Advertisement

Category: ಅಂಕಣ

ಹಾಗಾದರೆ ದೇವರು ಮನುಷ್ಯನನ್ನು ಪೂಜಿಸುತ್ತಾನೆಯೇ..

ಅವನು ನನ್ನನ್ನು ಒಂದು ಸುಂದರ ಸ್ಮಶಾನದಲ್ಲಿ ಭೇಟಿಯಾದ. ಇಂಗ್ಲೆಂಡಿನ ಸ್ಮಶಾನಗಳು ಭಾರತದ ಪಾರ್ಕ್ ಗಳಿಗಿಂತ ಸುಂದರವಾಗಿರುತ್ತದೆ. ಕೂತು ನಾವಿಬ್ಬರೆ ಏನೇನೊ ಮಾತನಾಡಿದೆವು, ನಾನು ಅವನ ಹಳ್ಳಿಯ ಬಗ್ಗೆ ಕೇಳತೊಡಗಿದೆ. ಅವನ ಹಳ್ಳಿಯನ್ನು ನೋಡುವ ಆಸೆ ತಿಳಿಸಿದೆ. ನನ್ನ ಜೊತೆಗೆ ಒಳ್ಳೆಯ ಸ್ನೇಹ ಬೆಳೆದ ಕಾರಣ ಅವನು ಸಲುಗೆಯಿಂದ ಮಾತನಾಡುತ್ತಾ ಹೋದ. ತನ್ನ ಕಥೆಯನ್ನು ಹೇಳತೊಡಗಿದ. ಸುರಳೀತ ದುಡಿಮೆಯಿಲ್ಲದ, ಸಂಗಾತಿಯಿಲ್ಲದ ಅವನ ಬದುಕೇ ಕಷ್ಟಗಳ ಸುಳಿಯಲ್ಲಿ ಸಿಲುಕಿತ್ತು.
ಪ್ರಶಾಂತ್‌ ಬೀಚಿ ಅಂಕಣ

Read More

ಇಂಗ್ಲೆಂಡಿನ ಕ್ರಿಕೆಟ್‌ ಲೋಕದ ಹುಮ್ಮಸ್ಸು

ಇಂಗ್ಲೆಂಡ್ ನಲ್ಲಿ ಪ್ರತಿ ಕ್ರಿಕೆಟ್ ಕ್ಲಬ್ಬಿಗೂ ಕ್ರಿಕೆಟ್ಟಿಗೆಂದೇ ಮೀಸಲಾದ ಮೈದಾನಗಳು ಇರುತ್ತವೆ. ಪ್ರತಿ ಕ್ಲಬ್ಬಿಗೂ ಸದಸ್ಯರಾಗಲು ವಾರ್ಷಿಕ ಚಂದಾ ಕೊಡಬೇಕು.  ಒಂದು ಆಡಳಿತದ ತಂಡ ಇರುತ್ತದೆ.  ಚಿಕ್ಕದಾದರೂ ಸರಿ, ಮೈದಾನಕ್ಕೆ ಅಂಟಿಕೊಂಡಂತೆ ಒಂದು ಕಟ್ಟಡವಿರುತ್ತದೆ, ಅದರೊಳಗೆ ಚಿಕ್ಕ ಪಬ್ಬು ಕೂಡ ಇರುತ್ತದೆ, ಮ್ಯಾಚು ನೋಡಲು ಬಂದವರು, ಮ್ಯಾಚು ಮುಗಿಸಿದ ಮೇಲೆ ತಿಂದು ಕುಡಿದು ಹೋಗಲು ಅಲ್ಲಿ ಅವಕಾಶವಿರುತ್ತದೆ. ಕ್ಲಬ್ಬಿನಲ್ಲಿ ಆಗಾಗ ಡಿನ್ನರ್ ಗಳನ್ನೂ ಬಾರ್ಬಿಕ್ಯೂಗಳನ್ನೂ ಇಟ್ಟುಕೊಂಡಿರುತ್ತಾರೆ ಮತ್ತು ಕ್ಲಬ್ಬಿಗೆ ದುಡ್ಡಿನ ಅವಶ್ಯಕತೆ ಇದ್ದಾಗ ಕೆಲವು ಕಾರ್ಯಕ್ರಮಗಳನ್ನೂ ಇಟ್ಟುಕೊಳ್ಳುತ್ತಾರೆ.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಸಂಸ್ಕೃತಿಗಳ ಮರುಜೇವಣಿಯಲ್ಲಿ ತೊಡಗಿರುವ ಶಿವಪ್ರಕಾಶರ ಕಾವ್ಯ

ಈ ಬಹುಮುಖಿ ಸಂವಾದದ ಮೂಲಕ ಶಿವಪ್ರಕಾಶರ ಕಾವ್ಯ ಕನ್ನಡ ಸಂಸ್ಕೃತಿಯ ಅಷ್ಟೇ ಏಕೆ ಭಾರತೀಯ ಸಂಸ್ಕೃತಿಯ ಮುಖ್ಯಗುಣವಾದ ಬಹುರೂಪಿತನವನ್ನು ಆವಾಹಿಸಿಕೊಂಡಿದೆ. ಕನ್ನಡ ಸಂವೇದನೆಯ ಅಸಲೀ ಗುಣವೆಂದರೆ ಅದು ಆದಿಮ ಕಾಲದಿಂದಲೂ ಅಂದರೆ ಶಂಗಂ ಸಾಹಿತ್ಯ, ಕವಿರಾಜ ಮಾರ್ಗದ ಕಾಲದಿಂದಲೂ ಹಲವು ಭಾಷೆ-ಸಂಸ್ಕೃತಿ-ಮೌಲ್ಯಗಳನ್ನು ಪ್ರತಿನಿಧಿಸುವ ಮಾರ್ಗ. ದೇಸಿ ಲೌಕಿಕ ಸಾಮಾಜಿಕ ಅನುಭಾವಿಕ ಧಾರ್ಮಿಕ ತತ್ವಶಾಸ್ತ್ರೀಯ ಅನುಭವಗಳೆಲ್ಲವನ್ನೂ ಏಕೀಭವಿಸಿಕೊಳ್ಳುವ ಗುಣವನ್ನು ಹೊಂದಿದೆ.
ಎಚ್‌.ಎಸ್. ಶಿವಪ್ರಕಾಶ್‌ ಅವರ ಕಾವ್ಯದ ಕುರಿತು ಎಸ್‌. ಸಿರಾಜ್‌ ಅಹಮದ್‌ ಬರಹ

Read More

ಸಂಸರ ‘ಬಿಂಬ’ ವನ್ನು ಕಂಡುಕೊಳ್ಳಬೇಕಾದ ಬಗೆಗೆ ಚಿಂತಿಸುತ್ತ…

ರಂಗಶಾಲೆಗಳು ಮತ್ತು ರಂಗಸಂಸ್ಥೆಗಳು ಮಾತ್ರ ಕಟ್ಟಿ ನಿಲ್ಲಿಸಬಹುದಾದ ಪ್ರಯೋಗಗಳು. ಅಮೇಚೂರ್ ಗಳಿಗೆ ಸಂಸರು ನಿಲುಕುವುದು ಕಷ್ಟ. ಕೈಲಾಸಂ ಮತ್ತು ಸಂಸರು ಒಂದೇ ಕಾಲಮಾನದವರಾದರೂ ಇವರ ಭಾಷಾ ಪ್ರಯೋಗದ ಅನನ್ಯತೆ ದೊಡ್ಡದು. ಕೈಲಾಸಂ ಕಟ್ಟಿರುವ ಭಾಷೆ- ಅದನ್ನು ಒಡೆದು ಓದುವ ಕ್ರಮ ತಿಳಿಯದಿದ್ದರೆ ಅವರ ನಾಟಕಗಳು ದಕ್ಕುವುದಿಲ್ಲ. ಸಂಸರನ್ನು ಓದಬೇಕಾದರೆ ಹಳಗನ್ನಡದ ಅಥವಾ ನಡುಗನ್ನಡದ ಟಚ್ ಇರಿಸಿಕೊಂಡಿರಬೇಕು. ಶಾಸ್ತ್ರೀಯವಾಗಿ ಅಭ್ಯಸಿಸಬೇಕು.
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ಕಳ್ಳರ ಸಹವಾಸದಲ್ಲಿ ಕಳೆದ ಎರಡು ಸಾಹಸಿ ದಿನಗಳು

ಮೊಬೈಲ್ ಕಳ್ಳನನ್ನು ಬೆನ್ನತ್ತಿದ ತಕ್ಷಣ ಅದೆಲ್ಲ ನೆನಪಾಗಿ, ನಾನೊಬ್ಬ ಖೋ ಖೋ ಆಟದ ರೈಡರ್ ಆಗಿ ಬದಲಾಗಿಬಿಟ್ಟಿದ್ದೆ. ಆತ, ಎಡ-ಬಲ ತಡಕುತ್ತ, ಹೊಯ್ದಾಡುತ್ತ ಒಂದೇ ಸಮ ಓಡುತ್ತಿದ್ದ; ನಾನು ಅವನನ್ನಷ್ಟೇ ದಿಟ್ಟಿಸುತ್ತ ನೇರದಿಕ್ಕಿನಲ್ಲಿ ಓಡುತ್ತಿದ್ದೆ. ಇಬ್ಬರ ವೇಗವೂ ನೂರು ಮೀಟರ್ ಓಟಗಾರರ ವೇಗದಷ್ಟೇ ಇತ್ತು. ಇನ್ನೂರೈವತ್ತು ಮೀಟರ್ ಓಡಿರಬಹುದು. ಕಳ್ಳ ಓಡುತ್ತಲೇ ಹಿಂದಕ್ಕೊಮ್ಮೆ ತಿರುಗಿನೋಡಿದ. ಆತನ ಮೊಗದಲ್ಲಿ ಭಯ ಕಡಿಮೆ ಆದಂತಿತ್ತು.
-‘ಸೊಗದೆ’ ಅಂಕಣದಲ್ಲಿ ಕಳ್ಳರ ಚಮತ್ಕಾರಗಳನ್ನು ಬರೆದಿದ್ದಾರೆ ಸಹ್ಯಾದ್ರಿ ನಾಗರಾಜ್

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ