Advertisement

Category: ಅಂಕಣ

ಕೇಂದ್ರೀಯ ಬಜೆಟ್‌ನ ಉಪಕಥೆಗಳು: ಡಾ. ವಿನತೆ ಶರ್ಮ ಅಂಕಣ

ಇತ್ತೀಚೆಗೆ ವಿದ್ಯಾರ್ಥಿನಿಯೊಬ್ಬಳು ಹೇಳಿದಂತೆ ಯೂನಿವರ್ಸಿಟಿಯ ಸಹಪಾಠಿಯೊಬ್ಬರು ತಮ್ಮ ಕಾರಿನಲ್ಲಿ ಬದುಕುತ್ತಿದ್ದರಂತೆ. ರಾತ್ರಿ ಸಮಯ ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿಕೊಂಡಿರುವುದು, ಒಳಗೆ ಮುದುರಿಕೊಂಡು ಮಲಗುವುದು. ಬೆಳಿಗ್ಗೆ ಎದ್ದು ಯೂನಿವರ್ಸಿಟಿಗೆ ಬಂದು ಅಲ್ಲಿದ್ದ ಟಾಯ್ಲೆಟ್, ಶವರ್ ಸೌಲಭ್ಯಗಳನ್ನು ಬಳಸಿಕೊಂಡು, ಕೆಫೆಯಲ್ಲಿ ವಿದ್ಯಾರ್ಥಿಗಳಿಗೆ ಸಿಕ್ಕುವ ರಿಯಾಯ್ತಿ ದರದಲ್ಲಿ ಕಾಫಿ, ಸ್ಯಾಂಡ್ವಿಚ್ ಮತ್ತು ಉಚಿತ ಹಣ್ಣು ಪಡೆಯುವುದು. ದಿನಪೂರ್ತಿ ಯೂನಿವರ್ಸಿಟಿ ಕಟ್ಟಡದೊಳಗೇ ಇದ್ದುಕೊಂಡು ಒಂದಷ್ಟು ವ್ಯಾಸಂಗ, ನಿದ್ದೆ ಮಾಡುವುದು. ರಾತ್ರಿ ಪುನಃ ಕಾರಿಗೆ ವಾಪಸ್.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಕೊನೆಗೂ ಕೈಗೆ ಬಂದ ಭತ್ತ!: ಗುರುಪ್ರಸಾದ ಕುರ್ತಕೋಟಿ ಅಂಕಣ

ಎರಡು ಟ್ರಾಕ್ಟರ್ ಮೇಲೆ ಸ್ವಲ್ಪ ಹೆಚ್ಚು ಭತ್ತ ಸಿಕ್ಕಿತ್ತು. ಅದು ಹೆಚ್ಚು ಕಡಿಮೆ 25 ಚೀಲ ಆಗುತ್ತೆ ಎಂಬ ಅಂದಾಜು ಸಿಕ್ಕಿತು. ಒಂದು ಚೀಲ ಅರವತ್ತು ಕೆಜಿ ತೂಕ. ಹೀಗಾಗಿ ನಮಗೆ ಸಿಕ್ಕಿದ್ದು 1500 ಕೆಜಿ ಭತ್ತ. ಅದನ್ನು ಅಕ್ಕಿ ಮಾಡಿಸಿದರೆ ಹೆಚ್ಚು ಕಡಿಮೆ 1೦೦೦ ಕೆಜಿ ಅಕ್ಕಿ ಸಿಕ್ಕೀತು. ಅದು ಪ್ರಥಮ ಬಾರಿ ಬೆಳೆದ ನಮ್ಮ ಮಟ್ಟಿಗೆ ತುಂಬಾ ಹೆಮ್ಮೆಯ ಸಂಗತಿಯೇ ಆಗಿತ್ತು. ಆದರೆ ಅಲ್ಲಿಯವರೆಗೆ ಬರಲಿಕ್ಕೆ ಇನ್ನೂ ತುಂಬಾ ಸಮಯ ಇತ್ತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಸಂತೃಪ್ತಿಯೆನ್ನುವುದು ಅಂತರಂಗದ ಸಮಾಚಾರ: ನಾಗಶ್ರೀ ಅಜಯ್‌ ಅಂಕಣ

ಪ್ರತಿ ಸಣ್ಣ ವಿಷಯವನ್ನು ದೊಡ್ಡದಾಗಿ ಚಿಂತಿಸುತ್ತಾ, ಹಳಹಳಿಕೆಯನ್ನೇ  ವ್ಯಸನವಾಗಿಸಿಕೊಂಡವರು, ಇರುವಷ್ಟು ಕಾಲ ತೃಪ್ತಿಯಿಂದ ಬದುಕುವವರು,ಸಾಧಕರು, ಸಾಮಾನ್ಯರು, ಪೀಡಕರು, ಪುಣ್ಯಕೋಟಿಯಂತಹವರು ಹೀಗೆ ತರಹೇವಾರಿ ಜನರು. ಒಬ್ಬೊಬ್ಬ ವ್ಯಕ್ತಿಗೆ ಒಂದೊಂದು ರೀತಿಯ ಸಮಸ್ಯೆಗಳಿದ್ದೇ ಇರುತ್ತವೆ. ಆದರೆ  ಹಳ್ಳಿಯವರೆಲ್ಲ ಮುಗ್ಧರು, ಸಿಟಿಯವರೆಲ್ಲ ಸ್ಥಿತಿವಂತರು, ಓದಿದವರು ಪೆದ್ದರು, ಕಡಿಮೆ ಓದಿದವರು ವ್ಯವಹಾರ ಚತುರರು, ಮಕ್ಕಳೆಲ್ಲಾ ದೇವರಂತಹವರು…. ಈ ರೀತಿಯ ಜನಪ್ರಿಯ ಕುರುಡು ನಂಬಿಕೆಗಳ ಪಟ್ಟಿಯಲ್ಲಿ ಹಿರಿಯರೆಲ್ಲ ಒಂದೇ ಎಂಬುದು ಕೂಡ ಸೇರಿದೆ ಅಲ್ಲವೆ. ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣದಲ್ಲಿ ಹೊಸ ಬರಹ ಇಂದಿನ ಓದಿಗೆ.

Read More

ಗುಡುಗು, ಮಿಂಚು ಸುರಿಸುವ ಮಾಂತ್ರಿಕರು: ಇ.ಆರ್. ರಾಮಚಂದ್ರನ್ ಅಂಕಣ

ಆ ಪಂದ್ಯದಲ್ಲಿ ವಿವಿಎಸ್ 167 ರನ್ ಹೊಡೆದರು… ಚಚ್ಚಿದರು ಅನ್ನುವ ಪದ ಇನ್ನೂ ಸರಿಹೋಗಬಹುದು. ಮಿಕ್ಕವರ ಸ್ಕೋರ್? ಗಂಗೂಲಿ 25, ಬೋಲರ್‌ಗಳಾದ ಕುಂಬ್ಳೆ, ಶ್ರಿನಾಥ್ ತಲಾ 15! ಮಿಕ್ಕವರೆಲ್ಲರೂ ಒಂದು ಅಂಕಕ್ಕೆ ಔಟಾದರು! ಎಕ್ಸ್ಟ್ರಾಸ್ 21! ವಿಶೇಷವೆಂದರೆ ಆಸ್ಟ್ರೇಲಿಯಾದ ಹೆಸರಾಂತ ಬೋಲರ್‌ಗಳಾದ ಶೇನ್ ವಾರ್ನ್‌ 13 ಓವರ್‌ಗಳಿಗೆ 60 ರನ್ ಮತ್ತು ಫಾಸ್ಟ್ ಬೋಲರ್ ಬ್ರೆಟ್ ಲೀ 11 ಓವರ್‌ಗೆ 67 ರನ್‌ ಕೊಟ್ಟಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ವಿವಿಎಸ್ ಲಕ್ಷ್ಮಣ್ ಮತ್ತು ವೀರೇಂದ್ರ ಸೆಹ್ವಾಗ್ ಕುರಿತ ಬರಹ ನಿಮ್ಮ ಓದಿಗೆ

Read More

ಸಂಗೀತ-ನೃತ್ಯ ರೂಪಕದೊಳಗೆ ಎಲ್ಲರಿಗೂ ಸಲ್ಲುವ ಅಮೆರಿಕೆಯ

ಹೊಸ ದೇಶವನ್ನು ರೂಪಿಸಲು ಹೆಣಗಾಡುತ್ತಿದ್ದ ತನ್ನ ನಾಯಕ ಜಾರ್ಜ್ ವಾಷಿಂಗ್ಟನ್ ಅವರಿಗೆ ತೋಳ್ಬಲ ಕೊಟ್ಟು ರಾಜಕೀಯದಲ್ಲಿನ ಭುಜಬಲನಾದ. ಹೊಸ ಅಮೆರಿಕಾದ ಮೊಟ್ಟಮೊದಲ ಅಧ್ಯಕ್ಷರಾದ ವಾಷಿಂಗ್ಟನ್ ಅವರ ಸರಕಾರದಲ್ಲಿ ಪ್ರಮುಖ ಪದವಿಗಳನ್ನು ನಿರ್ವಹಿಸುತ್ತಾ ತನ್ನನ್ನು ತಾನೇ ದೇಶೀಯ ಮಟ್ಟದಲ್ಲಿ ಒಬ್ಬ ನಂಬಿಕೆಯ ರಾಜಕಾರಣಿ, ರಾಜನೀತಿ ತಜ್ಞನಾಗಿ ರೂಪಿಸಿಕೊಂಡ ಹ್ಯಾಮಿಲ್ಟನ್ ತನ್ನ ಅಲ್ಪಾಯಸ್ಸಿನ ಕಾಲದಲ್ಲಿ ಅಮೆರಿಕಾವನ್ನು ಒಂದು ಸುಸಂಸ್ಥಿತ ದೇಶವನ್ನಾಗಿ ರೂಪಿಸಲು ಅನೇಕ ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ