Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಯಶ್ರೀ ಕಾಸರವಳ್ಳಿ ಬರೆದ ಕತೆ

ಹಾಗೆ ನೋಡಿದರೆ, ಅವನು ಇರುವೆ ತಿಂದಿದ್ದು ಇಂದೇ ಮೊದಲಿರಲಿಕ್ಕಿಲ್ಲ. ಈ ಮೊದಲೇ ಅವನಿಗೆ ಅರಿವಿಲ್ಲದಂತೆ ಅದೆಷ್ಟು ಇರುವೆ ಅವನ ಹೊಟ್ಟೆಯೊಳಗೆ ಹೊಕ್ಕು ಹೊರ ಹೋಗಿದ್ದವೋ ಯಾರಿಗೆ ಗೊತ್ತು? ಅವನೂರಿನ ಆಲೆಮನೆ ಸಂದರ್ಭದಲ್ಲಂತೂ ಇರುವೆ ಜೊತೆ ದೊಡ್ಡ ದೊಡ್ಡ ಗೊದ್ದಗಳೆಲ್ಲಾ ಮನೆ ತುಂಬಾ ಹರಿದಾಡುತ್ತಿದ್ದವು. ಉಪ್ಪರಿಗೆಯಲ್ಲಿ ಜೋಡಿಸಿಟ್ಟ ಬೆಲ್ಲದ ತಗಡಿನ ಡಬ್ಬಗಳಿಗೆ ರಾಶಿ ಇರುವೆಗಳು ಮುತ್ತಿಕೊಳ್ಳುತ್ತಿದ್ದರಿಂದ, ಅವನಪ್ಪ ಇರುವೆಗಳನ್ನು ಓಡಿಸಲು ಡಬ್ಬದ ಸುತ್ತಲೂ ಡಿ.ಡಿ.ಟಿ. ಪುಡಿಯನ್ನು ದುಂಡಗೆ ಚೆಲ್ಲಿರುತ್ತಿದ್ದರು.

Read More

ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ

ಅವಳಮ್ಮ ಅಂದುಕೊಂಡಂತೆ ಅವ ಅವಳಿಗೆ ಬರೀ ಕ್ಲಾಸ್ ಮೇಟ್ ಮಾತ್ರವಾಗಿರಲಿಲ್ಲ. ಅವನೆಂದರೆ ಮಿಠಾಯಿ. ಅವನೆಂದರೆ ಬಲೂನು. ಅವಳು ಮೋಞಿಯವರ ಅಂಗಡಿಗೆ ಮನೆಸಾಮಾನಿಗಂತ ಹೋಗಲಾರಂಭಿಸಿದ್ದು ಎಂಟನೇ ಕ್ಲಾಸಿರಬೇಕಾದರೆ. ಅಬೂಬಕರ್ ಅಂಗಡಿ ಕೌಂಟರಲ್ಲಿದ್ದರೆ ಅವಳಿಗೊಂಥರಾ ಖುಷಿ. ಅವನು ಇರುವ ಹೊತ್ತು ನೋಡಿಯೇ ಅವಳು ಅಂಗಡಿಗೆ ಹೋಗುತ್ತಿದ್ದುದೂ ಇದೆ. ಹಾಗೆ ಹೋದಾಗ ಮನೆ ಸಾಮಾನು ಜತೆ ಅವಳಿಗಿಷ್ಟದ ಮಿಠಾಯಿ ನಾಕು ಬೇಕಂತ ಕೇಳಿದರೆ ಅವನು ಆರು ಹಾಕಿರುತ್ತಿದ್ದ. ಅವಳಿಗೆ ಬುಗ್ಗೆಯೆಂದರೆ ಇಷ್ಟ ಅಂತ ಅವನಿಗೆ ಅದು ಹೇಗೆ ಗೊತ್ತಾಯ್ತೋ, ಒಂದೊಂದು ಸಲ ಬಲೂನು ಕೂಡ ಹಾಕಿರುತ್ತಿದ್ದ.
ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ “ಬಲೂನು”

Read More

ನವೀನ ಗಣಪತಿ ಬರೆದ ಈ ಭಾನುವಾರದ ಕತೆ

ಮಧ್ಯಾಹ್ನ ಒಂದು ಘಂಟೆಗೇ ತಾನು ಮನೆಯಲ್ಲಿ ಮಾಡಬಹುದಾದ ಎಲ್ಲ ಕೆಲಸಗಳೂ ಮುಗಿದು ಮತ್ತೆಲ್ಲ ಮನಸ್ಸಿಗೆ ಕಿರಿಕಿರಿಯಾಗ ಹತ್ತಿತ್ತು. ನಾಲ್ಕು ದಿನ ದಾವಣಗೆರೆಗೆ ಹೋಗಿ ಮಗಳೊಟ್ಟಿಗೆ ಇದ್ದು ಬರೋಣವೆನಿಸುತ್ತಿತ್ತು. ಆದರೆ ಶಂಭಣ್ಣನನ್ನು ಬಿಟ್ಟು ಎಲ್ಲಿಯೂ ಹೋಗುವಂತಿರಲಿಲ್ಲ. ಮಗಳೂ ವಾರ ವಾರ ಬರುವವಳಲ್ಲ. ಅವಳಿಗೆ ಭಾನುವಾರ ರಜಾದಿನಗಳು ಇದ್ದಾಗಲೇ ಜೋರು ವ್ಯಾಪಾರ. ಇನ್ನು ಆಚೀಚೆ ಎರಡು ಹೆಂಗಸರೊಟ್ಟಿಗೆ ಹರಟೆ – ಮಾತು – ಒಡನಾಟ ಮಾಡೋಣವೆಂದರೆ, ಒಬ್ಬರ ವ್ಯವಹಾರವಾದರೂ ಚೊಕ್ಕಟವಾಗಿದೆಯೇ?
ನವೀನ ಗಣಪತಿ ಬರೆದ ಈ ಭಾನುವಾರದ ಕತೆ “ಧನಲಕ್ಷ್ಮಿ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ

ಮಕ್ಕಳೆಲ್ಲ ಬಾಕಿಮಾರು ಗದ್ದೆಯತ್ತ ನಡೆದುಕೊಂಡು ಹೋದಾಗ ಅವಿನಾಶನಿಗೆ ಅಯ್ಯಪ್ಪ ಎನಿಸಿತು. ಮಕ್ಕಳು ಅಂಗಳದಲ್ಲಿ ಕ್ರಿಕೆಟ್ ಆಡಲು ಶುರು ಮಾಡಿದರೆ ತಾನು ಅಲ್ಲಿಂದ ಏಳಬೇಕಾಗುತ್ತದೆಂಬ ಆತಂಕದಲ್ಲಿ ಅದುವರೆಗೂ ಅವನಿದ್ದ. ಮಕ್ಕಳು ಆಡಿದರೆ ಆಡಬಾರದೆಂದು ಹೇಳಲು ಚಂದ್ರಕ್ಕನಿಗೂ ಧೈರ್ಯವಿಲ್ಲ. ಅಂಗಳದಲ್ಲಿ ಕ್ರಿಕೆಟ್ ಆಡಿದರೆ ಹಟ್ಟಿ ಕೊಟ್ಟಿಗೆಯ ಹಂಚುಗಳು, ದಂಡೆಯಲ್ಲಿಟ್ಟ ಚೊಂಬು, ಕೊಡಪಾನಗಳು, ಪ್ಲಾಸ್ಟಿಕ್ ಬಾಲ್ದಿಗಳು ಚೆಂಡಿನ ಪೆಟ್ಟು ತಿಂದು ಅಲ್ಲೋಲಕಲ್ಲೋಲ ಆಗುತ್ತದೆ. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಬರೆದ ಕಥೆ

Read More

ಡಾ. ಮಲರ್‌ ವಿಳಿ ಅನುವಾದಿಸಿದ ಕತೆ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು”

ತಲೆಯನ್ನು ಸ್ವಲ್ಪ ಮೇಲಕ್ಕೆ ಎತ್ತಿ ಹಿಡಿದು ಸರವನ್ನು ಬಿಚ್ಚಿದನು. ಅರಿಶಿನ ದಾರವನ್ನು ಮಾತ್ರ ಹಾಗೇ ಬಿಟ್ಟುಬಿಟ್ಟು ಬಂಗಾರದ ತಾಳಿ, ಕಾಸನ್ನು ಸೆಳೆದು ತೆಗೆದುಕೊಂಡನು. ಮೂಗುತಿಯನ್ನು ಬಿಚ್ಚಲು ನೋಡಿದ ತಿರುಪು ಎಂಬ ಸೂಕ್ಷ್ಮವನ್ನು ಅಕ್ಕಸಾಲಿಗನು ಒಳಗೆ ಇಟ್ಟಿದ್ದಾನೆ. ಬೆರಳ ತೂರಿಸಿ ಎಷ್ಟು ಪ್ರಯತ್ನಿಸಿದರೂ ಬಿಚ್ಚಲಾಗಲಿಲ್ಲ. ಕಾಡೈಯನ್ ತಾಳ್ಮೆಗೆಟ್ಟನು. ಮೂಗುತಿ ಮುಖ್ಯವೇ ಹೊರತು ಮೂಗು ಯಾತಕ್ಕೆ ಹೆಣಕ್ಕೆ? ಒಂದು ಬಾರಿ ಎಳೆದನು. ಡಾ. ಮಲರ್‌ ವಿಳಿ ಅನುವಾದಿಸಿದ ತಮಿಳಿನ ಕಥೆಗಾರ ಡಾ. ವೈರಮುತ್ತು ಬರೆದ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು” ಕತೆ, ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ