Advertisement

Category: ಅಂಕಣ

ಯೂತ್ ಕ್ರೈಂ ಕತೆಗಳು: ವಿನತೆ ಶರ್ಮ ಅಂಕಣ

ಎಷ್ಟೋ ಬಾರಿ ಪೊಲೀಸರು ಈ ಮಕ್ಕಳಿಗೆ ಎಚ್ಚರಿಕೆ ಕೊಟ್ಟು ಕಳಿಸುತ್ತಾರೆ. ಕೆಲವೊಮ್ಮೆ ದೊಡ್ಡ ಮಕ್ಕಳು ಯೂತ್ ಜಸ್ಟಿಸ್ ಮುಖಾಮುಖಿ ಸಭೆಗಳಲ್ಲಿ ಸಲಹೆ, ಬುದ್ಧಿವಾದಗಳನ್ನು ಪಡೆದು ಹೋಗುತ್ತಾರೆ. ಕೆಲವರಿಗೆ ಅಪರಾಧ ಮಾಡುವುದು ತಮಾಷೆಯಾದರೆ ಇನ್ನೂ ಕೆಲವು ಮಕ್ಕಳಿಗೆ ಅದು ಉದ್ದೇಶಪೂರ್ವಕವಾದ ನಡವಳಿಕೆ ಆಗಿರುತ್ತದೆ ಎಂದು ಸಮಾಜ ಕಾರ್ಯಕರ್ತರು, ಆಪ್ತಸಮಾಲೋಚನಾ ತಜ್ಞರು ಹೇಳುತ್ತಾರೆ. ಚಿಂತಿಸುವ ವಿಷಯವೆಂದರೆ ಅವರಲ್ಲಿ ಅನೇಕರು ಪದೇಪದೇ ಅದೇ ರೀತಿಯ ಅಪರಾಧಗಳನ್ನು ಮಾಡುತ್ತಾ ಇರುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನೀಲಿ ನೋಡಿದ ಕಾಡು: ಸುಧಾ ಆಡುಕಳ ಅಂಕಣ

ಒಮ್ಮೆ ಅವನೂ, ನೀಲಿಯ ತಂದೆಯೂ ಅಂಟುವಾಳದ ಕಾಯಿಗಳನ್ನು ಹುಡುಕುತ್ತ ಕಾಡಿನಲ್ಲಿ ಬಹುದೂರದವರೆಗೆ ಸಾಗಿದರಂತೆ. ಚೀಲಗಟ್ಟಲೆ ಕಾಯಿಗಳನ್ನು ಕೊಯ್ದು ಮೂಟೆಗಟ್ಟಿ ದಣಿವಾರಿಸಿಕೊಳ್ಳಲೆಂದು ಮರವೊಂದರ ಬೇರಿನ ಮೇಲೆ ಕುಳಿತು ಕವಳ ತಿನ್ನತೊಡಗಿದರಂತೆ. ಸುಮಾರು ಹೊತ್ತಿಗೆ ನೋಡಿದರೆ ಅವರು ಕುಳಿತಿದ್ದ ಬೇರು ನಿಧಾನಕ್ಕೆ ಚಲಿಸಲು ಪ್ರಾರಂಭವಾಯಿತಂತೆ. ಅರೆ! ಇದೇನಿದು? ಎಂದು ಎದ್ದು ದೂರ ನಿಂತರೆ ಮರದ ಬೇರೆಂದು ಅವರು ಕುಳಿತದ್ದು ಮಾದೊಡ್ಡ ಹೆಬ್ಬಾವಿನ ಮೇಲಂತೆ!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಎಂಟನೆಯ ಕಂತು ನಿಮ್ಮ ಓದಿಗೆ

Read More

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗಳು: ಎಂ.ವಿ ಶಶಿಭೂಷಣ ರಾಜು ಅಂಕಣ

ಹೀಗೆ ಹೊತ್ತಿಲ್ಲದ ಹೊತ್ತಿನಲ್ಲಿ ಕೆಲಸಮಾಡುವುದರಿಂದ, ಓಡಾಡಲು ಸ್ವಂತ ವಾಹನ ಇಲ್ಲದಿರುವುದರಿಂದ, ರೈಲು, ಬಸ್ಸುಗಳಲ್ಲಿ ಅಥವಾ ನಡೆದು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ತಲುಪಬೇಕಾಗಿರುವುದರಿಂದ, ಕೆಲವು ಅನಾಹುತಗಳಿಗೆ ತೆರೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ಇದೇ ಹೆಚ್ಚಿನ ಅನಾಹುತಗಳಿಗೆ ಕಾರಣ. ಇದು ಭಾರತೀಯ ವಿದ್ಯಾರ್ಥಿಗಳೇ ಅಲ್ಲ, ಎಲ್ಲಾ ದೇಶಗಳ ವಿದ್ಯಾರ್ಥಿಗಳಿಗೂ ಜರುಗುತ್ತದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ

Read More

ಮಹಿಳಾ ದೌರ್ಜನ್ಯದ ಸುತ್ತ…: ವಿನತೆ ಶರ್ಮ ಅಂಕಣ

ಒಬ್ಬ ಮಹಿಳೆ ತನ್ನ ಗಂಡನಿಂದಲೊ, ಜೀವನ ಸಂಗಾತಿಯಿಂದಲೊ ಅಥವಾ ಆ ರೀತಿಯ ಸಂಬಂಧವು ಕೊನೆಯಾಗಿ ಬೇರ್ಪಟ್ಟ ಮೇಲೂ ಅವರಿಂದ ಹಿಂಸೆಗೊಳಗಾಗಿ ಸಾಯುವುದು ಬಹಳ ದುಃಖಕರ ವಿಷಯ. ಒಂದು ಮುಂದುವರೆದ ಸಮಾಜವೆಂದು ಕರೆಸಿಕೊಳ್ಳುವ ಪಾಶ್ಚಾತ್ಯ ದೇಶವಾದ, ಕೇವಲ ೨೬ ಮಿಲಿಯನ್ ಜನರಿರುವ ಈ ದೇಶದಲ್ಲಿ ಕೌಟುಂಬಿಕ ಹಿಂಸೆ ಹಿನ್ನೆಲೆಯಲ್ಲಿ ಹೆಂಗಸೊಬ್ಬಳನ್ನು ಸಾಯಿಸುವುದು ಅವಮಾನವನ್ನುಂಟು ಮಾಡುವ ವಿಷಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಹೊಳೆಸಾಲಿನ ಶಾಲೆಗೆ ಇನ್ನೀಸಬೆಟ್ಟರ್ ಬಂದರು: ಸುಧಾ ಆಡುಕಳ ಅಂಕಣ

ಎಲ್ಲರೂ ತಮ್ಮ ಕೆಲಸವನ್ನು ಬಿಟ್ಟು ದಾರಿಯೆಡೆಗೆ ನೋಡಿದರೆ ಆರಡಿ ಎತ್ತರದ ಚಂದದ ವ್ಯಕ್ತಿಯೊಬ್ಬರು ನಗುತ್ತಾ ಇವರೆಡೆಗೆ ಬರುತ್ತಿದ್ದರು. ಚೌಕಳಿ ಶರ್ಟು ಮತ್ತು ಬಿಳಿಯ ಪ್ಯಾಂಟಿನಲ್ಲಿ ಬಂದ ಅವರನ್ನು ಮಕ್ಕಳು ಬಿಟ್ಟ ಬಾಯಿ ಬಿಟ್ಟ ಹಾಗೆ ನೋಡುತ್ತಾ ನಿಂತುಬಿಟ್ಟರು. ಸೈಕಲ್ ಬೆಲ್ ಮಾಡುತ್ತಾ, ಸಮತಟ್ಟುಗೊಳಿಸಿದ ಮೈದಾನದ ತುಂಬಾ ಸೈಕಲ್ ಹೊಡೆಯುತ್ತ ಮಕ್ಕಳೆಡೆಗೆ ಕೈ ಬೀಸಿದರು. ಅವರ ಮುಗುಳ್ನಗೆಗೆ ಮನಸೋತ ಮಕ್ಕಳು ಹೋ ಎಂದು ಕೂಗುತ್ತಾ ಅವರ ಸೈಕಲ್ಲಿನ ಹಿಂದೆಯೇ ಹುಚ್ಚೆದ್ದು ಓಡತೊಡಗಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ