ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಸ್ವಾತಂತ್ರ್ಯ ದಿನ”
ಮತ್ತೆ ದೃಷ್ಟಿ ಜನರಿಂದ ದೂರ ಹೋಯಿತು. ಇಬ್ಬನಿಯ ಅವಕುಂಠನವನ್ನು ಕಳೆದುಕೊಂಡು ಹೂಗಳು ಮುಗ್ಧತೆಯನ್ನು ಕಳೆದುಕೊಂಡು ಕಠಿಣರಾದ ನಿರಸನಿಗಳಂತೆ ರಾವು ಬಡಿಯುವ ಬಣ್ಣಗಳನ್ನು ತೋರುತ್ತಿದ್ದವು. ಬಾವುಟ ಬಿಸಿಲಿನ ತೀಕ್ಷ್ಣತೆಗೆ ಸೋತು ಮಲಗಿತ್ತು. ಆಕಾಶದ ಒಂದು ಭಾಗದಲ್ಲಿ ಬೂದು ಬಣ್ಣದ ಮೋಡಗಳು ಇಕ್ಕಟ್ಟಾಗಿ ಮಲಗಿದ್ದವು. ಸ್ಲಮ್ ಪ್ರದೇಶ, ಇಂದೊಂದೇ ದಿನ ಆಕಾಶದಲ್ಲಿ ಈ ಮೋಡಗಳಿಗೆ ಜಾಗ, ಮತ್ತೆ ನಾಳಿನಿಂದ ಆಕಾಶದ ತುಂಬ ಕಾರ್ಖಾನೆ ಹೊಗೆಯ ಮೋಡಗಳು, ನಾಳಿನಿಂದ ಆಕಾಶ ತಿಪ್ಪೆ…
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಈ ಸಂಕಲನದ “ಸ್ವಾತಂತ್ರ್ಯ ದಿನ” ಕತೆ ನಿಮ್ಮ ಓದಿಗೆ
