Advertisement

Category: ಅಂಕಣ

ಪಾತ್ರ ಪುರಾಣ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಅಕ್ಷರಶಃ ದೀಪವಾರಿದ ಮೇಲಿ ನಿಂಕ ದೀಪದ ಮಲ್ಲಿಯಾದಳು ಶಕುಂತಲೆ. ಅಷ್ಟು ದುರ್ಬಲವೇ ನಮ್ಮ ಪ್ರೇಮ? ಯಾವುದೋ ವಸ್ತುವಿನ ಅವಶ್ಯಕತೆ ಅನಿವಾರ್ಯ ಆಗುವಷ್ಚು? ದಿಕ್ಕುತಪ್ಪಿದಳು, ಏಕಾಂಗಿಯಾದಳು.ಶಕುಂತಲೆಗೆ ದುಷ್ಯಂತನ ಪರಿಚಯವಿತ್ತು.ಸಂಧಿಸಿದ ಕೂಡಲೇ ತನ್ನ ಗುರುತು ಹಿಡಿಯುವನೆಂಬ ಅಪಾರ ಆತ್ಮವಿಶ್ವಾಸವೂ ಇತ್ತು. ಅದಕ್ಕಾಗಿಯೇ, ಅವಳಿಗೆ ದುಷ್ಯಂತ ಗುರುತಿಗಾಗಿಯೇ ಕೊಟ್ಟಿದ್ದ ಉಂಗುರವನ್ನು ಅವಳು ಅಷ್ಟೊಂದು ಮಹತ್ವದ್ದಾಗಿ ಪರಿಗಣಿಸಲೇ ಇಲ್ಲ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಆರನೆಯ ಬರಹ

Read More

ಎರಡು-ನಾಲಿಗೆಗಳ ನಡುವೆ ನಾನು!: ಸುಕನ್ಯಾ ಕನಾರಳ್ಳಿ ಅಂಕಣ

ಕರ್ನಾಟಕದಲ್ಲಿ ಕಲಿಯುವ ಮಕ್ಕಳ ಜೊತೆ ಒಂದು ಭಾವನಾತ್ಮಕ ಸಂಬಂಧವನ್ನು ಕಟ್ಟಿಕೊಳ್ಳುವುದಕ್ಕೆ ನನ್ನ ಕನ್ನಡ ಇನ್ನಿಲ್ಲದಂತೆ ಸಹಾಯ ಮಾಡಿದೆ. ಕೆಲವೊಮ್ಮೆ ಪರಿಕಲ್ಪನೆಗಳನ್ನ ಅರ್ಥಮಾಡಿಸುವಾಗ ಬಳಸಿಕೊಳ್ಳುತ್ತಿದ್ದ ದಿನನಿತ್ಯದ ಉದಾಹರಣೆಗಳಿಗೆ ಮತ್ತು ಹಾಸ್ಯಕ್ಕೆ ಕನ್ನಡವೇ ಜೀವವಾಗಿರುತ್ತಿತ್ತು. ಅದನ್ನೇ ಇಂಗ್ಲೀಷಿನಲ್ಲಿ ಹೇಳಿದ್ದಿದ್ದರೆ ಮಕ್ಕಳು ನಗುವುದಿರಲಿ, ನನಗೇ ಅಳು ಬರುತ್ತಿತ್ತೋ ಏನೋ. ಆದರೂ ಹೊರನಾಡಿನಿಂದ ಬಂದಿದ್ದ ಕೆಲವು ಮಕ್ಕಳಿಗೆ ಇಂಗ್ಲೀಷಿನಲ್ಲೂ ಹೇಳುವ ಪ್ರಯತ್ನ ಮಾಡುತ್ತಿದ್ದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹನ್ನೊಂದನೆಯ ಬರಹ

Read More

ಜಯಲಕ್ಷ್ಮಿ ಪಾಟೀಲ್ ಬರೆಯುವ ಹೊಸ ಅಂಕಣ “ಗರ್ದಿ ಗಮ್ಮತ್ತು” ಇಂದಿನಿಂದ

ಕೇವಲ ಕೆಲ ಬೇಸಿಗೆ ಶಿಬಿರಗಳು, ಅರೆ ವಾರ್ಷಿಕ ಕೋರ್ಸುಗಳು, ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳು ಆಡುವ ನಾಟಕಗಳು ಮಾತ್ರವಿದ್ದರೆ ಸಾಲದು. ಇದನ್ನೂ ಮೀರಿ ಮಕ್ಕಳ ರಂಗಭೂಮಿ ಬೆಳೆಯಬೇಕಿದೆ. ಕೇವಲ ಕಲೆಯ ದೃಷ್ಟಿಯಿಂದ ಮಾತ್ರವಲ್ಲ, ಮಕ್ಕಳೊಳಗಿನ ಆತ್ಮವಿಶ್ವಾಸ ಹೆಚ್ಚಾಗಲು, ಭಾಷಾ ಕಲಿಕೆಗೆ, ಸ್ಪಷ್ಟ ಉಚ್ಚಾರಣೆಗೆ, ಪಾತ್ರಗಳ ಮೂಲಕ ಭಿನ್ನ ವ್ಯಕ್ತಿತ್ವಗಳನ್ನು ಅರಿಯುವುದಕ್ಕೆ, ನಾಲ್ಕು ಜನರೊಂದಿಗೆ ಬೆರೆಯುವುದಕ್ಕೆ, ಆರೋಗ್ಯಕರ ಮನಸ್ಥಿತಿ ಬೆಳೆಸಿಕೊಳ್ಳುವುದಕ್ಕೆ ಮಕ್ಕಳ ರಂಗಭೂಮಿ ಪೂರಕವಾಗಬಲ್ಲದು. ಬಣ್ಣ ಮತ್ತು ಬೆಳಕಿನ ಜೋಡಿಯ ಮೋಡಿ ಸಮಸ್ತ ಪ್ರಜೆಗಳ ಮೇಲಾಗಲಿ.
ಜಯಲಕ್ಷ್ಮಿ ಪಾಟೀಲ್ ಬರೆಯುವ ಹೊಸ ಅಂಕಣ “ಗರ್ದಿ ಗಮ್ಮತ್ತು”

Read More

‘ಹೊಸ’ ಅಲೆ  ಮತ್ತು ‘ಹಗರಣ’: ಸುಕನ್ಯಾ ಕನಾರಳ್ಳಿ ಅಂಕಣ

‘ಸಂಸ್ಕಾರ’ ಕಾದಂಬರಿಯ ಕರ್ತೃ ಯು ಆರ್ ಅನಂತಮೂರ್ತಿ ಚಿತ್ರಕಥೆಯಲ್ಲಿ ಮಾಡಿಕೊಂಡಿದ್ದ ಬದಲಾವಣೆಗಳ ಬಗ್ಗೆ ಹೇಳಿದ್ದ ಮಾತುಗಳನ್ನು ಗಮನಿಸಿದರೆ ‘ಸ್ವ-ಸೆನ್ಸಾರಿಕರಣ’ ಅಲ್ಲಿಯೂ ಸಹ ಕೆಲಸ ಮಾಡಿದ್ದನ್ನು ಗಮನಿಸಬಹುದು. ನಾರಣಪ್ಪನ ಸಂಸ್ಕಾರ ಕಾದಂಬರಿಯ ಅರ್ಧದಲ್ಲಿಯೇ ಒಬ್ಬ ಮುಸ್ಲಿಮ್ ವ್ಯಕ್ತಿಯಿಂದ ನಡೆದು ಹೋಗಿರುತ್ತದೆ. ಆದರೆ ಚಿತ್ರ ಅದರ ಬಗ್ಗೆ ಮೌನ ತಳೆಯುತ್ತದೆ. ಈ ‘ದಿವ್ಯಮೌನ’ ಪ್ರಾಣೇಶಾಚಾರ್ಯರ ತುಮುಲಕ್ಕೆ ಇನ್ನೊಂದು ಆಯಾಮ ನೀಡುವುದರ ಜೊತೆಗೆ ಹಾಗೇನಾದರೂ ಚಿತ್ರದಲ್ಲಿ ತೋರಿಸಿದ್ದಿದ್ದರೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯೇ ಇರುತ್ತಿರಲಿಲ್ಲ ಎನ್ನುವುದೂ ನಿಜ ತಾನೇ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಬದಲಾಗಿದ್ದು ಕ್ಯಾಲೆಂಡರ್ ಮಾತ್ರವೇನಾ?:  ವಿನಾಯಕ ಅರಳಸುರಳಿ ಅಂಕಣ

ಫಸ್ಟ್ ಬರುವ ನಿರೀಕ್ಷೆಯಲ್ಲಿ ಶಾಲೆ-ಕಾಲೇಜುಗಳೇ ಮುಗಿದವು. ಏಳು, ಎಂಟಕ್ಕೆ ಏಳೇಳುತ್ತ ಹಗಲುಗಳೇ ಸವೆದವು. ಕೊನೆಯ ಬೆಂಚಿನ ಹುಡುಗಿಯ ಬದುಕಿನಲ್ಲಿ ಹೊಸ ವರ್ಷ, ಗಂಡ, ಮಕ್ಕಳೂ ಬಂದಿದ್ದಾಯಿತು. ಬೈಸಿಕೊಳ್ಳುತ್ತಲೇ ಅಮ್ಮ ಎದ್ದು ಹೋದಳು. ಕೆಲಸ ಮಾಡಿಸಿಕೊಳ್ಳದೆಯೇ ಅಪ್ಪ ಹೊರಟು ಹೋದ. ಬಂಕ್ ಮಾಡುತ್ತಿರುವಾಗಲೇ ಕಾಲೇಜಿನ ಕೊನೆಯ ದಿನ ತಲುಪಿದೆವು. ಹೊಸ ಕ್ಯಾಲೆಂಡರಿನ ಮೊದಲ ಪುಟ ತಿರುವುವ ಮೊದಲೇ ಗಂಡ/ಹೆಂಡತಿಯ ಜೊತೆ ಆಗಲೇ ಮೂರು ಬಾರಿ ಜಗಳವಾಡಿಯಾಗಿದೆ. ಅದೇ ಸೋಮಾರಿತನ, ಅದೇ ಅಶ್ರದ್ಧೆ, ಅದೇ ಸುಮ್ಮನೆ ವ್ಯಯವಾಗುವ ಮುನ್ನೂರರವತೈದು ದಿನಗಳ ಮತ್ತೊಂದು ಆವರಣಕ್ಕೆ ‘ಹೊಸ ವರ್ಷ’ ಎನ್ನುವ ಹೆಸರು ಕೊಟ್ಟು ಕುಣಿಯುತ್ತ, ಕುಡಿಯುತ್ತ, ಕೇಕೆ ಹಾಕುತ್ತ ಪ್ರವೇಶಿಸಿದೆವು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ