Advertisement

Category: ಅಂಕಣ

ಇಲ್ಲಿ ಎಲ್ಲ ಥರದವರೂ ಇದ್ದಾರೆ…: ಎಸ್ ನಾಗಶ್ರೀ ಅಜಯ್ ಅಂಕಣ

ಇದು ಸರಿತಪ್ಪಿನ ತಕ್ಕಡಿಯಲ್ಲಿ ತೂಗಲಾರದ, ತೂಗಬಾರದ ವಿಷಯ. ವಿಧಿ ಒಬ್ಬೊಬ್ಬರ ಪಾಲಿಗೆ ನೀಡಿದ ಷಡ್ರಸಗಳ ಭೋಜನ. ಅವರುಂಡ ಸಿಹಿ-ಕಹಿ-ಹುಳಿ- ಒಗರು ಅವರಿಗಷ್ಟೇ ವೇದ್ಯ. ಬಹಳಷ್ಟು ಸಲ ನಾವು ದೂರ ನಿಂತು ಕಂಡಿದ್ದರ ಬಗ್ಗೆ, ಅನಿಸಿದ್ದರ ಬಗ್ಗೆ ಆತ್ಮವಿಶ್ವಾಸದಿಂದ ನಿರ್ಣಯಗಳನ್ನು ಹೊರಡಿಸುತ್ತೇವೆ. ದುಡ್ಡು ದುಡ್ಡು ಅಂತ ಸಾಯ್ತಾನೆ‌. ಹೋಗುವಾಗ ಹೊತ್ಕೊಂಡು ಹೋಗುವ ಹಾಗಿದ್ದರೆ ಇನ್ನು ಹೇಗಾಡ್ತಿದ್ದನೋ ಅಂದವರೆ ಚಿಲ್ಲರೆಗಾಗಿ ತಳ್ಳುಗಾಡಿಯವನ ಬಳಿ ಗುದ್ದಾಡುತ್ತಾರೆ. ಮಕ್ಕಳಿಗೆ ಸಂಸ್ಕಾರ ಕಲಿಸಿಲ್ಲ ಎಂದ ಮಹಾಮಾತೆಯ ಮಕ್ಕಳು ಬಂದವರೆದುರೇ ಕಾಲುಚಾಚಿ ಕೂತು, ಮೂತಿ ತಿರುವುತ್ತಾರೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಅನಿವಾಸಿಗಳಿಗೆ “ಇಳೆಯ” ಸಂಗೀತದ ಹಿತ: ಡಾ. ವಿನತೆ ಶರ್ಮಾ ಅಂಕಣ

ಬ್ಯಾಂಡ್ ಹೊಂದಿರುವ ಸಂಗೀತ ವಾದ್ಯಗಳ ವೈವಿಧ್ಯತೆ, ತಬಲಾ ಬಾರಿಸುವ ನಿಪುಣತೆ, ಕೊಳಲು ಊದುವ ಮಾಧುರ್ಯ, ವಯಲಿನ್ ನುಡಿಸುವ ತನ್ಮಯತೆ, ಕೀಬೋರ್ಡ್ ಮೇಲೆ ನಲಿದಾಡುವ ಬೆರಳುಗಳ ಚಾಕಚಕ್ಯತೆ, ಎಲ್ಲವೂ ಚೊಕ್ಕವಾಗಿ ಚೆಂದೆನಿಸಿತ್ತು. ನಾನು ಇದೆ ಮೊದಲ ಬಾರಿ ಎಲೆಕ್ಟ್ರಿಕ್ ತಬಲಾ ನೋಡಿದ್ದು, ಬೆರಗಾಗಿದ್ದು. ಅದನ್ನು ಬಾರಿಸುತ್ತಿದ್ದ ಯುವಕ ಕಾರ್ಯಕ್ರಮವನ್ನು ನಿರ್ದೇಶಿಸುತ್ತಿದ್ದ ಕೂಡ. ಅವಲ್ಲದೆ, ಇನ್ನಿಬ್ಬರು ಎರಡು ಶಾಸ್ತ್ರೀಯ ತಬಲಾಗಳನ್ನೂ ಬಾರಿಸುತ್ತಿದ್ದರು. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕನ್ನಡ ಭಾಷೆಗೆ ಗೆಜ್ಜೆಯ ದಾರಿ… ಭಾವನೃತ್ಯದ ಸುಂದರ ಪರಿ: ಎಲ್.ಜಿ.ಮೀರಾ ಅಂಕಣ

ಭಾವಗೀತೆಯು ಕನ್ನಡ ನವೋದಯ ಸಾಹಿತ್ಯದ(1870-1940) ಸಂದರ್ಭದಲ್ಲಿ ಹುಟ್ಟಿತಲ್ಲವೇ. ಆ ಕಲಾಪ್ರಕಾರವು ಅನೇಕ ಕವಿಗಳ ಸಾಹಿತ್ಯವನ್ನು ಗೀತೆಗಳ ಮೂಲಕ, ಸಾಹಿತ್ಯ ಕ್ಷೇತ್ರದಲ್ಲಿ ಮಾತ್ರವಲ್ಲ, ಸಾಹಿತ್ಯಕ್ಷೇತ್ರದ ಆಚೆಗಿನ ದೊಡ್ಡ, ಅದರಲ್ಲೂ ಅನಕ್ಷರಸ್ಥ ಜನಸಮುದಾಯಕ್ಕೂ ತಲುಪಿಸುವ ಕೆಲಸ ಮಾಡಿತು. ನಮ್ಮ ಸಂಸ್ಕೃತಿಯು ಸಾಹಿತ್ಯಪ್ರಸರಣದಲ್ಲಿ ಭಾವಗೀತೆಯನ್ನು ದುಡಿಸಿಕೊಂಡಂತೆ ಭಾವನೃತ್ಯವನ್ನು ಸಹ ದುಡಿಸಿಕೊಳ್ಳಬಹುದು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಮೂಳೆ ಮಾಂಸದ ತಡಿಕೆ: ಸುಧಾ ಆಡುಕಳ ಅಂಕಣ

ಇವಳ ಜತೆಯಲ್ಲಿ ನಡೆಯುವ ಗೆಳತಿಯರು ಮೈ ಕೈ ತಾಗಿಸಿಕೊಳ್ಳದೇ ದೂರದೂರವೇ ನಡೆಯುವಾಗ ನೀಲಿಗೆ ಅಳುವೇ ಬಂದಂತಾಗಿತ್ತು. “ನಾ ಹೇಳದಿದ್ರೆ ನಿಮಗೆಲ್ಲ ನಾ ಮುಟ್ಟು ಅಂತ ಗೊತ್ತಾಗ್ತಾನೇ ಇರಲಿಲ್ಲ. ದಿನಾ ಶಾಲೇಲಿ ಅದೆಷ್ಟು ಹುಡುಗಿರು ಮುಟ್ಟಾಗಿ ಬರ್ತಾರೋ ಗೊತ್ತಿದ್ಯಾ?” ಎಂದು ಅವರನ್ನು ತಿದ್ದಲು ನೋಡಿದಳು. ಅದಕ್ಕವರು ಜಗ್ಗದೇ, “ಗೊತ್ತಾಗದಿದ್ರೆ ದೋಷ ಇಲ್ಲಾಂತ ನಮ್ಮಜ್ಜಿ ಹೇಳಿದಾರೆ. ಗೊತ್ತಾಗಿಯೂ ಮೈಲಿಗೆಯಾದ್ರೆ ಅದು ನಮ್ಮ ತಪ್ಪು.” ಎಂದು ಬೇರೆಯದೇ ವಾದ ಹೂಡಿದರು. ಬಸ್ ಹತ್ತಿದಾಗಲೂ ತನ್ನ ಸೀಟಿನಲ್ಲಿ ಪರಚಯದವರ‍್ಯಾರೂ ಕುಳಿತುಕೊಳ್ಳದಿದ್ದಾಗ ನೀಲಿ ಈ ಹುಡುಗಿಯರೆಲ್ಲ ಇಡಿಯ ಶಾಲೆಗೆ ಈ ವಿಷಯವನ್ನು ಡಂಗೂರ ಸಾರದಿದ್ದರೆ ಸಾಕೆಂದುಕೊಂಡಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ನವರಾತ್ರಿಗೆ ಒಂದಿಷ್ಟು ಆಸ್ಟ್ರೇಲಿಯಾ ಕಥೆಗಳು: ಡಾ. ವಿನತೆ ಶರ್ಮಾ ಅಂಕಣ

ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರಿದ್ದು ಅವರು ಹಿಂದೂ ಧರ್ಮವನ್ನು ಆಚರಿಸುವುದಾಗಿ ಜನಗಣತಿಯಲ್ಲಿ ಹೇಳಿದ್ದರೆ, ಅವರ ಹಕ್ಕುಮಾನ್ಯತೆಯನ್ನು ಪರಿಗಣಿಸಿ ದೇವಸ್ಥಾನಕ್ಕೆ ಒಪ್ಪಿಗೆ ಕೊಡಬಹುದು. ಇದಾದ ಮೇಲೆ ದೇವಾಲಯ ಕಟ್ಟಡದ ನಿರ್ಮಾಣಕ್ಕೆ ಹಣ ಹೊಂದಿಸಬೇಕು. ದೇವಸ್ಥಾನ ಸ್ಥಾಪನೆಯ ಕನಸು ಕಂಡವರು ಹಗಲುರಾತ್ರಿ ಶ್ರಮವಹಿಸಿ ನಿಧಿಸಂಗ್ರಹಣೆ ಮಾಡಬೇಕು. ಕೆಲವರಿಗಂತೂ ಇದೇ ಅವರ ನಿತ್ಯಜೀವನವಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ