Advertisement

Category: ಅಂಕಣ

ಬೆಳೆದ ಅಕ್ಕಿಯ ಉಣ್ಣುವ ತವಕ…: ಗುರುಪ್ರಸಾದ ಕುರ್ತಕೋಟಿ ಅಂಕಣ

ಇದೊಂಥರ ವೈರುಧ್ಯ. ಚೆನ್ನಾಗಿದೆ ಆದರೂ ತಿನ್ನೋಲ್ಲ! ಯಾಕಿರಬಹುದು? ಬಹುಶಃ ಬೆಳ್ಳಗೆ ಪಾಲಿಶ್ ಮಾಡಿದ ರೇಷನ್ ಅಕ್ಕಿಯನ್ನು ತಿಂದು ತಿಂದು ಅವರಿಗೆ ರೂಡಿ ಆಗಿಬಿಟ್ಟಿದೆಯೋ ಏನೋ. ತವಡನ್ನು ತೆಗೆದು ಅದರಲ್ಲಿ ಏನೂ ಇರದಂತೆ ಮಾಡಿ ಪಾಲಿಶ್ ಮಾಡಿ ಕೊಡುವ ಅಕ್ಕಿಯೇ ಎಲ್ಲರಿಗೂ ಪ್ರಿಯ. ಶ್ರೀಮಂತರು ಅಷ್ಟೇ ಯಾಕೆ ತಿನ್ನಬೇಕು ಎಲ್ಲರೂ ತಿನ್ನೋಣ ಅಂತ ಇವರೂ ಪಾಲಿಶ್ ಅಕ್ಕಿಯ ಮೊರೆ ಹೋದರೆ? ಇದೆ ಕಾರಣಕ್ಕೆ ಶ್ರೀಮಂತರಿಗೆ ಬರುವ ಸಕ್ಕರೆ ಕಾಯಿಲೆ, ಹೃದಯ ರೋಗ ಈಗ ಎಲ್ಲರಿಗೂ ಬರುತ್ತಿದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ನೋವಿನಲ್ಲೂ ನಗುವುದ ಕಲೀಬೇಕು: ನಾಗಶ್ರೀ ಅಜಯ್‌ ಅಂಕಣ

“ಕೆಲವೊಮ್ಮೆ ಈ ಗಂಡ, ಮಗು, ಸಂಸಾರ, ದುಡಿಮೆ, ಸಂಪಾದನೆ, ಕೊಂಕು ಮಾತು, ಅನಾರೋಗ್ಯ ಎಲ್ಲದರಿಂದ ಬಹಳ ದೂರ ಹೋಗಿ, ನಾನೊಬ್ಬಳೇ ಪ್ರಶಾಂತವಾಗಿ ಕೆಲಕಾಲ ಕಳೆಯಬೇಕನ್ನಿಸುತ್ತೆ. ಆದರೆ ಎಲ್ಲಿ ಹೋಗುವುದು? ಹೀಗೆ ವಾಸ್ತವ ಹಿಂಸೆಯೆನಿಸಿದಾಗೆಲ್ಲ, ಬೇಸರದಲ್ಲೇ ಕತ್ತಲಕೋಣೆಯಲ್ಲಿ ಉಳಿಯುವುದರ ಬದಲು, ಮನೆತುಂಬ ಬೆಳಕಾಗುವಂತೆ ಝಗಮಗಿಸಿ, ಸ್ನಾನ ಮಾಡಿ, ನಾನು ಹೊಸದಾಗಿ ಕೊಂಡ ಬಟ್ಟೆ ತೊಟ್ಟು, ನನಗೇ ಹೆಮ್ಮೆಯಾಗುವಷ್ಟು ಚೆಂದಕ್ಕೆ ಅಲಂಕರಿಸಿಕೊಂಡು ಅರ್ಧಗಂಟೆ ಕನ್ನಡಿಯ ಮುಂದೆ ನಗುಮುಖದಲ್ಲಿ ಕೂತಿರುತ್ತೇನೆ.”
ಎಸ್. ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣದಲ್ಲಿ ಹೊಸ ಬರಹ

Read More

150 ವರ್ಷಗಳ ಕ್ರಿಕೆಟ್ ಟೆಸ್ಟ್‌ಗಳಲ್ಲಿ ಎರಡೇ ‘ಟೈ’ ಮ್ಯಾಚುಗಳು!: ಇ.ಆರ್. ರಾಮಚಂದ್ರನ್ ಅಂಕಣ

ಕೊನೆಯ ರನ್ – ಗೆಲುವಿನ ರನ್ ಇಯನ್ ಮೆಕಿಫ್ ಓಡುತ್ತಿದ್ದಾಗ ಜೊ ಸೊಲೊಮನ್ ಬಾಲನ್ನು ಅಟ್ಟಿಸಿಕೊಂಡು ಹೋಗಿ ಹಿಡಿದು ಅದನ್ನು ವಿಕೆಟ್‌ಗೆ ಎಸೆದು ಮೆಕಿಫ್‌ಅನ್ನು ರನ್ ಔಟ್ ಮಾಡಿದರು. ಸೋಲೊಮನ್ ಬಾಲ್ ಎಸೆದಾಗ ಮೂರು ವಿಕೆಟ್‌ಗಳಿದ್ದರೂ ಅವರು ಸ್ಕೊಯರ್ ಲೆಗ್‌ನಲ್ಲಿ ಇದ್ದುದ್ದರಿಂದ ಆ ಜಾಗದಿಂದ ಅವರಿಗೆ ಕಾಣಿಸುತ್ತಿದ್ದ ವಿಕೆಟ್ ಒಂದೇ! ಅವರು ಗುರಿ ಇಟ್ಟು ಹೊಡೆದು ವಿಕೆಟ್‌ಗೆ ಬಿದ್ದು ಮೆಕಿಫ್ ರನ್ ಔಟಾದರು. ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಟೆಸ್ಟ್‌ಮ್ಯಾಚ್‌ಗಳಲ್ಲಿ ಇದುವರೆಗೂ ಆದ ಎರಡು ಟೈ ಮ್ಯಾಚುಗಳ ಕುರಿತ ಬರಹ ನಿಮ್ಮ ಓದಿಗೆ

Read More

ಕೇಂದ್ರೀಯ ಬಜೆಟ್‌ನ ಉಪಕಥೆಗಳು: ಡಾ. ವಿನತೆ ಶರ್ಮ ಅಂಕಣ

ಇತ್ತೀಚೆಗೆ ವಿದ್ಯಾರ್ಥಿನಿಯೊಬ್ಬಳು ಹೇಳಿದಂತೆ ಯೂನಿವರ್ಸಿಟಿಯ ಸಹಪಾಠಿಯೊಬ್ಬರು ತಮ್ಮ ಕಾರಿನಲ್ಲಿ ಬದುಕುತ್ತಿದ್ದರಂತೆ. ರಾತ್ರಿ ಸಮಯ ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿಕೊಂಡಿರುವುದು, ಒಳಗೆ ಮುದುರಿಕೊಂಡು ಮಲಗುವುದು. ಬೆಳಿಗ್ಗೆ ಎದ್ದು ಯೂನಿವರ್ಸಿಟಿಗೆ ಬಂದು ಅಲ್ಲಿದ್ದ ಟಾಯ್ಲೆಟ್, ಶವರ್ ಸೌಲಭ್ಯಗಳನ್ನು ಬಳಸಿಕೊಂಡು, ಕೆಫೆಯಲ್ಲಿ ವಿದ್ಯಾರ್ಥಿಗಳಿಗೆ ಸಿಕ್ಕುವ ರಿಯಾಯ್ತಿ ದರದಲ್ಲಿ ಕಾಫಿ, ಸ್ಯಾಂಡ್ವಿಚ್ ಮತ್ತು ಉಚಿತ ಹಣ್ಣು ಪಡೆಯುವುದು. ದಿನಪೂರ್ತಿ ಯೂನಿವರ್ಸಿಟಿ ಕಟ್ಟಡದೊಳಗೇ ಇದ್ದುಕೊಂಡು ಒಂದಷ್ಟು ವ್ಯಾಸಂಗ, ನಿದ್ದೆ ಮಾಡುವುದು. ರಾತ್ರಿ ಪುನಃ ಕಾರಿಗೆ ವಾಪಸ್.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಕೊನೆಗೂ ಕೈಗೆ ಬಂದ ಭತ್ತ!: ಗುರುಪ್ರಸಾದ ಕುರ್ತಕೋಟಿ ಅಂಕಣ

ಎರಡು ಟ್ರಾಕ್ಟರ್ ಮೇಲೆ ಸ್ವಲ್ಪ ಹೆಚ್ಚು ಭತ್ತ ಸಿಕ್ಕಿತ್ತು. ಅದು ಹೆಚ್ಚು ಕಡಿಮೆ 25 ಚೀಲ ಆಗುತ್ತೆ ಎಂಬ ಅಂದಾಜು ಸಿಕ್ಕಿತು. ಒಂದು ಚೀಲ ಅರವತ್ತು ಕೆಜಿ ತೂಕ. ಹೀಗಾಗಿ ನಮಗೆ ಸಿಕ್ಕಿದ್ದು 1500 ಕೆಜಿ ಭತ್ತ. ಅದನ್ನು ಅಕ್ಕಿ ಮಾಡಿಸಿದರೆ ಹೆಚ್ಚು ಕಡಿಮೆ 1೦೦೦ ಕೆಜಿ ಅಕ್ಕಿ ಸಿಕ್ಕೀತು. ಅದು ಪ್ರಥಮ ಬಾರಿ ಬೆಳೆದ ನಮ್ಮ ಮಟ್ಟಿಗೆ ತುಂಬಾ ಹೆಮ್ಮೆಯ ಸಂಗತಿಯೇ ಆಗಿತ್ತು. ಆದರೆ ಅಲ್ಲಿಯವರೆಗೆ ಬರಲಿಕ್ಕೆ ಇನ್ನೂ ತುಂಬಾ ಸಮಯ ಇತ್ತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ