Advertisement

Category: ಅಂಕಣ

ಲೋಕದ ಚಿಂತಿ ಯಾಕ ಮಾಡತಿ..?: ಎಸ್ ನಾಗಶ್ರೀ ಅಜಯ್ ಅಂಕಣ

ಹತ್ತು ಜನರ ನಡುವಿದ್ದೂ ಅವರಿವರಂತಾಗದೆ, ತಮ್ಮ ಮಿತಿಯಲ್ಲಿ ಆಗುವ ಸಕಲವನ್ನೂ ಸಂತೋಷ, ಸಮಾಧಾನದಿಂದ ಮಾಡುತ್ತಾ, ಮೆಚ್ಚುಗೆಗೂ ಹಾತೊರೆಯದೆ, ಯಾರನ್ನೂ ದೂರದೆ ಸಂತರಂತೆ ಬದುಕಿದವರಿದ್ದಾರೆ. ಮನೆಮನೆಗಳಲ್ಲಿ ಅಂತಹವರನ್ನು ಕಂಡಿರುತ್ತೇವೆ. ಸದಾ ಗಿಜಿಗುಡುವ ಮನೆ, ಬಂದು ಹೋಗುವವರು, ಓದಲೆಂದು, ಕೆಲಸಕ್ಕೆಂದು ಬಂದು ಉಳಿದ ಬಂಧುಗಳ ಮಕ್ಕಳು, ದೇವಸ್ಥಾನದ ಪ್ರಸಾದ, ಚರಪು ಮಾಡುವ ಜವಾಬ್ದಾರಿ, ರೋಗಿಗಳ ಆರೈಕೆ, ಹಿರಿಯರ ಕಾಳಜಿ, ದಿನಂಪ್ರತಿ ಹದಿನೈದು ಇಪ್ಪತ್ತು ಜನರಿಗೆ ಕಡಿಮೆಯಿಲ್ಲದಂತೆ ಊಟೋಪಚಾರ…
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಗ್ಲೋಬಲ್-ಲೋಕಲ್ ಊರುಗಳ ಉಪಕಥೆಗಳು: ವಿನತೆ ಶರ್ಮ ಅಂಕಣ

ಇವೆಲ್ಲವನ್ನು ಹಿಂದಿನ, ಎಂದಿನ ಕುತೂಹಲದಿಂದ ನೋಡುತ್ತಾ ನಿಲ್ಲುವ ನನ್ನನ್ನು ಅನುಮಾನದಿಂದ ನೋಡುವ ಜನರು ಜಾಸ್ತಿಯಾಗಿರುವುದು ಗಮನಕ್ಕೆ ಬರುತ್ತದೆ. ಯಾರು ನೀವು, ಇಲ್ಲಿ ಯಾಕೆ ನಿಂತು ನಮ್ಮನ್ನು ನೋಡುತ್ತಿದ್ದೀರಿ, ನಿಮ್ಮಷ್ಟಕ್ಕೆ ನೀವು ನಿಮ್ಮ ಕೆಲಸ ನೋಡಿಕೊಂಡು ಮುಂದೆ ಸಾಗಿ, ಎಂದು ಕೆಲವರು ಕೇಳುವಾಗ ಜನಜೀವನದ ಮನಸ್ಸುಗಳ ಬೇರುಗಳಿಗೆ ಅಂಟಿಕೊಂಡಿರುವ ಮಣ್ಣು ಸಡಿಲವಾಗಿರುವುದು ಕಾಣುತ್ತದೆ. ನಮ್ಮಷ್ಟಕ್ಕೆ ನಾವು, ನಿಮ್ಮಷ್ಟಕ್ಕೆ ನೀವು ಎನ್ನುವ ಮಾತನ್ನು ಕೇಳಿದಾಗ ಯಾಕೋ ಮುಂದುವರೆದ ಪಾಶ್ಚಾತ್ಯ ದೇಶ-ಸಮಾಜಗಳ ಬಂಡವಾಳಶಾಹಿ ಧೋರಣೆ ನೆನಪಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಪೆಟ್ಟಿಗೆ ಅಂಗಡಿಯಲ್ಲಿ ಭದ್ರವಾದ ನೆನಪುಗಳು: ಮಾಲತಿ ಶಶಿಧರ್ ಅಂಕಣ

ಅವರು ದೂರ ಹೋಗುತ್ತಾ ಕಣ್ಮರೆಯಾಗುತ್ತಿದ್ದ ಹಾಗೆ ನನ್ನ ಕುಚುಕು ಗೆಳತಿಯರು ಒಗ್ಗಟ್ಟಿನಿಂದ ನನಗಿಂತಲೂ ಎತ್ತರದಲ್ಲಿದ್ದ ಬಾಗಿಲು ಹತ್ತಲು ಸಹಕರಿದ್ದರು. ಅದೇನಾಯಿತೋ ಏನೋ ಅಷ್ಟರಲ್ಲೇ ಹೋದ ತಾತ ಮಗ ಗಿರಿಯಣ್ಣನ ಜೊತೆ tvs ಲೂನಾದಲ್ಲಿ ಬರುವುದನ್ನು ಕಂಡ ನನ್ನ ಮಿತ್ರದ್ರೋಹಿಗಳು ನನ್ನನ್ನೊಬ್ಬಳನ್ನೇ ಬಿಟ್ಟು ಓಡಿ ಹೋಗಿ ಪಕ್ಕದಲ್ಲೇ ಇದ್ದ ತೃಪ್ತಿ ಕ್ಯಾಂಟೀನ್ ಕಟ್ಟಡದ ಮಹಡಿ ಹತ್ತಿ ಅವಿತುಕೊಂಡು ಬಿಟ್ಟರು. ಯಾರ ಸಹಾಯವು ಇಲ್ಲದೇ ಒಳಗಿಂದ ಹತ್ತಿ ಆಚೆ ನೆಗೆಯಲು ಬಾರದೆ ಪರದಾಡುತ್ತಿದ್ದ ನನ್ನನ್ನ ತಾತ ಒಂದೇ ಹಿಡಿತದಲ್ಲಿ ಎತ್ತಿ ಆಚೆ ಹಾಕಿದ್ದರು.
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ

Read More

ವರ್ಲ್ಡ್ ಟೆಸ್ಟ್ ಚಾಂಪಿಯನ್‌ಷಿಪ್: ಇ.ಆರ್. ರಾಮಚಂದ್ರನ್ ಅಂಕಣ

ಟೆಸ್ಟ್ ಕ್ರಿಕೆಟ್ ಚೆನ್ನಾಗಿ ಆಡದಿದ್ದರೆ, ಬಿಸಿಸಿಐಅನ್ನು ಬಹಳ ಭಾರತೀಯರೇ ದೂರುತ್ತಾರೆ. ಒಂದು ರೀತಿಯಲ್ಲಿ ಇದು ಸಹಜ. ಭಾರತ ಟೆಸ್ಟ್ ಮ್ಯಾಚ್‌ಗಳನ್ನು ಚೆನ್ನಾಗಿ ಆಡುತ್ತಿಲ್ಲ ಅದಕ್ಕೆ ಹಣದ ವಾಸನೆ ಬಂದಿದೆ, ಅಲ್ಲಿ ಆಡುವವರೆಲ್ಲಾ ಹಣದಾಸೆಯಿಂದ ಟೆಸ್ಟ್ ಚೆನ್ನಾಗಿ ಆಡುತ್ತಿಲ್ಲ ಎಂಬ ಮಾತೂ ಈಗೀಗ ಕೇಳಿಬರುತ್ತಿದೆ. ಈ ಮಧ್ಯೆ ಭಾರತ ಯಾವ ಕಪ್ /ಟ್ರೋಫಿ, ಅದರಲ್ಲೂ ಐಸಿಸಿ ಟ್ರೋಫಿಯನ್ನು ಕಳೆದ 10 ವರ್ಷದಿಂದ ಗೆದ್ದಿಲ್ಲ. ಅದಕ್ಕೆ ಎಷ್ಟೋ ಅಭಿಮಾನಿಗಳೂ ಐಪಿಎಲ್‌ನ ಜರಿಯುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಸಾವಿರ ಕಥೆಗಳ ಸಂಸಾರ: ಎಸ್‌. ನಾಗಶ್ರೀ ಅಜಯ್‌ ಅಂಕಣ

ಎಷ್ಟೋ ಕಥೆಗಳಲ್ಲಿ ನಾವೇ ಮುಖ್ಯವೋ, ಅಮುಖ್ಯವೋ ಒಂದು ಪಾತ್ರವಾಗಿ ಚಲಿಸುತ್ತಿರುತ್ತೇವೆ. ಅಸಲಿಗೆ ನಮ್ಮ ಸತ್ವಪರೀಕ್ಷೆಯಾಗುವುದು, ಇಂತಹ ದ್ವಂದ್ವಗಳಲ್ಲಿ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿ ನಮ್ಮ ಹೆಗಲೇರಿದಾಗ. ಹಾವು ಸಾಯಬಾರದು. ಕೋಲು ಮುರಿಯಬಾರದು ಎನ್ನುವ ನಾಜೂಕಯ್ಯರು ಹೇಗೋ ಬಚಾವಾಗುತ್ತಾರೆ. ಇದ್ದರೆ ಒಂದು ಕಡೆ. ಎರಡು ದೋಣಿಯ ಪಯಣ ನಮಗಲ್ಲ ಎನ್ನುವವರಿಗೆ ಸವಾಲು ಹೆಚ್ಚಿನದು. ಆದರೆ ಬಹಳಷ್ಟು ಸಲ ನಮ್ಮ ಪ್ರಯತ್ನಕ್ಕಿಂತ ಆ ಕ್ಷಣದ ಬಲವೇ ಹೆಚ್ಚಾಗಿ, ತುರ್ತು ಪರಿಸ್ಥಿತಿಯಲ್ಲಿ ಎರಡರಲ್ಲೊಂದು ತೀರ್ಮಾನವಾಗಿಬಿಟ್ಟಿರುತ್ತದೆ.
ಎಸ್‌. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ