Advertisement

Category: ಅಂಕಣ

ಅನ್ ರಿಯಲ್ ಲೋಕದಲ್ಲಿ ಶಾಂತಿ ಮಂತ್ರ ಜಪ

ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿಯಾಗಿದ್ದಾಗ ಈ ಬಲು ದೀರ್ಘ ಪ್ರೋಸ್/ ಪೊಯೆಟ್ರಿ, ನವ್ಯ ಕಾವ್ಯ ಬಹಳ ದಿನಗಳ ಕಾಲ ನನ್ನನ್ನು ಕಾಡಿತ್ತು. ಅದನ್ನು ಕೈಲಿ ಹಿಡಿದುಕೊಂಡು ಎಲ್ಲವನ್ನೂ ಬಿಟ್ಟು ಯಾವುದೊಂದೂ ವ್ಯವಸ್ಥೆಗೆ ಸಿಲುಕದೆ ಪ್ರಪಂಚ ಸುತ್ತುವ ಇರಾದೆ ಹುಟ್ಟಿತ್ತು. ಆ ಕಾಲದಲ್ಲಿ ಅವು ನಾನು ಮನೆಬಿಟ್ಟು ಹೋಗುವ, ಹುಟ್ಟಿ ಬೆಳೆದ ಕುಟುಂಬವನ್ನು ತ್ಯಜಿಸುವ ನಿರ್ಧಾರ ತೆಗೆದುಕೊಂಡಿದ್ದ ದಿನಗಳು. ಕಾಲೇಜು ಹುಡುಗಿ ಮನೆಬಿಟ್ಟು ಹೋದಮೇಲೆ ಹೇಗೆ ಬದುಕುವುದು ಎನ್ನುವ ಚಿಂತನೆಯಲ್ಲಿದ್ದ ದಿನಗಳು. ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕಳೆ ಕತ್ತರಿಸುವ ಯಂತ್ರ ಎಂಬ ಅದ್ಭುತ ಸಾಧನ

ನನ್ನ ಕಾರ್‌ನಲ್ಲಿ ಹಿಂದಿನ ಸೀಟು ಖಾಲಿ ಇತ್ತು. ಹಾಗೆಯೇ ಹೋಗುತ್ತಾ ನಾಲ್ಕು ಹುಡುಗರಿಗೆ ಶಾಲೆಯವರೆಗೆ ಲಿಫ್ಟ್ ಕೊಡೋಣ ಅನಿಸಿತು. ಒಂದು ಹುಡುಗರ ಗುಂಪಿನ ಪಕ್ಕ ಗಕ್ಕಂತ ನಿಲ್ಲಿಸಿದೆ. ನಾನು ಏನೋ ಹೇಳುವಷ್ಟರಲ್ಲಿ ಒಬ್ಬ ಹುಡುಗ ಹಿಂದೆ ಓಡಲು ಶುರು ಮಾಡಿದ. ಅವನ ಜೊತೆಗೆ ಉಳಿದ ಹುಡುಗರೂ ಓಡತೊಡಗಿದರು! ಅಯ್ಯೊ ದೇವ್ರೆ ನನ್ನನ್ನ ಕಿಡ್ನ್ಯಾಪರ್‌ ಅಂದುಕೊಂಡರೋ ಏನೋ!? ಉಪಕಾರ ಮಾಡೋದು ಬೇಡವೇ ಬೇಡ ಅಂತ ನಾನು ಮುಂದೆ ಹೊರಟೆ. ನನ್ನ ಮುಖವನ್ನು ಕಾರಿನ ಕನ್ನಡಿಯಲ್ಲಿ ನೋಡಿಕೊಂಡೆ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

ಭಾರತದ ಕ್ರಿಕೆಟ್‍ನ ಸ್ಪಿನ್ನರ್ಸ್‌ಗಳು – 2

ನಿಧಾನವಾಗಿ ನಡೆದು ಬಂದು ಬೋಲಿಂಗ್ ಮಾಡುತ್ತಿದ್ದ ಬೇಡಿ ಅವರ ಬೋಲಿಂಗ್‌ನಲ್ಲಿ ಬಹಳ ಚಾಣಾಕ್ಷರಾಗಿದ್ದರು ಮತ್ತು ನಿಸ್ಸೀಮರು. ಒಂದು ಬಾಲು ನಿಧಾನವಾಗಿ ಬಂದರೆ ಮತ್ತೊಂದು ರಭಸದಿಂದ ಬಂದು ವಿಕೆಟ್ ಉರುಳಿಸಿ ಹೋಗುವುದು! ಇಷ್ಟಾಗಿ ಅವರ ಬೋಲಿಂಗ್ ಶೈಲಿಯಲ್ಲಿ ಕಿಂಚಿತ್ತೂ ವ್ಯತ್ಯಾಸವಿರುತ್ತಿರಲಿಲ್ಲ! ಒಂದು ಓವರ್‌ನಲ್ಲಿ 6 ವಿಧವಾಗಿ ಬಾಲು ಮಾಡುವ ಪ್ರತಿಭೆ ಹೊಂದಿದ್ದ ಬೇಡಿಯವರ ಬೋಲಿಂಗ್‌ಅನ್ನು ಹೇಗೆ ಆಡುವುದಪ್ಪ ಎಂದು ಬ್ಯಾಟ್ಮನ್‌ರನ್ನು ಕಾಡುತ್ತಿತ್ತು, ಯಾಕೆಂದರೆ ಏನು ಮಾಡಿದರೂ ಅವರು ನಡೆಯುವ ಶೈಲಿ, ರೀತಿ, ಹಾವಭಾವ ಯಾವುದರಲ್ಲೂ ಬದಲಾವಣೆ ಇರುತ್ತಿರಲಿಲ್ಲ.
ಇ.ಆರ್. ರಾಮಚಂದ್ರನ್ ಬರೆಯುವ ಅಂಕಣ

Read More

‘ಒಂದು ಅಂಕ ಮುಗಿದು’ ಧ್ಯಾನಿಸುತ್ತಾ….

‘ತುಂಬೆಗಿಡ ಮತ್ತು ಹುಡುಗಿ’ ಸತ್ತು ಮಣ್ಣಾದ ಹುಡುಗಿಯೊಬ್ಬಳ ಸಮಾಧಿಮೇಲೆ ನೆಟ್ಟ ತುಂಬೆ ಗಿಡದ ವಿಷಯವಿರುವ ಕವಿತೆ. ಬದುಕಿನ ಉತ್ತರಗಳ ಹಂಗು ಹುಡುಗಿಗೂ, ತುಂಬೆಗಿಡಕ್ಕೂ ಇಲ್ಲ. ಬದುಕಿನ ನಶ್ವರತೆಗಳು, ಹುಟ್ಟು, ಸಾವಿನ ಕುರಿತು ಏಳುವ ಜಿಜ್ಞಾಸೆಗಳು ಕವಯತ್ರಿಯ ಭಾವಾತ್ಮಕತೆಯ ತೀವ್ರತರ ಹುಡುಕಾಟವನ್ನು ದರ್ಶಿಸುತ್ತವೆ. ‘ನೀನೆ ಒಂದು ಅಪೂರ್ಣ ಚಿತ್ರ’ ಕವಿತೆಯೂ ಬದುಕಿನ ಎಲ್ಲಾ ಕ್ಷಣಗಳಿಗೆ ಮುಖಾಮುಖಿಯಾಗಿ ಮುಪ್ಪಿನಲ್ಲಿ ಹಿಂದಿನ ಪುಟಗಳನ್ನು ತಿರುವಿಹಾಕುವ ವ್ಯಕ್ತಿಯೊಬ್ಬನ ಕುರಿತು ಬರೆದ ಕವಿತೆ.
ಅಭಿಷೇಕ್‌ ವೈ.ಎಸ್. ಬರೆಯುವ ಅಂಕಣ “ಕಾವ್ಯದ ಹೊಸ ಕಾಲ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ