Advertisement

Category: ಅಂಕಣ

ಹಿರಿಯರಿಗೂ ಇಂದಿನ ಪೀಳಿಗೆಗೂ ಇರುವ ಅಂತರವನ್ನು ದಾಟುವುದು ಹೇಗೆ?: ಎಲ್.ಜಿ.ಮೀರಾ ಅಂಕಣ

ಹಿರಿಯುರ `ರಾತ್ರಿ ಎಷ್ಟು ಹೊತ್ತಾದರೂ ಮಲಗದ, ಬೆಳಿಗ್ಗೆ ಎಷ್ಟು ಹೊತ್ತಾದರೂ ಏಳದ’ ತಮ್ಮ ಸಂತಾನಗಳ ಮನಸ್ಸಿನ ಹಾಗೂ ಬದುಕಿನ ಮರ್ಮವೇನು ಎಂಬುದನ್ನು ಅರಿಯಲು ಮೊದಲು ತಾವೇ ಒಂದು ಹೆಜ್ಜೆ ಮುಂದೆ ಇಡಬೇಕಿದೆ. ಜಗತ್ತೇ ಒಂದು ಹಳ್ಳಿಯಾದ ಅಂತರ್ಜಾಲದ ಯುಗದಲ್ಲಿ, ಹಳ್ಳಿಯೇ ತಮ್ಮ ಜಗತ್ತಾಗಿದ್ದ ಪೀಳಿಗೆಗೆ ಮತ್ತು ಅವರ ಮಕ್ಕಳಿಗೆ ಈ ಹೆಜ್ಜೆಯು ಒಂದು ಸವಾಲು. ಆದರೆ, ವಿಧಿ ಇಲ್ಲ. ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮಿಂದ ಮಾನಸಿಕವಾಗಿ ಹಾಗೂ ಭಾವನಾತ್ಮಕವಾಗಿ ದೂರ ಆಗಬಾರದು ಎಂದರೆ ಅವರ ಬದುಕಿನ ಲಯಗಳನ್ನು ಅರಿಯಲು ಹಿರಿಯ ಪೀಳಿಗೆಯವರು ಪ್ರಯತ್ನ ಮಾಡಲೇಬೇಕು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ ಶುರು

ಮೊದಲಿನಿಂದ ಖಾಲಿಯೇ ಇರುವ ಕುರ್ಚಿಗಿಂತ ನಡುವೆ ಒಂದಷ್ಟು ಹೊತ್ತು ಯಾರೋ ಕುಳಿತಿದ್ದು ಎದ್ದು ಹೋದ ಆಸನ ಹೆಚ್ಚು ಖಾಲಿಯಾಗಿ ಕಾಣುತ್ತದೆ. ನವ ಮಾಸ ತುಂಬಿದ ಬಳಿಕ ಜೀವದ ಬದಲಿಗೆ ಶೂನ್ಯವನ್ನು ಹಡೆದ ಒಡಲು ಹೊಸದಾದ ಖಾಲಿತನಕ್ಕೀಡಾಗುತ್ತದೆ. ಬಂದೇ ಬರುವನೆಂದು ನಂಬಿದ್ದ ಅತಿಥಿ.. ಬರಲೇ ಬೇಕಿದ್ದ ಅತಿಥಿ.. ಅವನ ಸ್ವಾಗತಕ್ಕೆ ಏನೆಲ್ಲ ತಯಾರಾಗಿತ್ತು! ತಂದಿಟ್ಟುಕೊಂಡ ಮಲ್ಲಿಗೆ ಮೆದುವಿನ ಟೊಪ್ಪಿಯಿತ್ತು. ಮೊಲದ ತುಪ್ಪಳದಂಥಾ ಅಂಗಿಯಿತ್ತು. ಅದರ ಅಂಚಲ್ಲಿ ಕೈಯಲ್ಲೇ ಹೊಲಿದ ಕಸೂತಿಯಿತ್ತು.
ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ, ಮಂಗಳವಾರಗಳಂದು, ಹದಿನೈದು ದಿಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ

Read More

ಆಸ್ಟ್ರೇಲಿಯಾದ ಆಂಟಿ-ಇಮಿಗ್ರೇಷನ್ ಪ್ರದರ್ಶನ: ಡಾ. ವಿನತೆ ಶರ್ಮ ಅಂಕಣ

ಹೋದ ಭಾನುವಾರ ಆಸ್ಟ್ರೇಲಿಯಾದ ಎಲ್ಲಾ ರಾಜಧಾನಿ ನಗರಗಳಲ್ಲಿ ಮತ್ತು ಕೆಲ ಮುಖ್ಯ ಪಟ್ಟಣಗಳಲ್ಲಿ ನಡೆದ ವಲಸೆ-ವಿರೋಧ ಪ್ರದರ್ಶನ ಅನೇಕ ಪ್ರಶ್ನೆಗಳನ್ನು ಹೊರಹಾಕಿದೆ. ಆಸ್ಟ್ರೇಲಿಯಾಕ್ಕೆ ಬರುವ ವಲಸೆಗಾರರ ಸಂಖ್ಯೆ ಮಿತಿಮೀರಿದೆಯೆ? ಈ ವಲಸೆಗಾರರಿಂದ ಸ್ಥಳೀಯ ಆಸ್ಟ್ರೇಲಿಯನ್ನರಿಗೆ ಕಷ್ಟವಾಗುತ್ತಿದೆಯೆ? ಮಿತಿಮೀರಿದ ವಲಸೆಗಾರರ ಸಂಖ್ಯೆಯಿಂದ ಹೌಸಿಂಗ್, ಉದ್ಯೋಗದ ಅವಕಾಶ, ಆರೋಗ್ಯ ಮುಂತಾದ ವಿಷಯಗಳಲ್ಲಿ ಸಮಸ್ಯೆ ಉಂಟಾಗಿದೆಯೇ? ಈಗಿರುವ ಲೇಬರ್ ಕೇಂದ್ರ ಸರಕಾರ ಉದ್ದೇಶಪೂರ್ವಕವಾಗಿ ವಲಸೆಯನ್ನು ಹೆಚ್ಚಿಸಿದೆಯೇ?
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬದುಕು ಎಂಬ ಶಿಕ್ಷಕ, ಮನುಷ್ಯ ಎಂಬ ವಿದ್ಯಾರ್ಥಿ: ಎಲ್.ಜಿ.ಮೀರಾ ಅಂಕಣ

ಬದುಕಿನ ಅನಿಶ್ಚಿತತೆ, ಮನುಷ್ಯನ ಬದುಕಿನಲ್ಲಿ ವಿಧಿಯು ಆಡುವ ಆಟ, ಎಷ್ಟೇ ಪ್ರಯತ್ನ ಮಾಡಿದರೂ ತನ್ನ ವಿಧಿಯಲ್ಲಿ ಬರೆದ ದುರಂತದಿಂತ ತಪ್ಪಿಸಿಕೊಳ್ಳಲಾಗದ ಮನುಷ್ಯನ ಅಸಹಾಯಕತೆ – ಇವುಗಳನ್ನು ಈ ಮಹಾನ್ ನಾಟಕ ಮನೋಜ್ಞವಾಗಿ ಹೇಳುತ್ತದೆ. ಒಂದು ಸಂದರ್ಭದಲ್ಲಿ `ಅಯ್ಯೋ, ದುರ್ವಿಧಿಯೇ? ನಾಳೆ ಎಂಬುದು ಏನೆಂದು ಗೊತ್ತಿರದ ಮನುಷ್ಯನ ಪಾಡೆ!! ಓಹ್ …. ಅಯ್ಯೋ .., ಸಾಯುವವರೆಗೂ ಯಾರನ್ನೂ ಸುಖಿ ಅನ್ನಬೇಡ’’ ಎಂಬ ಮಾತನ್ನು ನಾಟಕಕಾರ ಸಫೋಕ್ಲಿಸ್ ಒಂದು ಎಚ್ಚರಿಕೆಯೆಂಬಂತೆ, ಒಂದು ಪಾತ್ರದ ಬಾಯಿಂದ ಹೇಳಿಸಿದ್ದಾನೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ದೊಡ್ಡ ಜಿಜ್ಞಾಸೆಗಳು, ಸಣ್ಣ ನಿರ್ಧಾರಗಳು: ವಿನತೆ ಶರ್ಮಾ ಅಂಕಣ

ಶುಮಾಶೆರ್ ಹೇಳುವುದೇನೆಂದರೆ, ನಾವು ಮನುಷ್ಯರು ಪ್ರತಿಯೊಬ್ಬ ವ್ಯಕ್ತಿಗೂ ಸುಲಭವಾಗುವಂತೆ ಅವರ ಜೀವನ ಗುಣಮಟ್ಟ ವೃದ್ಧಿಸುವುದಕ್ಕೆ ಅನೂಕೂಲವಾಗುವಂತೆ ತಳಮಟ್ಟದಲ್ಲಿ ಪುಟ್ಟಪುಟ್ಟ ಮತ್ತು ಅನೇಕ ಬಹುತ್ವಗಳನ್ನು ಒಳಗೊಂಡ ತಾಂತ್ರಿಕತೆಗಳನ್ನು, ಕ್ರಮಗಳನ್ನು ಒಗ್ಗಿಸಿಕೊಳ್ಳಬೇಕು. ‘ದೊಡ್ಡದು’ ಅಥವಾ ಹಿರಿದು ಮುಖ್ಯ ಎನ್ನುವ ಆಲೋಚನಾಪರಿಯನ್ನು ಬದಲಿಸಿಕೊಳ್ಳಬೇಕು. ಅಂದರೆ ದೊಡ್ಡಮಟ್ಟದ ಅಭಿವೃದ್ಧಿಗಿಂತಲೂ ಸಣ್ಣ ಮಟ್ಟದ ಸ್ಥಳೀಯ ಅಭಿವೃದ್ಧಿ ಯೋಜನೆಗಳು ಜನರಿಗೆ ಹೆಚ್ಚು ಪ್ರಯೋಜನಕಾರಿ. ಇದೇ ಮಾತನ್ನು ಮಹಾತ್ಮ ಗಾಂಧಿ ಅವರೂ ಹೇಳಿದ್ದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ