Advertisement

Category: ಸರಣಿ

ನವೋದಯ ದೀಪಕ್ಕೆ ಎಣ್ಣೆ ಹೊಯ್ದ ಕವಿ

ಸೇಡಿಯಾಪು ಕೃಷ್ಣಭಟ್ಟರಿಗೆ ಮಂಗಳೂರಿನಲ್ಲಿ ಪಂಡಿತ ಮುಳಿಯ ತಿಮ್ಮಪ್ಪಯ್ಯನವರ ಮಾರ್ಗದರ್ಶನ ಮತ್ತು ತರುಣ ಕವಿ ಕಡೆಂಗೊಂಡ್ಲು ಶಂಕರಭಟ್ಟರ ಗೆಳೆತನದ ಲಾಭವಾಯಿತು. ಅವರಿಬ್ಬರಿಂದ ಪ್ರೇರಣೆ ಪಡೆದು, ಮದ್ದಿನಂಗಡಿಯಲ್ಲಿ ಕುಳಿತೇ ಕನ್ನಡ – ಸಂಸ್ಕೃತ ಭಾಷೆಗಳನ್ನು ಖಾಸಗಿಯಾಗಿ ಅಧ್ಯಯನ ನಡೆಸಿ, ಮದರಾಸು ಸರ್ಕಾರ ನಡೆಸುತ್ತಿದ್ದ ‘ವಿದ್ವಾನ್’ ಪರೀಕ್ಷೆಯಲ್ಲಿ ಪಾಸಾದರು. ಆ ಪದವಿಯ ಬಲದಿಂದ 1929 ರಲ್ಲಿ ಸೈಂಟ್ ಅಲೋಷಿಯಸ್ ಹೈಸ್ಕೂಲಿನಲ್ಲಿ ಕನ್ನಡ ಪಂಡಿತರಾಗಿ ಸೇರಿಕೊಂಡು ಸುಮಾರು ಇಪ್ಪತ್ತು ವರ್ಷಗಳ ಕಾಲ ಕೆಲಸ ಮಾಡಿದರು.

Read More

ತಿಪಟೂರು ಕೆಡಿಸಿ ಬಂದವರು…!

ಚಿಕ್ಕನಾಯಕನಹಳ್ಳಿಯ ಸಾರ್ವಜನಿಕ ಹಾಸ್ಟೆಲ್ ವಿಚಿತ್ರ ಅನುಭವ ಕೊಡತೊಡಗಿತು. ಇಲ್ಲಿ ಬೆಳಗ್ಗೆ ಆರಕ್ಕೆ ಕಡ್ಡಾಯವಾಗಿ ಏಳಬೇಕಿತ್ತು. ಎದ್ದು ಓದಿಕೊಳ್ಳುವುದು ಒತ್ತಟ್ಟಿಗಿರಲಿ ಪ್ರತಿಯೊಬ್ಬರೂ ಭಟ್ಟರು ನೇಮಿಸಿದ ಕೆಲಸಗಳನ್ನ ಮಾಡಬೇಕಿತ್ತು. ಕುಳ್ಳಗೆ ದಪ್ಪಗೆ ಮೀಸೆಬಿಟ್ಟಿದ್ದ ಹನುಮಂತನೆಂಬ ಭಟ್ಟನಿದ್ದ. ಹೇಳಿದ ಕೆಲಸ ಮಾಡದವರನ್ನ ಆತ ಅಟ್ಟಾಡಿಸಿಕೊಂಡು ಹೊಡೆಯುತ್ತಿದ್ದ. ಬೆಳಗಿನ ಊಟಕ್ಕೆ ಮುಂಚೆ ಯಾರ್ಯಾರು ಏನೇನು ತಪ್ಪು ಮಾಡಿದರೆಂದು ವಿಚಾರಣೆ ನಡೆಸಿ, ಮೂಲೆಯಲ್ಲಿ ಸದಾ ನಿಂತಿರುತ್ತಿದ್ದ ಉದ್ದನೆಯ ಸಿದ್ದರಾಮಣ್ಣನನ್ನು(ಕೋಲನ್ನ) ತೆಗೆದುಕೊಂಡು ದನಕ್ಕೆ ಬಡಿಯುವಂತೆ ಬಡಿಯುತ್ತಿದ್ದ.
‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಅನುಭವ ಕಥನದ ಒಂಭತ್ತನೆಯ ಕಂತು.

Read More

ಕುಂಡೆಹಬ್ಬ ತಂದ ಮಂಡೆಬಿಸಿ

ಕೊಡಗಿನ ಬುಡಕಟ್ಟು ಜನರ ಒಂದು ವಿಶಿಷ್ಟವಾದ ಹಬ್ಬ ‘ಬೋಡ್ ನಮ್ಮೆ’  ಅಥವಾ ‘ಕುಂಡೆ’ ಹಬ್ಬ. ಈ ಹಬ್ಬದಲ್ಲಿ ಇವರು ವಿಚಿತ್ರ ವೇಷ ಭೂಷಣಗಳನ್ನು ಧರಿಸುತ್ತಾರೆ. ಕೆಲವರು ಮೈಯ್ಯನ್ನು ಸೊಪ್ಪಿನಿಂದ ಮುಚ್ಚಿ, ಇನ್ನು ಕೆಲವರು ನವೀನ ಪೋಷಾಕುಗಳ ಜೊತೆಗೆ, ಕಪ್ಪು ಕನ್ನಡಕ, ತಲೆಗೆ ಚಿತ್ರ ವಿಚಿತ್ರವಾದ ಟೋಪಿಗಳನ್ನು ಹಾಕಿಕೊಂಡು ವೇಷ ಕಟ್ಟುತ್ತಾರೆ. ಹಬ್ಬವೆಂದ ಮೇಲೆ ಕುಡಿತ ಕುಣಿತ, ತಿನಿಸುಗಳಿರಬೇಕಲ್ಲವೇ. ಆದರೆ ಈ ಹಬ್ಬಕ್ಕೆ ಸಂಬಂಧಿಸಿದ ಘಟನೆಯೊಂದು ನನ್ನ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದುಕೊಂಡಿದೆ. ಅಷ್ಟೇನೂ ಒಳ್ಳೆಯ ಘಟನೆಯಲ್ಲ ಅದು. ಹಬ್ಬ ತಂದಿಟ್ಟ ದುರಂತವು ಅನಾವರಣಗೊಳಿಸಿದ ಸತ್ಯಗಳನ್ನು  ಡಾ. ಕೆ.ಬಿ. ಸೂರ್ಯಕುಮಾರ್ ‘ನೆನಪುಗಳ ಮೆರವಣಿಗೆ’ ಅಂಕಣದಲ್ಲಿ ಪ್ರಸ್ತುತಪಡಿಸಿದ್ದಾರೆ. 

Read More

‘ಭಕ್ತರಿಗೆ ಭಾಗ್ಯ ಕೊಡು. ಮಕ್ಕಳಿಗೆ ಬಡತನ ಕೊಡು’

ಒಬ್ಬ ವ್ಯಕ್ತಿ ಹೀಗೆ ದೇವನಾಗಲು ಹೇಗೆ ಸಾಧ್ಯ ಎಂದು ವಿಚಾರವಾದಿಗಳಿಗೆ ಅನಿಸದೆ ಇರದು. ಜನಸಮುದಾಯಗಳ ಬಗ್ಗೆ ಅತೀವ ಕಾಳಜಿಯುಳ್ಳ ಸಾಮಾಜಿಕ ಮನುಷ್ಯ ಜನಪದರ ಕಣ್ಣಲ್ಲಿ ದೇವರಾಗಿ ಕಾಣುತ್ತಾನೆ. ತಮ್ಮ ಮೇಲೆ ನಿಷ್ಕಾಮ ಪ್ರೀತಿಯ ಮಳೆಗೆರೆಯುವವನನ್ನು ಜನಸಾಮಾನ್ಯರು ಹೀಗೆ ದೇವರಾಗಿಸುತ್ತಾರೆ. ಅಮೋಘಸಿದ್ಧನಂಥ ಅಖಂಡ ಪ್ರೀತಿಯೇ ದೈವೀ ಗುಣ. ಅಂಥ ಗುಣವುಳ್ಳವರೇ ದೇವರು. ಅದ್ದರಿಂದ ಇಂಥ ಸಿದ್ಧರ ಕುರಿತ ಡೊಳ್ಳಿನ ಪದಗಳೆಲ್ಲ “ನಮ್ಮಯ ದೇವರು ಬಂದಾರ ಬನ್ನಿರೇ” ಎಂದೇ ಪ್ರಾರಂಭವಾಗುತ್ತವೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಅಪರಾಧ ಮತ್ತು ಶಿಕ್ಷೆ: ನಾನೆಲ್ಲಿರುವೆ….!

ರಾಸ್ಕೋಲ್ನಿಕೋವ್ ಬಲ ಮೊಳಕೈಯನ್ನು ಟೇಬಲ್ಲಿನ ಮೇಲೆ ಆರಾಮವಾಗಿರಿಸಿ, ಎಡ ಮೊಳಕೈಯನ್ನು ಊರಿ ಅಂಗೈಯಲ್ಲಿ ಮುಖ ಇರಿಸಿ ಸ್ವಿದ್ರಿಗೈಲೋವ್‍ನನ್ನು ದಿಟ್ಟಿಸಿದ. ಒಂದು ನಿಮಿಷದಷ್ಟು ಹೊತ್ತು ಅವನ ಮುಖ ನೋಡುತ್ತಲೇ ಇದ್ದ. ಯಾಕೋ ಅದು ವಿಚಿತ್ರವಾದ ಮುಖ, ಮುಖವಾಡದಂಥ ಮುಖ, ಕೆಂಪು ತುಟಿ, ಬಿಳಿಯ ಮುಖ, ನಸುಗೆಂಪು ಕೆನ್ನೆ, ದಟ್ಟವಾದ ಹೊಂಬಣ್ಣದ ಕೂದಲು, ಗಂಭೀರವಾದ ನೀಲಿ ಕಣ್ಣು, ಭಾರ ಅನಿಸುವ ನಿಶ್ಚಲ ದೃಷ್ಟಿ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ