Advertisement

Category: ಅಂಕಣ

ದೊಡ್ಡ ಜಿಜ್ಞಾಸೆಗಳು, ಸಣ್ಣ ನಿರ್ಧಾರಗಳು: ವಿನತೆ ಶರ್ಮಾ ಅಂಕಣ

ಶುಮಾಶೆರ್ ಹೇಳುವುದೇನೆಂದರೆ, ನಾವು ಮನುಷ್ಯರು ಪ್ರತಿಯೊಬ್ಬ ವ್ಯಕ್ತಿಗೂ ಸುಲಭವಾಗುವಂತೆ ಅವರ ಜೀವನ ಗುಣಮಟ್ಟ ವೃದ್ಧಿಸುವುದಕ್ಕೆ ಅನೂಕೂಲವಾಗುವಂತೆ ತಳಮಟ್ಟದಲ್ಲಿ ಪುಟ್ಟಪುಟ್ಟ ಮತ್ತು ಅನೇಕ ಬಹುತ್ವಗಳನ್ನು ಒಳಗೊಂಡ ತಾಂತ್ರಿಕತೆಗಳನ್ನು, ಕ್ರಮಗಳನ್ನು ಒಗ್ಗಿಸಿಕೊಳ್ಳಬೇಕು. ‘ದೊಡ್ಡದು’ ಅಥವಾ ಹಿರಿದು ಮುಖ್ಯ ಎನ್ನುವ ಆಲೋಚನಾಪರಿಯನ್ನು ಬದಲಿಸಿಕೊಳ್ಳಬೇಕು. ಅಂದರೆ ದೊಡ್ಡಮಟ್ಟದ ಅಭಿವೃದ್ಧಿಗಿಂತಲೂ ಸಣ್ಣ ಮಟ್ಟದ ಸ್ಥಳೀಯ ಅಭಿವೃದ್ಧಿ ಯೋಜನೆಗಳು ಜನರಿಗೆ ಹೆಚ್ಚು ಪ್ರಯೋಜನಕಾರಿ. ಇದೇ ಮಾತನ್ನು ಮಹಾತ್ಮ ಗಾಂಧಿ ಅವರೂ ಹೇಳಿದ್ದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಇಂದಿನ ಕನ್ನಡ ಅಧ್ಯಾಪಕರು ಮತ್ತು ಇಂಗ್ಲಿಷ್ ಭಾಷೆ: ಎಲ್.ಜಿ.ಮೀರಾ ಅಂಕಣ

ಬರಬರುತ್ತಾ ಓದು, ವ್ಯುತ್ಪತ್ತಿ, ಭಾಷಾ ಪ್ರೌಢಿಮೆಗಳ ಬಗೆಗಿನ ಆಸ್ಥೆ ಕಡಿಮೆಯಾಗಿ `ಹಾಗೂ ಹೀಗೂ ಒಂದಿಷ್ಟು ಪಾಠ ಮಾಡೋದು, ಸಂತೆ ಹೊತ್ತಿಗೆ ಮೂರು ಮೊಳ ಆದ್ರೆ ಸಾಕು’ ಎಂಬ ಮನಃಸ್ಥಿತಿ ಮೂಡಿತು. ಇದೊಂದು ರೀತಿಯ ಸುಲಭೀಕರಣ. ಇದಕ್ಕೆ ಕನ್ನಡ ಅಧ್ಯಾಪಕರು ಮಾತ್ರ ಕಾರಣ ಅಲ್ಲ. ಜಾಗತೀಕರಣದ ನಂತರ, ಭಾರತ ದೇಶದ ಬದುಕು ಸಾಂಸ್ಕೃತಿಕವಾಗಿ ಹಾಗೂ ಸಾಮಾಜಿಕವಾಗಿ ಬಹಳವಾಗಿ ಬದಲಾಯಿತು. ಉಪಗ್ರಹ ಪ್ರಸಾರದ ಅಂತಾರಾಷ್ಟ್ರೀಯ ಚಲನಚಿತ್ರ ವಾಹಿನಿಗಳು, ಅಂತರ್ಜಾಲ, ಮುಂದೆ ಸರ್ವವ್ಯಾಪಿಯಾದ ಚಲನವಾಣಿಗಳ ಬಳಕೆ ಇವುಗಳಿಂದಾಗಿ ಓದುಸಂಸ್ಕೃತಿ ಹಿಂದೆ ಸರಿದು ನೋಡುಸಂಸ್ಕೃತಿ ಮುನ್ನೆಲೆಗೆ ಬಂದಿತಲ್ಲವೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಒಂದು ಸಮಸ್ಯೆ, ಸಾಂಘಿಕ ಬಹು-ಉತ್ತರಗಳು: ಡಾ. ವಿನತೆ ಶರ್ಮಾ ಅಂಕಣ

ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮದೇ ಆದ ಬಲವಾದ ಅಸ್ಮಿತೆ ಇಲ್ಲದಿರುವುದು, ಎಲ್ಲಾ ವಿಷಯಗಳಲ್ಲೂ ದೂರದ ಬ್ರಿಟನ್, ಅಮೆರಿಕಾ, ಯುರೋಪ್ ರಾಷ್ಟ್ರಗಳ ನಡೆ-ನುಡಿಗಳನ್ನು ಚಾಚೂತಪ್ಪದೆ ಪಾಲಿಸುತ್ತಾ, ಅವರ ನಿಲುವುಗಳನ್ನೆ ತನ್ನದಾಗಿಸಿಕೊಂಡು ಗುಲಾಮಗಿರಿ ತೋರುವುದು, ತಾವಿರುವ ಏಷ್ಯಾ-ಪೆಸಿಫಿಕ್ ವಲಯದಲ್ಲಿ ತಮ್ಮನ್ನು ಗುರುತಿಸಿಕೊಳ್ಳದೆ ಹೇಡಿತನ ತೋರುವುದು ಕೂಡ ಸಮಸ್ಯೆಯೆ. ಆಸ್ಟ್ರೇಲಿಯಾ ಅಧಿಕೃತವಾಗಿ ಬ್ರಿಟನ್ನಿನ ಅಧಿಪತ್ಯವನ್ನು ಒಪ್ಪಿಕೊಂಡು ಅದರ ಒಂದು ತುಣುಕಾಗಿದ್ದು, ವಸಾಹತುಶಾಹಿ ಬಿಳಿಯರ ದೇಶವಾಗಿದ್ದುಕೊಂಡೆ ಬಾಳುತ್ತಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಶಾಶ್ವತ ಮತ್ತು ನಶ್ವರ – ಡಿಜಿಟಲ್ ಯುಗದಲ್ಲಿ ಬದಲಾಯಿತೇ ಇವುಗಳ ಅರ್ಥ?: ಎಲ್.ಜಿ. ಮೀರಾ ಅಂಕಣ

ಹುಟ್ಟು ಮತ್ತು ಸಾವು ಎಂಬ ಎರಡು ತುದಿಗಳ ಮಧ್ಯೆ ಕೆಲವು ದಿನ ಆಸೆ-ನಿರಾಸೆ, ಪ್ರೀತಿ-ದ್ವೇಷ, ಭಾವ-ಬುದ್ಧಿ, ಇಷ್ಟ-ಕಷ್ಟ, ಸಂಗ್ರಹ-ಅಸಂಗ್ರಹ, ಸಾಧನೆ-ಸವಾಲು… ಇವೆಲ್ಲವೂ ಸೇರಿದ ಬದುಕಿನ ಬೆಳಕು. ಈ ಬದುಕನ್ನೇ ಮಾಯೆ, ಕತ್ತಲು ಎಂದು ಹೇಳುವ ಒಂದು ಆಧ್ಯಾತ್ಮಿಕ ಚಿಂತನ ಧಾರೆಯೂ ಇದೆಯಲ್ಲವೆ? `ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ’. `ಯಾಕೆ ಬಡಿದಾಡ್ತಿ ತಮ್ಮ ಮಾಯ ಮೆಚ್ಚಿ ಸಂಸಾರ ನೆಚ್ಚಿ’, `ಒಳಿತು ಮಾಡು ಮನುಜ, ನೀನಿರೋದು ಮೂರು ದಿವಸ’ ಇಂತಹ ಅನೇಕ ಗೀತೆಗಳು, ದಾಸವಾಣಿಗಳು ಬದುಕಿನ ಕ್ಷಣಭಂಗುರತೆಯನ್ನೇ ಹೇಳುತ್ತವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೈದನೆಯ ಬರಹ

Read More

ಮಕ್ಕಳ ಶೋಷಣೆಯ ಪಾಪಿಷ್ಟರು: ಡಾ. ವಿನತೆ ಶರ್ಮಾ ಅಂಕಣ

ಹದಿನೆಂಟು ವರ್ಷವಾದಾಗ ಒಬ್ಬ ವ್ಯಕ್ತಿ ‘adult’ ಎಂದು ಸರ್ಕಾರ ಹೇಳುತ್ತದೆ. ಇವರು ತಮ್ಮ ಜೀವನಕ್ಕೆ ತಾವೇ ಸಂಪೂರ್ಣವಾಗಿ ಜವಾಬ್ದಾರರು. ಪೂರ್ಣಾವಧಿ ಉದ್ಯೋಗದಲ್ಲಿದ್ದು ಮುಂದೆ ತಮ್ಮದೇ ಕುಟುಂಬ ಆರಂಭಿಸಿದಾಗ ಇವರ ಮಕ್ಕಳು ಚೈಲ್ಡ್ ಕೇರ್ ಸೆಂಟರ್‌ಗೆ ಹೋಗುವುದು ಅನಿವಾರ್ಯವಾಗುತ್ತದೆ. ಪಾರ್ಟ್ ಟೈಮ್ ಕೆಲಸ ಮಾಡುತ್ತಾ ಮಕ್ಕಳನ್ನು ಪೋಷಿಸುತ್ತೀವಿ ಎಂದರೆ ಅವರ ಕೆರಿಯರ್‌ಗೆ ದೊಡ್ಡ ಹೊಡೆತ. ಅಲ್ಲದೆ ಒಂದೂವರೆ ಸಂಬಳವಿದ್ದರೆ ಇತ್ತ ಕಡೆ ಕುಟುಂಬದ ಖರ್ಚುಗಳನ್ನು ತೂಗಿಸಲು ಕಷ್ಟ. ಅತ್ತ ಕಡೆ ಸರಕಾರದಿಂದ welfare ಸಹಾಯ ಸಿಗುವುದಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ