Advertisement

Category: ಅಂಕಣ

ರಷ್ಯಾದ ಭೌಗೋಳಿಕ ಕಥನ…

ಒಂದುವೇಳೆ ಬೆಂಗಳೂರು ಸಮುದ್ರಮಟ್ಟಕ್ಕಿಂತ ಒಂದು ಮುನ್ನೂರು ಮೀಟರ್ ಕೆಳಗಿದ್ದಿದ್ದರೆ? ಅರಬ್ಬೀ ಸಮುದ್ರದ ಮೂಲಕ ಬಂದ ಗಾಳಿ ಪಾಲ್ಘಾಟ್ ಗ್ಯಾಪಿನ ಕಾರಣ ಪಶ್ಚಿಮ ಘಟ್ಟಗಳಿಗೆ ಅಪ್ಪಳಿಸದೇ ಊಟಿ ತಲುಪಿ ಅಲ್ಲಿ ತಂಪುಗೊಂಡು ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿ ಈಗಿನ ಎತ್ತರಕ್ಕೆ ತಡೆಯಿರದ ಕಾರಣ ಮುಂದೆ ಹೋಗಿಬಿಡುತ್ತಿತ್ತು. ಈಗಿನ ಅತ್ಯುತ್ತಮ ಹವಾಮಾನ ಇರುತ್ತಲೇ ಇರಲಿಲ್ಲ. ಹೈದರಾಲಿ ಮತ್ತು ಟಿಪ್ಪು ಲಾಲ್‌ಬಾಗ್ ನಿರ್ಮಿಸುತ್ತಲೇ ಇರಲಿಲ್ಲ. ಮೈಸೂರು ಅರಸರಿಗೆ ಪ್ರಿಯವಾದ ಜಾಗವಾಗುತ್ತಲೇ ಇರಲಿಲ್ಲ. ಬ್ರಿಟಿಷರಿತೆ ತಮ್ಮ ಊರನ್ನು ನೆನಪಿಸುವ ಪ್ರದೇಶವೂ ಆಗುತ್ತಿರಲಿಲ್ಲ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 2

ಪಾಕಿಸ್ತಾನದ ಶೊಯೆಬ್ ಅಖ್ತರ್ ಮೊದಲ ಬಾರಿ ಬೋಲಿಂಗ್ ಮಾಡಿದಾಗ ಅವರ ವೇಗವನ್ನು ನೋಡಿ ಜಗತ್ತೇ ತತ್ತರಿಸಿ ಹೋಗಿತ್ತು. ಜೊತೆಗೆ ಶೋಯೆಬ್‌ರ ಹಾವಭಾವ, ತನ್ನನ್ನು ಬಿಟ್ಟರಿಲ್ಲ ಎಲ್ಲಾರನ್ನೂ ಮುಗಿಸಿ ಬಿಡ್ತಿನಿ ಅನ್ನುವ ಮನೋಭಾವ ಎಲ್ಲರಲ್ಲೂ ಸ್ವಲ್ಪ ದಿಗಿಲು ಹುಟ್ಟಿಸಿತ್ತು. ವಿಶ್ವ ಕಪ್‌ಗೆ ಮೊದಲಬಾರಿ ಅವರು ಆಡಿದಾಗ ಸಚಿನ್ ಇವರ ಬೋಲಿಂಗನ್ನು ಥಳಿಸಲು ಪಣ ತೊಟ್ಟರು. ಇವರ ಬೋಲಿಂಗನ್ನು ಹಿಗ್ಗಾ ಮುಗ್ಗಾ ಬಾರಿಸಿ ಇವರು ಹುಲಿಯಲ್ಲ, ಹುಲಿ ವೇಶ ಹಾಕಿದ ಸಾಧು ಪ್ರಾಣಿ ಕುರಿ ಅಷ್ಟೇ, ಇವರಿಂದ ಏನೂ ಭಯಪಡಬೇಕಾಗಿಲ್ಲ ಎಂದು ತೋರಿಸಿ ಕೊಟ್ಟರು ಸಚಿನ್!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕರಿಯಣ್ಣ ಕೆಂಚಣ್ಣರೆಂಬ ಜಾನಪದ ದೈವಗಳು

ನಿಧಾನವಾಗಿ ಜನ ಆಗ ತಾನೆ ಸ್ನಾನ ಮಾಡಿ, ಒಪ್ಪ ಓರಣ ಮಾಡಿಕೊಂಡು ಬರಲಾರಂಭಿಸಿದ್ದರು. ಭಜನೆಯ ವೇಳೆಯಲ್ಲಿ ಗುಡಿಗೆ ಬರುವಾಗ ಸ್ನಾನ ಮಾಡಿ ಬರುವ ಪದ್ಧತಿಯೂ ಗಮನಾರ್ಹ. ದಿನವಿಡೀ ಹೊಲಗದ್ದೆಗಳಲ್ಲಿ ದುಡಿಯುವ ವರ್ಗ ದುಡಿಮೆ ಮುಗಿಸಿಕೊಂಡು ಮನೆಗೆ ಬಂದು ಸ್ನಾನ ಮಾಡಿ ದೇವಾಲಯಕ್ಕೆ ಬರಲು ಸಂಜೆ ೭.೩೦ ಕಡಿಮೆ ಆಗುವುದಿಲ್ಲ ಅಂತ. ಅದಕ್ಕೇ ಇಡೀ ದೇವಾಲಯ ಗಲಗಲ ಅನ್ನಲು ೮ ಗಂಟೆ ತನಕ ಬೇಕಾಯಿತು. ನನ್ನ ವಾಪಸ್‌ ಊರಿಗೆ ಹೋಗುವ ಆತುರಕ್ಕೆ ಅರ್ಥವಿಲ್ಲ ಅಂತ ತಿಳಿದು ಮುಗಿದಾಗ ಹೊರಡೋದು ಅಂತ ತೀರ್ಮಾನಿಸಿ ವಾಚ್‌ ನೋಡಿಕೊಳ್ಳುವುದನ್ನು ಬಿಟ್ಟು ತೆಪ್ಪಗೆ ಕುಳಿತುಕೊಂಡೆ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ

Read More

ಮಾನವೀಯತೆಗಾಗಿಯೇ ಜೀವ ತೇದವರ ನೆನೆಯುತ್ತಾ…

‘ವರ್ಣ’ ಅಪ್ಪಟ ದಲಿತ ಜಗತ್ತಿನ ಪ್ರಾತಿನಿಧಿಕ ಕವಿತೆ. ಕವಿ ಸುಮ್ಮನೆ ಎಲೆಮರೆಯ ಕಾಯಿಯಂತಿದ್ದರೂ ಬಿಡದೆ ಪ್ರಚೋದಿಸಿ ಅಖಾಡಕ್ಕೆ ಕರೆದು ಕೊನೆಗೆ ಮಣ್ಣುಮುಕ್ಕುವ ಉಢಾಳರಿಗೆ ಎಚ್ಚರಿಕೆಯಂತಿದೆ ಈ ಕವಿತೆ. “ಹಸಿರು, ಕೆಂಪು, ಕಪ್ಪು, ಬಣ್ಣಗಳೊಳಗೆ ಕರಗಿಹೋದ ದಲಿತರ ನೆತ್ತರು ಮತ್ತು ಬೆವರು ಉಳ್ಳವರನ್ನು ಉಸಿರುಗಟ್ಟಿ ಸಾಯಿಸಿದರೆ ಆಶ್ಚರ್ಯಪಡಬೇಕಿಲ್ಲ”. ‘ಹಸಿವು’ ಕವಿತೆ ಅವ್ವನ ಉದಾರತನವನ್ನೂ ಆಕೆಯ ಸಂಸ್ಕಾರವನ್ನೂ ದರ್ಶಿಸಿ ದಂಗುಬಡಿಸುತ್ತದೆ. ಹಸಿವು ಎಂದು ಬಂದವರಿಗೆ ತನ್ನ ಪಾಲಿನ ತಟ್ಟೆಯಲ್ಲಿದ್ದ ಹಿಟ್ಟನ್ನು ಕೊಟ್ಟುಬಿಡುತ್ತಾಳೆ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣ

Read More

ಸಾಂಘಿಕವಾದ ಕ್ರಿಸ್ಮಸ್ ಸೀಸನ್ ಶುಭಾಶಯಗಳು

ಬಹುಶಃ ಪ್ರಪಂಚದಾದ್ಯಂತ ಕೋಟ್ಯಾಂತರ ಮಕ್ಕಳು ಎದುರು ನೋಡುವ, ಹಾಗೆ ಗಪ್ ಚಿಪ್ ಆಗಿ ಚಿಮಿಣಿಯಲ್ಲಿ ಸಾಂಟಾ ಬಂದು ಕೊಡುವ ಉಡುಗೊರೆಗಾಗಿ ಕಾಯುವ ಯಾವೊಂದು ಮಗುವಿಗೂ ನಿರಾಸೆಯಾಗದ ಸಂದರ್ಭ ಈ ಕ್ರಿಸ್ಮಸ್ ಸೀಸನ್. ಇದು ‘giving’ ಸೀಸನ್. ಅಂದರೆ ನಾವು ಮನಃಪೂರ್ವಕವಾಗಿ ಕೈಲಾದಷ್ಟು ದಾನ ಮಾಡುವ ಕಾಲ. ನಾವು ಕೊಡುವ ದಾನವು ಹಣದಿಂದ ಹಿಡಿದು ಬಟ್ಟೆ, ಉಡುಗೆತೊಡುಗೆ, ಮನೆವಸ್ತುಗಳು, ಪೀಠೋಪಕರಣಗಳು, ಪುಸ್ತಕಗಳು, ಆಹಾರ ಪದಾರ್ಥ, ಎಂಬಂತೆ ನಾನಾತರಹವಾಗಿ ನಾವು ದಾನವೀಯಬಹುದು.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ