Advertisement

Category: ಸಾಹಿತ್ಯ

ಸದಾಶಿವ ಸೊರಟೂರು ಬರೆದ ಈ ಭಾನುವಾರದ ಕಥೆ

ಬೆಳಕಿರುವ ಜಗದಲ್ಲಿ ತನ್ನವರು ಎಲ್ಲೋ ಕಳೆದು ಹೋಗಿರುವಾಗ ಹುಡುಕಿ ಸೇರಿಕೊಳ್ಳಲು ಹಂಬಲಿಸಿ ಸೋತು ಹೋದಳು. ಸುಮ್ಮನೆ ಅಲೆಯಬೇಕು. ಒಂದೂರಲಿ ಒಂದೆರಡು ದಿನ. ಭಿಕ್ಷೆಯ ಕೂಳು ಹೊಟ್ಟೆಗಿತ್ತು. ಹರಿದ ಎರಡು ದುಪ್ಪಟಿಗಳು ರಾತ್ರಿ ಚಳಿಗಿದ್ದವು. ರಾತ್ರಿ ಮಾತ್ರ ಸ್ನಾನದ ಹಂಗಿನಲ್ಲಿ ಅವಳ ಬೆತ್ತಲೆ ದೇಹವನ್ನು ನೋಡಿತ್ತು. ಆಚೆ ನೆಲದಲ್ಲಿ ಕೂಡಿಸಿಟ್ಟ ಮೂರು ಕಲ್ಲುಗಳು ಅವಳ ಅಡುಗೆ ಮನೆ. ಇಂತಿಪ್ಪ ಆಕೆಯ ಬದುಕು ಬೆಳಕು, ಕತ್ತಲುಗಳ ಮಧ್ಯೆ ನುಗ್ಗುತ್ತಿತ್ತು.
ಸದಾಶಿವ ಸೊರಟೂರು ಬರೆದ ಕಥೆ “ಬಯಲು” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಚೀಮನಹಳ್ಳಿ ರಮೇಶಬಾಬು ಕತೆ

ಮಳೆ ನಿಂತಿತ್ತಾದರೂ ಸಂದಿಯಲ್ಲಿರುವ ನೀರು ಖಾಲಿಯಾಗುವವರೆಗು ಮನೆಯೊಳಗೆ ನೀರು ಬರುತ್ತಲೆ ಇತ್ತು. ಹಾಗಾಗಿ ಅವಳು ಬಹುಪಾಲು ರಾತ್ರಿಯೆಲ್ಲ ಹಾಗೆ ನೀರನ್ನು ಹೊರ ಹಾಕುತ್ತಲೆ ಇದ್ದಳು. ಅದಾದ ಮೇಲೆ ಮಣ್ಣನ್ನೆಲ್ಲ ತೆಗೆದು ಒಂದಷ್ಟು ಸ್ವಚ್ಛಗೊಳಿಸಿದ್ದಳಾದರು ಮುಂಜಾವಿನವರೆಗೂ ತಾರಸಿ ಸೋರುತ್ತಲೆ ಇತ್ತು. ಅವಳು ತುಂಬಿದ ಪಾತ್ರೆಗಳಲ್ಲಿನ ನೀರನ್ನು ಆಚೆ ಚಲ್ಲಿ ಮತ್ತೆ ಅದೇ ಜಾಗದಲ್ಲಿ ಇಡುತ್ತಿದ್ದಳು. ಹೀಗೆ ರಾತ್ರಿಯೆಲ್ಲ ಎದ್ದು ಬಗ್ಗಿ ಓಡಾಡಿ ಹೈರಾಣಾಗಿದ್ದಳು. ರಾತ್ರಿಯ ಕತ್ತಲಲ್ಲಿ ಅದುಮಿಟ್ಟುಕೊಂಡಿದ್ದ ಅವಳೆಲ್ಲ ಭಾವನೆಗಳು ಬೆಳಗಾಗುತ್ತಿದ್ದಂತೆ ಸಿಡಿದು ಸದ್ದು ಮಾಡತೊಡಗಿದವು.

Read More

ಎ.ಬಿ. ಪಚ್ಚು ಬರೆದ ಈ ಭಾನುವಾರದ ಕತೆ “ಮದಿಮಾಲ್”

ಮದಿಮಾಲ್ ನೆನಪಾದರೆ ಯಾಕೋ ನನ್ನ ಕಾಲ್ಗುಣದಿಂದಾಗಿ ಸಾಲು ಸಾಲಾಗಿ ಸತ್ತು ಮಲಗಿದವರೇ ನೆನಪಾಗುತ್ತಿದ್ದರು. ಮೊದಲ ಬಾರಿಗೆ ಆಸೆಯಿಂದ ಗಂಡನ ಮನೆಗೆ ಮದಿಮಾಲ್ ಮೀನು ತೆಗೆದುಕೊಂಡು ಹೋದಾಗ ಅತ್ತೆ ಅದನ್ನು ತೊಟ್ಟೆ ಸಹಿತ ಅಂಗಳಕ್ಕೆ ಬಿಸಾಡಿದ್ದು, ಜಿಮ್ಮಿ ನಾಯಿ, ಮಂಗು ಬೆಕ್ಕು ಆ ಮದಿಮಾಲ್ ಮೀನನ್ನು ಕಚ್ಚಿಕೊಂಡು ಓಡಿ ಹೋದದ್ದು, ಈ ದೃಶ್ಯಗಳೆಲ್ಲವೂ ಕಣ್ಣಿಗೆ ಕಟ್ಟಿದಂತೆಯೇ ಆ ನಂತರವೂ ನನ್ನ ಜೊತೆ ಶಾಶ್ವತವಾಗಿ ಉಳಿದು ಹೋದವು.
ಎ.ಬಿ. ಪಚ್ಚು ಬರೆದ ಈ ಭಾನುವಾರದ ಕತೆ “ಮದಿಮಾಲ್” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಚಿದಾನಂದ ಸಾಲಿ ಕತೆ

ಪಿಯುಸಿಯಲ್ಲಿ ಇಮಾಂಸಾಬಿಯ ರೂಮಿನಲ್ಲಿ ಅದ್ಹೇಗೋ ಹೊಂದಿಸಿಕೊಂಡು ನಿಯರ್ ಫಸ್ಟ್‌ಕ್ಲಾಸ್‌ನಲ್ಲಿ ಪಾಸೇನೋ ಆದೆ. ಆದರೆ ಅವನು ಫೇಲಾದ ಹೊಟ್ಟೆಕಿಚ್ಚಿಗೆ ನನ್ನ ಪಾಲಿಗೆ ರೂಮಿನ ಬಾಗಿಲು ಮುಚ್ಚಿಕೊಂಡಿತು. ನಿತ್ಯ ಮನೆಯಲ್ಲಿ ಅಪ್ಪನ ಮತ್ತಿನ ಬಡಬಡಿಕೆಗಳು, ಅದಕ್ಕೆ ಪ್ರತಿಯಾಗಿ ಅಮ್ಮನ ಬೈಗುಳಗಳು ನನ್ನನ್ನು ಚಿತ್ರಹಿಂಸೆಗೆ ಈಡು ಮಾಡಿದವು. ಎದುರಿಗೆ ಕಲ್ಲುಗೋಡೆಯಂತೆ ಇಂಜಿನಿಯರಿಂಗ್. ಇಷ್ಟೆಲ್ಲದರ ನಡುವೆ ಸೋತು ಸುಣ್ಣಾಗಿ ಹೋಗಿದ್ದವನಿಗೆ ಕಾಲೇಜಿನಲ್ಲಿ ಸುರೇಶ್ ಪರಿಚಯವಾದ.

Read More

ವಿಜಯಾ ಮೋಹನ್‌ ಬರೆದ ಈ ಭಾನುವಾರದ ಕತೆ

ಅವಳು ಜೀವ್‌ಮಾನದಾಗೆ, ಅಷ್ಟೊಂದು ಬಳೆ ತೊಟ್ಟುಕೊಂಡಿರ್‍ಲಿಲ್ಲ. ಅವ್ವನ ತವರಲ್ಲಿ, ಅವಳ ಬೆನ್ನಿಂದಲ, ತಮ್ಮನೊಬ್ಬನು ಮೇಷ್ಟ್ರಾಗಿದ್ದವನು. ಊರ ಮಾರಮ್ಮನ ಜಾತ್ರೆಯೊಂದಕ್ಕೆ ಕರಿಸಿಕೊಂಡು. ಏಷ್ಟೊ ವರುಷಕ್ಕೆ ಬಂದಿದ್ದೀಯಕ್ಕ, ಮುಂದುಕ್ಕೆ ಇರೋವರ್ಯಾರೊ? ಸಾಯೋವರ್ಯಾರೊ? ನೀನು ತೊಟ್ಟೇ ತೊಟ್ಟುಕೊಬೇಕೆನುತ, ಬಳೆ ಮಲಾರದವನನ್ನ ಕರೆಸಿ. ಒಂದೊಂದು ಕ್ಯೆಗೆ ಎರೆಡೆರೆಡು ಡಸನ್ನಿನಷ್ಟು, ನೂರು ರೂಪಾಯಿನ ಬಳೆ ತೊಡಿಸಿ, ನೆಟ್ಟಗಿನ್ನ ಹದಿನೈದು ದಿನವಾಗಿರಲಿಲ್ಲ. ಏನು ತಗದ್ರು ತಗೀತೀನಿ, ಕ್ಯೆಯ್ಯಾಗಳ ಬಳೆ ಮಾತ್ರ ಬಿಚ್ಚಲ್ಲ ಸಾ, ನೋಡಿಸಾ ಮುತ್ಯೆದೆ ಬಳೆ ಬಿಚ್ಚುಸಬ್ಯಾಡಿ ಸಾ, ಒಡಿಬ್ಯಾಡ್ರಿ ಸಾ, ಅನುತ ಇನ್ನಿಲ್ಲದಂಗೆ ಬೇಡಿಕೊಂಡ್ಲು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ