Advertisement

Category: ಅಂಕಣ

“ಸರ್ವೆ” ಜನಾಃ ದುಃಖಿನೋಭವಂತು!

ಅಂತೂ ಇಂತೂ ಅಲ್ಲಿನ ಸೊಸೈಟಿಯಲ್ಲಿ ನಮ್ಮ ಖಾತೆ ತೆರೆದಿದ್ದು ಆಯ್ತು. ಬೆಳೆ ಸಾಲವಂತೂ ಸಿಕ್ಕಿತು. ಸ್ವಲ್ಪ ಉಸಿರಾಡುವಂತಾಯ್ತು. ಬೇಲಿ ಕಟ್ಟಲು ಸಾಲವನ್ನು ಮುಂದಿನ ವರ್ಷ ಕೊಡುತ್ತೇವೆ ಅಂತ ಅಲ್ಲಿನವರು ಹೇಳಿದರಾದರೂ ಒಂದು ಹೆಜ್ಜೆಯಾದರೂ ಮುಂದೆ ಬಂದೆನಲ್ಲ ಅಂತ ಖುಷಿಯಾಗಿತ್ತು. ಈ ಎಲ್ಲ ಪ್ರಕ್ರಿಯೆಗಳಲ್ಲಿ ಶಂಭುಲಿಂಗ ಹೆಗಡೆ ಮಾವನ ಪಾತ್ರ ತುಂಬಾ ದೊಡ್ಡದು. ಅವರಿಲ್ಲದಿದ್ದರೆ ನನಗೆ ಇಷ್ಟೆಲ್ಲ ಸುಲಭದಲ್ಲಿ ಸೊಸೈಟಿ ಸಾಲ ಸಿಗುತ್ತಿರಲಿಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಕ್ರಿಕೆಟ್ ಮೈದಾನಗಳು ಮತ್ತು ಕಾಮೆಂಟೇಟರ್ಸ್‌

ಭಾರತದಲ್ಲಿ ಮುಂಚೆ ಟೆಸ್ಟ್ ಮ್ಯಾಚುಗಳು ಆಡುವುದಕ್ಕೆ ಇದ್ದ ಮೈದಾನಗಳು ಕೇವಲ 5. ದೆಹಲಿ, ಮುಂಬೈ, ಕಲ್ಕತ್ತಾ, ಕಾನ್ಪುರ ಮತ್ತು ಮದ್ರಾಸ್ ನಗರಗಳಲ್ಲಿ. ದೆಹಲಿಯ ಫಿರೋಜ್ ಕೋಟ್ಲ, ಮುಂಬೈಯ ಬ್ರೇಬರ್ನ್‌ ಸ್ಟೇಡಿಯಂ, ಕಲ್ಕೊತಾದ ಈಡನ್ ಗಾರ್ಡನ್ಸ್, ಕಾನ್ಪುರದ ಗ್ರೀನ್ ಪಾರ್ಕ್‌, ಮತ್ತು ಚೆನ್ನೈನ ಚೆಪಾಕ್ ಸ್ಟೇಡಿಯಂ. ಆಮೇಲೆ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ, ಹೈದರಾಬಾದಿನ ಲಾಲ್ ಬಹದ್ದೂರ್ ಸ್ಟೇಡಿಯಂ ಇತ್ಯಾದಿ ಬಂದವು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಸೋಕಿದ ಕಹಿಯನ್ನು ಒಳಗಿಳಿಸಿಕೊಳ್ಳದೆ, ಸಿಹಿಯನಷ್ಟೇ ಹಂಚುತ್ತಾ….

೫೭ ವರ್ಷಗಳ ತಮ್ಮ ಬದುಕಿನ ಪಯಣದ ಬಗ್ಗೆ ಅವರ ಮಾತಿನಲ್ಲಿ ಸಂತೃಪ್ತಿಯಿತ್ತು. ಸವಾಲು, ಸಮಸ್ಯೆ, ಸಣ್ಣತನ, ಮೋಸ, ರಾಜಕೀಯಗಳ ಬಗ್ಗೆ ಒಂದು ಶಬ್ದವನ್ನೂ ವ್ಯಯಿಸದೆ, ತಮ್ಮ ಜ್ಞಾನ, ಉದಾತ್ತ ವಿಚಾರಗಳು, ಸಕಾರಾತ್ಮಕ ಸಂಗತಿಗಳ ಬಗ್ಗೆ ನಿರರ್ಗಳವಾಗಿ ಮಾತನಾಡಿದರು. ಅಲ್ಲಿ ಕೃತಕತೆಗೆ, ಕೃತ್ರಿಮಕ್ಕೆ ಆಸ್ಪದವೇ ಇರಲಿಲ್ಲ. ಅವರೊಳಗಿನ ಶುದ್ಧ ಆನಂದವನ್ನು ಸುತ್ತ ಪಸರಿಸುವ ಬೆಳಕಿನ ನದಿಯಂತೆ ಹರಿದರು. ಮಾತಾಡಿದರು. ನೃತ್ಯ ಮಾಡಿದರು. ಅದೊಂದು ಅನಿರ್ವಚನೀಯ ಅನುಭವ.
ಎಸ್. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಕುಂಭಮೇಳದ ನೆನಪುಗಳು….

ನನಗೆ ತಣ್ಣಗಿನ ನೀರೆಂದರೆ ನಡುಕ. ಹಾಗಾಗಿ ನೀರಿನಲ್ಲಿ ಮುಳುಗಲು ಹಿಂದು ಮುಂದು ನೋಡುತ್ತಿದ್ದೆ. ಹಾಗೇ ನೋಡಿ ವಾಪಸ್‌ ಬರುವುದು ಅಂತ ನನ್ನ ಇರಾದೆ ಇತ್ತು. ನನ್ನ ಸ್ನೇಹಿತೆ ಸಂಗಮದಲ್ಲಿ ಸ್ನಾನ ಮಾಡುವೆ ಎಂದಾಗ ಅವರ ಜೊತೆ ಹೋದೆ. ಒಂದು ದೋಣಿ ನದಿಯ ಸಂಗಮದ ಜಾಗಕ್ಕೆ ಕರೆದುಕೊಂಡು ಹೋಯಿತು. ಅಲ್ಲಿ ಬಟ್ಟೆ ಬದಲಿಸಲು ಒಂದು ತಡಿಕೆಯನ್ನು ಮಾಡಿದ್ದರು ದೋಣಿಯ ಮೇಲೆಯೇ. ನಾನೂ ನೀರಿನಲ್ಲಿ ಇಳಿದು ಮುಳುಗು ಹಾಕಿ ಬರುತ್ತೀನಿ ಅಂದುಕೊಂಡರೂ ಯಾಕೋ ಆಗುತ್ತಲೇ ಇರಲಿಲ್ಲ.
‘ದೇವಸನ್ನಿಧಿ’ ಅಂಕಣದಲ್ಲಿ ಕುಂಭಮೇಳಕ್ಕೆ ಭೇಟಿ ನೀಡಿದ ಅನುಭವದ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಅಲ್ಲಿಯ ಇಲ್ಲಿಯ ಬೆಲೆಯೇರಿಕೆ ಕಥೆಗಳು

ಉದ್ಯೋಗ ಬೇಟೆಯಲ್ಲಿರುವ ಜನರಿಗೆ ಕೊಡುವ ಧನಸಹಾಯ ಆ ಒಬ್ಬ ವ್ಯಕ್ತಿಯ ಜೀವನಕ್ಕೇ ಸಾಲದಾಗಿದೆ. ಬೇಸತ್ತು ಯಾವುದಾದರೂ ಸರಿಯೇ ಹೇಗಾದರೂ ಸರಿಯೇ ಕೆಲಸವನ್ನು ಹಿಡಿಯೋಣವೆಂದು ಹೊರಟರೆ ಆ ಉದ್ಯೋಗದಿಂದ ಬರುವ ಆದಾಯ ಏತಕ್ಕೂ ಸಾಲುವುದಿಲ್ಲ. ತಮಗೆ ಒಗ್ಗದ ಉದ್ಯೋಗವನ್ನು ಮಾಡುವ ಅನಿವಾರ್ಯತೆ ಹಲವರಲ್ಲಿ ಮಾನಸಿಕ ಕ್ಷೋಭೆಯನ್ನುಂಟು ಮಾಡುತ್ತದೆ. ಮಾನಸಿಕ ರೋಗಗಳು ಕಾಣಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ