Advertisement

Category: ಅಂಕಣ

ಜಗತ್ತಿನಾದ್ಯಂತ ಹರಡಿಕೊಂಡ ಗಾಂಧೀಜಿಯ ಅವಿನಾಶೀ ಆತ್ಮ

“ಅದ್ಯಾಕೆ ಗಾಂಧಿಯನ್ನು ಮಾತ್ರ ನೆಲದಲ್ಲಿ ನಿಲ್ಲಿಸಿದ್ದೀರ?” ಎಂದು ಕೇಳಲು ಬಾಯಿ ತೆರೆದೆ. ಆತನೇ ಹೇಳಿ ಬಿಟ್ಟ “ಅಲ್ಲಿ ನೋಡಿ ಗಾಂಧಿ ಮತ್ತು ಮಂಡೇಲಾ ಇಬ್ಬರು ಬರೀ ನೆಲದ ಮೇಲಿದ್ದಾರೆ. ಈ ಜಗತ್ತು ಕಂಡ ಅತ್ಯಂತ ಸರಳ ಜೀವಿಗಳು. ಅಬ್ಬರ, ಆಡಂಬರದಿಂದ ದೂರವೇ ಉಳಿದ ಇವರಿಬ್ಬರು ಎಲ್ಲರಿಗಿಂತ ಎತ್ತರದಲ್ಲಿ ನಿಲ್ಲಲು ಎಂದೂ ಬಯಸರು, ಆ ಕಾರಣಕ್ಕಾಗಿಯೇ ಹೀಗೆ ನಿಲ್ಲಿಸಲಾಗಿದೆ”. ಆತನ ಮಾತನ್ನು ಕೇಳಿ ದೇವರನ್ನೂ ವೈಭವದಲ್ಲಿ ಸ್ಥಾವರಗೊಳಿಸುವ ನನ್ನ ಅಲ್ಪಮತಿಯ ತಲೆಯ ಮೇಲೊಂದು ಮೊಟಕಿಕೊಂಡು ಮುಂದ್ಮುಂದೆ ನಡೆದೆ. ʼಕಂಡಷ್ಟೂ ಪ್ರಪಂಚʼ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಓದಿ ತಿಳಿ ಗಿಡವ ನೆಟ್ಟು ಕಲಿ

ಮಣ್ಣು ನಿರ್ಜೀವ ವಸ್ತು ಅಲ್ಲ ಅದು ಜೀವಂತ! ಅದರಲ್ಲಿ ಎಷ್ಟೋ ಕ್ರಿಮಿ ಕೀಟಗಳು, ಶಿಲೀಂದ್ರಗಳು, ಬಹುಮುಖ್ಯವಾಗಿ ಎರೆ ಹುಳುಗಳು ಇವೆಲ್ಲ ಇರಲೇಬೇಕು, ಅವುಗಳನ್ನು ಹೇಗೆ ಹೆಚ್ಚಿಸಬೇಕು, ಮಣ್ಣಿಗೆ ಹೊದಿಕೆ ಹೇಗೆ ಮಾಡಬೇಕು, ಸಸ್ಯಗಳನ್ನು ಸಹಜವಾಗಿ ಹೇಗೆ ಪೋಷಿಸಬೇಕು ಎಂಬೆಲ್ಲ ಹೊಸ ಹೊಸ ವಿಷಯಗಳ ಅರಿವು ನನಗೆ ಈ ಮಹಾನುಭಾವರು ಬರೆದ ಪುಸ್ತಕಗಳ ಮೂಲಕ ತಿಳಿದಿತ್ತು. ಇನ್ನೂ ಹಲವಾರು ಟಿಪ್ಪಣಿ ಮಾಡಿಟ್ಟುಕೊಂಡ ನನ್ನ ಹೊತ್ತಿಗೆಗಳು ಬೃಹದಾಕಾರವಾಗಿ ಬೆಳೆದಿದ್ದವು. ಈಗ ಗಿಡಗಳನ್ನು ಬೆಳೆಯುವ ಸಮಯ ಬಂದಿತ್ತು! ಇದು ಹೊಸದಾಗಿ ರೈತರಾಗುವವರಿಗೆ ಎದುರಾಗುವ ಸಮಸ್ಯೆ. ಸಿಕ್ಕಾಪಟ್ಟೆ ಮಾಹಿತಿಗಳ ಕೇಳಿ ತಬ್ಬಿಬ್ಬಾಗಿ ಬಿಡುತ್ತಾರೆ.  ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಅಂಕಣ “ಗ್ರಾಮ ಡ್ರಾಮಾಯಣ”

Read More

ಸಮಾನತೆಯ ಆಶಯವನ್ನು ಒರೆಗೆ ಹಚ್ಚುವ ಕತೆ

ಸಿದ್ಧಾಂತಗಳು ಎಷ್ಟೇ ಉದಾತ್ತವಾಗಿದ್ದರೂ ಅದನ್ನು ಜಾರಿಗೊಳಿಸುವ ವಿಧಾನ ಸರಿಯಿಲ್ಲದಿದ್ದರೆ ಎಲ್ಲಾ ಅನರ್ಥವೇ ಆಗುತ್ತದೆ ಎಂಬುದು ಇದರ ಮುಖ್ಯ ಸಾರ. ಒಂದು ತೋಟದಲ್ಲಿರುವ ಪ್ರಾಣಿಗಳೆಲ್ಲಾ ದುಷ್ಟ ಒಡೆಯನ ವಿರುದ್ಧ ಬಂಡೆದ್ದು ತೋಟವನ್ನು ವಶಪಡಿಸಿಕೊಂಡು ಸಮಾನತೆಯ ಸಮಾಜ ಕಟ್ಟಲು ಹೊರಡುವ ಕತೆಯಿದು. ಆದರೆ ಕಾಲಕಳೆಯುತ್ತಾ ಹೋದಂತೆ ನಾಯಕನ ಆದರ್ಶಗಳೆಲ್ಲಾ ಮಣ್ಣುಪಾಲಾಗಿ ಅವನೂ ಒಬ್ಬ ಭ್ರಷ್ಟನೇ ಆಗುತ್ತಾನೆ. ಒಂದು ಕೆಟ್ಟ ಸಮಾಜದಲ್ಲಿನ ಎಲ್ಲಾ ಗುಣಗಳು ಅಲ್ಲೂ ಬರುತ್ತದೆ. ಪ್ರಬಲರಾದ ಹುದ್ದೆಯಲ್ಲಿರುವವರಿಂದ ದುರ್ಬಲರ ಶೋಷಣೆ ನಿರಂತರವಾಗಿ ನಡೆಯುತ್ತದೆ. ಗಿರಿಧರ್‌ ಗುಂಜಗೋಡು ಬರೆಯುವ “ಓದುವ ಸುಖ” ಅಂಕಣ

Read More

ಪ್ರಕೃತಿಯ ರಮ್ಯವಾದ ಮಾಯಾತಾಣ ಮಾರೀಷಿಯಸ್

ಅಲ್ಲಿನ ಶಾಲಾ ಕಾಲೇಜಿನ ಮಕ್ಕಳೆದುರು ಪ್ರಧಾನಮಂತ್ರಿಯೂ ರಸ್ತೆ ಕಾಯುವವನೇ. ಮಾತು ಮಾತಿಗೂ ಪರದೇಶದ ಸಂಸ್ಕೃತಿಯನ್ನು ಹಳಿದೇ ನನ್ನ ಸಂಸ್ಕೃತಿಯ ಹಿರಿಮೆಯನ್ನು ಮೆರೆಯುವ ಮನಸ್ಸಿನೊಳಗೊಂದು ಗಂಟಾನಾದ. ಅಂದಹಾಗೆ ಮಾರೀಷಿಯಸ್ಸಿನ ಅಳತೆ ನೋಡಿ ದಾರಿ ಕ್ರಮಿಸಲು ಕಡಿಮೆ ಸಮಯ ಸಾಕೆಂದು ಅಂದಾಜು ಹಾಕಿದರೆ ತಪ್ಪಾದೀತು. ಕಿರಿದಾದ ದಾರಿಗಳಲ್ಲಿ 45 ಕಿಲೋಮೀಟರ್ ಕ್ರಮಿಸಲು ಬೇಕಾದ ಸಮಯ 90 ನಿಮಿಷಗಳು!  ಅಲ್ಲಿಗೆ ಹೋಗುವ ಪ್ರವಾಸ ಖಚಿತವಾಗುವವರೆಗೂ ಮಾರಿಷಿಯಸ್ ಆಫ಼್ರಿಕಾ ಖಂಡಕ್ಕೆ ಸೇರಿದ ದ್ವೀಪ ಎನ್ನುವ ಸಾಮಾನ್ಯಜ್ಞಾನ ನನಗಿರಲಿಲ್ಲ. ʼಕಂಡಷ್ಟೂ ಪ್ರಪಂಚʼ ಅಂಕಣದಲ್ಲಿ ಅಂಜಲಿ ರಾಮಣ್ಣ ಲೇಖನ.

Read More

ಕಮಿಷನ್ ಕನಕನ ನಿಧಿ ಶೋಧದ ಕಥೆ

ಅಣೋ, ನನ್ ಪ್ರೀತಿಸ್ತಾ ಇರೋ ಹುಡುಗಿ ತೋರಿಸ್ತೀನಿ.’ ಎಂದು ಫೋನಿನಲ್ಲಿ ವಿ ಪ್ಯಾಟರ್ನ್ ಹಾಕಿ ಲಾಕ್ ತೆರೆದು ‘ಇವಳೇ ನೋಡಣೋ’ ಎಂದು ತೋರಿಸಿದ. ನಾನೆ ಪೂರ್ವಗ್ರಹದಿಂದ  ‘ನಿಜಕ್ಕೂ ಪ್ರೀತಿಸ್ತಾ ಇದ್ಯೇನೋ? ಅಥವಾ ಫ್ರೆಂಡ್ಸ್ ವಿಥ್ ಬೆನಿಫಿಟ್ಸ?’ ಅಂತ ಕೇಳಿದೆ. ಅದಕ್ಕವನು ತುಂಬಾ ಕ್ಲಾರಿಟಿಯಿಂದ ‘ನನಗೆ ಅವಳಿಷ್ಟ. ಅವಳಿಗೆ ನಾನಿಷ್ಟ. ಮದ್ವೆ ಯಾಕಗಬಾರದು?’ ಎಂದು ತುಂಬಾ ನಿಖರವಾಗಿ ಹೇಳಿದ. ನಾನು ನನ್ನ ಮನಸ್ಸಿನಲ್ಲಿ ‘ಎಲಾ ಚಾಲಾಕಿ!’ ಎಂದುಕೊಂಡೆ. ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ