Advertisement

Category: ಅಂಕಣ

 ಎಐ ಯುಗ, ಹುಡುಕಾಟ, ಚಾರಣಪ್ರೀತಿ ಹಾಗೂ `ಘಾಂದ್ರುಕ್’…: ಡಾ. ಎಲ್.ಜಿ. ಮೀರಾ ಅಂಕಣ

`ಮೋಕ್ಷ ಹುಡುಕುತ್ತಾ ಪ್ರೀತಿಯ ಬಂಧನದಲ್ಲಿ’ – ಲಂಕೇಶರ ಲೇಖನ ನೆನಪಾಗುತ್ತೆ. ಬಿಟ್ಟೇನೆಂದರೂ ಮನುಷ್ಯನಿಗೆ ಮನುಷ್ಯರ ಸಹವಾಸವನ್ನು ಬಿಡಲು ಸಾಧ್ಯವೇ? `ಯಾರ ಹತ್ತಿರವೂ ನಾನು ಮಾತಾಡುವುದಿಲ್ಲ, ಮನುಷ್ಯರ ಸಹವಾಸವೇ ಬೇಡ’ ಎಂದುಕೊಂಡ ಸಿದ್ಧಾರ್ಥನು ಕೆಲವು ದಿನ ಹೀಗಿದ್ದರೂ ನಂತರ ನಿಧಾನವಾಗಿ ಮನುಷ್ಯರ ಸಂಗ, ಸಹವಾಸ ಬೆಳೆಸುತ್ತಾ ಹೋಗುವುದು, ಸೋಫಿಯಾಳ ಪ್ರೀತಿಯಲ್ಲಿ ತಲ್ಲೀನನಾಗುವುದು, ಹಾಗೂ ತಾನು ನೋಡಿದ ವಿವರಣೆಗೆ ಮೀರಿದ ಹಿಂಸೆಯಿಂದ ಮನುಷ್ಯರ ಬಗೆಗೆ ತೀವ್ರ ಅಪನಂಬಿಕೆ ಬೆಳೆಸಿಕೊಂಡಿದ್ದ ಸೋಫಿಯಾಳು ಸಿದ್ಧಾರ್ಥನನ್ನು ಹೃದಯಕ್ಕೆ ಹಚ್ಚಿಕೊಳ್ಳುವುದು – ಇವು ಏನನ್ನು ಸೂಚಿಸುತ್ತವೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಮನದ ಕಿಟಕಿ: ರವೀಂದ್ರ ನಾಯಕ್ ಸಣ್ಕಕ್ಕಿಬೆಟ್ಟು ಅಂಕಣ

ಮನೆಯ ರಾಮಾಯಣ ಮುಗಿಸಿ ಹೊರಗೆ ಬಂದು ಡ್ಯೂಟಿಗೆಂದು ಬೈಕ್ ಹತ್ತುವಾಗ ಆ ಗಂಡಸಿನ ಮುಖ ನೋಡಬೇಕು… ಯುದ್ಧ ನಂತರದ ನಿರ್ಮಲ ಶಾಂತಿ, ಆನಂದ ಅವರ ಮುಖದಲ್ಲಿ; ಜೀವಾವಧಿ ಶಿಕ್ಷೆ ಮುಗಿಸಿ ಈಗಷ್ಟೇ ಹೊರ ಬಂದ ಖೈದಿಯ ಸಂತೋಷದಂತೆ ನಿರಾಳ ಮುಖಭಾವ. ಸಂಜೆ ಮತ್ತೆ ಮನೆಯ ಬಾಗಿಲು ಬಡಿಯುವಾಗ ಮತ್ತದೇ ಬೇಸರ. “ಒಂದೇ ಮನೆಯಲ್ಲಿ ವಿಚ್ಭೇದಿತ ಮನಸ್ಸುಗಳು ಸಹಭೋಜನ ಮಾಡುತ್ತವೆ” ಎಂದು ಎಲ್ಲೋ ಓದಿದ್ದ ಮಾತು ಇವರನ್ನು ನೋಡಿದಾಗ ಅದೆಷ್ಟು ನಿಜ ಅನ್ನಿಸಿತು…
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಹನ್ನೆರಡನೆಯ ಬರಹ

Read More

‘ವಿಧವೆ’ ನಿಮ್ಮನ್ನು ತುಂಬ ಕಾಡಿದಳೆ?: ಕಾಸರವಳ್ಳಿಯವರೊಂದಿಗೆ ಒಂದು ಸಂದರ್ಶನ: ಸುಕನ್ಯಾ ಕನಾರಳ್ಳಿ ಅಂಕಣ

‘ನಾಯಿನೆರಳು’ ವಿನ ಮೂರನೆಯ ಭಾಗದಲ್ಲಿ ಪ್ರಭುತ್ವ ಹೆಚ್ಚು ಹೆಚ್ಚು ಮೂಗು ತೂರಿಸೋದನ್ನ ತೋರಿಸೋದಕ್ಕೆ ಪ್ರಯತ್ನಪಟ್ಟಿದೀನಿ. ಪೋಲೀಸು, ಕೋರ್ಟು, ಕೇಸು… ಅವು ಮಂದಿಯ ವೈಯುಕ್ತಿಕ ಜೀವನದ ನಿರ್ಧಾರಗಳು ಅನ್ನೋ ಅಂಶವನ್ನ ಗಣನೆಗೇ ತಗೊಳಲ್ಲ. ವೆಂಕಟಲಕ್ಷ್ಮಿಗೆ ವ್ಯವಸ್ಥೆಯ ಆಯಾಮಗಳ ಪರಿಚಯ ಇದೆ. ಜೊತೆಗೆ, ಸಮುದಾಯದ ಒಂದು ಪಾತ್ರ ‘ಸ್ವಲ್ಪ ದಿನ ಹಿಟ್ಲರ್ ಕಾಟ ಕೊಟ್ಟ. ಈಗ ಗಾಂಧಿ ಕಾಟ,’ ಅಂತ ಹೇಳುತ್ತೆ. ಅವರಿಬ್ಬರ ನಡುವಿನ ವ್ಯತ್ಯಾಸವೂ ಅವರಿಗೆ ಗೊತ್ತಿಲ್ಲ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೈದನೆಯ ಬರಹ

Read More

ಸೆರಗ ಬಿಡು ಮರುಳೆ: ಜಯಲಕ್ಷ್ಮಿ ಪಾಟೀಲ್ ಅಂಕಣ

ಅಗತ್ಯವಿಲ್ಲದಿದ್ದರೂ, ಇಷ್ಟವಿಲ್ಲದಿದ್ದರೂ, ಪಾಲಿಸಲೇಬೇಕು ಎನ್ನುವುದು ಹೇರಿಕೆಯಾದಾಗ ಸಂಪ್ರದಾಯಗಳು ಸಂಕೋಲೆಗಳಾಗಿ ಹಿಂಸಿಸತೊಡಗುತ್ತದೆ. ಈ ಹೇರಿಕೆ ಕೇವಲ ಸಮಾಜದ್ದಲ್ಲ ನಮ್ಮೊಳಗಿನದೂ ಸಹ! ‘ಸಂಪ್ರದಾಯವನ್ನು ಬಿಟ್ಟು ನಡೆದಲ್ಲಿ ಏನಾದರೂ ಅವಘಡ ಸಂಭವಿಸಿದರೆ ಗತಿ ಏನು ಮುಂದೆ?!’ ಎನ್ನುವ ನಮ್ಮೊಳಗಿನ ಭೀತಿಯೇ ಅರ್ಧ ಮನುಷ್ಯರನ್ನು, ‘ಬಿಟ್ಟರೂ ಬಿಡಲಾರದೀ ಮಾಯೆ’ ಎಂದು ತ್ರಿಶಂಕು ಸ್ಥಿತಿಯಲ್ಲಿ ನೇತಾಡುವಂತೆ ಮಾಡುತ್ತದೆ. ಕಾಲಾಂತರದಲ್ಲಿ ಅಕ್ಷರ, ಹಣ, ಸಾರಿಗೆ ಮತ್ತು ಮಾಧ್ಯಮ ಇತ್ಯಾದಿ ಅನುಕೂಲತೆ ಎಲ್ಲರಿಗೂ ಎಟುಕತೊಡಗಿದಂತೆ, ಅಷ್ಟಿಷ್ಟು ಮೌಢ್ಯಗಳು, ಸಂಪ್ರದಾಯದ ಸಂಕೋಲೆಗಳು ಸಡಿಲಗೊಂಡರೂ, ತ್ರಿಶಂಕು ಸ್ಥಿತಿಯಿಂದ ಅಷ್ಟು ಸುಲಭದಲ್ಲಿ ಬಿಡುಗಡೆ ಸಿಗುವುದಿಲ್ಲ.
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣ

Read More

ಈ ಬದುಕಿನ ಪ್ರೀತಿ ಪ್ರೇಮ ಪ್ರಣಯ…: ಸುಕನ್ಯಾ ಕನಾರಳ್ಳಿ ಅಂಕಣ

ಮದುವೆಯಾಗಲು ಕಾಯುತ್ತಿದ್ದ ದಿನಗಳಲ್ಲಿ ಭ್ರಮೆ ನಿಧಾನವಾಗಿ ಕರಗುತ್ತಿತ್ತು. ಈ ನನ್ನ ಮಗ ಮತ್ತು ನನ್ನ ನಡುವೆ ಇರುವ ಸಮಾನ ಆಸಕ್ತಿಗಳಾದರೂ ಏನು ಎಂದು ಉತ್ತರವೇ ಇಲ್ಲದ ಪ್ರಶ್ನೆಗಳಲ್ಲಿ ದಿನ ಕಳೆಯುತ್ತಿತ್ತು. ಹತ್ತಿರ ಬಂದರೂ ದೇಹ ಸ್ಪಂದಿಸದಿರುವಾಗ ಬದುಕೆಲ್ಲ ಸಿಕ್ಕಿ ಬಿದ್ದು ಏನು ಗತಿ ಎಂದು ಕಳವಳಿಸಲು ಪ್ರಾರಂಭಿಸಿದ್ದೆ. ಒಮ್ಮೆ ಸುಷ್ಮಾ ಸ್ವರಾಜಳ ಅವಳಿಯಂತೆ ಕಾಣಿಸುವ ಅವನ ಅಮ್ಮನನ್ನು ಭೇಟಿಯಾದೆ. ಡಿ ಎಚ್ ಲಾರೆನ್ಸನ ಸನ್ಸ್ ಅಂಡ್ ಲವರ್ಸ್ ಕಾದಂಬರಿ ನೆನಪಿಗೆ ಬಂತು. ಈಕೆ ಉಡದ ಹಿಡಿತದವಳು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ನಾಲ್ಕನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ