Advertisement

Category: ಅಂಕಣ

ಗುರು ಮತ್ತು ಹಕ್ಕಿಗೂಡು: ಸುಕನ್ಯಾ ಕನಾರಳ್ಳಿ ಅಂಕಣ

ಗಾಂಧೀಜಿ ಒಮ್ಮೆ ಯರವಾಡ ಜೈಲಿನಲ್ಲಿದ್ದಾಗ ಒಂದು ರಾತ್ರಿ ಬರಿಯ ದುಃಸ್ವಪ್ನಗಳೇ ಬಿದ್ದು ಬೆಚ್ಚಿದ್ದಾಗ ವಿಚಾರಿಸಿದರಂತೆ. ಹಿಂದಿನ ರಾತ್ರಿಯ ಅಡಿಗೆಯನ್ನು ಒಬ್ಬ ಕೊಲೆಗಡುಕ ಅಪರಾಧಿ ಮಾಡಿದ್ದಾನೆಂದು ತಿಳಿದು ಅಂದಿನಿಂದ ರಾತ್ರಿಯ ಊಟವನ್ನೇ ಬಿಟ್ಟರಂತೆ. ನಮ್ಮ ಸೂಕ್ಷ್ಮ ಶರೀರದ ಚೈತನ್ಯ ಇನ್ನೊಬ್ಬರಿಗೂ ಅನುಭವಕ್ಕೆ ಬರುತ್ತದೆ ಎಂದು ಅರಿವಾಗುವುದು ಬ್ರಹ್ಮವಿದ್ಯೆಯೇನೂ ಅಲ್ಲ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಚಿತ್ರಾ ವೆಂಕಟರಾಜು ಹೊಸ ಸರಣಿ “ಚಿತ್ತು-ಕಾಟು” ಇಂದಿನಿಂದ

ಇದರೊಳಗೆ ಒಂದು ತಮಾಷೆಯೆಂದರೆ ಪಾತ್ರದ ಜತೆಗೆ ನಟನೂ ಇರುತ್ತಾನೆ. ಪರಸ್ಪರ ಒಬ್ಬರಿಗೊಬ್ಬರನ್ನು ಕಂಡರೆ ಆಗದ ನಟರು ರಂಗದ ಮೇಲೆ ಪ್ರೇಮಿಸುತ್ತಾರೆ‌. ಪ್ರೀತಿಸಿದ ಹುಡುಗಿ ಅಜ್ಜಿಯೋ, ಸನ್ಯಾಸಿಯೋ ಆಗಿಬಿಟ್ಟಿರುತ್ತಾಳೆ. ಪ್ರೀತಿಸಿದ ನಟ ಇನ್ನೊಬ್ಬಳೊಂದಿಗೆ ಡಾನ್ಸ್ ಮಾಡ್ತಿರೋದನ್ನ ಅವನ ಪ್ರೇಯಸಿ ಸೈಡ್ ವಿಂಗಿನಲ್ಲಿ ಕೂತು.. ‘ಇದು ನಾಟಕ ಇದು ನಾಟಕ’ ಅಂತ ತನ್ನನ್ನೇ ಸಮಾಧಾನಪಡಿಸಿಕೊಳ್ಳುತ್ತಾಳೆ. ಹೀಗೆ ರಂಗದ ಮೇಲೆ ನಡೆಯುವ ನಾಟಕಕ್ಕಿಂತ ಹೆಚ್ಚು ರೋಚಕವಾದ ಅನೇಕ ನಾಟಕಗಳು ಈ ಪ್ರಕ್ರಿಯೆಯಲ್ಲಿ ನಡೆಯುತ್ತಲೇ ಇರುತ್ತದೆ. ಕಲಾಲೋಕದ ಕುರಿತು ಚಿತ್ರಾ ವೆಂಕಟರಾಜು ಹೊಸ ಸರಣಿ “ಚಿತ್ತು-ಕಾಟು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಉಳಿದು ಹೋಗುವುದೆಂದರೆ… ವಿನಾಯಕ ಅರಳಸುರಳಿ ಅಂಕಣ

ಮುಂದಿನ ಕೆಲ ವರ್ಷಗಳ ಕಾಲ ಆ ಪತ್ರ ಹಾಗೆಯೇ ಇಲ್ಲದ ಅಜ್ಜನ ಹೆಸರನ್ನು ವಿಳಾಸವಾಗಿಸಿಕೊಂಡು ಬಂದು ನಮಗೆಲ್ಲ ಶುಭಾಶಯ ಹೇಳುತ್ತಿತ್ತು. ಕೊನೆಗೊಂದು ದಿನ ಯಾರಿಂದಲೋ ಗೊತ್ತಾದ ವಿಷಯವೇನೆಂದರೆ ಆ ಪತ್ರದ ಬುಡದಲ್ಲಿ ‘ಶುಭಕೋರುವವರು – ABC ಆಚಾರ್’ ಎಂದು ಬರೆದಿರುತ್ತಿದ್ದ, ಅಜ್ಜ ಹೇಳುತ್ತಿದ್ದ ಆಚಾರ್ ಇದ್ದರಲ್ಲ, ಅವರೂ ತೀರಿಹೋಗಿ ಕೆಲ ವರ್ಷಗಳೇ ಆಗಿದ್ದವು! ಅವರ ಮಗನೇ ಅವರ ಹೆಸರಿನಲ್ಲಿ ಈ ಶುಭಾಶಯ ಪತ್ರವನ್ನು ಗ್ರಾಹಕರಿಗೆ ಕಳಿಸುತ್ತಿದ್ದ! ಹೇಗೆ ಅವರ ದೃಷ್ಟಿಯಲ್ಲಿ ತೀರಿಹೋದ ಬಳಿಕವೂ ಅಜ್ಜ ಜೀವಂತವಾಗಿದ್ದನೋ ಹಾಗೇ ನಮ್ಮೆಲ್ಲರ ದೃಷ್ಟಿಯಲ್ಲಿ ಆಚಾರರೂ ಜೀವಂತವಾಗಿದ್ದರು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ನಿಜ ಆಸ್ಟ್ರೇಲಿಯಾ ಎಂಬ ಪ್ರಶ್ನೆ: ವಿನತೆ ಶರ್ಮಾ ಅಂಕಣ

ನಮಗೆ ಗೊತ್ತಿರುವ ಹೊಸ ಆಸ್ಟ್ರೇಲಿಯಾದ ಉಧ್ಭವ ಮತ್ತು ಬೆಳೆದಿದ್ದು ಅದೆಷ್ಟು ವಿವಾದಗಳನ್ನೊಳಗೊಂಡಿತ್ತು, ಎಂದು ಒತ್ತಿ ಹೇಳುತ್ತದೆ. ಆಸ್ಟ್ರೇಲಿಯಾದ ಬಗ್ಗೆ ಈಗಲೂ ಇರುವ ಸುಳ್ಳುಪೊರೆಗಳನ್ನು ಛೇದಿಸುತ್ತಾ ಕಾರ್ಯಕ್ರಮವು ವೀಕ್ಷಕರ ಮುಂದೆ ಅನೇಕ ಸಾಕ್ಷ್ಯಗಳನ್ನು ಇಡುತ್ತದೆ. ಹಿಂದಿನ ರಾಜಕೀಯ ನಾಯಕರು, ಪ್ರಮುಖ ಸರ್ಕಾರಿ ಅಧಿಕಾರಿಗಳು, ಚರಿತ್ರೆ-ದಾಖಲೆಗಳನ್ನು ಅಭ್ಯಸಿಸುವ ನಿಪುಣರು, ಅಬೊರಿಜಿನಲ್ ಆಸ್ಟ್ರೇಲಿಯನ್ ವಿದ್ವಾಂಸರು ಮತ್ತು ಹಿರಿಯರು ಎಂಬಂತೆ ನೂರಾರು ಜನರನ್ನು ಸಂದರ್ಶಿಸಿ ಅವರ ದೃಷ್ಟಿಕೋನಗಳನ್ನು ತೋರಿಸಿದ ಈ ಸರಣಿ ಡಾಕ್ಯುಮೆಂಟರಿ ಬಹಳ ಉಪಯುಕ್ತವಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕನ್ನಡ ಮನಸ್ಸು ಪ್ರೀತಿಯನ್ನು ಪರಿಭಾವಿಸುವ ರೀತಿ: ಎಲ್.ಜಿ.ಮೀರಾ ಅಂಕಣ

ಆಧುನಿಕ ಕನ್ನಡ ಸಾಹಿತ್ಯದ ಬಹಳ ಮುಖ್ಯ ಘಟ್ಟವಾದ ನವೋದಯದಲ್ಲಿ ಪ್ರೇಮವನ್ನು ದಾಂಪತ್ಯದೊಳಗಿದ್ದಾಗ ಸಂಭ್ರಮಿಸುವ ಹಾಗೂ ಒಂದು ವೇಳೆ ಅದು ದಾಂಪತ್ಯದ ಹೊರಗಿದ್ದಾಗ ಅದನ್ನು ತ್ಯಾಗ ಮಾಡುವ ಮನೋಧರ್ಮ ಕಾಣುತ್ತಿತ್ತು. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹಿನ್ನೆಲೆಯಲ್ಲಿದ್ದ ನವ ಭಾರತ ನಿರ್ಮಾಣದ ಆಶಯ, ಸುಧಾರಣಾವಾದ, ಬ್ರಿಟಿಷರ ಕಣ್ಣಲ್ಲಿ ಭಾರತದ `ಸಭ್ಯ ಸಂಸ್ಕೃತಿ’ಯನ್ನು ಎತ್ತಿ ಹಿಡಿಯುವ ನೈತಿಕ ತವಕ ಇವು ಕುವೆಂಪು, ಬೇಂದ್ರೆ, ಪುತಿನ ಮುಂದೆ ಕೆ.ಎಸ್.ನರಸಿಂಹಸ್ವಾಮಿ ಇವರೆಲ್ಲರ ಪ್ರೀತಿಯ ಚಿತ್ರಣವನ್ನು ಪ್ರಭಾವಿಸಿದವು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ