Advertisement

Category: ಸರಣಿ

ತಗಡಿನ ಸಂದಿಯಿಂದಲೇ ರಂಗೇರಿಸುತ್ತಿದ್ದ ವಸ್ತು ಪ್ರದರ್ಶನ

ನಮಗೂ ಒಂದು ದಿನ ಅದೃಷ್ಟ ಖುಲಾಯಿಸಿ ಬಿಟ್ಟಿತು. ಸೆಕ್ಯುರಿಟಿಯ ಮನಕರಗಿ ಓನರ್ ಇಲ್ಲದ ಸಮಯ ನೋಡಿ ನಮ್ಮನ್ನು ಒಳ ಬಿಟ್ಟಿದ್ದ. ಆ ಸೌಂಡು, ಜಗಮಗ, ರಾಟೆ, ಆಟಗಳು, ಸರ್ಕಸ್‍ನ ಪ್ರಾಣಿಗಳ ಸದ್ದು, ನಗರಿಗರು ಅಲ್ಲಲ್ಲೆ ನಿಂತು ತಿನ್ನುತ್ತಿದ್ದ ತಿನಿಸುಗಳು, ಇವೆಲ್ಲ ಅತ್ಯಾಕರ್ಷಕವಾಗಿದ್ದವು. ಅವನ್ನೆಲ್ಲ ಅನುಭವಿಸಲು ದುಡ್ಡಿಲ್ಲದ ನಾವು ನೋಡಿಯೇ ಹೆಚ್ಚು ಥ್ರಿಲ್ ಆಗುತ್ತಿದ್ದೆವು. ಈಗ ಅವೆಲ್ಲ ಕೈಗೆಟುಕುವಂತೆಯೇ ಇದ್ದರೂ, ಅವನ್ನೆಲ್ಲ ಆಡುವ ಧೈರ್ಯವನ್ನು, ಮನಸ್ಸನ್ನು ಕಳೆದುಕೊಂಡಿದ್ದೇವೆ. ‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಅನುಭವ ಕಥನ.

Read More

ಚರಿತ್ರಾರ್ಹ ಲಕ್ಷಣಗಳಿರುವ ಫ್ರಾನ್ಸ್‌ನ ʻದ ಆರ್ಟಿಸ್ಟ್‌ʼ

ಮೂಕಿ ಚಿತ್ರವೊಂದು ಈಗ ಸವಾಲುಗಳನ್ನು ಎದುರಿಸಿ ಗೆಲ್ಲುವ ಸಾಧ್ಯತೆ ಇಲ್ಲ ಎನ್ನುವ ತೀವ್ರವಾದ ಅನಿಸಿಕೆಯಿದೆ. ಆದರೆ ಎಲ್ಲರ ಪೂರ್ವಗ್ರಹ, ಅನುಮಾನಗಳನ್ನು ಸಾರಾಸಗಟಾಗಿ ನೆಲಸಮ ಮಾಡಿ, ಅಷ್ಟೆತ್ತರಕ್ಕೆ ಪತಾಕೆ ಹಾರಿಸಿದ ಚಿತ್ರ ʻದ ಆರ್ಟಿಸ್ಟ್‌ʼ. ಹಳೆಯ ದಾರಿಗಳನ್ನು ಹೊಸದಾರಿಗಳನ್ನು ಅನ್ವೇಷಿಸುವಂತೆ ಸಂದೇಶ ನೀಡುವ ಫ್ರಾನ್ಸ್ ನ ಚಿತ್ರವಿದು. ಈ ಚಿತ್ರದ ಆಶಯವೇನು ಎಂಬ ಬಗ್ಗೆ ಪ್ರಶ್ನೆಗಳು ಮೂಡುವುದು ಸಹಜ. 2011ರಲ್ಲಿ ತೆರೆಕಂಡ ಚಿತ್ರವಿದು. ಹಾಗಾಗಿ ಅದರ ಪ್ರಭಾವ, ಮಹತ್ವಗಳ ಪೂರ್ಣ ಅರಿವು ದೊರೆಯಬೇಕಾದರೆ ಇನ್ನಷ್ಟು ಕಾಲ ಸರಿಯಬೇಕು. ಲೋಕಸಿನಿಮಾ ಟಾಕೀಸ್ ನಲ್ಲಿ ಎ.ಎನ್. ಪ್ರಸನ್ನ ಬರಹ ನಿಮ್ಮ ಓದಿಗಾಗಿ. 

Read More

ಅಪ್ಪನ ಕೌಟುಂಬಿಕ ಅರ್ಥಶಾಸ್ತ್ರ

ನಮಗೆ ಒಂದು ಗೇಣು ಭೂಮಿಯೂ ಇರಲಿಲ್ಲ. ಆದರೆ ತಂದೆಗೆ ಕೃಷಿಕನಾಗುವ ಹುಚ್ಚು ಬಹಳವಿತ್ತು. ಬೆಳದಿಂಗಳ ರಾತ್ರಿಯಲ್ಲಿ ಕೂಡ ಅವರು ಆ ಭೂಮಿಯಲ್ಲಿ ದುಡಿಯುತ್ತಿದ್ದರು. ಅವರಿಗೆ ದುಡಿತದ ಆನಂದವೇ ಆನಂದ. ದುಡಿದು ದುಡಿದು ಕಲ್ಲುಗಳಿಂದ ತುಂಬಿದ ಆ ಹಾಳು ಭೂಮಿಯನ್ನು ಸಮೃದ್ಧಗೊಳಿಸಿದರು. ಬಾಳೆಯ ಸಸಿ ನೆಟ್ಟರು. ಹಳೆಯ ಡೀಸಲ್ ಎಂಜಿನ್ ಕೊಂಡು ನೀರು ಉಣಿಸುತ್ತ ಚಿಕ್ಕ ಬಾಳೆಯ ಬನವನ್ನೇ ಸೃಷ್ಟಿಸಿದರು.
ರಂಜಾನ್ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ ಹದಿನೈದನೇ ಕಂತು ಇಲ್ಲಿದೆ.

Read More

ನವೋದಯದಿಂದ ನವ್ಯಕ್ಕೆ ಪೇಜಾವರ ಸದಾಶಿವ ರಾವ್

ಕನ್ನಡದ ಆಧುನಿಕ ಕವಿಗಳನ್ನೆಲ್ಲ ಓದಿ, ಬರೆದುಕೊಂಡು, ತಾವು ಸ್ವತಃ ಕವನಗಳನ್ನು ಬರೆದು ತಮ್ಮನ್ನು ಸ್ವತಃ ತಿದ್ದಿಕೊಂಡು, ಗೋಕಾಕರಂಥ ವಿಮರ್ಶಕರ ಅಭಿಪ್ರಾಯವನ್ನು ಕೇಳಿ ಮುಕ್ತ ಮನಸ್ಸಿನಿಂದ ಸ್ವೀಕರಿಸಿ, ಅವರ ಸಾಹಿತ್ಯ ರಚನೆಯ ಬಗ್ಗೆ ತಮ್ಮ ಮುಕ್ತ ಅಭಿಪ್ರಾಯಗಳನ್ನು ಹೇಳಿ ತಾನೂ ಬೆಳೆದ ಪೇಜಾವರ ಸದಾಶಿವರಾಯರು ತಮ್ಮೊಂದಿಗೆ ಇತರರನ್ನೂ ಬೆಳೆಸಿದ ಸಾಹಿತಿ. ಚಿತ್ರಕಲೆ ಟೆನಿಸ್ ಆಟ, ಸಿತಾರ್ ನುಡಿಸುವುದು, ಫೋಟೋಗ್ರಫಿ, ಅಂಚೆಚೀಟಿ ಸಂಗ್ರಹ, ಚಾರಣ, ಮೌಂಟೆನಿಯರಿಂಗ್  ಮುಂತಾದ ಆಸಕ್ತಿಗಳನ್ನು ಹೊಂದಿದ್ದ ಜೀವನ್ಮುಖಿ ಅವರಾಗಿದ್ದರು. 

Read More

ಹೊಟ್ಟೆ ಮತ್ತು ಮನಸ್ಸು ತುಂಬಿದ ಭಾರೀ ಭೋಜನ…

“ಅವರಿಗೆ ಸುಲಭವೆನಿಸಿದ ಲೆಕ್ಕವನ್ನು, ‘ಒಂದಲ್ಲ ನಾಲ್ಕು ಸಲ ಕೇಳಿ ಹೇಳಿ ಕೊಡ್ತಿನಿ’ ಎನ್ನುತ್ತಿದ್ದರು. ಅದೇ ಸಲುಗೆಯ ಮೇಲೆ ಹುಡುಗರೇನಾದರೂ ‘ಇದು ಅರ್ಥ ಆಗ್ಲಿಲ್ಲ ಯಂಗೆ ಸರ್’ ಎಂದು ಕೇಳಿದರೆ ಉಪಾಯವಾಗಿ ತಾವಿರುವಲ್ಲಿಯ ಬೋರ್ಡ್ ಹತ್ತಿರಕ್ಕೆ ಕರೆಸಿಕೊಂಡು. ‘ಇಂಥ ಸುಲಭದ್ದು ಅರ್ಥ ಆಗ್ಲಿಲ್ವ, ಹೇಳಿ ಕೊಡ್ಬೇಕಾದ್ರೆ ಯತ್ತಗೆ ನೋಡ್ತಿರ್ತಿರ, ಎಲ್ಲಾರ ದನ ಕಾಯದ ಬಿಟ್ಟು, ಸ್ಕೂಲಿಗೆ ಯಾಕೆ ಬತ್ತಿರ’ ಎಂದು ಒಂದೇ ಉಸಿರಿಗೆ ಬೈಯುತ್ತ ಕನಿಷ್ಠ ಎರೆಡು ಕೋಲು ಮುರಿಯುವವರೆಗೂ ಹೊಡೆಯುತ್ತಿದ್ದರು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ