Advertisement

Category: ಅಂಕಣ

ಸಿಹಿ ಕೊಟ್ಟರೆ ಅಳುತ್ತಿದ್ದ ಮಂದಿ…

ಸುತ್ತ ಎತ್ತ ನೋಡಿದರೂ ರಾಕ್ಷಸಾಕಾರದ ಗುಡ್ಡಗಳು, ತುಂಬಿ ಹರಿಯುತ್ತಿದ್ದ ನದಿಗಳು. ಅಲ್ಲಿ ನಮ್ಮಂತೆ ಗುಂಪು ಗುಂಪು ಮನೆಗಳಾಗಲಿ ಹಳ್ಳಿಗಳಾಗಲಿ ಇಲ್ಲ. ಗುಡ್ಡಗಳಲ್ಲಿಯೇ ಹಳ್ಳಿಗಳು. ಅರ್ಧ ಕಿಲೋಮೀಟರ್ ಒಂದು, ಕಿಲೋಮೀಟರ್ ಅಂತರದಲ್ಲಿ ಒಂದೊಂದು ಮನೆಗಳು. ವಾಹನಗಳಿಗಿಂತ ಕುದುರೆಗಳೆ ಸಂಚಾರಕ್ಕೆ ಆಸರೆಗಳು. ನಮ್ಮ ತಂಡ ಮೊದಲೆ ತಯಾರಿಸಿ ಇಟ್ಟ ಅಡುಗೆ ಸಾಮಗ್ರಿಗಳ, ಬಟ್ಟೆ, ಹಾಸಿಗೆ ಹೊದಿಕೆಗಳ ಕಿಟ್ಟನ್ನು ಪ್ರತಿ ಮನೆಗೂ ತಲುಪಿಸಿ ಅವರಿಗೊಂದಿಷ್ಟು ಸಾಂತ್ವಾನ ಹೇಳಿ ಬರುತ್ತಿತ್ತು. ಶಾಲೆಗೆ, ದುಡಿಯಲು, ಕೊಂಡಕೊಳ್ಳಲು ಹೊರಗೆ ಹೋದವರು ಮರಳಿ ಹೆಣವಾಗಿ ಸಿಗುತ್ತಿದ್ದರು.
ಇಸ್ಮಾಯಿಲ್‌ ತಳಕಲ್‌ ಬರೆಯುವ ‘ತಳಕಲ್‌ ಡೈರಿ’ಯಲ್ಲಿ ಹೊಸ ಬರಹ ನಿಮ್ಮ ಓದಿಗೆ

Read More

ರೂಪಾತೀತ, ಗಾತ್ರಾತೀತ, ಕಾಲಾತೀತ ಶಿವ….

ಮಧ್ಯಪ್ರದೇಶದ ಭೋಜಪುರದಲ್ಲಿರುವ ಭೋಜೇಶ್ವರ, ತಮಿಳುನಾಡಿನ ತಂಜಾವೂರಿನ ಬೃಹದೇಶ್ವರ ಲಿಂಗ ನೆನಪಾಗುತ್ತದೆ. ಕೆಲವು ಮನೆತನಗಳ ಸಂಪ್ರದಾಯದಲ್ಲಿ ನದಿ ಮತ್ತು ಸಮುದ್ರ ತೀರದಲ್ಲಿ ವಾಸಿಸುವ ಜನರು ಪ್ರತಿದಿವಸ ಅದೇ ನೀರಿನಲ್ಲಿ ಸ್ನಾನ ಮಾಡಿ ಅಲ್ಲಿ ಸಿಗುವ ಮರಳಿನಲ್ಲಿ ಒಂದು ಲಿಂಗವನ್ನು ರಚಿಸಿ ಪೂಜಿಸಿ ಮತ್ತೆ ಅದನ್ನು ನೀರಿನಲ್ಲಿ ಅಂದೇ ವಿಸರ್ಜಿಸಿ ಮನೆಗೆ ಬರುವುದೂ ಉಂಟು. ಇದನ್ನು ವಿದ್ಯಾನಿವಾಸ್‌ ಮಿಶ್ರಾ ಒಂದು ಕಡೆ ಬರೆಯುತ್ತಾರೆ. ಮನುಷ್ಯ ಕಟ್ಟಿರುವ ಲಿಂಗಗಳಲ್ಲದೆ ಅನೇಕ ಕಡೆಗಳಲ್ಲಿ ಉದ್ಭವ ಲಿಂಗಗಳು ಸಿಗುತ್ತವೆ.
‘ದೇವಸನ್ನಿಧಿ’ ಅಂಕಣದಲ್ಲಿ ಶಿವನ ಹಲವು ರೂಪ, ರೂಪಕಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಮೂಡ್ನಾಕೂಡು ಚಿನ್ನಸ್ವಾಮಿ ಅವರ ಕೊರೊನಾ ಕವಿತೆಗಳು

ದಾರಿ ತಪ್ಪಬಾರದೆಂದು ರೈಲು ಹಳಿಯ ಹಿಡಿದು ಹೊರಟ ಮುಗ್ಧ ಜನಗಳು ದೇಶದೆಲ್ಲೆಡೆ ಸಾರ್ವಜನಿಕ ಸಮಚಾರ ನಿರ್ಬಂಧವಾಗಿರುವಾಗ ಈ ಹಳಿಯಮೇಲೆ ಒಂದಿಷ್ಟು ಹೊತ್ತು ವಿರಮಿಸೋಣವೆಂದು ಮಲಗಿರುತ್ತಾರೆ. ದುರಾದೃಷ್ಟವಶಾತ್ ಗೂಡ್ಸ್ ರೈಲು ಹರಿದು ಹಳಿಯ ಮೇಲೆ ಮಲಗಿದ್ದವರು ಶವಗಳಾಗುತ್ತಾರೆ. ಅವರ ಪಕ್ಕವೇ ಬಿದ್ದಿದ್ದ ರೊಟ್ಟಿ ಚೂರುಗಳು, ರಕ್ತಸಿಕ್ತ ಮಾಂಸದ ತುಂಡುಗಳಾದ ಅಮಾಯಕ ಹೆಂಗಸರು ಮಕ್ಕಳು ಇಡೀ ದೇಶವನ್ನು ಮರುಗುವಂತೆ ಮಾಡುತ್ತವೆ.
ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಮೂಡ್ನಾಕೂಡು ಚಿನ್ನಸ್ವಾಮಿಯವರ “ಕೊರೊನಾ” ಕವನ ಸಂಕಲನದ ಕುರಿತ ಬರಹ ಇಲ್ಲಿದೆ

Read More

ಆಸ್ಟ್ರೇಲಿಯಾದ ‘ಬಿಗ್ ಥಿಂಗ್ಸ್’ ಆಕರ್ಷಣೆಗಳು

ಏನಿದು ‘ಬಿಗ್ ಥಿಂಗ್ಸ್’ ಎಂದು ಮೊದಲ ಬಾರಿ ಕೇಳಿದಾಗ ನನ್ನ ಆಸ್ಟ್ರೇಲಿಯನ್ ಸ್ನೇಹಿತೆಯ ಗಂಡ ಬಲು ಸೊಗಸಾಗಿ ವಿವರಿಸಿದ್ದರು. ಒಂದೂರಿನ ಜನರು ಸೇರಿ ತಮಗೆ ಆಪ್ತವೆನಿಸಿದ ಹಣ್ಣು, ಆಹಾರ, ಪ್ರಾಣಿ, ಪಕ್ಷಿ, ಮರ ಇತ್ಯಾದಿಗಳಲ್ಲಿ ಒಂದನ್ನು ಆರಿಸಿಕೊಂಡು ಅದನ್ನು ದೊಡ್ಡ ಗಾತ್ರದ ಶಿಲ್ಪ ಕೃತಿಯಾಗೋ, ಲೋಹ ಕಲಾ ಕೃತಿಯಾಗಿಯೋ ನಿರ್ಮಿಸಿ ಹೆಮ್ಮೆಯಿಂದ ಆ ಪ್ರತಿಮೆಯನ್ನು ತಮ್ಮೂರಲ್ಲಿ ಸ್ಥಾಪಿಸುವುದು. ಕ್ರಮೇಣ ಅದಕ್ಕೆ ಪ್ರಚಾರ ಕೊಟ್ಟು ಅದನ್ನು ದೇಶದ ‘ಬಿಗ್ ಥಿಂಗ್ಸ್’ ಪಟ್ಟಿಗೆ ಸೇರುವಂತೆ ಮಾಡುವುದು. ಇದರಿಂದ ಆ ಊರಿಗೆ ಅದೇನೋ ವಿಶೇಷ ಗುರುತು ಸಿಕ್ಕಿದಂತಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಇದ್ದ ಮೂವರಲ್ಲಿ ಕದ್ದವರು ಯಾರು?

ಹಿಂದೊಮ್ಮೆ ಹುಸೇನ್ ಸಾಬ್‌ಗೆ ಹೊಲ ಮಾಡಲು ಕೊಟ್ಟಾಗ ಸುತ್ತಲೂ ಒಂದೈವತ್ತು ಅಪ್ಪೆ ಮಿಡಿ ಗಿಡಗಳನ್ನು ನೆಟ್ಟಿದ್ದೆ. ಸ್ವಲ್ಪ ಬೆಳೆದಾದ ಮೇಲೆ ಪೂರ್ತಿ ಗಿಡಗಳನ್ನು ಬೆಂಕಿ ಹಚ್ಚಿ ಇಲ್ಲದಂತೆ ಮಾಡಿದ್ದರು. ಬೆಂಕಿ ಹಚ್ಚಿದ್ದು ಯಾರು ಅಂತ ಕೊನೆಗೂ ಗೊತ್ತಾಗಲಿಲ್ಲ. ಒಬ್ಬರ ಮೇಲೆ ಒಬ್ಬರು ಹಾಕಿ ನನ್ನನ್ನು ಮಂಗ ಮಾಡಿದ್ದರು! ಇಲ್ಲಿನವರೆ ಕಳ್ಳರು, ಆ ಜಾತಿಯವರನ್ನು ನಂಬಬಾರದು ಅಂತೆಲ್ಲ ಹೇಳೋದೆಲ್ಲ ತಪ್ಪು. ಕಳ್ಳರದೇ ಒಂದು ಪ್ರತ್ಯೇಕ ಜಾತಿ! ಏನಾಗುತ್ತೋ ನೋಡೋಣ ಅಂತ ಸುಮ್ಮನಾದೆ. ಆದರೂ ಮುಂದೊಮ್ಮೆ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಬೇಕು ಅಂತ ನಿರ್ಧರಿಸಿದೆ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 17ನೇ ಕಂತು

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ