Advertisement

Category: ಅಂಕಣ

ಕಾವ್ಯಾ ಓದಿದ ಹೊತ್ತಿಗೆ: ಅದೊಂದು ಗ್ರೇಟ್ ಅಮೆರಿಕನ್ ನಾವೆಲ್!

ಒಮ್ಮೆ ನಿಕ್‌ನ ಉಪಸ್ಥಿತಿಯಲ್ಲೇ ಗ್ಯಾಟ್ಸ್‌ಬಿ ಮತ್ತು ಡೇಸಿ ಟಾಮ್‌ನೊಂದಿಗೆ ಮಾತಿನ ಚಕಮಕಿ ನಡೆಸಿ ಕಾರನ್ನು ಡ್ರೈವ್ ಮಾಡಿಕೊಂಡು ಹೊರಟುಬಿಡುತ್ತಾರೆ. ಆ ಕಾರು ರಸ್ತೆಯಲ್ಲಿ ಹೊರಟ ಹೆಂಗಸೊಬ್ಬಳಿಗೆ ಢಿಕ್ಕಿ ಹೊಡೆದು ಆಕೆ ಸ್ಥಳದಲ್ಲಿ ಮೃತಪಡುತ್ತಾಳೆ. ಎಫ್ ಸ್ಕಾಟ್ ಫಿಡ್ಜರಾಲ್ಡ್ ಇಪ್ಪತ್ತನೆಯ ಶತಮಾನದ ಕಾದಂಬರಿಕಾರರಲ್ಲಿ ಬಹುಮುಖ್ಯ ಹೆಸರು. ಅವರ ‘ದಿ ಗ್ರೇಟ್ ಗ್ಯಾಟ್ಸ್‌ಬಿ’ ಕಾದಂಬರಿ ಇಂದಿಗೂ ಗ್ರೇಟ್ ಅಮೆರಿಕನ್ ನಾವೆಲ್ . ಈ ಕಾದಂಬರಿಯ ಕುರಿತು ಈ ಬಾರಿಯ ಅಂಕಣದಲ್ಲಿ ಕಾವ್ಯಾ ಕಡಮೆ ದಾಖಲಿಸಿದ್ದಾರೆ.

Read More

ದಾನಗಳಲ್ಲಿ ಮಹಾದಾನ…

“ಆಸ್ಪತ್ರೆಯಿಂದ ಅವರ ದೇಹವನ್ನು ಮನೆಗೆ ತಂದು, ಸಂಪ್ರದಾಯದ ಪ್ರಕಾರ ಎಲ್ಲಾ ಪದ್ಧತಿಗಳನ್ನು ಮತ್ತು ಕಾರ್ಯವನ್ನು ಮುಗಿಸಿ, ದೇಹವನ್ನು ಮಣ್ಣಿಗೆ ಇಡುವ ಬದಲು ಸಂಶೋಧನೆಗೆ ನೀಡಿದರು. ಮನಸ್ಸಿಗೆ ನೆಮ್ಮದಿ ಆಗುವ ಹಾಗೆ ಸಂಪ್ರದಾಯವೂ ಆಯಿತು, ಅವರ ದೇಹವನ್ನು ಸಂಶೋಧಿಸಿ ನೂರಾರು ವಿದ್ಯಾರ್ಥಿಗಳು ಮುಂದೆ ಸಾವಿರಾರು ಜೀವಗಳನ್ನು ಉಳಿಸಲು ಶಕ್ತರಾಗಲು ಸಹಾಯವೂ ಆಯ್ತು. ಒಂದು ದೇಹದ ಸಂಶೋಧನೆಯಿಂದ ಸಾವಿರಾರು ಜೀವಗಳನ್ನು…”

Read More

ಈ ಕಾಲದ ಒಂದಷ್ಟು ಯೋಚನೆಗಳು

ಈ ಸಾಂಕ್ರಾಮಿಕದ ಮೊದಲ ಅಲೆ ವ್ಯಾಪಕವಾಗಿರುವಾಗ ನಡೆದ ಬ್ರಿಟನ್ನಿನ ಸಂಶೋಧನೆಗಳಿಂದ ತಿಳಿದು ಬಂದ ಅಂಶವೇನೆಂದರೆ ಸೋಂಕಿತರಲ್ಲಿ ಭಾರತ ಉಪಖಂಡ ಮತ್ತು ಆಫ್ರಿಕಾ ಖಂಡಗಳಿಂದ ಬಂದಿರುವ ಜನರಲ್ಲಿ, ಈ ರೋಗ ಹೆಚ್ಚು ತೀವ್ರವಾಗಿರುತ್ತದೆ ಎನ್ನುವುದು ಮತ್ತು ಹೆಚ್ಚು ಪ್ರಾಣಹಾನಿಯನ್ನು ಮಾಡುತ್ತದೆ ಎನ್ನುವುದು. ಅಷ್ಟೇ ಅಲ್ಲ, ಭಾರತ ಉಪಖಂಡ ಮತ್ತು ಆಫ್ರಿಕಾ ಖಂಡಗಳಿಂದ ಬಂದ ಜನ ಹೆಚ್ಚಾಗಿ ನೆಲೆಸಿರುವ ಪ್ರದೇಶಗಳಲ್ಲಿ…”
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಕೃತಿ ಆರ್ ಪುರಪ್ಪೇಮನೆ ಅಂಕಣ “ಯಕ್ಷಾರ್ಥ ಚಿಂತಾಮಣಿ” ಇಂದಿನಿಂದ…

‘ಮಧ್ಯಮವರ್ಗದ ವಿದ್ಯಾವಂತ ಮತ್ತು ನಗರಕ್ಕೆ ಮುಖ ಮಾಡಿ ನಿಂತ ಸಮುದಾಯ ಯಕ್ಷಗಾನಕ್ಕೆ ತೊಡಗಿಸಿಕೊಂಡಂತೆಲ್ಲಾ ಯಕ್ಷಗಾನದ ರಂಜನೆಯ ಸ್ವರೂಪ ಬೇರೆಯಾಗುತ್ತಾ ಬಂದಿದೆ. ಆಟವು ಕಲೆಯಾಗಿದ್ದು ಹೀಗೆಯೇ. ಅತಿಯಾದ ಹಾಸ್ಯವನ್ನು ಇಷ್ಟಪಡದ, ಪುರಾಣಕತೆಯಿಂದ ಒಂದೂ ಚೂರೂ ಆಚೆ ಈಚೆ ಹೋಗದಂತೆ ‘ಹಿತಮಿತ’ವಾದ ಮಾತು, ಪಾತ್ರದ ‘ಔಚಿತ್ಯ ಮೀರದ’ ಕುಣಿತ.’ ಮತ್ತು ಪಾತ್ರಗಳ ‘ಸರಿಯಾದ ಭಾವ’ವನ್ನು ಹೊರತರುವಂತಹ ಭಾಗವತಿಕೆ..

Read More

‘ನಂದು ಹ್ಯೂಮನಿಸಂ… ನಾನು ಎಲ್ರಿಗೂ ಕಾಫಿ ಕೊಡ್ಸಿ, ಕುಡೀರಿ ಅಂತೀನಿ…’

“ಒಮ್ಮೆ ಹೀಗೇ ಧುತ್ತನೆ ಎದುರಾದಿರಿ. ನಿಮ್ಮ ಕಣ್ಣುಗಳಲ್ಲಿ ಒಂದಿಷ್ಟು ಮುಜುಗರ ಇರುತ್ತದೆ ಎಂದು ನಿಮ್ಮ ಕಣ್ಣುಗಳನ್ನೇ ನೋಡಿದ್ದೆ. ನಿಮ್ಮನ್ನ ಕಾಣುವಾಗ ನಾನು ಕೊಂಚ ಅಳುಕಿದ್ದೆ ಅಷ್ಟೇ. ನೀವು ಆರಾಮಾಗೇ ಇದ್ದಿರಿ. ನನ್ನನ್ನ ಕಂಡಿದ್ದೇ ‘ಹೋ ಮಹೇಶ್ ಅವ್ರು.. ಬನ್ನಿ ಕಾಫಿ ಕುಡಿಯೋಣ..’ ಅಂತ ಕರೆದುಕೊಂಡು ಕಲಾಕ್ಷೇತ್ರದ ಹಿಂಬದಿಯ ಕ್ಯಾಂಟಿನ್ ಗೆ ನಡೆದಿರಿ. ನಗುನಗುತ್ತ ಮಾತಾಡಿದಿರಿ. ನನ್ನ ವಿಮರ್ಶೆ ಮಲಗಿತ್ತು ಎನ್ನುವುದು ನನಗೆ ಅವತ್ತೇ ಗೊತ್ತಾಗಿದ್ದು.
ಎನ್.ಸಿ. ಮಹೇಶ್‌ ಬರೆದ ‘ರಂಗ ವಠಾರ’ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ