Advertisement

Category: ಅಂಕಣ

ಸಂಗೀತ ಸಂಜೆಗಳ ಇಬ್ಬಗೆಯ ಸುಧೆ

ಆಸ್ಟ್ರೇಲಿಯಾದ ಎಂದೆಂದಿಗೂ ತಿಳಿಯಾಗಿಲ್ಲದ ಇಬ್ಬಗೆಯೆಂದರೆ ಆಸ್ಟ್ರೇಲಿಯನ್ ಅಬೊರಿಜಿನಲ್ ಜನಜೀವನದ ಮುಖ್ಯಭಾಗವಾದ ಸಂಗೀತ ಮತ್ತು ಆಸ್ಟ್ರೇಲಿಯಕ್ಕೆ ಬರಮಾಡಿಕೊಂಡ ಪಾಶ್ಚಾತ್ಯ ಸಂಗೀತ. ಅಬೊರಿಜಿನಲ್ ಜನರನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ವಸಾಹತುಶಾಹಿಗಳು ಪ್ರಯತ್ನಿಸಿದರೂ ಇಪ್ಪತ್ತನೇ ಶತಮಾನದಲ್ಲಿ ಅಬೊರಿಜಿನಲ್ ಸಂಗೀತ, ನೃತ್ಯ ಮತ್ತು ಚಿತ್ರಕಲೆಗೆ ಗಮನ ಕೊಟ್ಟು, ಅವುಗಳಲ್ಲಿರುವ ವಿಶೇಷಣಗಳನ್ನು ಗುರುತಿಸಿದರು.
ಡಾ. ವಿನತೆ ಶರ್ಮ ಅಂಕಣ

Read More

ಎಲ್ಲರೊಳಗೊಂದಾಗುವ ಕಲೆಯ ಕಲಿಯುತಾ….

ನೀವು ಯಾರೊಂದಿಗೆ ಮಾತಾಡದಿದ್ದರೂ ಪರವಾಗಿಲ್ಲ. ಚೆನ್ನಾಗಿ ಓದಿ ಒಳ್ಳೆಯ ಪದವಿ ಪಡೆಯಬೇಕು. ಊರ ಉಸಾಬರಿಗೆ ತಲೆಕೊಡುವುದು ಬಿಟ್ಟು ನಿನ್ನ ಜೀವನ ನೀನು ನೋಡಿಕೋ. ಅವರ ಮನೆಯಲ್ಲಿ ಸಾವಾಗಿದ್ದರೆ ಏನಂತೆ? ನಿನ್ನದೆಷ್ಟೋ ಅಷ್ಟರಲ್ಲಿರು. ಯಾವುದಕ್ಕೂ ಮುನ್ನುಗ್ಗಿ ತಲೆಕೊಡಬೇಡ. ಅಂಟಿಯೂ ಅಂಟದಂತೆ ಇರುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಹೆಚ್ಚು ಮಾತಿಲ್ಲದೆ ನಾಜೂಕಾಗಿ ಪರಿಸ್ಥಿತಿಯಿಂದ ಬಿಡಿಸಿಕೊಳ್ಳಬೇಕು.
ಎಸ್. ನಾಗಶ್ರೀ‌ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣದಲ್ಲಿ ಹೊಸ ಬರಹ

Read More

ಆ ಹುಡುಗಿ ಹಾಗೆಯೇ ಮರಳಿ ಹೋಗಿದ್ದಳು

ಭಿಕ್ಷುಕರೆಂದರೆ ಯಾಕೆ ನಮ್ಮ ಮನಸ್ಸಿಗೆ ತಂಗಳನ್ನವೇ ಬರಬೇಕು ಅಂತ ಪ್ರಶ್ನಿಸಿಕೊಂಡಿದ್ದೇನೆ. ಯಾವುದೋ ಕಾರಣ, ಅಸಹಾಯಕತೆ, ಮತ್ಯಾವುದೋ ಅನಿವಾರ್ಯತೆಯ ಪರಿಸ್ಥಿತಿಗಳು ಅವರನ್ನು ಭಿಕ್ಷೆಗೆ ಹಚ್ಚಿರಬಹುದು. ಆದರೆ ಅವರಿಗೂ ನಮ್ಮಂತೆಯೇ ಎಲ್ಲ ಸವಿಯನ್ನೂ ಸವಿಯಬೇಕೆನ್ನುವ ಆಸೆಗಳೂ ಇರುತ್ತವೆ. ಆ ಆಸೆಗಳನ್ನು, ಅಭಿಲಾಷೆಗಳನ್ನು ನಾವು ಅರ್ಥ ಮಾಡಿಕೊಂಡರೆ ಆ ಮುಗ್ಧ ಮುಖಗಳಲ್ಲಿ ಒಂದಿಷ್ಟಾದರೂ ಮಂದಹಾಸ ಮೂಡಿಸಬಹುದಲ್ಲವೇ? ದೈಹಿಕ ಸಾಮರ್ಥ್ಯವಿದ್ದೂ, ಶಕ್ತರಾಗಿದ್ದೂ ಭಿಕ್ಷೆ ಬೇಡುತ್ತಿದ್ದರೆ ಅದನ್ನು ವಿರೋಧಿಸೋಣ.
ಇಸ್ಮಾಯಿಲ್‌ ತಳಕಲ್‌ ಬರಹ

Read More

ಬೆಂಕಿಯ ಮಳೆ

ಉಮಾ ಅವರಿದ್ದ ಓಣಿಯ ಬಳಿ ಹೋಗಿ ಒಬ್ಬ ಹೆಂಗಸನ್ನು ‘ಇಲ್ಲಿ ಉಮಾ ಅನ್ನೋರ ಮನೆ ಎಲ್ಲಿ ಬರತ್ತೆ?’ ಅಂತ ಕೇಳಿದೆ. ಅದಕ್ಕವರು ‘ಓಹ್, ಶಾಹೀನಾ ಬೇಗಂ ಮನೆನಾ? ಬನ್ನಿ ಬನ್ನಿ. ನಮ್ಮ ಮನೆ ಪಕ್ಕದ ಮನೆನೇ ಶಾಹೀನಕ್ಕನದು. ನನ್ನ ಹೆಸರು ನಾಗವೇಣಿ. ಅಕಿ ನನ್ನ ಗೆಣತಿ ಅದಾಳೆ.’ ಎನ್ನುತ್ತಾ ನನ್ನನ್ನ ಹಿಂಬಾಲಿಸಿ ಎಂಬುವಂತೆ ಮುಂದೆ ಮುಂದೆ ನಡೆದಳು. ಸ್ವಲ್ಪ ಹೊತ್ತು ನಡೆದ ಮೇಲೆ ಒಂದು ಪುಟ್ಟ ಜನತಾ ಮನೆಯಂತಿದ್ದ ಮನೆಯ ಮುಂದೆ ನಿಂತು ‘ಶಾಹೀನಕ್ಕ, ನಿನ್ನ ನೋಡೋಕೆ ಯಾರೋ ಬಂದಾರೆ…’ ಎಂದು ಕೂಗಿದಳು. ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

Read More

ಭಾಗವತಿಕೆಯ ಪರಂಪರೆಯಲ್ಲಿ ವಿದ್ವಾನ್ ಗಣಪತಿ ಭಟ್ ಅವರ ವೈಶಿಷ್ಟ್ಯತೆ

ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಜನಪ್ರಿಯ ಮಾದರಿಗಳಿಂದ ತಪ್ಪಿಸಿಕೊಳ್ಳುವುದು ಕಷ್ಟದ ಕೆಲಸ. ಅವರಿಗೆ ಹಲವು ಒತ್ತಡಗಳಿರುತ್ತವೆ. ಒತ್ತಡಗಳ ವಿರುದ್ಧ ನಿಲ್ಲುವುದಕ್ಕೆ ಒಂದು ರೀತಿಯ ನಿಷ್ಠುರತೆ, ಛಲ, ವಿಶ್ವಾಸವೂ ಬೇಕು. ಅಂತಹುದಕ್ಕೆ ಮಾದರಿ ವಿದ್ವಾನರು. ನಮಗೆ ಈಗ ಸಿಗುವ ಅವರ ತಾರುಣ್ಯ ಕಾಲದ ವೃತ್ತಿ ಮೇಳದ ಹೊಸಪ್ರಸಂಗದ ಪದ್ಯಗಳು, ಹಳೆಯ ದೇವಿ ಮಹಾತ್ಮೆಯ ಧ್ವನಿ ಮುದ್ರಿಕೆಯನ್ನು ಕೇಳಿದರೆ ಇದು ಸ್ಪಷ್ಟವಾಗುತ್ತದೆ.
ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ