Advertisement

Category: ಸಾಹಿತ್ಯ

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ”

ಅರೆ! ಎಲ್ಲರೂ ಅವರವರ ಕೆಲಸಗಳಲ್ಲಿಯೇ ಕಳೆದುಹೋಗಿದ್ದಾರೆ ಇಲ್ಲಿ. ಯಾರಿಗೂ ಹೊರಗಡೆ ಏನು ನಡೆಯುತ್ತಿದೆ ಅನ್ನುವುದರ ಪರಿವೇ ಇಲ್ಲ. ಅದರ ಅಗತ್ಯವೇ ಇಲ್ಲ ಅನ್ನುವಷ್ಟೂ ಕ್ಷುಲ್ಲಕ ಸಂಗತಿಗಳೆ ಅವೆಲ್ಲಾ? ರಸ್ತೆಯ ತುಂಬಾ ಬದುಕಿನ ನಿತ್ಯ ವ್ಯಾಪಾರ ಅದೆಷ್ಟು ಸಹಜ ಅನ್ನುವ ರೀತಿಯಲ್ಲಿ ನಡೆಯುತ್ತಿದೆ. ಪಕ್ಕದಲ್ಲಿ ಬಾಂಬ್ ಬಿದ್ದರೂ ನಮ್ಮ ಮನಗೆ ಬಿದ್ದಿಲ್ಲ ತಾನೇ ಅನ್ನುವ ಹಾಗೆ ತಮ್ಮತಮ್ಮ ಕೆಲಸಗಳಲ್ಲಿ ತೊಡಗುತ್ತಾರಂದ್ರೆ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ” ನಿಮ್ಮ ಓದಿಗೆ

Read More

ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಲೈಟ್ಸ್…ಕ್ಯಾಮರಾ…ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆಲ್ಲಮೆಲ್ಲನೆ ಹೆಜ್ಜೆಯಿಡುತ್ತಾ ಬಂದ ಕೃಷ್ಣ ಕೈಯ್ಯನ್ನು ಚಾಚಿ ಬೆಣ್ಣೆ ಗಡಿಗೆ ತೆಗೆದುಕೊಂಡವನು ಪುಟುಪುಟು ಓಡಿದ. ಹೆಜ್ಜೆಯಿಡುತ್ತಾ ಬಂದದ್ದು… ಕೈಚಾಚಿದ್ದು… ಓಡಿದ್ದು… ಇದು ನಿರ್ಮಲಾಳ ಮನಸ್ಸಿನಲ್ಲಿ ಗಿರಕಿ ಹೊಡೆಯತೊಡಗಿತ್ತು. ಅವಳು ಈಗ ಬಾಗಿಲ ಮರೆಯಿಂದ ಬೆಣ್ಣೆ ಗಡಿಗೆಯಿದ್ದ ಕಂಬದಾಚೆಗೆ ಹೋಗಬೇಕಿತ್ತು. ಆದರೆ ಅವಳು ಚಲನೆಯಿಲ್ಲದೆ ನಿಂತಿದ್ದಳು.
ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಲೈಟ್ಸ್… ಕ್ಯಾಮರಾ… ಆ್ಯಕ್ಷನ್” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ

ಸುನಂದಕ್ಕಗೆ ಮದುವೆಯಾಗಿ ಒಂದು ವಾರವೂ ಆಗಿರಲಿಕ್ಕಿಲ್ಲ. ದಿವಾಕರ ಭಾವ ಅವಳಿಗೆ ಉದ್ದದ ಹೆರಳನ್ನು ಕತ್ತರಿಸಲು ಆಜ್ಞೆಮಾಡಿದ್ದು! ನಗುವನ್ನೆ ಕಳೆದುಕೊಂಡಂತಿದ್ದ ಸುನಂದಕ್ಕ ತನ್ನ ಹೆರಳನ್ನು ಮೋಟು ಜಡೆ ಮಾಡಿಸಿಕೊಂಡು ‘ಅನೂ ಪುಟ್ಟಾ’ ಎಂದು ಯಾವತ್ತೂ ಕರೆವಂತೆ ‘ಅಮ್ಮಗೆ ಹೇಳು ಇನ್ನು ಮುಂದೆ ನನಗೆ ಜಡೆಹಾಕುವಾಗ ಯಾವತ್ತೂ ಕೈ ಸೋಲು ಬರುವುದಿಲ್ಲ’ ಅಂದಿದ್ದಳು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ “ಅರ್ಥವಾಗುತ್ತಿದೆ ಎಲ್ಲ ಮೆಲ್ಲ ಮೆಲ್ಲನೆ”

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಒಮ್ಮೆ ಹೀಗೆ ಬಿಡುವಿದ್ದಾಗ, ಐತಾಳರು ನನ್ನ ಹಿನ್ನೆಲೆ ಬಗ್ಗೆ ವಿಚಾರಿಸಿದಾಗ ಸುಳ್ಳು ಹೇಳಲು ಮನಸ್ಸಾಗದೆ ಎಲ್ಲ ಹೇಳಿಬಿಟ್ಟೆ. ಮನಸ್ಸು ಹಗುರಾಯಿತು. ಈವರೆಗೂ ಸಂಪೂರ್ಣ ಸತ್ಯ ಯಾರಿಗೂ ಹೇಳಿರಲಿಲ್ಲ. ಐತಾಳರು ಸ್ವಲ್ಪ ಹೊತ್ತು ನನ್ನ ಮುಖವನ್ನೇ ನೋಡಿದರು. ಕೆಲಸದ ವಿಷಯದಲ್ಲಿ ಅವರು ತುಂಬಾ ಸ್ಟ್ರಿಕ್ಟ್; ಆದರೆ ಹೆಂಗರಳು. ಕೆಲಸಗಾರರನ್ನು ಮಕ್ಕಳ ಹಾಗೆ ನೋಡಿಕೊಳ್ಳುವ ಸ್ವಭಾವ. “ಆದ್ರೂ ನೀ ಊರು ಬಿಟ್ಟು ಬರಬಾರದಿತ್ತು ಮಾರಾಯ, ನೀ ಎಣಿಸಿದ ಹಾಗೆ ಅಲ್ಲೇನು ಆಗಿರಲಿಕ್ಕಿಲ್ಲ. ಈ ಕಾಲದ ಜನ ಕಥೆ ಸಿನಿಮಾ ಧಾರಾವಾಹಿ ನೋಡಿ ಎಂತೆಲ್ಲಾ ಗ್ರಹಿಸಿ ಹೀಗೆ ಮಾಡಿಬಿಡೋದು ಹೌದಲ್ಲವನ!”
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಅನಿಕೇತನ” ನಿಮ್ಮ ಓದಿಗೆ

Read More

ಒಂದು ಕೊನೇ ರೌಂಡು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸ್ವಾಮಿಗೆ ದುಃಖ ತಡೆದುಕೊಳ್ಳಲು ಆಗಲಿಲ್ಲ. ಮಣಿ, “ಕಾರ್ ಚೆನ್ನಾಗಿದೆ. ತಿಂಡಿ ತಿಂದ ಮೇಲೆ ನನ್ನನ್ನು ಒಂದು ರೌಂಡ್ ಹಾಕಪ್ಪ ಸ್ವಾಮಿ” ಎಂದಿದ್ದು ಸ್ವಾಮಿ, “ಅದೇನು ದೊಡ್ಡ ವಿಷಯ. ಒಂದಲ್ಲ ಎರಡು ರೌಂಡ್ ಹಾಕೋಣ ಬಿಡು” ಎಂಬ ಮಾತುಗಳು ಜ್ಞಾಪಕಕ್ಕೆ ಬಂದವು. ಸ್ವಾಮಿ ಕೈಕೈ ಹಿಸುಕಿಕೊಂಡು ನನ್ನಿಂದ ಅಪಾರಾಧ ನಡೆದು ಹೋಯಿತಲ್ಲ ಎಂದುಕೊಳ್ಳುತ್ತ.. ಸ್ವಾಮಿ, “ದೇವರೆ ಈ ದಿನ ಬೆಳಿಗ್ಗೆ ನನ್ನನ್ನು ಯಾಕಪ್ಪ ಇಲ್ಲಿಗೆ ಕರೆದುಕೊಂಡು ಬಂದೆ?” ಎಂದು ಅಳತೊಡಗಿದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಕೊನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ