ಚೂಟಿ ಹುಡುಗನ ಸೃಜನಶೀಲತೆ ಹೇಳಿದ ಪಾಠ
ಯಾವಾಗ ಅಧ್ಯಾಪಕನಾಗಿ ಶಾಲೆ ಸೇರಿ, ನಾನೇ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾಡಲು ಪ್ರಾರಂಭ ಮಾಡಿದೆನೋ, ಮಕ್ಕಳಿಗೆ ಪರೀಕ್ಷೆಯ ತಯಾರಿಯ ಬಗ್ಗೆ ಹೇಳಬೇಕಾಗಿ ಬಂತೋ ಆಗ ಪೇಚಿಗೆ ಸಿಲುಕುತ್ತಿದ್ದೆ. ಮಕ್ಕಳಿಗೆ ಪರೀಕ್ಷಾ ತಯಾರಿಯ ಉಪದೇಶ ಮಾಡುವಾಗ ನಾನು ಕೇಳಿದ ನನ್ನಪ್ಪನ ಮತ್ತು ನನ್ನ ಗುರುಗಳ ಮಾತುಗಳು ನನಗೆ ಅರಿವಿಲ್ಲದಂತೆ ಬಾಯಿಗೆ ಬಂದು ಬಿಡುತ್ತಿತ್ತು. ಉಪದೇಶವನ್ನು ಮಾಡಿದ ಬಳಿಕವೂ ಮಕ್ಕಳು ಉತ್ತರಪತ್ರಿಕೆಯಲ್ಲಿ ಬಿಟ್ಟ ಖಾಲಿ ಜಾಗಗಳನ್ನು ನೋಡಿದಾಗ ನನ್ನ ಉಪದೇಶಗಳು ಪ್ರಯೋಜನಕ್ಕೆ ಬಾರದೇ ಇರುವುದು ಸ್ಪಷ್ಟವಾಗಿ ತಿಳಿಯುತ್ತಿತ್ತು.
‘ಗಣಿತ ಮೇಷ್ಟರ ಶಾಲಾ ಡೈರಿ’ಯಲ್ಲಿ ಅರವಿಂದ ಕುಡ್ಲ ಬರಹ
