Advertisement

Category: ಅಂಕಣ

ಕಮಲಾದಾಸ್, ಅನುವಾದ ಹಾಗೂ ಬರಹವೆಂಬ ಬಿಡುಗಡೆ….: ಡಾ. ಎಲ್.ಜಿ. ಮೀರಾ ಅಂಕಣ

ಆಧುನಿಕ ಭಾರತೀಯ ಸಾಹಿತ್ಯಚರಿತ್ರೆಯ ಲೇಖಕಿಯರ ಪಟ್ಟಿಯೆಂಬ ಆಕಾಶಗಂಗೆಯಲ್ಲಿ ಎದ್ದು ಕಾಣುವ ಒಂದು ವಿಭಿನ್ನ ನಕ್ಷತ್ರವೆಂದರೆ ಅದು ಕಮಲಾದಾಸ್. ಕೇರಳದ ಮಗಳಾದ ಈ ಹೆಣ್ಣುಮಗಳು ಲೋಕವನ್ನು ಕುರಿತ ತನ್ನ ಸೂಕ್ಷ್ಮ ಗ್ರಹಿಕೆಯಿಂದ ಬೇರೆ ಲೇಖಕ, ಲೇಖಕಿಯರು ಹೋಗಲು ಹೆದರುವ ಭಾವಲೋಕಗಳಿಗೆ ದಿಟ್ಟವಾಗಿ ಕಾಲಿಟ್ಟರು. ಪ್ರೀತಿ, ಮದುವೆ, ಜೀವನ, ಸಂಬಂಧಗಳು ಇವೆಲ್ಲವನ್ನೂ ಪುರುಷ ಪ್ರಧಾನ ಜಗತ್ತಿನಲ್ಲಿ ಹುಟ್ಟಿದ್ದರೂ ಅದರ ಬಂಗಾರದ ಸರಪಳಿಗಳಲ್ಲಿ ಬಂಧಿಯಾಗಲೊಪ್ಪದ ಧೈರ್ಯದ ಹೆಣ್ಣಿನ ಕಣ್ಣಿಂದ ನೋಡಿದರು, ಬರೆದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತೊಂಭತ್ತನೆಯ ಬರಹ

Read More

ಊರು ಕೇರಿ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಒಮ್ಮೊಮ್ಮೆ ಈ ನೆಲದ ಋಣದ ಕುರಿತು ಯೋಚಿಸುತ್ತೇನೆ. ಅಷ್ಟು ಗಾಢವಾದ ಋಣವೇ ಅದು? ಎಲ್ಲಿದ್ದರೂ ಊರಿನತ್ತ ಕೈಬೀಸಿ ಕರೆಯುವ ಮೋಹನ ಮುರಳಿಯ ಸೆಳೆತ ನಿಜವಾಗಿಯೂ ತೀವ್ರವಾದದ್ದೇ ಹೌದು. ಅದಲ್ಲದಿದ್ದರೆ ಹೋಗುವ ಯಾವುದೇ ಪರಿಸ್ಥಿತಿಯಲ್ಲಿ ಇಲ್ಲದಿದ್ದರೂ ಮನೆಗೆ ಹೋಗ್ಬೇಕು, ನನ್ನನ್ನು ಊರಿಗೆ ಬಿಟ್ಟು ಬಾ ಅಂತ ಮತ್ತೆ ಮತ್ತೆ ಅಪ್ಪ ಹೇಳುತ್ತಿರಲಿಲ್ಲ. ನನಗಂತೂ ಬಾಲ್ಯಕ್ಕೆ ಜಿಗಿಯಬೇಕು ಅಂತ ಅನ್ನಿಸಿದ ಕೂಡಲೇ ನನ್ನೆಲ್ಲಾ ಕೆಲಸವನ್ನು ಬಿಟ್ಟು ಇಲ್ಲಿಗೆ ಬಂಡುಬಿಡುವುದು ಇತ್ತೀಚಿನ ನನ್ನಿಷ್ಟದ ಕೆಲಸಗಳಲ್ಲಿ ಒಂದಾಗಿ ಹೋಗಿದೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”

Read More

ಬಿಡುಗಣ್ಣಿನ ಎರಡು ಬಿಡಿನೋಟಗಳು: ಸುಕನ್ಯಾ ಕನಾರಳ್ಳಿ ಅಂಕಣ

ಉತ್ಪಾದನೆ ಯಾರು ಮಾಡ್ತಾರೋ ಅವರಿಗೆ ಅದರ ಮೇಲೆ ಅಧಿಕಾರ ಇರಬೇಕು ಅಂತ ಒಪ್ಪಿಕೊಂಡಿರೋ ವ್ಯವಸ್ಥೆ ಒಳಗೇ ಇದ್ದುಕೊಂಡು ತಾನು ಹೊತ್ತು, ಹೆತ್ತು, ಬೆಳೆಸಿದ ಮಕ್ಕಳ ಅಧಿಕಾರವನ್ನ ವ್ಯವಸ್ಥೆಗೆ ಬಿಟ್ಟುಕೊಡಬೇಕಾದ ಅಸಹಾಯಕತೆಯಲ್ಲಿಯೂ ಸಹ ಹೆಣ್ಣು ಬದುಕಿ ಉಳಿತಾಳೆ. ವ್ಯವಸ್ಥೆ ತಮ್ಮ ತಮ್ಮ ಹುಚ್ಚಾಟಗಳಿಗೆ ಆ ಮಕ್ಕಳನ್ನ ಯುದ್ಧಕ್ಕೆ ಕಳುಹಿಸಿ ಅವಳ ಕಣ್ಣೆದುರೇ ಅವು ಹೊಸಕಿ ಹೋದರೂ ಸಹ ಮತ್ತೆ ಮತ್ತೆ ಯಾವುದೋ ನಂಬಿಕೆಯಲ್ಲಿ ಮಕ್ಕಳನ್ನ ಹುಟ್ಟಿಸಿ ಬೆಳೆಸುತ್ತಲೇ ಹೋಗುತ್ತಾಳಲ್ಲ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಮಕ್ಕಳನ್ನು ಹೇಗೆ ಬೆಳೆಸೋದು!: ಜಯಲಕ್ಷ್ಮಿ ಪಾಟೀಲ್ ಅಂಕಣ

ಮಕ್ಕಳನ್ನು ಮಕ್ಕಳಂತೇ ಬೆಳೆಸೋಣ. ನಮಗೆ ತೋಚಿದಷ್ಟು, ಅಥವಾ ಅವರ ಮುಗ್ಧತೆಗೆ ಧಕ್ಕೆ ಬಾರದಷ್ಟು ಉತ್ತರಿಸಲು ಸಾಧ್ಯವಾದಲ್ಲಿ ಉತ್ತರಿಸಬೇಕು. ನನ್ನ ಬಲವಾದ ವಿರೋಧವಿರೋದು ಬಾಲ್ಯದಲ್ಲಿಯೇ ವ್ಯಕ್ತಿ ಸ್ವಾತಂತ್ರ್ಯದ, ಪ್ರಗತಿಯ ಹೆಸರಲ್ಲಿ ಮಕ್ಕಳ ಮುಗ್ಧತೆಯನ್ನು ಕಸಿಯುವುದರ ಬಗ್ಗೆ. ಮಕ್ಕಳು ಬೆಳೆದಂತೆ ಅವರೊಂದಿಗಿನ ನಮ್ಮ ವರ್ತನೆಯೂ ಅದೇ ಹದದಲ್ಲಿ ಬದಲಾಗುತ್ತಾ ಹೋಗುತ್ತದೆ. ನನ್ನ ಮಕ್ಕಳು ಚಿಕ್ಕವರಿದ್ದಾಗ ಅವರ ಎಲ್ಲ ಪ್ರಶ್ನೆಗಳಿಗೆ ನಾನು ಅಥವಾ ನಾವಿಬ್ಬರೂ ಉತ್ತರಿಸಿಲ್ಲ. ಕೇಳಿದ್ದೆಲ್ಲವನ್ನೂ ಅವರಪ್ಪ ತೆಗೆಸಿಕೊಡಲು ಮುಂದಾಗುತ್ತಾರೆ.
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣದ ಐದನೆಯ ಬರಹ

Read More

ಸಂತಾಲಿ ಕವಿಯ ಸ್ತ್ರೀ ಸಂವೇದಿ ಕಾವ್ಯ: ಸುಕನ್ಯಾ ಕನಾರಳ್ಳಿ ಅಂಕಣ

ಇಲ್ಲಿ ನಾನು-ನೀನು ಅಂದರೆ ಸಮುದಾಯ ಉಳಿಯಬೇಕು, ಅವರಿಂದ ಅಂದರೆ ಹೊರಗಿನವರಿಂದ ನನ್ನನ್ನು ಕಾಪಾಡು ಎಂಬ ಬೇಡಿಕೆ ಇದೆ. ನಿನ್ನಿಂದ ಅಂದರೆ ದೌರ್ಜನ್ಯದ ಮೂಲವಾದ ಕುಟುಂಬ ಎಂಬ ವ್ಯವಸ್ಥೆಯಲ್ಲಿರುವ ಲಿಂಗ ತಾರತಮ್ಯದಿಂದ ತನ್ನನ್ನು ಕಾಪಾಡಿಕೊಳ್ಳಬೇಕು ಎನ್ನುವ ಆಗ್ರಹವಿಲ್ಲ. ಇದು ನನ್ನ ಗ್ರಹಿಕೆಗೆ ದಕ್ಕುವ ರೀತಿಯಲ್ಲಿ ಕಾಡನ್ನು ನಂಬಿದ, ಕೃಷಿಯ ಮೇಲೆಯೇ ಬದುಕುತ್ತಿರುವ ಸಮುದಾಯಕ್ಕೆ ಕುಟುಂಬ ಹೇಗಾದರೂ ಬದುಕಿ ಉಳಿಯಬೇಕು ಎನ್ನುವ ನೆಲೆಯಿಂದ ಹೊಮ್ಮಿದ ಒಂದು ಸತ್ಯ. ಕೃಷಿ ಕೆಲಸಕ್ಕೆಂದೇ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳುವ ಕೃಷಿಕ ಕುಟುಂಬಕ್ಕೆ ಫ್ಯಾಮಿಲಿ ಪ್ಲಾನಿಂಗ್ ಬಗ್ಗೆ ಉಪದೇಶ ಮಾಡುವುದು ಅಧಿಕಪ್ರಸಂಗತನ ತಾನೇ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ