Advertisement

Category: ಅಂಕಣ

ಹೊಸ ಹಾದಿಯಲ್ಲಿ ನಡಿಗೆಯ ಸವಾಲುಗಳು..: ಎಸ್ ನಾಗಶ್ರೀ ಅಜಯ್ ಅಂಕಣ

ಕೇಳಿದವರಿಗೆ ಏನು ಮಹಾ ಎನ್ನಿಸುವ ಸಣ್ಣಪುಟ್ಟ ವಿಚಾರಗಳು ಹೊಸ ವಾತಾವರಣದಲ್ಲಿ ಚಪ್ಪಲಿಯೊಳಗೆ ಸೇರಿದ ಮರಳಿನ ಕಣದಂತೆ ಒತ್ತುತ್ತಿರುತ್ತವೆ. ಒಂದೇ ಜಾತಿ, ಉಪಜಾತಿ, ಪಂಗಡದಲ್ಲೇ ಮದುವೆಯಾದರೂ ಮನೆಯ ಪದ್ಧತಿ, ಸಂಪ್ರದಾಯ, ಇಷ್ಟಾನಿಷ್ಟಗಳಲ್ಲಿ ಹಲವು ವ್ಯತ್ಯಾಸಗಳು. ಬೆರಳು ಚುರಕ್ಕೆನ್ನುವಷ್ಟು ಸುಡುವ, ಹಬೆಯಾಡುವ ಊಟ ಇಷ್ಟಪಡುವ ಮನೆಯಿಂದ, ತಣ್ಣಗೆ ಆರಿ ಅಕ್ಷತೆಯಾದ ಅನ್ನ, ಉಗುರುಬೆಚ್ಚಗಿನ ಸಾರು ತಿನ್ನುವ ಮನೆಗೆ ಬಂದರೆ ತುತ್ತು ಗಂಟಲಿನಿಂದ ಕೆಳಗಿಳಿಯಲ್ಲ.
ಎಸ್ ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ತಿಜೋರಿಯಿಂದ ತಪ್ಪಿಸಿಕೊಂಡ ಘಳಿಗೆಗಳೆಷ್ಟೋ…: ಆಶಾ ಜಗದೀಶ್ ಅಂಕಣ

ಸುಮ್ಮನೇ ತಟ್ಟೆಯ ಮುಂದೆ ಕುಳಿತು ಸಮಯ ಉರುಳದಂತೆ, ಈ ತುತ್ತು ಮತ್ತಾರದೋ ಚೀಲ ಸೇರಲಿ ಎಂದಷ್ಟೇ ಪ್ರಾರ್ಥಿಸುತ್ತಾ… ಇಷ್ಟೇ ಅಲ್ಲವಾ ಈ ಬದುಕು ಎನ್ನುವ ಅಂತಿಮ ಸತ್ಯದ ದರ್ಶನವಾದಾಗ ಯಾವುದೆಲ್ಲವನ್ನು ಬೇಕು ಎಂದುಕೊಳ್ಳುತ್ತಿದ್ದೇವೋ ಅದಾವುದೂ ನಮ್ಮ ಆತ್ಯಂತಿಕ ಜರೂರತ್ತಿನ ಪಟ್ಟಿಯಲ್ಲಿ ಇರಲೇ ಇಲ್ಲ ಎನ್ನುವುದನ್ನು ಪ್ರಯಾಸದಿಂದ ಮನಗಾಣುತ್ತಾ… ಯಾವುದೂ ಪೂರ್ಣವಲ್ಲ ಇಲ್ಲಿ… ಈ ರೈಲು ಬಂಡಿ, ನಾವು ಹತ್ತುವ ಮುಂಚೆಯೇ ಪಯಣ ಆರಂಭಿಸಿತ್ತು ಮತ್ತು ನಾವು ಇಳಿದ ನಂತರವೂ ಪಯಣಿಸುತ್ತಲೇ ಇರುತ್ತದೆ..
ಆಶಾ ಜಗದೀಶ್ ಅಂಕಣ “ಆಶಾ ಲಹರಿ”

Read More

ಕಾಲಕ್ಕೆ ಶರಣು ಎನ್ನೋಣ: ವಿನತೆ ಶರ್ಮ ಅಂಕಣ

ವಾರಾಂತ್ಯಗಳಲ್ಲಿ ದೇಶದ ರಾಜಧಾನಿ ನಗರಗಳಲ್ಲಿ ನಡೆಸುವ ಸಾರ್ವಜನಿಕ ಪ್ರದರ್ಶನಗಳು, ಬಹುಸಂಸ್ಕೃತಿಗಳವರ ಕಾರ್ಯಕ್ರಮಗಳು ಹೆಚ್ಚಾಗಿವೆ. ೨೦೨೩ ರ ಕೊನೆಯಲ್ಲಿ ನಾವು ಮೂರು, ನಾಲ್ಕು ಬಾರಿ ಇಸ್ರೇಲ್, ಪ್ಯಾಲೆಸ್ಟೈನ್-ಗಾಝಾ, ಯೂಕ್ರೇನ್ ಮೂಲಗಳ ಜನರು ನಡೆಸುತ್ತಿದ್ದ ಪ್ರದರ್ಶನಗಳ ಪರಿಣಾಮಕ್ಕೆ ಸಿಲುಕಿದ್ದೆವು. ಅದೇನೂ ದೊಡ್ಡ ವಿಷಯವಲ್ಲ ಬಿಡಿ. ಪ್ರದರ್ಶನದಲ್ಲಿ ಭಾಗವಹಿಸಿದ್ದ ಪ್ರತಿರೋಧಿಗಳು ಘೋಷಣೆಗಳನ್ನು ಕೂಗುತ್ತಾ ರಸ್ತೆಗಿಳಿದಾಗ ಪೊಲೀಸರು ರಸ್ತೆ ಬಂದ್ ಮಾಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಆರಂಭ

ಪ್ರಯಾಣದ ಕನಸಿನಿಂದ ಥಟ್ಟನೆ ವಾಸ್ತವಕ್ಕಿಳಿದ ನೀಲಿ ನೀರಿನಾಳದಲ್ಲಿ ಹೊಳೆಯುತ್ತಿರುವ ನಾಣ್ಯಗಳನ್ನು ನೋಡುತ್ತಾ ನಡುಹೊಳೆಯಲ್ಲಿ ನಿಂತುಬಿಟ್ಟಳು. ಅವಳಿಗೀಗ ಇರುವುದು ಎರಡೇ ಅವಕಾಶಗಳು. ಒಂದೋ ದುಡ್ಡನ್ನು ಹೊಳೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗುವುದು, ಇಲ್ಲವೆಂದರೆ ಅಂಗಿ ಒದ್ದೆಯಾಗುವ ಪರಿವೆಯಿಲ್ಲದೇ ಹೊಳೆಯೊಳಗೆ ಒಮ್ಮೆ ಮುಳುಗಿ ದುಡ್ಡನ್ನು ಹೆಕ್ಕಿಕೊಳ್ಳುವುದು. ಒದ್ದೆಯಾದ ಅಂಗಿಯನ್ನು ಬದಲಿಸಿ ಬರಲು ಮನೆಗೆ ಹೋಗುವಷ್ಟು ಸಮಯವಿಲ್ಲ.
ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೊಸ ಅಂಕಣ “ಹೊಸ ಓದು” ಆರಂಭ

ಶತಮಾನಗಳ ಹಿಂದಿನ ಕಥೆಗಳ ಆಶಯಕ್ಕೆ ಈ ಕಾಲಘಟ್ಟದ ಉತ್ತರಗಳ ಮಾದರಿಯ ಕಥೆಗಳನ್ನು ಬಯಲು ಮತ್ತು ಬೆಳಕು ಎಂಬರ್ಥದಲ್ಲಿ ಕತೆಗಾರ ನಿರೂಪಣೆಯ ಕ್ಯೂರೆಟರ್ ಮತ್ತು ದೃಷ್ಟಿಕೋನದ ಗ್ರಾಫರ್ ಆಗಿರಬೇಕೆನ್ನುವ ಪೊನ್ನಾಚಿ ಅವರ ಕಥೆಗಳು ಪ್ರತಿಪಾದಿತ ಮತ್ತು ಸಾಧಿತ ಕಥೆಗಳು ಪ್ರತಿನಿಧಿಸುವ ವಸ್ತು ಹಳೆಯದಾದರೂ ಕಥೆಗಳ ಅಂತ್ಯ ಪ್ರಗತಿಪರತೆಯನ್ನು ಎತ್ತಿ ಹಿಡಿದಿವೆ.
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆಯುವ ಹೊಸ ಕೃತಿಗಳ ಪರಿಚಯಿಸುವ ಹೊಸ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ