Advertisement

Category: ಅಂಕಣ

ಕನ್ನಡವ ಪೊರೆದ ಚೇತನಗಳ ನೆನಪಿನಲ್ಲಿ…

‘ಸಿರಿಸಂಪಿಗೆ’ ನಾಟಕದಲ್ಲಿ ಬಹಳ ಹಾಡುಗಳಿವೆ. ಅಲ್ಲಿಯೇ ಹಾರ್ಮೋನಿಯಂ ಹಿಡಿದುಕೊಂಡು ರಾಗ ಹಾಕುತ್ತಿದ್ದರು ಬಸವಲಿಂಗಯ್ಯನವರು. ಅವರದು ಅದ್ಭುತ ಶಾರೀರ. ನಾಟಕದಲ್ಲಿ ಎಲ್ಲ ಹಾಡುಗಳನ್ನು ರಿಹರ್ಸಲ್ ಸಮಯದಲ್ಲೇ ನಮ್ಮ ಕಣ್ಣೆದುರೇ ರಾಗ ಹಾಕಿದರು, ಹಾಡಿಸಿದರು. ನಾವೆಲ್ಲ ಎಲ್ಲ ಹಾಡುಗಳನ್ನೂ ತಾಲೀಮು ಕೂಡ ಮಾಡಿದ್ದೆವು. ಒಂದು ಸಂಜೆ ಅದೇನೆನಿಸಿತೋ, ‘ಇದು ಯಾಕೋ ಸರಿ ಇಲ್ಲ. ನಾಟಕದ ಕಡೀ ಹಾಡು, ಭೈರವಿ ರಾಗದಾಗs ಇರಬೇಕು,’ ಎಂದು ಮತ್ತೆ ಪೇಟಿ ಹಿಡಕೊಂಡು ಭೈರವಿ ರಾಗದಲ್ಲಿ ನಾಟಕದ ಕೊನೆಯ ಹಾಡಿಗೆ ಇನ್ನೊಂದು ಧಾಟಿ ಹಚ್ಚಿದರು.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಕಂಡೂ ಕಾಣದಂತೆ ಸರಿದು ಹೋಗುವ ಅನಿವಾರ್ಯತೆಗಳು

ರಂಗಭೂಮಿ ಮೇಲ್ನೋಟಕ್ಕೆ ಕಾಣುವ ಹಾಗೆ ಕೇವಲ ಬಣ್ಣದ ಲೋಕದ ಹೊರಮೈ ಅಲ್ಲ. ಇದು ತಿಳಿಯುವುದು ಆ ರಂಗ ಒಳಹೊಕ್ಕಾಗ ಮಾತ್ರ. ಕಲೆ ಮತ್ತು ಕಲಾವಿದರನ್ನು ತುಂಬು ಆದರ ಭಾವದಿಂದ ಕಾಣುವವರಿಗೆ ಆ ಎಲ್ಲವನ್ನು ಒಟ್ಟು ಮಾಡಿ ಚಿತ್ರ ಕಟ್ಟಿಕೊಡುವವನಿಗೆ ಅಸಲಿ ಚಿತ್ರ ತಿಳಿದಿರುತ್ತದೆ. ಅವನು ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಕುಹಕವನ್ನೂ ಸೈರಿಸಿಕೊಳ್ಳಬೇಕಿರುತ್ತದೆ. ಮತ್ತೆ ಎಲ್ಲವನ್ನೂ ಕೇವಲ ಶೋಕಿಗೆ ಮಾಡುತ್ತ ಮಾರ್ಕೆಟಿಂಗ್ ಸರಕಾಗಲು ಹವಣಿಸುವವರನ್ನೂ ಅನಿವಾರ್ಯವಾಗಿ ಸೈರಿಸಿಕೊಂಡು ಮುಂದೆ ಸಾಗಬೇಕಿರುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಕೋವಿಡ್‌ ಸಮಯದಲ್ಲಿ ರಂಗ…

Read More

ರಾಜರಥದಲ್ಲಿ ವಿರಾಜಮಾನರಾದ ಭುವನಮ್ಮನ ಕತೆ

‘ನಮ್ಮನೆಯವನಿಗೆ ಊಟಾನು ನಾನೇ ತಿನಿಸಬೇಕು. ತಿಂಡಿನೂ ನಾನೆ ತಿನಿಸಬೇಕು. ಅವ್ನ ಪ್ರತಿ ಕೆಲ್ಸನೂ ನಾನೇ ಮಾಡಿಕೊಡಬೇಕು. ಸದಾ ನನ್ ಹಿಂದೇನೆ ಸುತ್ತುತ್ತಾ ಇರುತ್ತೆ ಅಸಾಮಿ. ಪ್ರೀತಿ ವಿಷಯಕ್ಕೆ ಬಂದಾಗ ಒಂದು ಎಳ್ಳಷ್ಟೂ ಕೂಡ ಕಡಿಮೆ ಮಾಡಿಲ್ಲ. ನನ್ನನ್ನು ಜೀವಕ್ಕೆ ಜೀವಕ್ಕಿಂತ ಪ್ರೀತಿಸ್ತಾರೆ. ಆ ವಿಷ್ಯದಲ್ಲಿ ನಾನು ತುಂಬಾ ತುಂಬಾ ಪುಣ್ಯವಂತೆ.’ಎಂದು ಮಿಂಚುಗಣ್ಣಾಗಿ ಆಕೆ ಹೇಳಿದ್ದು ಇಂದಿಗೂ ನೆನಪಿದೆ.  ‘ಆದ್ರೆ ದುಡ್ಡಿನ ಜವಾಬ್ದಾರಿ ಅಂದ್ರೆ ಉಹೂ ಎಂದುಬಿಡುತ್ತಾರೆ’  ಎಂದು ಆಕೆ ಸೇರಿಸಿದರು.
ದಾದಾಪೀರ್ ಜೈಮನ್ ಬರೆಯುವ ‘ಜಂಕ್ಷನ್ ಪಾಯಿಂಟ್’ ಅಂಕಣ ಬರಹ 

Read More

ಮತ್ತೊಂದು ಜನಪದವನ್ನು ಗೌರವಿಸುವ ವಿನಯಶೀಲತೆಗೆ ಕಾಯುತ್ತಾ..

ಒಂದು ಕರಕುಶಲ ಮಳಿಗೆಯಲ್ಲಿ ಇರಿಸಿದ್ದ ಗಣೇಶನ ವಿಗ್ರಹಕ್ಕೆ ‘ಬುದ್ಧ’ ಎಂದು ಲೇಬಲ್ ಇತ್ತು. ನಾನು ಮಾಲೀಕಳ ಬಳಿ ಹೋಗಿ ‘ನೋಡಿ, ಅದು ಗಣೇಶನ ಪ್ರತಿಮೆ, ದಯವಿಟ್ಟು ಆ ‘ಬುದ್ಧ’ ಲೇಬಲ್ ತೆಗೆದುಹಾಕಿ’ ಎಂದರೆ ಆಕೆ ಉಡಾಫೆಯಿಂದ ‘ನನ್ನ ಸ್ಟಾಫ್ ಒಬ್ಬಳು ಆ ಲೇಬಲ್ ಹಚ್ಚಿದ್ದು. ನಾಳೆ ಬಂದಾಗ ಅವಳಿಗೆ ಹೇಳುತ್ತೀನಿ’ ಎನ್ನುವುದೇ! ಅಂದರೆ ಬೇರೆ ಸಂಸ್ಕೃತಿ, ಧರ್ಮ, ನಂಬಿಕೆಗಳಿಗೆ ಅಲ್ಲಿ ಕಿಂಚಿತ್ತೂ ಬೆಲೆಯಿರಲಿಲ್ಲ. ಹತ್ತು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಧಾರಾಳವಾಗಿ ಕಾಣಿಸುತ್ತಿದ್ದ ಅಬೊರಿಜಿನಲ್ ಜನ ಈಗ ಯಾಕಿಲ್ಲ ಎನ್ನುವ ನನ್ನ ಪ್ರಶ್ನೆಗೆ ಸ್ವಲ್ಪಮಟ್ಟಿಗೆ ಉತ್ತರ ದೊರಕಿತ್ತು.
ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಅಂಕಣ

Read More

ಓದುವ ಸುಖ: ಗಿರಿಧರ್‌ ಗುಂಜಗೋಡ್‌ ಹೊಸ ಅಂಕಣ ಆರಂಭ

‘ದೇಶ ಸುತ್ತು ಕೋಶ ಓದು’ ಎಂಬುದು ಹಿರಿಯರ ನಾಣ್ಣುಡಿ. ನಾಣ್ಣುಡಿ ಎಂದಮೇಲೆ ಅದೆಂದೂ ಸುಳ್ಳಾಗುವ ಮಾತಿಲ್ಲವಲ್ಲ. ಓದಿನ ಬಲವು ಸುತ್ತಾಟವನ್ನು ಇನ್ನಷ್ಟು ಆಪ್ತವಾಗಿಸುತ್ತದೆ. ಸುತ್ತಾಟದ ಅನುಭವವು ಓದಿಗೆ  ಮತ್ತಷ್ಟು ಪ್ರೇರಣೆ ನೀಡುತ್ತದೆ. ಹೀಗೆ ಪರಸ್ಪರ ಪೂರಕವಾಗಿರುವ ಇವು ಒಟ್ಟಾಗಿ ಮನುಷ್ಯನ ವ್ಯಕ್ತಿತ್ವವನ್ನು ವಿಕಾಸಗೊಳಿಸುತ್ತವೆ. ಓದು ಮತ್ತು ಪ್ರವಾಸವನ್ನು ಏಕಕಾಲಕ್ಕೇ ಇಷ್ಟಪಡುವ ಗಿರಿಧರ್ ಗುಂಜಗೋಡು, ತಮ್ಮ ಓದಿನ ಹಿನ್ನೆಲೆಯನ್ನಿಟ್ಟುಕೊಂಡು ಬರಹಗಳನ್ನು ಬರೆಯಲಿದ್ದಾರೆ.  ಪುಸ್ತಕಗಳ ಓದಿನ  ಹೂರಣಕ್ಕಷ್ಟೇ ಸೀಮಿತವಾಗದೇ ವಿಸ್ತಾರವಾದ ಹರವಿನೊಂದಿಗೆ ಅವರು ಬರೆಯುವ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ