Advertisement

Category: ಅಂಕಣ

ಅಪ್ಪಂತನದ ವ್ಯವಸ್ಥೆಗೆ ಬೆತ್ತಲೆಯ ಗೀಳು!: ಸುಕನ್ಯಾ ಕನಾರಳ್ಳಿ ಅಂಕಣ

ನಮ್ಮ ಮಟ್ಟಿಗೆ ಹೇಳುವುದಾದರೆ ಇಂದೊಂದು ತೀರಾ ಅಸಂಭಾವ್ಯವೂ, ಅಸಂಬದ್ಧವೂ ಆದ ಕಲ್ಪನೆಯಾಗಿದೆ. ಹನ್ನೆರಡನೆಯ ಶತಮಾನದಷ್ಟು ಹಿಂದಿನ ಆ ಪರಿಸರದಲ್ಲಿ ಹೆಣ್ಣೊಬ್ಬಳು ಅವಳೆಂಥ ಅನುಭಾವಿಯಾಗಿದ್ದರೂ, ಬೆತ್ತಲೆಯಾಗಿ, ಕೂದಲನ್ನು ಮರೆಮಾಡಿಕೊಂಡು ಸಂಚರಿಸಿದಳೆಂಬುದು ಅತ್ಯಂತ ಅಸಂಗತವೂ, ಅನುಚಿತವೂ ಆದ ಭ್ರಮಾಕಲ್ಪನೆಯಾಗಿ ಮಾತ್ರ ತೋರುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೆರಡನೆಯ ಬರಹ

Read More

ನಿಮಿಷಗಳನ್ನು ಕಡೆಗಣಿಸಿದವರು…: ವಿನಾಯಕ ಅರಳಸುರಳಿ ಅಂಕಣ

ಬಿಡುವಿನ ನಿಮಿಷಗಳಲ್ಲಿ ನಾವು ಕೈಗೊಳ್ಳುವ ಚಿಕ್ಕ ಚಿಕ್ಕ ವ್ಯವಸ್ಥಿತ ಕಾರ್ಯಗಳು ನಮ್ಮ ಒಳಗನ್ನು ರೂಪಿಸುತ್ತವೆ. ಮಲಗಿ ಎದ್ದ ದಿಂಬನ್ನು ಹಾಸಿಗೆಯ ತುದಿಯಲ್ಲಿ ಒಪ್ಪವಾಗಿ ಇಡುವುದಕ್ಕೂ, ಕೊಂಚ ಕೆಳಗೆ ಹಾಗೇ ಬಿಡುವುದಕ್ಕೂ ನಡುವಿನ ಅಂತರ ಕೆಲವೇ ಸೆಂಟೀಮೀಟರುಗಳಷ್ಟಾದರೂ ಅದನ್ನು ಆ ಎರಡು ಬೇರೆ ಬೇರೆ ಜಾಗಗಳಲ್ಲಿಟ್ಟ ವ್ಯಕ್ತಿಯ ವ್ಯಕ್ತಿತ್ವದ ನಡುವಿನ ವ್ಯತ್ಯಾಸ ಮೈಲಿಗಳಷ್ಟು! ಇನ್ನು ನಮ್ಮ ಇನ್ನೊಂದು ಸಮಸ್ಯೆಯೆಂದರೆ ಹೆಚ್ಚಿನ ಸಲ ನಮ್ಮನ್ನು ಹೆಚ್ಚಾಗಿ ತೊಡಗಿಸಿಕೊಂಡಿದ್ದರೂ ಆದಾಯವಲ್ಲದ ಕಾರ್ಯಗಳ ಆಳಕ್ಕೆ ನಾವು ಇಳಿಯುವುದೇ ಇಲ್ಲ‌.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಯುದ್ಧ, ಇಂಧನಗಳ ತಕ್ಕಡಿಯಲ್ಲಿ ನಾವು: ಡಾ. ವಿನತೆ ಶರ್ಮ ಅಂಕಣ

ಪೆಟ್ರೋಲ್ ಕಾರ್ ಓಡಿಸುವ ನನ್ನ ಮುಖದಲ್ಲಿ ಚಿಂತೆಯ ಗೆರೆಗಳು ಹೆಚ್ಚಾಗಿವೆ. ಹಾಗೆಯೆ ಟ್ರಂಪಣ್ಣನನ್ನು ಬಯ್ಯುವುದೂ ಜಾಸ್ತಿಯಾಗಿದೆ. ಅವರಿಗೆ ತಮ್ಮ ಮತಕೊಟ್ಟು, ಸರ್ಕಾರದ ಯಂತ್ರವನ್ನು ದುರುಪಯೋಗ ಮಾಡಲು ಅಧಿಕಾರ ಕೊಟ್ಟ ಅಮೆರಿಕನ್ನರಿಗೂ ಒಂದಷ್ಟು ಬಯ್ಗುಳ. ಕೇವಲ ಒಂದು ದೇಶವು ಇಡೀ ಪ್ರಪಂಚದ ಮೇಲೆ ವಜ್ರಮುಷ್ಠಿ ಹತೋಟಿಯನ್ನು ಇಟ್ಟುಕೊಂಡಿರುವುದು ಆಶ್ಚರ್ಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಬದುಕಿನ ರಾಗದ ಅವರೋಹಣ – ವೃದ್ಧಾಪ್ಯವೆಂಬ ಜೀವನಪದವಿ!: ಡಾ. ಎಲ್.ಜಿ. ಮೀರಾ ಅಂಕಣ

ಸಾಮಾನ್ಯವಾಗಿ, ಬದುಕಿನ ಈ ಹಂತದ ಸಕಾರಾತ್ಮಕ ಚಿತ್ರಣವು ಅದೃಶ್ಯವಾಗಿರುತ್ತೆ ಅಥವಾ ನಕಾರಾತ್ಮಕವಾಗಿರುತ್ತೆ. ಇದರಿಂದಾಗಿ ಈ ಜೀವನದ ಬಗ್ಗೆ ಯೋಜನೆ, ಯೋಚನೆ, ಪೂರ್ವಚಿಂತನೆಗಳು ಸರಿಯಾಗಿ ನಡೆಯುವುದಿಲ್ಲ. ಆದರೆ, ವೈದ್ಯಕೀಯ ಕ್ಷೇತ್ರದಲ್ಲಿ ಆದ ಅದ್ಭುತ ಮುನ್ನಡೆಗಳಿಂದಾಗಿ ಮಾರಾಣಾಂತಿಕ ರೋಗಗಳಿಂದ ಮನುಕುಲವು ಮುಕ್ತಿ ಪಡೆದುಕೊಂಡು, ಮನುಷ್ಯನ ಸರಾಸರಿ ಆಯುಸ್ಸು ಹೆಚ್ಚಿ, ತಮ್ಮ 60ನೇ ವಯಸ್ಸಿನಲ್ಲಿ ವೃತ್ತಿಯಿಂದ ನಿವೃತ್ತಿಗೊಂಡ ಮೇಲೂ ಜನರು ಸುಮಾರು 20ರಿಂದ 40 ವರ್ಷಗಳ ತನಕ ಬದುಕುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತನೆಯ ಬರಹ

Read More

ಕನ್ನಡ ಸಿನಿಮಾದ ನಿಜವಾದ ‘ಹೊಸ ಹೆಣ್ಣು’ ಹುಟ್ಟಿದ್ದು ತ್ರಿವೇಣಿಯ ‘ಬೆಳ್ಳಿಮೋಡ’ದಲ್ಲಿ: ಸುಕನ್ಯಾ ಕನಾರಳ್ಳಿ ಅಂಕಣ

ಲೀಲಾಳ ಅಣ್ಣ ಈಗ ಮಧ್ಯ ಪ್ರವೇಶಿಸಿ ಕುಟುಂಬವೆಂಬ ಸಂಸ್ಥೆಯ ‘ಸಹಜತೆ’ಯನ್ನು ಮರಳಿಸುವ ಪ್ರಯತ್ನ ಮಾಡುತ್ತಾನೆ. ಎಲ್ಲದಕ್ಕೂ ತನ್ನ ಅಪ್ಪನೇ ಕಾರಣ ಎಂದು ದೂರುತ್ತಾನೆ. ಸಾಯುವ ಮುನ್ನ ಲೀಲಾ ತನ್ನ ತಾಯಿಯನ್ನು ಕಾಣುವ ಹಂಬಲದಲ್ಲಿ ಕೊರಗುತ್ತಾಳೆ. ಅಪ್ಪ ತಾನು ಮಾಡಿದ ತಪ್ಪಿನ ಅರಿವಾಗಿ ಹುಚ್ಚು ಹಿಡಿದು ಬೀದಿ ಬೀದಿ ಅಲೆಯುತ್ತಾ ಕೊನೆಯ ಉಸಿರೆಳೆಯುತ್ತಾನೆ. ಲೀಲಾಳ ಅಣ್ಣ ಅತ್ತಿಗೆ ಮಕ್ಕಳೆಲ್ಲರೂ ‘ಒಳ್ಳೆಯ’ ಕುಟುಂಬದಲ್ಲಿ ಬದುಕಬೇಕು ಎಂದು ನೀತಿಪಾಠ ಹೇಳುವುದರೊಂದಿಗೆ ಚಿತ್ರ ಮುಗಿಯುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೊಂದನೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ