Advertisement

Category: ಅಂಕಣ

ನೀಲಿ ನೋಡಿದ ಕಾಡು: ಸುಧಾ ಆಡುಕಳ ಅಂಕಣ

ಒಮ್ಮೆ ಅವನೂ, ನೀಲಿಯ ತಂದೆಯೂ ಅಂಟುವಾಳದ ಕಾಯಿಗಳನ್ನು ಹುಡುಕುತ್ತ ಕಾಡಿನಲ್ಲಿ ಬಹುದೂರದವರೆಗೆ ಸಾಗಿದರಂತೆ. ಚೀಲಗಟ್ಟಲೆ ಕಾಯಿಗಳನ್ನು ಕೊಯ್ದು ಮೂಟೆಗಟ್ಟಿ ದಣಿವಾರಿಸಿಕೊಳ್ಳಲೆಂದು ಮರವೊಂದರ ಬೇರಿನ ಮೇಲೆ ಕುಳಿತು ಕವಳ ತಿನ್ನತೊಡಗಿದರಂತೆ. ಸುಮಾರು ಹೊತ್ತಿಗೆ ನೋಡಿದರೆ ಅವರು ಕುಳಿತಿದ್ದ ಬೇರು ನಿಧಾನಕ್ಕೆ ಚಲಿಸಲು ಪ್ರಾರಂಭವಾಯಿತಂತೆ. ಅರೆ! ಇದೇನಿದು? ಎಂದು ಎದ್ದು ದೂರ ನಿಂತರೆ ಮರದ ಬೇರೆಂದು ಅವರು ಕುಳಿತದ್ದು ಮಾದೊಡ್ಡ ಹೆಬ್ಬಾವಿನ ಮೇಲಂತೆ!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಎಂಟನೆಯ ಕಂತು ನಿಮ್ಮ ಓದಿಗೆ

Read More

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗಳು: ಎಂ.ವಿ ಶಶಿಭೂಷಣ ರಾಜು ಅಂಕಣ

ಹೀಗೆ ಹೊತ್ತಿಲ್ಲದ ಹೊತ್ತಿನಲ್ಲಿ ಕೆಲಸಮಾಡುವುದರಿಂದ, ಓಡಾಡಲು ಸ್ವಂತ ವಾಹನ ಇಲ್ಲದಿರುವುದರಿಂದ, ರೈಲು, ಬಸ್ಸುಗಳಲ್ಲಿ ಅಥವಾ ನಡೆದು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ತಲುಪಬೇಕಾಗಿರುವುದರಿಂದ, ಕೆಲವು ಅನಾಹುತಗಳಿಗೆ ತೆರೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ಇದೇ ಹೆಚ್ಚಿನ ಅನಾಹುತಗಳಿಗೆ ಕಾರಣ. ಇದು ಭಾರತೀಯ ವಿದ್ಯಾರ್ಥಿಗಳೇ ಅಲ್ಲ, ಎಲ್ಲಾ ದೇಶಗಳ ವಿದ್ಯಾರ್ಥಿಗಳಿಗೂ ಜರುಗುತ್ತದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ

Read More

ಮಹಿಳಾ ದೌರ್ಜನ್ಯದ ಸುತ್ತ…: ವಿನತೆ ಶರ್ಮ ಅಂಕಣ

ಒಬ್ಬ ಮಹಿಳೆ ತನ್ನ ಗಂಡನಿಂದಲೊ, ಜೀವನ ಸಂಗಾತಿಯಿಂದಲೊ ಅಥವಾ ಆ ರೀತಿಯ ಸಂಬಂಧವು ಕೊನೆಯಾಗಿ ಬೇರ್ಪಟ್ಟ ಮೇಲೂ ಅವರಿಂದ ಹಿಂಸೆಗೊಳಗಾಗಿ ಸಾಯುವುದು ಬಹಳ ದುಃಖಕರ ವಿಷಯ. ಒಂದು ಮುಂದುವರೆದ ಸಮಾಜವೆಂದು ಕರೆಸಿಕೊಳ್ಳುವ ಪಾಶ್ಚಾತ್ಯ ದೇಶವಾದ, ಕೇವಲ ೨೬ ಮಿಲಿಯನ್ ಜನರಿರುವ ಈ ದೇಶದಲ್ಲಿ ಕೌಟುಂಬಿಕ ಹಿಂಸೆ ಹಿನ್ನೆಲೆಯಲ್ಲಿ ಹೆಂಗಸೊಬ್ಬಳನ್ನು ಸಾಯಿಸುವುದು ಅವಮಾನವನ್ನುಂಟು ಮಾಡುವ ವಿಷಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಹೊಳೆಸಾಲಿನ ಶಾಲೆಗೆ ಇನ್ನೀಸಬೆಟ್ಟರ್ ಬಂದರು: ಸುಧಾ ಆಡುಕಳ ಅಂಕಣ

ಎಲ್ಲರೂ ತಮ್ಮ ಕೆಲಸವನ್ನು ಬಿಟ್ಟು ದಾರಿಯೆಡೆಗೆ ನೋಡಿದರೆ ಆರಡಿ ಎತ್ತರದ ಚಂದದ ವ್ಯಕ್ತಿಯೊಬ್ಬರು ನಗುತ್ತಾ ಇವರೆಡೆಗೆ ಬರುತ್ತಿದ್ದರು. ಚೌಕಳಿ ಶರ್ಟು ಮತ್ತು ಬಿಳಿಯ ಪ್ಯಾಂಟಿನಲ್ಲಿ ಬಂದ ಅವರನ್ನು ಮಕ್ಕಳು ಬಿಟ್ಟ ಬಾಯಿ ಬಿಟ್ಟ ಹಾಗೆ ನೋಡುತ್ತಾ ನಿಂತುಬಿಟ್ಟರು. ಸೈಕಲ್ ಬೆಲ್ ಮಾಡುತ್ತಾ, ಸಮತಟ್ಟುಗೊಳಿಸಿದ ಮೈದಾನದ ತುಂಬಾ ಸೈಕಲ್ ಹೊಡೆಯುತ್ತ ಮಕ್ಕಳೆಡೆಗೆ ಕೈ ಬೀಸಿದರು. ಅವರ ಮುಗುಳ್ನಗೆಗೆ ಮನಸೋತ ಮಕ್ಕಳು ಹೋ ಎಂದು ಕೂಗುತ್ತಾ ಅವರ ಸೈಕಲ್ಲಿನ ಹಿಂದೆಯೇ ಹುಚ್ಚೆದ್ದು ಓಡತೊಡಗಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ವಿದೇಶಿ ನೆಲದಲ್ಲಿ ಸ್ವದೇಶಿಗರ ಬದುಕಿನ ಪಾಡು: ಎಂ.ವಿ. ಶಶಿಭೂಷಣರಾಜು ಅಂಕಣ

ಕೆಲವರು, ಭಾರತಕ್ಕೆ ಬಂದಾಗ ತಾವು ಯಾವುದೇ ಕೆಲಸವೇ ಮಾಡದವರ ಹಾಗೇ ಕಾಣಿಸಿಕೊಂಡು ಮನೆಗಳಲ್ಲಿ ಯಾವುದೇ ಕೆಲಸ ಮಾಡುವುದಿಲ್ಲ. ಇನ್ನು ಹೊರಗಡೆ ಬಂದಾಗ ತಾವು ಅಮೇರಿಕಾದಿಂದ ಬಂದವರು ಎಂದು ಹೇಗೆ ಎದುರಿನವರಿಗೆ ತಿಳಿಸುವುದು ಎಂದು ಹೆಣಗಾಡುತ್ತಾರೆ. ಇನ್ನು ಬಸ್ಸು ಅಥವಾ ರೈಲುಗಳಲ್ಲಿ ಪ್ರಯಾಣಮಾಡುವಾಗ ಸಹಪ್ರಯಾಣಿಕರ ಜೊತೆ ಸಂಭಾಷಣೆ ಶುರುವಾದರೆ, ತಮ್ಮ ಅಮೇರಿಕಾ ಜ್ಞಾನ ಹೊರಹಾಕುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ