Advertisement

Category: ಅಂಕಣ

ರೇಖಕ್ಕ ಕಲಿಸಿದ ಮಗ್ಗಿಯ ಲೆಕ್ಕ: ಶ್ರೀಹರ್ಷ ಸಾಲಿಮಠ ಅಂಕಣ

“ನನ್ನ ಮಗ್ಗಿಯ ಪಾಠ ಇಪ್ಪತ್ನಾಲ್ಕನ್ನೂ ಮುಟ್ಟಲಿಲ್ಲ! ಅದೆಷ್ಟು ತಿಂಗಳು ಹೀಗೆ ಆಕೆಯ ಹಿಂಬಾಲಿಸಿ ಕಳೆದಿದ್ದೆನೋ ನನಗೆ ನೆನಪಿಲ್ಲ. ಆದರೆ ನಾವು ಮನೆ ಬದಲಿಸಲಾಗಿ ಮತ್ತೆಂದೂ ರೇಖಿಯ ಭೇಟಿಯಾಗಲಿಲ್ಲ. ಈಗಲೂ ಒಮ್ಮೊಮ್ಮೆ ರೇಖಿಯಂತಹ ಪ್ರತಿಭಾವಂತೆಯ ಬಳಿ ಪಾಠ ಹೇಳಿಸಿಕೊಂಡಿದ್ದಕ್ಕೆ ಆಗಾಗ ಹೆಮ್ಮೆಯೆನಿಸುತ್ತದೆ. ಆಗ ಆಕೆ ಬದುಕಿದ್ದ ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಲೆಕ್ಕ ಹಾಕಿದರೆ ಬಹುಷಃ ಹೆಚ್ಚು ಓದಿ ಕಡಿದು ಗುಡ್ಡೆ ಹಾಕಿರಲಿಕ್ಕೆ ಆಕೆಯ ಮನೆಯವರು ಬಿಟ್ಟಿರಲಿಕ್ಕಿಲ್ಲ.”

Read More

ಹೊರಾಂಗಣ ಕಲಿಕೆ ಮತ್ತು ಹೆಣ್ಣಿನ ಒಳದನಿ: ವಿನತೆ ಶರ್ಮಾ ಅಂಕಣ

“ಕೇವಲ ಹೊರಾಂಗಣ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಾರಣದಿಂದಲೇ ಅದೆಷ್ಟೋ ಹೆಂಗಸರ ಗಂಡು ಜೀವನಸಂಗಾತಿಗಳು ಅವರನ್ನು ಬಿಟ್ಟುಹೋದದ್ದಿದೆ. ತಾಯಂದಿರು ತಮ್ಮ ಹೆಣ್ಣುಮಕ್ಕಳಿಗೆ ಧೈರ್ಯವನ್ನು ತುಂಬಿ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ ಕಥೆಗಳಿವೆ. ತಮ್ಮ ಖಾಸಗಿ ಜೀವನದಲ್ಲಿನ ತಮ್ಮ ಸ್ವಲಿಂಗ ಸಂಬಂಧ ಆಯ್ಕೆಯಿಂದಾಗಿ ಕೆಲವರು ಕೆಲಸದ ಸ್ಥಳದಲ್ಲಿ ತಾರತಮ್ಯಕ್ಕೊಳಗಾಗಿ, ಬೆರಳು ತೋರಿಸುವ ಮಂದಿಯ ಕೈಯಲ್ಲಿ ಅನಿಸಿಕೊಂಡು ತಮ್ಮ ವೃತ್ತಿಜೀವನದಲ್ಲಿ ಅದೆಷ್ಟು ನರಳಿದ್ದಾರೆ…”

Read More

ಅಲರ್ಗಣ್ಣೊಳ್ ಸ್ಮರಂ ಇರ್ದನಕ್ಕುಂ: ಆರ್.ದಿಲೀಪ್ ಕುಮಾರ್ ಅಂಕಣ

“ದ್ರೌಪತಿಯನ್ನು, ಸುಭದ್ರೆಯನ್ನು, ಹಿಡಿಂಬೆಯೊಂದಿಗೆ ಭೀಮನ ಸಂಬಂಧವನ್ನು ವರ್ಣಿಸುವಾಗ ಇದ್ದ ಒಂದು ಮಿತಿ ಇಲ್ಲಿ ಮೀರಿದೆ. ಕಾವ್ಯ ಸಂವಿಧಾನ ಮತ್ತು ಕಾವ್ಯದ ಬಂಧ ಅದನ್ನು ಒಪ್ಪುತ್ತದೆ. ಸುಭದ್ರೆಯನ್ನು ನೋಡಿದ ತಾಪ ಪರಿಹಾರಕ್ಕೆ ಅಂದಿನ ರಾತ್ರಿಯೇ ಅರ್ಜುನ ಊರು ಸುತ್ತುವುದು ಇಲ್ಲಿನ ಮುಖ್ಯ ಭಾಗ. ಆದರೆ ಹೋಗುವಾಗ ಅವನಿಗಷ್ಟೇ ಕಾಣುವ ವೇಶ್ಯೆಯರನ್ನು ತೋರಿಸದೆ ಓದುಗರಿಗೂ ಕಾಣಿಸುವಂತೆ ಮಾಡುವುದನ್ನು ನೋಡಿ ಪಂಪನ ರಸಿಕತೆಗೆ…”

Read More

ಕಾಯುವುದಿಲ್ಲ ಕವಿತೆಗೆ ಯಾರೂ ಕವಿಯೊಬ್ಬನಲ್ಲದೆ…: ಲಕ್ಷ್ಮಣ ವಿ.ಎ. ಅಂಕಣ

“ಮೊನ್ನೆ ಮೊನ್ನೆ ನಮ್ ರಸ ಋಷಿ ಕುವೆಂಪು ಅವರ ಜನ್ಮ ಶತಮಾನೋತ್ಸವ ಇದ್ದಾಗ ರವೀಂದ್ರ ಕಲಾಕ್ಷೇತ್ರದಾಗ ಒಂದ ಕವಿಗೋಷ್ಠಿ ಇಟ್ಟಿದ್ರು. ನಾಡಿನ ಎಲ್ಲ ಯುವಕವಿಗಳೂ ದಂಡಿ ದಂಡಿಯಾಗಿ ಬಂದಿದ್ರು… ಆದರೆ ಕೇಳೋ ಕಿವಿಗಳು ಅಲ್ಲೊಂದು ಇಲ್ಲೊಂದು…. ಎಲ್ಲಾರೂ ತಮ್ಮ ತಮ್ಮ ಕವಿತೆ ಓದಿದ ಮ್ಯಾಲ ಶಾಲು ಸನ್ಮಾನ ಮಾಡಿಸ್ಕೊಂಡು ಸಿಟಿ ಮಾರ್ಕೆಟಿಗೆ ಸಂತಿ ಮಾಡ್ಲಿಕ್ಕ ಹೋಗಬೇಕ!? ಕೊನೆಗೆ ವೇದಿಕೆ ಮೇಲೆ ಉಳಿದವರು ಕವಿಗೋಷ್ಠಿ ಅಧ್ಯಕ್ಷರು ಮತ್ತು ನಿರೂಪಕರು.”

Read More

ಅಳುವ ಕಂದನಿಗಾಗಿ.. ಅತ್ತಿತ್ತ ನೋಡುತ್ತಾ…: ಶ್ರೀಹರ್ಷ ಅಂಕಣ

“ಕ್ಯಾಪಿಟಲಿಸಂನ ಕೀಲುಗೊಂಬೆಗಳಾಗಿ ಬದುಕುತ್ತಿರುವ ಜನರಿಗೆ ವಿಕಾಸವಾದವನ್ನು ಯೊಚಿಸುವ ವ್ಯವಧಾನವೆಲ್ಲಿದೆ? ತಾವೇ ಕಟ್ಟಿಕೊಂಡ ಸಮಾಜದ ಸರಳುಗಳೊಳಗೆ ಬಂಧಿಯಾಗಿ ಒದ್ದಾಡುತ್ತಿರುವ, ಹುಚ್ಚು ಓಟದೊಳಗೆ ನಮ್ಮನ್ನು ನಾವೇ ಕಳೆದುಕೊಂಡ ನತದೃಷ್ಟ ಪೀಳಿಗೆ ನಮ್ಮದು! ಹಣ ಸಂಪಾದಿಸಲು ಬಂಜೆತನ ತಂದುಕೊಳ್ಳುವುದು, ಕಳೆದುಹೋದ ಫಲವತ್ತತೆಯನ್ನು ಕೊಂಡುಕೊಳ್ಳಲು ಮತ್ತೆ ಅದೇ ಹಣ ಖರ್ಚು ಮಾಡುವುದು! ಎಷ್ಟು ಸೂಕ್ಷ್ಮವಾಗಿ ನಮ್ಮನ್ನು ಈ ಬಂಡವಾಳಶಾಹಿ ವ್ಯವಸ್ಥೆಯು ಯಾವ ಗುರಿಯೂ ಇಲ್ಲದಂತೆ ಓಡುವಂತೆ ಮಾಡುತ್ತದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ