Advertisement

Category: ಅಂಕಣ

ಕನ್ನಡ ವಿಜ್ಞಾನ ಸಂವಹನಕ್ಕೆ ಡಾ. ಕೆ. ಶಿವರಾಮ ಕಾರಂತರ ಕೊಡುಗೆ: ಎಲ್. ಜಿ. ಮೀರಾ ಅಂಕಣ

ಇಂತಹ ವಿಚಾರ ಮನಸ್ಸಿಗೆ ಬಂದ ಮೇಲೆ ಕಾರಂತರು ಸುಮ್ಮನೆ ಕೂರುವ ಜಾಯಮಾನದವರಲ್ಲ. ಮಕ್ಕಳಿಗೆ ತಮ್ಮ ಜಿಲ್ಲೆಯಾದ ದಕ್ಷಿಣಕನ್ನಡದ ಪರಿಚಯವನ್ನು ಸ್ವಾರಸ್ಯಕರವಾಗಿ ಮತ್ತು ಚಿತ್ರಸಹಿತವಾಗಿ ಮಾಡಿಕೊಡುವ `ಚಿತ್ರಮಯ ದಕ್ಷಿಣಕನ್ನಡ’ ಕೃತಿಯನ್ನು ರಚಿಸಿಯೇಬಿಟ್ಟರು. ಇದಕ್ಕಾಗಿ ಜಿಲ್ಲೆಯ ತುಂಬ ಓಡಾಡಿ ಅನೇಕ ಛಾಯಾಚಿತ್ರಗಳನ್ನು ತೆಗೆದರು, ಚಿತ್ರಗಳನ್ನು ಸ್ವತಃ ಬರೆದರು! ಮುಂದೆ ಮಕ್ಕಳಿಗಾಗಿ ಮತ್ತು ಆಸಕ್ತ ದೊಡ್ಡವರಿಗಾಗಿ `ದಕ್ಷಿಣ ಹಿಂದೂಸ್ಥಾನ’ ಕೃತಿಯನ್ನು ಹಾಗೂ `ಬಾಲಪ್ರಪಂಚ’, `ವಿಜ್ಞಾನ ಪ್ರಪಂಚ’ ಎಂಬ ವಿಶ್ವಕೋಶಗಳನ್ನು ರಚಿಸಿದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತೈದನೆಯ ಬರಹ

Read More

ಮನೆಯೊಳಗಿನ-ಈಕೆ  ಮತ್ತು  ಹೊರಗಿನ-ಆಕೆ!: ಸುಕನ್ಯಾ ಕನಾರಳ್ಳಿ ಅಂಕಣ

ಮನೆಯೊಳಗಿನ ಈಕೆ ಮನೆಯಿಂದ ಆಚೆ ಹೋಗಿ ದುಡಿದರೂ ಸಹ ಮನೆಯನ್ನು ನಿಭಾಯಿಸುವುದು ಕೊನೆಗೂ ಈಕೆಯ ಹೊಣೆಯಾಗಿ ಉಳಿದುಕೊಂಡಿದೆ ಎನ್ನುವುದೂ ಸಹ ನಿಜ. ಅಲ್ಲೋ ಇಲ್ಲೋ ಗಂಡ ಮಕ್ಕಳಿಂದ ಸಹಾಯ ಸಿಗಬಹುದೇನೋ. ಅದು ಕೇವಲ ಸಹಾಯ ಅಷ್ಟೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ತೊಂದನೆಯ ಬರಹ

Read More

ಪದವಿರಲಿ ಎದೆಯಲ್ಲಿ, ಪ್ರೀತಿ ಹರಿದೀತು!: ಸುಕನ್ಯಾ ಕನಾರಳ್ಳಿ ಅಂಕಣ

ಬದುಕಿನ ಸಂಕಷ್ಟಗಳ ಸಮಯದಲ್ಲಿ ಹೈಸ್ಕೂಲಿನಲ್ಲಿ ಕಲಿತ ‘ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ, ಕೈ ಹಿಡಿದು ನಡೆಸೆನ್ನನು’ ಎಂಬ ಬಿ ಎಂ ಶ್ರೀ ಅವರ ಅನುವಾದಿತ ಇಂಗ್ಲಿಷ್ ಕವಿತೆಯನ್ನು ಆರ್ತತೆಯಿಂದ ನೆನಪಿಸಿಕೊಂಡಿದ್ದೇನೆ. ಕೆ. ಎಸ್. ನರಸಿಂಹಸ್ವಾಮಿಯವರ ‘ದೀಪವೂ ನಿನ್ನದೇ, ಗಾಳಿಯೂ ನಿನ್ನದೇ, ಆರದಿರಲಿ ಬೆಳಕು’ ಎಂದು ಬೇಡಿಕೊಂಡಿದ್ದೇನೆ. ಊರಿನಲ್ಲಿ ಗಣಪತಿ ಕೂರಿಸುತ್ತಿದ್ದ ಒಂದು ತಿಂಗಳಲ್ಲಿ ಸಾಮಾನ್ಯವಾಗಿ ಇರುತ್ತಿದ್ದ ಪಿ. ಕಾಳಿಂಗರಾಯರ ‘ಬಾರಯ್ಯ ಬೆಳದಿಂಗಳೇ…’ ಕೇಳುತ್ತಾ ಸುತ್ತಮುತ್ತಲ ಹಳ್ಳಿಗಳಿಂದ ಗಾಡಿ ಹೂಡಿಕೊಂಡು ಬರುತ್ತಿದ್ದ ಮಂದಿ ಬೀದಿಯಲ್ಲಿ ಕಿಕ್ಕಿರಿದು ನಿಂತು ಬೆಳದಿಂಗಳಲ್ಲಿ ತೊಯ್ದಂತೆ ತನ್ಮಯರಾಗಿ ನಿಂತಿದ್ದನ್ನು ಕಂಡಿದ್ದೇನೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ದೇವ್ರು ಶಾಣ್ಯಾ ಅದಾನ್ರೀ… : ವಿನಾಯಕ ಅರಳಸುರಳಿ ಅಂಕಣ

ಹೌದಲ್ಲವೇ? ಎಲ್ಲಾ ಸರಿಯಾಗಿರುವ ಹೊತ್ತಿನಲ್ಲೂ ಯಾವುದೋ ಒಂದು ಕೊರಗು ನಮ್ಮನ್ನು ಕಾಡುತ್ತಲೇ ಇರುತ್ತದೆ. ಮಧ್ಯಾಹ್ನದ ನೆರಳಿನಲ್ಲಿ ಯಾರದೋ ಹುಡುಕಾಟ… ಸಂಜೆಯ ತಂಪಲ್ಲಿ ಯಾವುದೋ ನೆನಪು.. ರಾತ್ರೆಯ ಕನವರಿಕೆಯಲ್ಲಂತೂ ಎಂಥದ್ದೋ ದುಃಖ… ಇವೆಲ್ಲಾ ಏಕೆ? ಕಳೆದ ನೆನ್ನೆಗಳೇ ಅದೇಕೋ ಚಂದ ಎನಿಸುತ್ತವೆ. ಇಂದು ಎನ್ನುವುದು ಯಾವಾಗಲೂ ಕಹಿ ಕಹಿ. ಈ ಕ್ಷಣಕ್ಕೆ ಮೈ ಚಾಚಿ ಮಲಗಿರುವ ಹಂಸತೂಲಿಕಾ ತಲ್ಪದಲ್ಲೂ ಹಿಂದೆಂದೋ ಅರೆನಿದಿರೆ ಹೊತ್ತು ತಂದಿದ್ದ ಗುಡಿಸಲಿನ ಒರಟು ನೆಲದ್ದೇ ಕನವರಿಕೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಸಂತೆಯಲ್ಲಿ ಸಂತರು ರಚಿಸಿದ ನುಡಿರತ್ನಗಳು : ಕನ್ನಡದ ತತ್ವಪದಗಳು: ಡಾ. ಎಲ್.ಜಿ.ಮೀರಾ

ಹೀಗೆ ಹಾಡುತ್ತಿರುವಾಗ ಕೆಲವರು ಮೂಲಕವಿಯ ಅಂಕಿತವನ್ನು ಬದಲಿಸಿ ತಮ್ಮ ನಡುವಿನ ಇಲ್ಲವೆ ದೇವರ ಹೆಸರುಗಳನ್ನು ಸೇರಿಸುವುದುಂಟು. ಆದರೆ ಇವು ಜನಪದರು ಹಾಡುತ್ತಿದ್ದ ಹಾಡುಗಳು ಎಂಬ ಕಾರಣದಿಂದಾಗಿ ಪಂಡಿತರು ಇವನ್ನು ಉಪೇಕ್ಷೆ ಮಾಡುತ್ತಿದ್ದರು. ಹೀಗಾಗಿ ಇವುಗಳ ಸಂಗ್ರಹಕಾರ್ಯ ವಿಳಂಬವಾಯಿತು. ಅವು ಹಾಡಿನ ರೂಪದಲ್ಲಿ ಇದ್ದುದರಿಂದ ಜನರ ಬಾಯಲ್ಲಿ ಹೇಗೋ ಉಳಿದುಕೊಂಡು ಅಳಿಯದೆ ಪ್ರಸಾರವಾಗುತ್ತಾ ಬಂದಿವೆ. ಜಾತಿಧರ್ಮಗಳನ್ನು ಮೀರಿ, ಈ ನೆಲದ ತತ್ವಚಿಂತನೆಯನ್ನು ನಿಸರ್ಗ ವಿವೇಕದ ಜೊತೆ ಬೆರೆಸುತ್ತ ಸಮಾಜದ ಚಿಂತನಾಕ್ರಮವನ್ನು ಆರೋಗ್ಯಕರವಾಗಿರುವಂತೆ ಈ ತತ್ವಪದಗಳು ನೋಡಿಕೊಂಡಿವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ