Advertisement

Category: ಸಾಹಿತ್ಯ

ಕಪ್ಪು ನೆಲದಲ್ಲಿ ಹುಟ್ಟಿಕೊಂಡಿತು ಚಿನ್ನದ ನಗರ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಎಲ್ಲರೂ ಅವರನ್ನೇ ನೋಡುತ್ತಿದ್ದರು. ಸೆಲ್ವಿಗೆ ಬೇರೆ ದಾರಿ ಕಾಣದೇ ಇನ್ನೊಂದು ಕೈಯಲ್ಲಿದ್ದ ಪುಸ್ತಕಗಳನ್ನು ನೆಲಕ್ಕೆ ಹಾಕಿ ಮಣಿ ಕೆನ್ನೆಗೆ ಜೋರಾಗಿ ಬಾರಿಸಿದಳು. ಬಾರಿಸಿದ ಏಟಿಗೆ ಆ ಮರದಲ್ಲಿದ್ದ ಹಕ್ಕಿಗಳೆಲ್ಲ ಹಾರಿಹೋದವು. ಸುತ್ತಲೂ ನಿಂತು ನೋಡುತ್ತಿದ್ದ ಹುಡುಗರಲ್ಲಿ ಕೆಲವರು ತಮ್ಮ ಕೆನ್ನೆಗಳನ್ನು ಮುಟ್ಟಿನೋಡಿಕೊಂಡು ಕಣ್ಣುಕಣ್ಣುಬಿಟ್ಟರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಮೂರನೆಯ ಕಂತು ನಿಮ್ಮ ಓದಿಗೆ

Read More

ಡಾ. ದಿಲೀಪ್‌ ಕುಮಾರ್‌ ಎನ್.ಕೆ. ಬರೆದ ಈ ಭಾನುವಾರದ ಕತೆ

ಗುಂಡನಿಗೆ ನಿದ್ರೆಯೇ ಬರುತ್ತಿಲ್ಲ. ಆತ ಏನೇನೋ ಯೋಚಿಸುತ್ತಾ ಎಚ್ಚರವಾಗೇ ಇದ್ದಾನೆ. ನಿದ್ದೆ ತಾನೇ ಅವನಿಗೆ ಎಲ್ಲಿಂದ ಬರಬೇಕು? ಅವನ ಮನಸ್ಸಿನ ತುಂಬೆಲ್ಲಾ ಅವನ ಅಪ್ಪ ಅಮ್ಮರೇ ತುಂಬಿಹೋಗಿದ್ದಾರೆ. ಅವನಿಗೆ ಏನನ್ನಿಸಿತೋ ಏನೋ? ಮೆಲ್ಲಗೆ ಎದ್ದು ಮಲಗಿದ್ದ ಅಪ್ಪನನ್ನೇ ಕಣ್ತುಂಬಿಕೊಳ್ಳುತ್ತಾ ಅಪ್ಪನ ಮಟ್ಟಗುಂಜಿನಂತಿದ್ದ ತಲೆಗೂದಲ ಮೇಲೆ ಕೈಯಾಡಿಸುತ್ತಾನೆ. ಅವನ ಚಕ್ಕಳವಾದ ದೇಹ. ಅವನ ನೋವಿನ ಕಾಲು. ಇತ್ತ ತನ್ನ ಮಗ್ಗುಲಲ್ಲೇ ಮಲಗಿದ್ದ ಅವ್ವನನ್ನು ನೋಡುತ್ತಾನೆ.
ಡಾ. ದಿಲೀಪ್‌ ಕುಮಾರ್‌ ಎನ್.ಕೆ. ಬರೆದ ಈ ಭಾನುವಾರದ ಕತೆ “ಸುಟ್ಟಿರದೇ ಮೂರ್ ದ್ವಾಸ…” ನಿಮ್ಮ ಓದಿಗೆ

Read More

ಮಣಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ನೂರು ವರ್ಷಗಳಿಂದ ಗಣಿ ಸುರಂಗಗಳಿಂದ ತೆಗೆದ ಕಲ್ಲುಗಳ ಅದಿರನ್ನು ಪುಡಿಮಾಡಿ ಚಿನ್ನ ತೆಗೆದುಕೊಂಡು ಬಿಸಾಕಿರುವ ಗಣಿ ತ್ಯಾಜ್ಯದ ಗುಡ್ಡ ಅದು. ನೆಲದ ಮೇಲೆ ಇಷ್ಟು ದೊಡ್ಡ ಗುಡ್ಡ ಬಿದ್ದಿದೆ ಎಂದರೆ ಎಷ್ಟು ಜನರು ಗಣಿ ಸುರಂಗಗಳಲ್ಲಿ ಕೆಲಸ ಮಾಡಿರಬೇಕು? ಎಷ್ಟು ಬೆವರು ಸುರಿದಿರಬೇಕು? ಎಷ್ಟು ಜನರು ಸತ್ತಿರಬೇಕು? ಈ ಗುಡ್ಡಗಳು ಬೀಳಲು ನಮ್ಮ ಪೂರ್ವಜರೆ ಕಾರಣ ಎಂದುಕೊಂಡ. ಮಣಿ ತಂದೆ ಸೆಲ್ವಮ್. ಸೆಲ್ವಮ್ ತಂದೆ ಕುಪ್ಪ ಹೇಳುತ್ತಿದ್ದ ಅನೇಕ ಗಣಿ ದುರಂತಗಳ ಕರಾಳ ಕಥೆಗಳು ಮಣಿ ತಲೆಯಲ್ಲಿ ಹಾವುಗಳಂತೆ ಹರಿದಾಡತೊಡಗಿದವು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಎರಡನೆಯ ಕಂತು ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ

ತನ್ನ ಮಗಳು ಕಣ್ಣೆದುರಿಗೆ ಅಳುತ್ತಿರುವುದನ್ನು ಕಂಡೂ ಯಾವುದೇ ವಿಕಾರಗಳನ್ನು ಹರಿಸದೆ ಮೌನದಿಂದ ಶೂನ್ಯವನ್ನು ದಿಟ್ಟಿಸುತ್ತಾ, ಅಜ್ಜನನ್ನು ತಬ್ಬಿಕೊಂಡ ಮಗಳನ್ನು ಮತ್ತು ಅಪ್ಪ ಶೇಖರಪ್ಪಯ್ಯರನ್ನು ನಿರ್ಭಾವದಿಂದ ನೋಡುತ್ತಿದ್ದ. ಶೇಖರಪ್ಪಯ್ಯರ ಹೊಟ್ಟೆ ಹೊತ್ತಿಯೇ ಹೋಯಿತೇನೋ ಎನ್ನುವಂತೆ ಎಡಗೈಯಿಂದ ಹೊಟ್ಟೆಯನ್ನು ಹಿಡಿದು ಹಿಚುಕುತ್ತಾ ಸವರುತ್ತಾ, ಮೊಮ್ಮಗಳನ್ನು ಬಿಗಿದಪ್ಪಿಕೊಂಡು ಮಗನೇ… ಸೂರ್ಯ…. ನಾನು ಕಣೋ ಅಪ್ಪಾ… ಮಾತಾಡೋ, ಮಾತಾಡು ಕಂದ ಎಂದು ಸೂರ್ಯನಿಗೆ ಹೇಳುತ್ತಿದ್ದರೆ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ “ಗಂಧ”

Read More

ಡಾ. ಎಂ. ವೆಂಕಟಸ್ವಾಮಿ ಕಾದಂಬರಿ “ಒಂದು ಎಳೆ ಬಂಗಾರದ ಕಥೆ” ಶುರು…

ಕೆ.ಜಿ.ಎಫ್‌ ಎಂಬ ನೆಲದಲ್ಲಿ, ಚಿನ್ನದ ಅದಿರಿನ ಶೋಧನೆಯ ಸಮಯದಲ್ಲಿ ಅಲ್ಲಿನ ಜನರು ಹಾಗೂ ಕಾರ್ಮಿಕರು ಅನುಭವಿಸಿದ ತಲ್ಲಣಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” (ಕೆಜಿಎಫ್ ಗಣಿಗಳ ತವಕ ತಲ್ಲಣಗಳು) ಕಾದಂಬರಿ ಪ್ರತಿ ಶನಿವಾರಗಳಂದು‌ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ