Advertisement

Category: ಸಾಹಿತ್ಯ

ಆಕರ್ಷ ರಮೇಶ್ ಕಮಲ ಪುಸ್ತಕಕ್ಕೆ ಕೇಶವ ಮಳಗಿ ಮುನ್ನುಡಿ

“ನಗರಗಳ ಅನೂಹ್ಯತೆ, ಅವು ಸೃಷ್ಟಿಸುವ ತಲ್ಲಣ ಮತ್ತು ಉಂಟುಮಾಡುವ ಪಲ್ಲಟ, ಅದರೊಳಗೆ ಹೂತಿರುವ ಆದರೆ ಚದುರಿ ಚೆಲ್ಲಾಪಿಲ್ಲಿಯಾಗಿರುವ ಲೋಕ, ನಗರದ ಅಸ್ತವ್ಯಸ್ತತೆಗಳು, ಇವುಗಳ ನಡುವೆಯೇ ಇರಬಹುದಾದ ಅರ್ಥವನ್ನು ಹೊರ ತೆಗೆಯುವ ಸೃಜನಶೀಲ ಹುಡುಕಾಟ ಈ ಕವಿತೆಗಳ ಮೂಲದ್ರವ್ಯವಾಗಿದೆ. ಆ ನಿಟ್ಟಿನಲ್ಲಿ ಆಕರ್ಷ ತನ್ನ ಅವಕಾಶ, ವ್ಯಾಪ್ತಿ ಮತ್ತು ಇಳಿದಾಣಗಳನ್ನು ಈಗಾಗಲೇ ಗುರುತಿಸಿಕೊಂಡಂತೆ ಕಾಣುತ್ತಿದ್ದಾನೆ. ತನ್ನ ಅಭಿವ್ಯಕ್ತಿಗೆ ಬೇಕಾದ ನುಡಿಗಟ್ಟು, ರೂಪಕ, ಪ್ರತಿಮಾಲೋಕಗಳನ್ನು ಅನುಭವ ಮತ್ತು ಭಾಷೆಗಳ ಟಂಕಸಾಲೆಯಲ್ಲಿ ನಿರ್ಮಿಸಿಕೊಳ್ಳುತ್ತಿದ್ದಾನೆ”

Read More

ಓಬೀರಾಯನ ಕಾಲದ ಕತೆಗಳ ಸರಣಿಯಲ್ಲಿ ಎಂ. ಎನ್. ಕಾಮತ್ ಬರೆದ ಕತೆ “ಕದ್ದವರು ಯಾರು?”

“ಮಂತ್ರವಾದಿಯೂ ಗಂಡನೂ ಕೇಳುತ್ತಲೇ ಇದ್ದ ಪ್ರಶ್ನೆಗಳಿಗೆ “ನಾನೊಂದೂ ಅರಿಯೆ”, ಎಂದೇ ಉತ್ತರ ಕೊಡುತ್ತಿದ್ದಂತೆ, – ಕುಂಡದ ಬಳಿ ಅವಳು ಕೂತಿರಬೇಕೆಂದಾಯಿತು. ಮಿಂದುಟ್ಟ ಒದ್ದೆ ಸೀರೆಯು ಮೈಮೇಲೆಯೇ ಒಣಗಹತ್ತಿತು. ಕೂದಲು ಕಟ್ಟಿಕೊಂಡಿರಲಿಲ್ಲ, ಒಣಗಲೆಂದು; ಅದೆಲ್ಲ ಬೆಂಕಿಯ ಧಗೆಗೆ ಒಣಗುತ್ತ ಗಾಳಿಗೆ ತೂಗುತ್ತ, ಬೆಂಕಿಯ ನಾಲಿಗೆಗಳನ್ನು ಸೋಕುತ್ತ, ಅಷ್ಟಷ್ಟೇ ತುದಿಗಳು ಸುಡುತ್ತ ಕರಿಯಾದುವು.”

Read More

ತಿದ್ದಿಕೊಂಡ ಕನ್ನಡದ ಮನಸ್ಸೊಂದು ಭಿನ್ನಸಂಸ್ಕೃತಿಗಳ ಕಥೆಯಾಗಿಸುವ ಪರಿ

“ಕನ್ನಡದ ಕಥೆ-ಕಾದಂಬರಿಗಳಲ್ಲಿ ವಿಜ್ಞಾನದ ವಸ್ತುಗಳನ್ನು ಬಳಸಿಕೊಳ್ಳುವುದು ಅಪರೂಪವೇನಲ್ಲ, ಆದರೂ ಈ ಬಗೆಯ ಕಥೆಗಳಲ್ಲಿ ಪ್ರಯೋಗಶೀಲತೆಗೆ ಅಪಾರ ಅವಕಾಶವಿದೆ. ಎರಡು ಸಾವಿರದ ಒಂದುನೂರನೆಯ ಇಸವಿಯಲ್ಲಿ ನಡೆಯುವ ಈ ಕಥೆ, ಆದರ್ಶ ಲೋಕವನ್ನಲ್ಲ, ಅವನತಿ ಮುಖದ ನಾಗರಿಕತೆಯ ಚಿತ್ರಣವನ್ನು ಮಾಡುತ್ತದೆ. .”

Read More

ಬಿಡುಗಡೆ: ಮೀರಾ ಸಂಪಿಗೆ ಬರೆದ ಈ ವಾರದ ಕತೆ

“ಮುಂದೆ, ಆ ಮನೆಯಲ್ಲಿರಲಿಕ್ಕಾಗದೆ ಆಕೆ ಮನೆ ಖಾಲಿ ಮಾಡಿ ಹೋದಳು. ಅಡಿಗೆ ಮಾಡುವ ಕೆಲಸ ಸಿಕ್ಕಿದೆಯೆಂದು, ಸಂಬಳ ಚೆನ್ನಾಗಿದ್ದು, ಊಟ ಬಟ್ಟೆ ಖರ್ಚು ಕಳೆಯುತ್ತದೆಂದೂ, ಗಂಡನ ಖಾಯಿಲೆಗಾಗಿ ಮಾಡಿದ ಸಾಲ ತೀರಿಸುವುದಕ್ಕೆ ಸಹಾಯವಾಗುತ್ತದೆಂದು ಹೇಳಿದಳು. ಸಾಲ ಮುಗಿಯಲು ಅನೇಕ ವರ್ಷಗಳೇ ಬೇಕಾಗಬಹುದೆಂದೂ ತಿಳಿಸಿದಳು. ಅವಳ ಸಮಾಧಾನ, ಸ್ಥೈರ್ಯಗಳನ್ನು ಮೆಚ್ಚಿ ನಾನೂ ಕೆಲವು ಧೈರ್ಯದ ಮಾತನ್ನಾಡಿ ಅವಳಿಗೆ ವಿದಾಯ ಹೇಳಿದೆ. ಅಂತೂ ಹಲವು ವರುಷಗಳ ಹೊಡೆತ, ಬಡಿತದ ನರಕದಿಂದ ಆ ಜೀವಿಗೆ ಶಾಶ್ವತ ಬಿಡುಗಡೆ ದೊರೆಯಿತಲ್ಲಾ ಎಂದು ನೆಮ್ಮದಿಯ ಉಸಿರೆಳೆದೆ.”

Read More

ಸಂಸ್ಕೃತಿ ಕಥನವೇ ಆಗಿಬಿಡುವ ಬಾಲ್ಯದ ನೆನಪುಗಳ ಹೊತ್ತಿಗೆ

”ಬಾಲ್ಯದ ಅನುಭವಗಳನ್ನು ಬಿಡಿಬಿಡಿ ಅನುಭವ ಕಥನಗಳ ಮೂಲಕ ಸಾದರಪಡಿಸುವ ಜೋಯಪ್ಪ, ಈ ಅನುಭವಗಳನ್ನು ಒಂದು ಸಂಸ್ಕೃತಿ ಕಥನದ ಮಟ್ಟಕ್ಕೆ ಏರಿಸಿಬಿಡುತ್ತಾರೆ. ಸಂದ ಕಾಲದಲ್ಲಿ ನೆಲೆ ಊರಿದ್ದ ಒಂದು ಭೌಗೋಳಿಕ ಚೌಕಟ್ಟಿನ ಬದುಕನ್ನು; ಇದು ಎಲ್ಲಾ ಕುಟುಂಬಗಳ ಕಥೆ ಎಂಬಂತೆ ಹರಳು ಕಟ್ಟಿದ ಕಥನಗಳ ಮೂಲಕ ಜೋಯಪ್ಪ ಕಟ್ಟುತ್ತಾರೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ