Advertisement

Category: ಸಾಹಿತ್ಯ

ರವಿಶಂಕರ್ ಎಸ್‌.ಎಲ್.‌ ಬರೆದ ಈ ಭಾನುವಾರದ ಕಥೆ

ಮನೆಯಕಡೆಯಿಂದ ಜಾನಕಿ ನರಳುವ ಸಣ್ಣಸದ್ದು ಕೇಳತೊಡಗಿತು. ಜಾನಕಿಗೆ ಒಂಭತ್ತು ತಿಂಗಳುಗಳು ತುಂಬಿದ್ದರಿಂದ ಹೆರಿಗೆನೋವು ಶುರುವಾಗಿತ್ತು. ಶಿವಮ್ಮ ಸಾಕಷ್ಟು ಹೆರಿಗೆಗಳನ್ನು ಮಾಡಿಸಿದ್ದರಿಂದ, ಯಾರ ಸಹಾಯವೂ ಬಯಸದೆ, ಒಬ್ಬಂಟಿಯಾಗೇ ಹೆರಿಗೆಮಾಡಿಸುವ ಅನುಭವ ಪಡೆದಿದ್ದಳು. ಹೆರಿಗೆನೋವಿನ ನರಳುವಿಕೆಯ ಕೂಗು ಹೆಚ್ಚಾಗುತ್ತಿದ್ದಂತೆಯೇ, ಸಂಗಣ್ಣ ತಾನು ಇಳಿದು ಹೋಗಲೆ. ಬೇಡವೇ? ಎಂಬ ಯೋಚನೆಗೆಬಿದ್ದ.
ರವಿಶಂಕರ್ ಎಸ್‌.ಎಲ್.‌ ಬರೆದ ಈ ಭಾನುವಾರದ ಕಥೆ “ಹಬ್ಬ” ನಿಮ್ಮ ಓದಿಗೆ

Read More

ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ

ಈ ನಡುವೆ ಪಾತ್ಲಿಂಗಪ್ಪ ಹಾಗೂ ಚಿತ್ಲಿಂಗ ಮತ್ಮತ್ತೆ ಭೇಟಿಯಾಗುತ್ತಿದ್ದದ್ದು ತಿಳಿದು ಮಗಳು ಕುದ್ದು ಹೋಗಿ ವರ್ಷದ ಹಿಂದೆ ಅಪ್ಪನಿಗೆ ಲಾಯರ್‌ ನೋಟೀಸ್‌ ಕಳಿಸಿದ್ದಳು. ಇದು ಪಾತ್ಲಿಂಗಪ್ಪನನ್ನು ಕುಗ್ಗಿಸಿತ್ತು. ತನ್ನದೆಲ್ಲವನ್ನೂ ಕಿತ್ತುಕೊಂಡು ಬೀದಿಗೆ ತಳ್ಳುವ ಹುನ್ನಾರದಂತೆ ಕಂಡಿತ್ತು. ಹಂಗಾಗಿ ಅದು ಆ ವಿಚಾರದಲ್ಲಿ ಅವನನ್ನು ಮತ್ತಷ್ಟು ಬಿಗಿಯಾಗುವಂತೆ ಮಾಡಿತ್ತು. ಅದರೊಟ್ಟಿಗೆ ಅವನೊಳಗೆ ತಾನು ತಮ್ಮನ ಮಗನಿಗೆ ಮಾಡಿದ್ದ ಅನ್ಯಾಯದ ಪಾಪಪ್ರಜ್ಞೆ ಬೆಳೆಯತೊಡಗಿತ್ತು.
ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ “ಸೋಲು” ನಿಮ್ಮ ಓದಿಗೆ

Read More

ಸೌರಭಾ ಕಾರಿಂಜೆ ಬರೆದ ಈ ಭಾನುವಾರದ ಕಥೆ

ಬೆಳಿಗ್ಗೆ ತುಂಬಿಸಿಕೊಂಡ ದೋಸೆ ಡಬ್ಬಿ ಹಾಗೇ ಇದೆ ಎಂಬುದು ನೆನಪಾಯಿತು ಅವಳಿಗೆ. ಕೊಟ್ಟು ಬಿಡಲೇ ಅನಿಸಿತು ಒಮ್ಮೆ. ಮನೆಗೆ ಹೋಗಿ ತಿನ್ನಬಹುದು ತಾನು. ಆದರೆ ಇವನಿಗೆ ಬೇಕಾದದ್ದು ದುಡ್ಡು, ಊಟ ಅಲ್ಲ, ಆ ದುಡ್ಡನ್ನು ಕಬಳಿಸಲು ನಮೂನೆ ನಮೂನೆಯ ಪ್ರಯತ್ನ ಅನ್ನಿಸಿ ಮನಸ್ಸೆಲ್ಲಾ ಕಹಿಯಾಯಿತು. ಜೊತೆಗೆ ಬಾಯಿಯೂ ಕಹಿಯಾಯಿತು. ಬಾಯಿಯಲ್ಲಿ ತುಂಬಿಕೊಂಡಿದ್ದ ಎಂಜಲನ್ನು ನುಂಗಲು ಅಸಹ್ಯವಾಗಿ ಉಗುಳುವ ಒತ್ತಡ ಉಂಟಾಯಿತು. ಯಾವತ್ತೂ ರಸ್ತೆಯಲ್ಲಿ ಉಗುಳಿದವಳಲ್ಲ. ಮುಜುಗರ ಒತ್ತಿ ಬಂತು.
ಸೌರಭಾ ಕಾರಿಂಜೆ ಬರೆದ ಕಥೆ “ಹಣಾಹಣಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಮುನವ್ವರ್‌ ಜೋಗಿಬೆಟ್ಟು ಬರೆದ ಈ ಭಾನುವಾರದ ಕಥೆ

ಬಟ್ಟೆ ತೊಳೆಯಲು ಹೋಗಿದ್ದ ಉಮ್ಮ ಬಂದು ಹಿತ್ತಲಿಗೆ ತಲುಪಿದ್ದಳು. ಹೊರಳಾಡುತ್ತಿರುವ ಝುಮೈರ್‌ನನ್ನು ಸಮಾಧಾನ ಮಾಡುವ ಶತ ಪ್ರಯತ್ನ ಮಾಡ ತೊಡಗಿದಳು. ವಿಶಣ್ಣನಾಗಿ ಅಬ್ಬ ಮಗನ ರೋಧನೆಯನ್ನು ನೋಡುತ್ತಾ ಕುಳಿತಿದ್ದ. ಹೇಗೋ ಸಮಧಾನಿಸಿ ಮನೆಯೊಳಗೆ ಕರೆದುಕೊಂಡು ಹೋದಳು ಉಮ್ಮ. ಮಗ ಎಷ್ಟೇ ಸಮಾಧಾನ ಮಾಡಿದರೂ ಅವನ ದುಃಖ ಇಳಿಯುವುದಿಲ್ಲವೆಂದು ಉಮ್ಮನಿಗೆ ಖಾತ್ರಿಯಾಯಿತು. ರಾತ್ರಿ ಊಟ ಮಾಡದೆ ಮಲಗಿದ್ದ ಮಗನ ಬಳಿಗೆ ಬಂದವಳು “ಐವತ್ತು ರೂಪಾಯಿ ನಾನು ಕೊಡ್ತೇನೆ.
ಮುನವ್ವರ್‌ ಜೋಗಿಬೆಟ್ಟು ಬರೆದ ಕಥೆ “ಶಾಲಾ ಮಕ್ಕಳ ಪ್ರವಾಸಕ್ಕೆ ಜಯವಾಗಲಿ” ನಿಮ್ಮ ಓದಿಗೆ

Read More

ಹಮೀರ್‌ ಮುಗಿಲು ಕೆ.ಎಲ್. ಬರೆದ ಈ ಭಾನುವಾರದ ಕಥೆ

ಹೊರಗಾಳಿಯ ತಾಜಾತನವನ್ನು, ಮಧ್ಯಾಹ್ನ ಮೂರುಗಂಟೆಯ ಬಿಸಿಲನ್ನು ಸೇವಿಸಿದೆ. ರೋಡು ದೊಡ್ಡ ಮಾಡಿದಾಗ ಕಡಿದ, ಈಗ ರೊಡಿನ ಸೈಡಲ್ಲಿ ಮಹಾ ಬಂಡೆಗಳ ತರ ಅಥವಾ ರಾಮಲಕ್ಷ್ಮಣರೋ, ಪಾಂಡವರೊ ಸಾಯಿಸಿ ಕೊಚ್ಚಿಹಾಕಿದ ಉಗ್ರ ರಾಕ್ಷಸ ಜನಾಂಗದ ಹೆಣಗಳ ಹಾಗೆ ಬಿದ್ದಿರೊ ಮೂರ್ನಾಲ್ಕು ಶತಮಾನಗಳಷ್ಟು ಪುರಾತನವಾಗಿರಬಹುದಾದ ಮರಗಳ ಬುಡಗಳು ಕಣ್ಣಿಗೆ ಬಿದ್ದವು. ಆ ತಾಜಾತನದ ಸಹಾಯದಿಂದಲೋ ಏನೋ ಇಲ್ಲಿಯತನಕ ಸಿಗದ ಪರಿಹಾರವು ಸಿಕ್ಕಿತು, ಅಥವಾ ಉತ್ಪತ್ತಿಯಾಯಿತು, ಆಥವಾ ನನ್ನ ಸುಪ್ತಪ್ರಜ್ಞಾ ಮನಸ್ಸು ಸಂಶ್ಲೇ಼ಷಣೆ ಮಾಡಿತು.
ಹಮೀರ್‌ ಮುಗಿಲು ಕೆ.ಎಲ್. ಬರೆದ ಈ ಭಾನುವಾರದ ಕಥೆ “ಹಿಂದಿನದು” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ