Advertisement

Category: ಅಂಕಣ

ಆಳದ ದನಿ ತುಂಬಾ ಕ್ಷೀಣವಾಗಿರುತ್ತೆ..

ಪುಣ್ಯ ಕೊನೆಯ ಬಾರಿ ಮಾತನಾಡಿದ್ದು ಇದೆ ಒಂದು ವಾರದ ಕೆಳಗೆ. ಅವನ ಶಾಲಾ ವಾರ್ಷಿಕೋತ್ಸವದಲ್ಲಿ… ಈ ರಗಳೆಗಳೆಲ್ಲ ಶುರುವಾದದ್ದು ಸುರಭಿಯಿಂದಲೇ ಎನ್ನಬೇಕು. ಆರನೇ ತರಗತಿ ಓದುತ್ತಿದ್ದ ಸುರಭಿ, ಒಂದು ದಿನ ಶಾಲೆಯಿಂದ ಬಂದದ್ದೆ ಜೋರಾಗಿ ಅಳತೊಡಗಿದಳು. ‘ಅಣ್ಣ ಹುಡುಗಿ ತರ ಆಡ್ತಾನೆ ಅಂತ ಎಲ್ಲರು ನಂಗೆ ಹೆಣ್ಣಿಗನ ತಂಗಿ ಅಂತ ಆಡ್ಕತಾರೆ…ಕಾಡಿಸ್ತಾರೆ. ನಾಳೆಯಿಂದ ಶಾಲೆಗೇ ಹೋಗಲ್ಲ!’ ಎಂದು ರಂಪ ಮಾಡತೊಡಗಿದ್ದಳು. ಅಂದಿನಿಂದಲೇ ಪ್ರತಾಪ್ ಇವನನ್ನ ಸರಿ ಮಾಡಲು ಶುರುಮಾಡಿದ್ದು… ಪುಣ್ಯನ ದನಿ ಹುಡುಗಿಯ ದನಿಯನ್ನು ಹೋಲುತ್ತಿತ್ತು. ದಾದಾಪೀರ್‌ ಜೈಮನ್‌ ಬರೆಯುವ ʻಜಂಕ್ಷನ್‌ ಪಾಯಿಂಟ್‌ʼ ಅಂಕಣದ ಹೊಸ ಬರಹ

Read More

ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ಕ್ರಮೇಣ ನಮಗೆ ಊರು ಪರಿಚಯವಾಗತೊಡಗಿತ್ತು. ಅದು ತುಂಬಾ ಮುಖ್ಯ. ಯಾವ ಊರಿನಲ್ಲಿ ನಾವು ಬೆಳೆಯಲು ಬಯಸುತ್ತೇವೋ ಅಲ್ಲಿನ ಜನರ ಜೊತೆಗೆ ಬೆಳೆಯಬೇಕೆ ವಿನಹ ನಮ್ಮಷ್ಟಕ್ಕೆ ನಾವು ಇರಲು ಸಾಧ್ಯವಿಲ್ಲ. ಇದೆ ರೀತಿ ನಾವು ನಮ್ಮ ಹೊಲದ ಬಳಿಯ ಜನರಿಗೂ ಹತ್ತಿರವಾಗಬೇಕಿತ್ತು. ಅದು ಇನ್ನೂ ಸಾಧ್ಯವಾಗಿರಲಿಲ್ಲ. ನಮಗಿನ್ನೂ ಅಲ್ಲೊಂದು ಮನೆ ಸಿಕ್ಕಿರಲಿಲ್ಲ. ಆದರೆ ಅದಕ್ಕಿಂತ ಮೊದಲು ಶಂಭುಲಿಂಗ ಹೆಗಡೆ ಅವರು ನಮಗೆ ಸಿಕ್ಕಿದ್ದು ತುಂಬಾ ಅನುಕೂಲ ಆಗಿತ್ತು. ಅವರು ನಮಗೆ ಬೇಕಾದ ಮೂಲಭೂತ ಸೌಕರ್ಯಗಳನ್ನೆಲ್ಲ ಚಿಟಿಕೆ ಹೊಡೆದಂತೆ ಕೊಡಿಸಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣದಲ್ಲಿ ಹೊಸ ಬರಹ

Read More

ಒಣಎಲೆ ಗೊಬ್ಬರದ ಕಿರು ಕಥೆಗಳು

ಸುಮಾರು ಹತ್ತು ಎಕರೆ ಪ್ರದೇಶದಲ್ಲಿರುವ ನಗರಪಾಲಿಕೆ ಮರುಬಳಕೆ ಘಟಕದ ಒಂದು ಭಾಗದಲ್ಲಿ ಒಣ ಎಲೆಗೊಬ್ಬರ ವಿತರಣೆ ವ್ಯವಸ್ಥೆಯಿದೆ. ವಾರಾಂತ್ಯದಲ್ಲಿ ಮಧ್ಯಾಹ್ನ ಹನ್ನೆರಡರ ನಂತರ ಹೋದಾಗ ಕಂಡಿದ್ದು ಒಂದೆಡೆ ಒಂದಷ್ಟು ಜನರು ತಾವು ತಂದ ತ್ಯಾಜ್ಯ ಮತ್ತು ಹಸಿರು ಗಿಡಮರಗಳ ಭಾಗಗಳನ್ನು ಸುರಿಯುತ್ತಿದ್ದರು. ಬೆಳಗಿನ ಸಮಯದಲ್ಲಿ ಅಲ್ಲಿ ಹೋಗಲು ಸಾರ್ವಜನಿಕರಿಗೆ ಅನುಮತಿಯಿಲ್ಲ. ಆಗ ನಗರಪಾಲಿಕೆಯ ಯಂತ್ರಗಳು ಈ ಗಿಡಮರ ಭಾಗಗಳನ್ನು ಕತ್ತರಿಸಿ, ಅರೆದು ಅವನ್ನು ಒಯ್ದು ಒಂದು ಮೂಲೆಯಲ್ಲಿ ರಾಶಿ ಮಾಡುತ್ತಿರುತ್ತವೆ. ಡಾ. ವಿನತೆ ಶರ್ಮ  ಅಂಕಣ

Read More

ಕಾಡುವ ಕತೆಗಳ ರೂವಾರಿ….

ಆ ಕಾಲಘಟ್ಟ ಬಂಗಾಳದ ಮಟ್ಟಿಗೆ ಅದೊಂಥರಾ ವಿಚಿತ್ರ ಪರಿಸ್ಥಿತಿ. ಅತ್ಯಂತ ವಿದ್ಯಾವಂತ, ಬುದ್ಧಿವಂತರಾದ ಜನಸಮುದಾಯ. ಆದರೆ ಅಷ್ಟೇ ಕರ್ಮಠ ಆಚರಣೆಗಳಿಂದ ಜರ್ಜರಿತವಾಗುತ್ತಾ ಇದ್ದ ಸಮುದಾಯ. ಅತ್ತ ಶ್ರೀಮಂತ ಜಮೀನುದಾರರು ಮತ್ತು ಬಡ ಕೂಲಿ ಕಾರ್ಮಿಕರು ಹಾಗೂ ಗೇಣಿದಾರರು. ಧನಾತ್ಮಕ ಮತ್ತು ಋಣಾತ್ಮಕ ಎರಡೂ ಅಂಶಗಳಲ್ಲಿ ಅತಿರೇಕದ ತುದಿಗಳಲ್ಲಿದ್ದ ಸಮಾಜ. ಇದನ್ನು ಸುಧಾರಿಸಲು ದೊಡ್ಡ ಸಂಖ್ಯೆಯಲ್ಲೇ ಹುಟ್ಟಿಬಂದ ಸುಧಾರಣಾವಾದಿಗಳು. ಆಂಗ್ಲ ಶಿಕ್ಷಣದಿಂದ ಬಹಳ ಕ್ಷಿಪ್ರವಾಗಿ ಪ್ರಸರಣಗೊಂಡ ಪಾಶ್ಚಾತ್ಯ ಜ್ಞಾನ. ಆಂಗ್ಲರು ಕೂಡಾ ಪ್ರಭಾವಿತಗೊಳ್ಳುವಷ್ಟರ ಮಟ್ಟಿಗಿನ ಬುದ್ಧಿಮತ್ತೆ.

Read More

ಒನ್ಸ್ ಅಪಾನ್ ಎ ಟೈಮ್ ಇನ್ ಮುಂಬೈ

ನಾವಿದ್ದ ಅಪಾರ್ಟ್‌ಮೆಂಟಿನ ಮನೆಯನ್ನು ಸ್ವಚ್ಛ ಮಾಡಲು ಬರುತ್ತಿದ್ದ ಹದಿನೈದೋ ಹದಿನಾರೋ ಪ್ರಾಯದ ಬೆಂಗಾಲಿ ಹುಡುಗಿಯ ಬದುಕುವ ದರ್ದಿಗೆ ನಾನು ಬೆರಗಾಗಿದ್ದೆ. ಮಾತನಾಡಿಸಿದರೆ ಏನೊಂದೂ ಮಾತನಾಡದ, ಏನಾದರೂ ಪ್ರಶ್ನೆ ಕೇಳಿದರೆ ಸುಮ್ಮನೆ ನಕ್ಕುಬಿಡುತ್ತಿದ್ದ ಆ ಹುಡುಗಿ ತನ್ನ ತಾಯಿಯ ಜೊತೆಗೆ ಇಬ್ಬರು ತಂಗಿಯರನ್ನೂ ಬಂಗಾಳದ ಯಾವುದೋ ಹಳ್ಳಿಯಿಂದ ಕರೆದುಕೊಂಡು ಬಂದು ತಾನೊಬ್ಬಳೇ ದುಡಿಯುತ್ತಾ ಅವರನ್ನೆಲ್ಲಾ ಸಾಕುತ್ತಿದ್ದ ಪರಿ ನನ್ನಲ್ಲಿ ಸೋಜಿಗ ಹುಟ್ಟಿಸುತ್ತಿತ್ತು. ಮುಂಬೈಯಂತಹ ನಗರಗಳಲ್ಲಿ ಒಂಟಿ ಮಹಿಳೆಯರು ಒಂಟಿ ಹುಡುಗಿಯರು ಜೀವ ಕೈಯಲ್ಲಿ ಹಿಡಿದೆ ದುಡಿಯುತ್ತಿರುತ್ತಾರೆ.
ʻತಳಕಲ್‌ ಡೈರಿʼಯಲ್ಲಿ ಮುಂಬೈ ಮಹಾನಗರಿಯ ಬೆರಗಿನ ದಿನಗಳನ್ನು ಹಂಚಿಕೊಂಡಿದ್ದಾರೆ ಇಸ್ಮಾಯಿಲ್‌ ತಳಕಲ್‌

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ