌಂಡು, ಜಗಮಗ, ರಾಟೆ, ಆಟಗಳು, ಸರ್ಕಸ್‍ನ ಪ್ರಾಣಿಗಳ ಸದ್ದು, ನಗರಿಗರು ಅಲ್ಲಲ್ಲೆ ನಿಂತು ತಿನ್ನುತ್ತಿದ್ದ ತಿನಿಸುಗಳು, ಇವೆಲ್ಲ ಅತ್ಯಾಕರ್ಷಕವಾಗಿದ್ದವು. ಅವನ್ನೆಲ್ಲ ಅನುಭವಿಸಲು ದುಡ್ಡಿಲ್ಲದ ನಾವು ನೋಡಿಯೇ ಹೆಚ್ಚು ಥ್ರಿಲ್ ಆಗುತ್ತಿದ್ದೆವು. ಈಗ ಅವೆಲ್ಲ ಕೈಗೆಟುಕುವಂತೆಯೇ ಇದ್ದರೂ, ಅವನ್ನೆಲ್ಲ ಆಡುವ ಧೈರ್ಯವನ್ನು, ಮನಸ್ಸನ್ನು ಕಳೆದುಕೊಂಡಿದ್ದೇವೆ. ‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಅನುಭವ ಕಥನ.

Read More

ಚರಿತ್ರಾರ್ಹ ಲಕ್ಷಣಗಳಿರುವ ಫ್ರಾನ್ಸ್‌ನ ʻದ ಆರ್ಟಿಸ್ಟ್‌ʼ

ಮೂಕಿ ಚಿತ್ರವೊಂದು ಈಗ ಸವಾಲುಗಳನ್ನು ಎದುರಿಸಿ ಗೆಲ್ಲುವ ಸಾಧ್ಯತೆ ಇಲ್ಲ ಎನ್ನುವ ತೀವ್ರವಾದ ಅನಿಸಿಕೆಯಿದೆ. ಆದರೆ ಎಲ್ಲರ ಪೂರ್ವಗ್ರಹ, ಅನುಮಾನಗಳನ್ನು ಸಾರಾಸಗಟಾಗಿ ನೆಲಸಮ ಮಾಡಿ, ಅಷ್ಟೆತ್ತರಕ್ಕೆ ಪತಾಕೆ ಹಾರಿಸಿದ ಚಿತ್ರ ʻದ ಆರ್ಟಿಸ್ಟ್‌ʼ. ಹಳೆಯ ದಾರಿಗಳನ್ನು ಹೊಸದಾರಿಗಳನ್ನು ಅನ್ವೇಷಿಸುವಂತೆ ಸಂದೇಶ ನೀಡುವ ಫ್ರಾನ್ಸ್ ನ ಚಿತ್ರವಿದು. ಈ ಚಿತ್ರದ ಆಶಯವೇನು ಎಂಬ ಬಗ್ಗೆ ಪ್ರಶ್ನೆಗಳು ಮೂಡುವುದು ಸಹಜ. 2011ರಲ್ಲಿ ತೆರೆಕಂಡ ಚಿತ್ರವಿದು. ಹಾಗಾಗಿ ಅದರ ಪ್ರಭಾವ, ಮಹತ್ವಗಳ ಪೂರ್ಣ ಅರಿವು ದೊರೆಯಬೇಕಾದರೆ ಇನ್ನಷ್ಟು ಕಾಲ ಸರಿಯಬೇಕು. ಲೋಕಸಿನಿಮಾ ಟಾಕೀಸ್ ನಲ್ಲಿ ಎ.ಎನ್. ಪ್ರಸನ್ನ ಬರಹ ನಿಮ್ಮ ಓದಿಗಾಗಿ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ