Advertisement

Category: ಅಂಕಣ

ದೇವಾಲಯಗಳಲ್ಲಿ ಮಿಥುನ ಶಿಲ್ಪಗಳು

ಇನ್ನೊಂದು ಕುತೂಹಲಕರ ವಿಷಯ ಅಂದರೆ, ಆ ಕಾಲದ ಸಾಮಾಜಿಕ ಜೀವನದ ಮೇಲೆ ಬೆಳಕು ಚೆಲ್ಲುವ ಕೃತಿಗಳನ್ನು ರಚಿಸಿರುವ, ತಮ್ಮ ಪ್ರವಾಸದ ಕಥೆ ಹೇಳುತ್ತ ಅಂದಿನ ಜೀವನದ ಬಗ್ಗೆ ತಿಳಿಸುವ ಕಲಣ, ಬಿಲ್ಲಣ ಮುಂತಾದವರ ಕೃತಿಗಳಲ್ಲೂ ಕೂಡ ಯಾವ ಕಾರಣಕ್ಕೆ ದೇವಾಲಯಗಳಲ್ಲಿ ಮಿಥುನ ಶಿಲ್ಪಗಳನ್ನು ಕೆತ್ತುತ್ತಾರೆ ಎನ್ನುವುದರ ಬಗ್ಗೆ ಏನೂ ಮಾಹಿತಿ ಸಿಗುವುದಿಲ್ಲ. ಹಾಗಾಗಿ ಇದು ಅಂದಿನ ಸಾಮಾಜಿಕ ಜೀವನದಲ್ಲಿ ತುಂಬಾ ಸಹಜವಾದ ಭಾಗವಾಗಿರಬಹುದು.
‘ದೇವಸನ್ನಿಧಿ’ ಅಂಕಣದಲ್ಲಿ ಪುರಾತನ ದೇವಸ್ಥಾನಗಳಲ್ಲಿ ಕಾಣಸಿಗುವ ಮಿಥುನ ಶಿಲ್ಪಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಸಮಕಾಲೀನ ತಲ್ಲಣಗಳಿಗೆ ಹೆಗಲುಕೊಡುವ ಕವಿತೆಗಳು

ಮನುಷ್ಯ ಮಾಗಿದಷ್ಟೂ ಅವನ ಬರಹ ಪಕ್ವವಾಗುತ್ತದೆ ಎಂಬ ಮಾತು ಕೆಲವರಿಗೆ ಅಪವಾದವಾಗುತ್ತದೆ. ಸಮಾಜದ ತಲ್ಲಣಗಳಿಗೆ ಸ್ಪಂದಿಸುವ ಕವಿ ಮತ್ತು ಆತನ ಬರವಣಿಗೆಗಳು ಇಂಥ ದುರಿತ ಕಾಲಕ್ಕೆ ಖಂಡಿತ ಅವಶ್ಯಕತೆ ಇದೆ. ವಿಶಾಲ್ ಅವರ ಬರಹದ ನಡಿಗೆಯೂ ಸಮಸಮಾಜದ ನಿರ್ಮಿತಿಯ ಕಡೆಗೇ ಇದೆ. ಒಂದೊಂದು ಕವಿತೆಯಲ್ಲೂ ಅವರೇ ಕಂಡು, ಅನುಭವಿಸಿದ ನೋವುಗಳನ್ನು ಕಾವ್ಯದ ಮೂಲಕ ಹೊರಹಾಕಿದ್ದಾರೆ.
ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ವಿಶಾಲ್‌ ಮ್ಯಾಸರ್‌ ಕವನ ಸಂಕಲನ ‘ಬಟ್ಟೆಗಂಟಿದ ಬೆಂಕಿ’ಯ ಕುರಿತ ಬರಹ ಇಲ್ಲಿದೆ

Read More

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು: ಭಾಗ ಒಂದು

ಈ ಬಾರಿ ನಾವು ಹೂಡಿದ ‘ಅಡಿಗೆಮನೆ’ ಇದ್ದದ್ದು ಮರಗಳ ಅಂಚಿನಲ್ಲಿ. ಈ ಅಂಚಿನ ಆಚೆ ಕಡೆ ನೂರು ಮೀಟರ್ ದೂರದಲ್ಲಿ ನೀರಿಲ್ಲದೆ ಬೇಸಿಗೆಯ ಬಿಸಿಲಿಗೆ ಸೊರಗಿದ್ದ ನದಿಯಿತ್ತು. ಕಳೆದ ಫೆಬ್ರವರಿ-ಮಾರ್ಚ್ ತಿಂಗಳುಗಳಲ್ಲಿ ಸಂಭವಿಸಿದ ಅಧಿಕ ಮಳೆ-ಜಲ ಪ್ರವಾಹದಲ್ಲಿ ಈ ನದಿ ಉಕ್ಕೇರಿ ಆ ನೂರೂ ಮೀಟರ್ ದೂರವನ್ನಾಕ್ರಮಿಸಿಕೊಂಡು ಈ ಮರಗಳ ಅಂಚಿನ ತನಕ ಬಂದಿತ್ತು ಎನ್ನುವುದು ಅಲ್ಲಿ ಚೆಲ್ಲಾಡಿದ್ದ ಮರಕೊಂಬೆಗಳು, ರೆಂಬೆಗಳಿಂದ ಸ್ಪಷ್ಟವಾಗಿತ್ತು. ನಾವೇನೋ ಖುಷಿಯಿಂದಲೇ ಅಲ್ಲಿ ಅಡಿಗೆಮನೆ ಮತ್ತು ನೆಲದ ಹಾಸುಗಳನ್ನು ಸ್ಥಾಪಿಸಿದ್ದೆವು. ಒಂದೆರೆಡು ದಿನಗಳಲ್ಲಿ ಬಿದ್ದ ಮಳೆಯಿಂದ ನಮ್ಮ ಖುಷಿ ಕಡಿಮೆಯಾಯ್ತು. ನೆಲದ ಹಾಸು ಮಳೆನೀರು, ಮಣ್ಣಿನ ರಾಡಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನಿಮ್ಮ ಜಾತಿ ಯಾವುದು!

ಹೊಲದ ಹತ್ತಿರ ಅನ್ನುವ ಕಾರಣಕ್ಕೆ ನನಗೆ ಮನೆ ಇಷ್ಟವಾಯ್ತು. ಮನೆಯನ್ನು ಕೂಲಂಕುಷವಾಗಿ ನೋಡಿದ ಮೇಲೆ ಗೌಡರ ಜೊತೆಗೆ ಮಾತಾಡಲು ಅಲ್ಲೇ ಹತ್ತಿರವೇ ಇದ್ದ ಅವರ ಮನೆಗೆ ಹೋದೆ. ಹೆಸರು ಕೇಳಿದವರೆ ಯಾವ ಜಾತಿ ನಿಮ್ಮದು ಅಂದರು. ನನಗೆ ತುಂಬಾ ಇರುಸು ಮುರುಸು ಆಯ್ತು. ನಾನು ಯಾರಿಗೂ ಜಾತಿ ಕೇಳೋದಿಲ್ಲ, ನನಗೆ ಯಾರಾದರೂ ಕೇಳಿದರೂ ನನಗೆ ಆಗೋಲ್ಲ. ಆದರೆ ಹಳ್ಳಿಯಲ್ಲಿ ಜಾತಿ ವ್ಯವಸ್ಥೆ ಇನ್ನೂ ಗಟ್ಟಿಯಾಗಿಯೇ ಇದೆ. ನನ್ನ ಜಾತಿ ಯಾಕೆ ಬೇಕು ಅಂತ ಕೇಳಿದಾಗ “ಒಳ್ಳೆಯವರಿಗೆ ಕೊಡಬೇಕಲ್ರಿ ಮನಿ ಅದಕ್ಕ ಕೇಳತೀವಿ” ಅಂದರು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ರಷ್ಯಾದ ಭೌಗೋಳಿಕ ಕಥನ…

ಒಂದುವೇಳೆ ಬೆಂಗಳೂರು ಸಮುದ್ರಮಟ್ಟಕ್ಕಿಂತ ಒಂದು ಮುನ್ನೂರು ಮೀಟರ್ ಕೆಳಗಿದ್ದಿದ್ದರೆ? ಅರಬ್ಬೀ ಸಮುದ್ರದ ಮೂಲಕ ಬಂದ ಗಾಳಿ ಪಾಲ್ಘಾಟ್ ಗ್ಯಾಪಿನ ಕಾರಣ ಪಶ್ಚಿಮ ಘಟ್ಟಗಳಿಗೆ ಅಪ್ಪಳಿಸದೇ ಊಟಿ ತಲುಪಿ ಅಲ್ಲಿ ತಂಪುಗೊಂಡು ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿ ಈಗಿನ ಎತ್ತರಕ್ಕೆ ತಡೆಯಿರದ ಕಾರಣ ಮುಂದೆ ಹೋಗಿಬಿಡುತ್ತಿತ್ತು. ಈಗಿನ ಅತ್ಯುತ್ತಮ ಹವಾಮಾನ ಇರುತ್ತಲೇ ಇರಲಿಲ್ಲ. ಹೈದರಾಲಿ ಮತ್ತು ಟಿಪ್ಪು ಲಾಲ್‌ಬಾಗ್ ನಿರ್ಮಿಸುತ್ತಲೇ ಇರಲಿಲ್ಲ. ಮೈಸೂರು ಅರಸರಿಗೆ ಪ್ರಿಯವಾದ ಜಾಗವಾಗುತ್ತಲೇ ಇರಲಿಲ್ಲ. ಬ್ರಿಟಿಷರಿತೆ ತಮ್ಮ ಊರನ್ನು ನೆನಪಿಸುವ ಪ್ರದೇಶವೂ ಆಗುತ್ತಿರಲಿಲ್ಲ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ