Advertisement

Category: ಸಾಹಿತ್ಯ

ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ

ಅವಳಮ್ಮ ಅಂದುಕೊಂಡಂತೆ ಅವ ಅವಳಿಗೆ ಬರೀ ಕ್ಲಾಸ್ ಮೇಟ್ ಮಾತ್ರವಾಗಿರಲಿಲ್ಲ. ಅವನೆಂದರೆ ಮಿಠಾಯಿ. ಅವನೆಂದರೆ ಬಲೂನು. ಅವಳು ಮೋಞಿಯವರ ಅಂಗಡಿಗೆ ಮನೆಸಾಮಾನಿಗಂತ ಹೋಗಲಾರಂಭಿಸಿದ್ದು ಎಂಟನೇ ಕ್ಲಾಸಿರಬೇಕಾದರೆ. ಅಬೂಬಕರ್ ಅಂಗಡಿ ಕೌಂಟರಲ್ಲಿದ್ದರೆ ಅವಳಿಗೊಂಥರಾ ಖುಷಿ. ಅವನು ಇರುವ ಹೊತ್ತು ನೋಡಿಯೇ ಅವಳು ಅಂಗಡಿಗೆ ಹೋಗುತ್ತಿದ್ದುದೂ ಇದೆ. ಹಾಗೆ ಹೋದಾಗ ಮನೆ ಸಾಮಾನು ಜತೆ ಅವಳಿಗಿಷ್ಟದ ಮಿಠಾಯಿ ನಾಕು ಬೇಕಂತ ಕೇಳಿದರೆ ಅವನು ಆರು ಹಾಕಿರುತ್ತಿದ್ದ. ಅವಳಿಗೆ ಬುಗ್ಗೆಯೆಂದರೆ ಇಷ್ಟ ಅಂತ ಅವನಿಗೆ ಅದು ಹೇಗೆ ಗೊತ್ತಾಯ್ತೋ, ಒಂದೊಂದು ಸಲ ಬಲೂನು ಕೂಡ ಹಾಕಿರುತ್ತಿದ್ದ.
ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ “ಬಲೂನು”

Read More

ನವೀನ ಗಣಪತಿ ಬರೆದ ಈ ಭಾನುವಾರದ ಕತೆ

ಮಧ್ಯಾಹ್ನ ಒಂದು ಘಂಟೆಗೇ ತಾನು ಮನೆಯಲ್ಲಿ ಮಾಡಬಹುದಾದ ಎಲ್ಲ ಕೆಲಸಗಳೂ ಮುಗಿದು ಮತ್ತೆಲ್ಲ ಮನಸ್ಸಿಗೆ ಕಿರಿಕಿರಿಯಾಗ ಹತ್ತಿತ್ತು. ನಾಲ್ಕು ದಿನ ದಾವಣಗೆರೆಗೆ ಹೋಗಿ ಮಗಳೊಟ್ಟಿಗೆ ಇದ್ದು ಬರೋಣವೆನಿಸುತ್ತಿತ್ತು. ಆದರೆ ಶಂಭಣ್ಣನನ್ನು ಬಿಟ್ಟು ಎಲ್ಲಿಯೂ ಹೋಗುವಂತಿರಲಿಲ್ಲ. ಮಗಳೂ ವಾರ ವಾರ ಬರುವವಳಲ್ಲ. ಅವಳಿಗೆ ಭಾನುವಾರ ರಜಾದಿನಗಳು ಇದ್ದಾಗಲೇ ಜೋರು ವ್ಯಾಪಾರ. ಇನ್ನು ಆಚೀಚೆ ಎರಡು ಹೆಂಗಸರೊಟ್ಟಿಗೆ ಹರಟೆ – ಮಾತು – ಒಡನಾಟ ಮಾಡೋಣವೆಂದರೆ, ಒಬ್ಬರ ವ್ಯವಹಾರವಾದರೂ ಚೊಕ್ಕಟವಾಗಿದೆಯೇ?
ನವೀನ ಗಣಪತಿ ಬರೆದ ಈ ಭಾನುವಾರದ ಕತೆ “ಧನಲಕ್ಷ್ಮಿ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ

ಮಕ್ಕಳೆಲ್ಲ ಬಾಕಿಮಾರು ಗದ್ದೆಯತ್ತ ನಡೆದುಕೊಂಡು ಹೋದಾಗ ಅವಿನಾಶನಿಗೆ ಅಯ್ಯಪ್ಪ ಎನಿಸಿತು. ಮಕ್ಕಳು ಅಂಗಳದಲ್ಲಿ ಕ್ರಿಕೆಟ್ ಆಡಲು ಶುರು ಮಾಡಿದರೆ ತಾನು ಅಲ್ಲಿಂದ ಏಳಬೇಕಾಗುತ್ತದೆಂಬ ಆತಂಕದಲ್ಲಿ ಅದುವರೆಗೂ ಅವನಿದ್ದ. ಮಕ್ಕಳು ಆಡಿದರೆ ಆಡಬಾರದೆಂದು ಹೇಳಲು ಚಂದ್ರಕ್ಕನಿಗೂ ಧೈರ್ಯವಿಲ್ಲ. ಅಂಗಳದಲ್ಲಿ ಕ್ರಿಕೆಟ್ ಆಡಿದರೆ ಹಟ್ಟಿ ಕೊಟ್ಟಿಗೆಯ ಹಂಚುಗಳು, ದಂಡೆಯಲ್ಲಿಟ್ಟ ಚೊಂಬು, ಕೊಡಪಾನಗಳು, ಪ್ಲಾಸ್ಟಿಕ್ ಬಾಲ್ದಿಗಳು ಚೆಂಡಿನ ಪೆಟ್ಟು ತಿಂದು ಅಲ್ಲೋಲಕಲ್ಲೋಲ ಆಗುತ್ತದೆ. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಬರೆದ ಕಥೆ

Read More

ಡಾ. ಮಲರ್‌ ವಿಳಿ ಅನುವಾದಿಸಿದ ಕತೆ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು”

ತಲೆಯನ್ನು ಸ್ವಲ್ಪ ಮೇಲಕ್ಕೆ ಎತ್ತಿ ಹಿಡಿದು ಸರವನ್ನು ಬಿಚ್ಚಿದನು. ಅರಿಶಿನ ದಾರವನ್ನು ಮಾತ್ರ ಹಾಗೇ ಬಿಟ್ಟುಬಿಟ್ಟು ಬಂಗಾರದ ತಾಳಿ, ಕಾಸನ್ನು ಸೆಳೆದು ತೆಗೆದುಕೊಂಡನು. ಮೂಗುತಿಯನ್ನು ಬಿಚ್ಚಲು ನೋಡಿದ ತಿರುಪು ಎಂಬ ಸೂಕ್ಷ್ಮವನ್ನು ಅಕ್ಕಸಾಲಿಗನು ಒಳಗೆ ಇಟ್ಟಿದ್ದಾನೆ. ಬೆರಳ ತೂರಿಸಿ ಎಷ್ಟು ಪ್ರಯತ್ನಿಸಿದರೂ ಬಿಚ್ಚಲಾಗಲಿಲ್ಲ. ಕಾಡೈಯನ್ ತಾಳ್ಮೆಗೆಟ್ಟನು. ಮೂಗುತಿ ಮುಖ್ಯವೇ ಹೊರತು ಮೂಗು ಯಾತಕ್ಕೆ ಹೆಣಕ್ಕೆ? ಒಂದು ಬಾರಿ ಎಳೆದನು. ಡಾ. ಮಲರ್‌ ವಿಳಿ ಅನುವಾದಿಸಿದ ತಮಿಳಿನ ಕಥೆಗಾರ ಡಾ. ವೈರಮುತ್ತು ಬರೆದ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು” ಕತೆ, ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಾಹ್ನವಿ ಬಿ.ಟಿ. ಬರೆದ ಕತೆ

ಈ ಮನು ಹಾಗೇನೆ ತಲೆಗೇನಾದ್ರೂ ಬಂತಂದ್ರೇ ಪಟ್ಟು ಹಿಡಿದು ಮಾಡದೆ ಬಿಡೋನಲ್ಲ. ಅಷ್ಟೇ ಜಲ್ದಿನೂ ಯಾವಾಗ್ಲೂ. ಅವನು ಹೋದಲ್ಲೆಲ್ಲಾ ನಗುವಿನ ಬುಗ್ಗೆ. ಅವನಿದ್ದಲ್ಲೆಲ್ಲಾ ಗದ್ದಲ, ಖುಷಿ, ಸಂಭ್ರಮ ಯಾವತ್ತೂ. ಸಾಮಾನ್ಯ ನಾವಿಬ್ರೂ ಬೈಕ್ನಲ್ಲಿ ಹೊರಟರೆ ತನಗಿಷ್ಟವಾದ ಸಿನಿಮಾದ್ದೋ ಇಲ್ಲ ನಾಟಕದ್ದೋ ಡೈಲಾಗ್ಸ್ ಹೇಳ್ತಿರ್ತಾನೆ. ಇಲ್ಲಾಂದ್ರೆ ಆಯಾ ಸಿಚುಯೇಷನ್‌ಗೆ ತಕ್ಕನಾಗಿ ಹಾಡ್ತಾ ಇರ್ತಾನೆ, ಅದೂ ಇಲ್ಲ ಅಂದ್ರೆ ದಾರೀಲಿ ಹೋಗೋ ಬರೋರ್ನೆಲ್ಲಾ ಕಾಡೋಕೆ ಶುರು ಮಾಡ್ತಾನೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಾಹ್ನವಿ ಬಿ.ಟಿ. ಬರೆದ ಕಥೆ “ನೆರೆ ಹಾವಳಿ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ