Advertisement

Category: ಅಂಕಣ

ಭ್ರಷ್ಟಾಚಾರದ ಕೂಪದಲ್ಲಿ ನರಳುವ ನಾಗರೀಕರು…

ಭಾರತಕ್ಕೆ ಬಂದ ಮೇಲೆ ನಮ್ಮ ದೇಶಕ್ಕೆ ಮರಳಿದ ಸಂತಸ, ನಮ್ಮ ಸ್ನೇಹಿತರನ್ನು, ಸಂಬಂಧಿಕರನ್ನು ನೋಡಿದಾಗ ಆಗುವ ಆನಂದವೇ ಬೇರೆ. ಹಾಗಾಗಿ ನಮ್ಮ ದೇಶವೇ ನಮಗೆ ಸರಿ ಅನ್ನಿಸಿದ್ದು ಸುಳ್ಳಲ್ಲ. ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಬೇಕಾಯಿತು. ಸರ್ಕಾರಿ ಶಾಲೆಯಲ್ಲಿ ಊಟ ಉಚಿತ, ಆದರೆ ಶುಚಿತ್ವ ಇಲ್ಲ. ಓದು ಉಚಿತ, ಉತ್ತಮ ಸೌಲಭ್ಯವಿಲ್ಲ. ಸಣ್ಣ ಸಣ್ಣ ಕೆಲಸ ಮಾಡುವವರೂ, ದಿನಗೂಲಿ ಮಾಡುವವರೂ ಕೂಡ ಅವರ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಾರೆ. ವರ್ಷಕ್ಕೆ ಒಂದು ಲಕ್ಷಕ್ಕಿಂತ ಕಡಿಮೆ ಫೀ ತೆಗೆದುಕೊಳ್ಳುವ ಖಾಸಗಿ ಶಾಲೆ ಬೆಂಗಳೂರಿನಲ್ಲಿ ಕಾಣ ಸಿಗದು.
ಪ್ರಶಾಂತ್‌ ಬೀಚಿ ಅಂಕಣ

Read More

ಸಿನೆಮಾ ನೋಡುವ ಖುಷಿಯ ಹಿಂದಿದೆ ಸುಖದುಃಖಗಳು

ಆಗ ಲಾಸ್ಟ್ ಶೋ  ರಾತ್ರಿ ಒಂಬತ್ತು ಗಂಟೆಗೆ ಇರುತ್ತಿತ್ತು; ಆಗಿನ ಕಾಲದಲ್ಲಿ ಒಂಬತ್ತು ಗಂಟೆ ಅಂದರೆ ಒಂಥರ ಅಪರಾತ್ರಿ ಇದ್ದಂತೆ, ಬರೀ ಗೂರ್ಖಾಗಳು, ಕುಡುಕರು, ನಾಯಿಗಳು ಮಾತ್ರ ರಸ್ತೆ ಮೇಲೆ ಕಾಣಸಿಗುತ್ತಿದ್ದರು. ಸಿನೆಮಾ ಬಿಡುತ್ತಿದುದು ರಾತ್ರಿ ಹನ್ನೆರೆಡುವರೆಯೇ ಆಗುತ್ತಿತ್ತು. ಗವ್ ಎನ್ನುವ ಕತ್ತಲೆಯಲ್ಲಿ ಸೋದರ ಮಾವಂದಿರ ಕೈಹಿಡಿದು ನಾಯಿಗಳನ್ನು, ಕಡುಕರನ್ನು ದೂರದಿಂದಲೇ ಗಮನಿಸುತ್ತ, ನೋಡಿರುವ ರಾಜಕುಮಾರನ ಸಿನೆಮಾದ ಬಗ್ಗೆ ಭಯಂಕರ ಚರ್ಚೆ ಮಾಡಿಕೊಂಡು ಬರುತ್ತಿದ್ದೆವು. -ಇಂಗ್ಲೆಂಡ್ ಪತ್ರದಲ್ಲಿ, ತಮಗೆ ಇಂಗ್ಲೆಂಡ್ ನಲ್ಲಿ ಸಿನಿಮಾ ನೋಡಲು ಲಭ್ಯವಾಗುವ ಅವಕಾಶಗಳ ಕುರಿತು ನೆನಪುಗಳನ್ನು ಮೆಲುಕು ಹಾಕಿದ್ದಾರೆ ಡಾ.ಕೇಶವ ಕುಲಕರ್ಣಿ. 

Read More

ಯಕ್ಷಗಾನವೂ ಜಾನಪದವೂ ಶಾಸ್ತ್ರೀಯವೂ

ಮೀಮಾಂಸೆಯ ಕ್ಷೇತ್ರ ‘ಶಾಸ್ತ್ರೀಯ’ ಕಲೆಗಳ ಸಾಮಾಜಿಕತೆಯನ್ನೂ ತೋರಿಸಿದೆ. ವೈಯಕ್ತಿಕತೆಯ ಹುಸಿಕಲ್ಪನೆಯನ್ನು ಬಲಪಡಿಸುವುದು, ರಾಷ್ಟ್ರವನ್ನು ಪ್ರತಿನಿಧಿಸುವುದು ಮತ್ತು ಇತರೆ ಕಲೆಗಳಿಂದ ಬೇರ್ಪಡಿಸಿಕೊಂಡು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವುದು ಇವೆಲ್ಲವೂ ಅದರ ಕೆಲಸವೇ. ‘ಜಾನಪದ’ ಕಲೆಯನ್ನು ಅದರ ಸಾಮಾಜಿಕ ಉಪಯುಕ್ತತೆಗಾಗಿ ನೋಡುವುದು, ‘ಶಾಸ್ತ್ರೀಯ’ವನ್ನು ‘ಶುದ್ಧ ಸೌಂದರ್ಯದ’ ಪರಿಕಲ್ಪನೆಯಲ್ಲಿ ಮಾತ್ರ ನೋಡುವುದು ಕಲಾ ಅಧ್ಯಯನದ ಒಂದು ಮಿತಿಯೇ ಹೌದು. -ಕೃತಿ ಆರ್ ಪುರಪ್ಪೇಮನೆ ಬರಹ

Read More

ಕಂಬಾರರ ಕಾವ್ಯ: ಪರಂಪರೆಯ ಸಮೃದ್ಧಿ ಮತ್ತು ಆಧುನಿಕತೆಯ ಬರಡುತನ

ಕಾಲದೇಶಗಳನ್ನು ಅಖಂಡವಾಗಿ ಗ್ರಹಿಸುವ ಮನೋಧರ್ಮದಿಂದಲೇ ಕಂಬಾರರ ಬರಹದಲ್ಲಿ ಸಾಮುದಾಯಿಕ ಅನುಭವಗಳು ಸಮೃದ್ಧವಾಗಿವೆ ಮೇಲ್ನೋಟಕ್ಕೆ ನವ್ಯ ಕಾವ್ಯದಿಂದ ಬಹಳ ಭಿನ್ನವಾಗಿ ಕಾಣುವ ಕಂಬಾರರ ಕಾವ್ಯ ಆಳದಲ್ಲಿ ನವ್ಯಕಾವ್ಯದ ಪ್ರಮುಖ ಕಾಳಜಿಗಳನ್ನು ಇತ್ತೀಚಿನವರೆಗೆಯೂ ಪೂರ್ಣವಾಗಿ ಬಿಟ್ಟುಕೊಟ್ಟಂತೆ ಕಾಣುವುದಿಲ್ಲ. ಆದರೆ ನವ್ಯಕಾವ್ಯವು ಹುಡುಕಾಟದಲ್ಲಿದ್ದ ಅಸ್ತಿತ್ವದ ಪ್ರಶ್ನೆಗಳು, ವ್ಯಕ್ತಿತ್ವದ ಒಳಗಿನ ಬಿರುಕುಗಳನ್ನು ಸಮುದಾಯಗಳ, ಜನಪದ ನಂಬಿಕೆಗಳ ವಿಶಾಲಭಿತ್ತಿಯಲ್ಲಿ ಪರೀಕ್ಷಿಸಲು ತೊಡಗಿದ್ದರಿಂದ ಕಂಬಾರರ ಕಾವ್ಯಕ್ಕೆ ದೊಡ್ಡ ಹರಹು ಒದಗಿಬಂದಿದೆ. ಎಸ್. ಸಿರಾಜ್ ಅಹಮದ್ ಅಂಕಣ..

Read More

ಜೀವನದ ʼರಂಗ ನೇಪಥ್ಯʼದಿಂದ ಮರೆಯಾದ ಗುಡಿಹಳ್ಳಿ

ಹಿಂದೊಮ್ಮೆ ಗುಡಿಹಳ್ಳಿ ಸರ್ ಅವರ ಬಳಿ ಮಾತಾಡುವಾಗ ತಮಗೆ ಹುಷಾರಿಲ್ಲ ಅಂತ ಅವರು ಹೇಳಿದದ್ದು ನೆನಪಿಗೆ ಬಂತು. ಆದರೆ ಅದು ಸಾವಿನ ರೂಪದಲ್ಲಿ ಕೂತಿದೆ ಎನ್ನುವ ಕಲ್ಪನೆ ನನ್ನಲ್ಲಿ ಇರಲಿಲ್ಲ. ನನ್ನೊಂದಿಗೆ ಮಾತಾಡುವಾಗಲೇ ಅವರ ಧ್ವನಿ ಕ್ಷೀಣಿಸಿದಂತೆ ಅನಿಸುತ್ತಿತ್ತು. ಹೀಗೇ ಏನೋ ವಯೋಮಾನ ಸಹಜವಾಗಿ ಖಾಯಿಲೆ ಅಡರಿ ಕೊಂಡಿರುತ್ತದೆ… ಕಾಲಕ್ರಮದಲ್ಲಿ ಸುಧಾರಿಸುತ್ತದೆ ಅಂದುಕೊಂಡಿದ್ದೆ. ಆದರೆ ಇದು ಅವರ ಚಿತ್ರವನ್ನು ಸಂಪೂರ್ಣ ಕಲಕಿ ಬಿಡಬಹುದು ಎಂಬ ಅಂದಾಜೂ ಇರಲಿಲ್ಲ. ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ