Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ದೀಪ್ತಿ ಭದ್ರಾವತಿ ಕತೆ

ಅರುಂಧತಿಗೆ ಎದೆಯೊಳಗೆ ಕೊಳ್ಳಿದೆವ್ವ ಓಡಾಡಿದಂತೆ ಭಾಸವಾಯಿತು. ನರ್ಸು ಹಲ್ಲು ಕಚ್ಚಿಕೊಂಡಳಾದರೂ, ಆಯಾ ಮಾತ್ರ ಅದನ್ನು ಸಮರ್ಥಿಸಿಕೊಳ್ಳುವವಳಂತೆ “ಅಯ್ಯಾ ಇರೋದನ್ನ ಏಳುದ್ನಪ್ಪ” ಇವ್ರು ರಾತ್ರಿ ಎಲ್ಲ ಸುಖ ಪಟ್ಕೊಂಡು ಈವಾಗ ನಮ್ ತವ ಕೂಗ್‍ಕೊಂಡ್ರೆ ಏನ್ ಬತ್ತದೆ” ಎಂದಳು. ಅರುಂಧತಿಗೆಒಮ್ಮೆ ಹಾವು ಮೆಟ್ಟಿದಂತಾಗಿ ಸುಮ್ಮನೆ ಅವಳನ್ನೇ ಒಮ್ಮೆ ನೋಡಿದಳು. ಬೋಳು ಹಣೆ, ಬರಿಗೈ, ನಿರ್ವಿಕಾರ ಭಾವ ಅವಳ ಕುರಿತಾಗಿ ಬೇರೆ ಏನನ್ನೋ ಧ್ವನಿಸಿತು. ದೀಪ್ತಿ ಭದ್ರಾವತಿ ಬರೆದ ಕತೆ ‘ಸ್ಫೋಟ’ ನಿಮ್ಮ ಈ ಭಾನುವಾರದ ಓದಿಗೆ

Read More

ಡಾ. ಜ್ಯೋತಿ ಬರೆದ ಈ ಭಾನುವಾರದ ಕತೆ

ನಾನು, ಮಕ್ಕಳೊಂದಿಗೆ ಕಾಡು ಮೇಡು ಸುತ್ತುತ್ತಾ ಕಷ್ಟನಷ್ಟ ಅನುಭವಿಸುವಾಗ ಜೊತೆಗಿದ್ದು, ಅಂತೂ ಈಗ ಗದ್ದುಗೆ ಸಿಕ್ಕ ಮೇಲೆ ವೈರಾಗ್ಯ ಮೂಡಿ, ಅಕ್ಕ ಭಾವನ ಹಿಂದೆ ಹೆಜ್ಜೆಯಿಡುವ ನಿರ್ಧಾರ ಮಾಡಿ, ಕಾಡಿನತ್ತ ಮುಖ ಮಾಡಿದೆ. ನನ್ನ ಮಕ್ಕಳಿಗೆ ತಕ್ಷಣ ನಂಬಲಾಗಲಿಲ್ಲ. ಮೊದಲು ನಾನೂ ಹಾಗೆಯೇ ಅಂದುಕೊಂಡಿದ್ದೆ. ಆದರೆ ಕುರುಕ್ಷೇತ್ರ ಯುದ್ಧರಂಗ ನೋಡಿದ ಮೇಲೆ ನನಗೆ ವೈರಾಗ್ಯ ಮೂಡಿತು. ಈ ವೈಭೋಗ, ಒಣ ಪ್ರತಿಷ್ಠೆ ಯಾವುದೂ ನನಗೆ ಬೇಕಿಲ್ಲವೆನಿಸಿತು. -ಡಾ.ಜ್ಯೋತಿ ಬರೆದ ಕತೆ ‘ಕುಂತಿಯ ಮುಸ್ಸಂಜೆ ಮಾತು’ ಇಂದಿನ ಓದಿಗಾಗಿ. 

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಟಿ.ಕೆ. ದಯಾನಂದ ಕತೆ

ಕಷ್ಟಪಟ್ಟು ಎದ್ದು ಗೋಡೆಗೆ ಒರಗಿಕೊಂಡ ಆಕೆ ಕೈ ಸನ್ನೆ ಮಾಡಿ ನೀರು ಕೇಳಿದಳು. ಹತ್ತಿರದಲ್ಲೇ ನಿಂತಿದ್ದ ಹುಡುಗಿಯೊಬ್ಬಳು ನೀರು ತಂದುಕೊಟ್ಟಳು. ನೀರು ಕುಡಿದು ಸುಧಾರಿಸಿಕೊಂಡ ಮೇಲೆ ಆಕೆ ದೊಡ್ಡ ಉಸಿರು ಬಿಟ್ಟು, ‘ಮಗ ಸತ್ತರೆ ತಾಯಿ ಏನು ಹೇಳ್ತಾಳಪ್ಪ. ಮಗ ಸತ್ತ, ಸಾಯಿಸಿದ್ರು’ ಎಂದು ಅಳಲು ಶುರುಮಾಡಿದಳು. ಕಣ್ಣೀರು ಒರೆಸಿಕೊಳ್ಳುತ್ತಾ, ‘ಇನ್ನೊಬ್ಬ ಮಗ ಇದ್ದಿದ್ರೆ ಆ ಪಾಪಿಗಳನ್ನ ಹೊಡೆದುಕೊಂದು ಈ ಸಾವಿಗೆ ಸೇಡು ತೀರಿಸ್ಕೊ ಅಂತ ಹೇಳಬೋದಿತ್ತು. ಆದ್ರೆ ಇದ್ದವ್ನು ಒಬ್ಬನೇ ಮಗ. ಅವನು ವಾಪಸ್ ಬರ್ತಾನಾ’ ಎಂದು ಬರಿಗಣ್ಣುಗಳಿಂದ ಅವನನ್ನು ನೋಡಿದಳು.

Read More

ಕೆ. ಪ್ರಭಾಕರನ್‌ ಅನುವಾದಿಸಿದ ಎಂ ಮುಕುಂದನ್‌ ಕಥೆ

ಕಾನ್‍ಫೆರೆನ್ಸ್ ರೂಮಿನ ಪಳ ಪಳಾ ಹೊಳೆಯುತ್ತಿದ್ದ ಮೇಜಿನಮೇಲೆ ಫ್ಲವರ್ ಪಾಟೂ ಮಿನರಲ್ ವಾಟರ್ ಬಾಟಲುಗಳೂ ಬಂದು ನಿಂತವು. ಗಾಜಿನ ಬಾಗಿಲುಗಳ ಮೂಲಕ ನೋಡಿದರೆ, ಮಂಜು ಮುಸುಕಿದ ಪರ್ವತ ಶ್ರೇಣಿಗಳಲ್ಲಿ ಎಳೆಬಿಸಿಲು ಸ್ಪಷ್ಟಗೊಳ್ಳುತ್ತಿರುವುದು, ಮಸುಕಾಗುತ್ತಿರುವುದು ಕಾಣಬಹುದು. ಆಕಾಶದಲ್ಲಿ ಮಳೆಯ ಸೂಚನೆಗಳು ಗೋಚರಿಸುತ್ತಿದ್ದವು. ಅವರು ಕಂಪನಿಯ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಾ ವಾದವಿವಾದಗಳನ್ನು ಮುಂದಿಡುತ್ತಿದ್ದರು.

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ದಾಕ್ಷಾಯಣಿ ಯಡಹಳ್ಳಿ ಕತೆ

ಗಂಡಗ ಹ್ಯಾಂಗ್ ಹೇಳ್ಳಿ ಅನ್ನ ಚಿಂತ್ಯಾತು. ಕೂಸು ಅತ್ತತ್ತ್ ತೊಡಿ ಮ್ಯಾಲೆ ಮಕ್ಕೊಂತು. ಅಕಿನೂ ಅತ್ತತ್ತ್ ಹೈರಾಣಾಗಿದ್ಲು. ಗಲ್ಲದ್ ಮ್ಯಾಲೆ ಕೈ ಇಟ್ಗೊಂಡು ಚಿಂತೀ ಮಾಡ್ಕೊಂತ ಕುಂತ್ಲು. ಹಂಗ ಕಣ್ಣ್ ಮುಚ್ಚಿದ್ವು. ಬಾಗ್ಲಾ ತಗದು ಪರಪ್ಪ ಒಳ್ಗ ಬಂದಾ. `ಯಾಕ್ ಮಕ್ಕೊಂಡಿಯಲೇ ಏನಾಗೇತಿ, ಗಲ್ಲಕ್ಕ್ ಕೈ ಹಚ್ಚೀದಿ ಗುಡ್ಡ್ ಬಂದು ತೆಲಿ ಮ್ಯಾಲೆ ಬಿದ್ದೈತೇನಂದ”. ಸುಮ್ನ ಇದ್ಲು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ದಾಕ್ಷಾಯಣಿ ಯಡಹಳ್ಳಿ ಬರೆದ ಕತೆ ‘ವರ್ತುಲ’ ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ