Advertisement

Category: ಅಂಕಣ

ಆಶ್ರಯ ಕೊಡು-ಕೊಳ್ಳುವಿಕೆಯ ಕಹಿ ಸತ್ಯ

ತಮ್ಮ ದೇಶದಲ್ಲಿ ನಡೆಯುತ್ತಿರುವ ಆಂತರಿಕ ಯುದ್ಧ, ಗಲಾಟೆ, ಹಿಂಸೆ, ಸಾವು, ಮಿಲಿಟರಿ ಆಡಳಿತ ಎಂಬಂತೆ ಜೀವಹಾನಿಕಾರಕ ಪರಿಸ್ಥಿತಿಯಿದ್ದು ಜೀವ ರಕ್ಷಿಸಿಕೊಳ್ಳಲು ದೇಶ ಬಿಟ್ಟು ಬರುವ ಜನರು ಇತ್ತೀಚಿನ ದಶಕಗಳಲ್ಲಿ ಹೆಚ್ಚುತ್ತಿದ್ದಾರೆ. ಅಲ್ಲದೆ ಮಾನವ ಹಕ್ಕುಗಳ ಉಲ್ಲಂಘನೆ ಎಂಬ ಕಾರಣವನ್ನು ಮುಂದೆ ಮಾಡಿಕೊಂಡು ಕೂಡ ಸಾವಿರಾರು ಜನರು ದೇಶ ತೊರೆದು ಬೇರೆ ಕಡೆ ಆಶ್ರಯವನ್ನು ಬೇಡಿಕೊಂಡು ಹೋಗುತ್ತಾರೆ. ಇವರು ‘ಅಸೈಲಮ್ ಸೀಕರ್’ ಎಂದು ಕರೆಸಿಕೊಳ್ಳುತ್ತಾರೆ.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ದುಬಾರಿ ಲೋಕದಲ್ಲಿ ರಂಗಪ್ರದರ್ಶನಗಳ ಪೂರ್ವಾಪರ

ಧೈರ್ಯ ಮಾಡಿ ರಂಗಮಂದಿರದ ಬಾಡಿಗೆ ಕಟ್ಟಿ ನಾಟಕ ಮಾಡಲು ಮುಂದಾಗುತ್ತೇವೆ ಅಂತಿಟ್ಟುಕೊಳ್ಳಿ. ಜನ ಬರಬೇಕಲ್ಲ ? ಪೆಟ್ರೋಲ್ ದರ ಯಾವ ಶಿಖರವನ್ನ ಗುರಿಯಾಗಿಟ್ಟುಕೊಂಡಿದೆ ಎನ್ನುವುದು ತಿಳಿಯುತ್ತಿಲ್ಲ. ಅಡುಗೆ ಅನಿಲ ದರ ಕೇಳಿದರೆ ಎದೆ ಸ್ಫೋಟಗೊಳ್ಳುತ್ತದೆ. ಅಡುಗೆಗೆ ಬಳಸುವ ಎಣ್ಣೆ ತನಗೆ ಬೆಲೆ ಬರುತ್ತಿರುವುದಕ್ಕೆ ವ್ಯರ್ಥವಾಗಿ ಹಿಗ್ಗುತ್ತಿದೆ. ನೀವು ರಂಗಮಂದಿರಗಳ ಬಾಡಿಗೆ ದರ ಏರಿಸಿದರೆ ನಾವು ರಂಗತಂಡಗಳವರು ಏನು ಮಾಡಬೇಕು? ಎನ್. ಸಿ. ಮಹೇಶ್.  ಬರಹ

Read More

ಒಳ್ಳೆಯ ಮತ್ತು ಕೆಟ್ಟ ಸಮಾಚಾರಗಳ ಬೇವುಬೆಲ್ಲ

ಶುಭಕೃತ್ ಸಂವತ್ಸರವು ಅಡಿಯಿಟ್ಟಿದೆ. ಆದರೆ ಕಾಲವು ಅದೇ ಪ್ರಕಾರ ಒಳಿತುಕೆಡುಕುಗಳನ್ನು ಒಟ್ಟಿಗೆ ಕಟ್ಟಿಕೊಂಡು ಸಾಗುತ್ತಿದೆ.  ಪ್ರಕೃತಿ ವಿಕೋಪವೆಂಬ ಬೇವು, ಮಾನವೀಯತೆ ಎಂಬ  ಬೆಲ್ಲವನ್ನು  ಸಮಾನ ಮನಸ್ಸಿನಿಂದ ಸ್ವೀಕರಿಸಬೇಕಾಗಿದೆ. ಆಸ್ಟ್ರೇಲಿಯಾದಲ್ಲಿ  ಟೆನಿಸ್ ಪಟು ಆಶ್ ಬಾರ್ಟಿ ನಿವೃತ್ತಿಯ ಬೇಸರ. ಆದರೆ ಅವರ ಮುಂದಿನ ನಿರ್ಧಾರ ಖುಷಿ ಕೊಡುವುದು. ಪ್ರವಾಹವು ನೋವು ಕೊಡುವುದು. ಡಾ. ವಿನತೆ ಶರ್ಮ ಬರೆದ ಆಸ್ಟ್ರೇಲಿಯಾ ಪತ್ರದಲ್ಲಿ ಅಲ್ಲಿನ ಕ್ಷೇಮ ಸಮಾಚಾರಗಳನ್ನು ತಿಳಿಯೋಣ.

Read More

ಚೂಟಿ ಹುಡುಗನ ಸೃಜನಶೀಲತೆ ಹೇಳಿದ ಪಾಠ

ಯಾವಾಗ ಅಧ್ಯಾಪಕನಾಗಿ ಶಾಲೆ ಸೇರಿ, ನಾನೇ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾಡಲು ಪ್ರಾರಂಭ ಮಾಡಿದೆನೋ, ಮಕ್ಕಳಿಗೆ ಪರೀಕ್ಷೆಯ ತಯಾರಿಯ ಬಗ್ಗೆ ಹೇಳಬೇಕಾಗಿ ಬಂತೋ ಆಗ ಪೇಚಿಗೆ ಸಿಲುಕುತ್ತಿದ್ದೆ. ಮಕ್ಕಳಿಗೆ ಪರೀಕ್ಷಾ ತಯಾರಿಯ ಉಪದೇಶ ಮಾಡುವಾಗ ನಾನು ಕೇಳಿದ ನನ್ನಪ್ಪನ ಮತ್ತು ನನ್ನ ಗುರುಗಳ ಮಾತುಗಳು ನನಗೆ ಅರಿವಿಲ್ಲದಂತೆ ಬಾಯಿಗೆ ಬಂದು ಬಿಡುತ್ತಿತ್ತು. ಉಪದೇಶವನ್ನು ಮಾಡಿದ ಬಳಿಕವೂ ಮಕ್ಕಳು ಉತ್ತರಪತ್ರಿಕೆಯಲ್ಲಿ ಬಿಟ್ಟ ಖಾಲಿ ಜಾಗಗಳನ್ನು ನೋಡಿದಾಗ ನನ್ನ ಉಪದೇಶಗಳು ಪ್ರಯೋಜನಕ್ಕೆ ಬಾರದೇ ಇರುವುದು ಸ್ಪಷ್ಟವಾಗಿ ತಿಳಿಯುತ್ತಿತ್ತು.
‘ಗಣಿತ ಮೇಷ್ಟರ ಶಾಲಾ ಡೈರಿ’ಯಲ್ಲಿ ಅರವಿಂದ ಕುಡ್ಲ ಬರಹ

Read More

ನಾಲ್ಕು ರಾಜ್ಯಗಳ ಏಳಿಗೆಯ ಅವಲೋಕನ

ಕೃತಿಯು ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಸೂಚ್ಯಂಕಗಳನ್ನು ಆದರ್ಶವಾಗಿರಿಸಿಕೊಂಡು ಕಳೆದ ನೂರು ವರ್ಷಗಳಿಂದ ಆದ ಬದಲಾವಣೆಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ನೂರು ವರ್ಷಗಳ ಮುಂಚೆ ಪರಿಗಣನೆಗೆ ತೆಗೆದುಕೊಂಡ ನಾಲ್ಕೂ ರಾಜ್ಯಗಳು ಹೆಚ್ಚುಕಮ್ಮಿ ಒಂದೇ ಪರಿಸ್ಥಿತಿಯಲ್ಲಿದ್ದವು. ಆದರೆ ಉಪರಾಷ್ಟ್ರೀಯತೆಯ ಪ್ರಜ್ಞೆ ಬೆಳೆಸಿಕೊಂಡ ತಮಿಳುನಾಡು ಮತ್ತು ಕೇರಳ ಪ್ರಗತಿ ಹೊಂದಿದರೆ ಆ ಪ್ರಜ್ಞೆ ಬೆಳೆಸಿಕೊಳ್ಳಲು ವಿಫಲವಾದ ರಾಜ್ಯಗಳು ಹೇಗೆ ಹಿಂದುಳಿದಿವೆ ಅನ್ನುವುದನ್ನು ವಿವರಿಸಲಾಗಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ