Advertisement

Category: ಅಂಕಣ

ತಮಿಳಿನ ಮೂರು ಆ್ಯಂಥಾಲಾಜಿ ಸಿನೆಮಾಗಳು

ಈ ಸಿನೆಮಾದ ಎಲ್ಲ ಕತೆಗಳೂ ನಗರದ ಕತೆಗಳು. ಇತ್ತೀಚೆಗೆ ಬರುತ್ತಿರುವ ಭಾರತದ ವಿವಿಧ ಭಾಷೆಗಳ ಹೊಸ ಅಲೆಯ ಸಿನೆಮಾಗಳು ಹಳ್ಳಿಗಳಲ್ಲಿ ನಡೆಯದೇ ನಗರಗಳಲ್ಲಿ ನಡೆಯುತ್ತಿರುವುದನ್ನು ಗಮನಿಸಿ. ಇದು ನಿರ್ದೇಶಕರು ನಗರಗಳಲ್ಲಿ ಹುಟ್ಟಿ ಬೆಳೆದುದರ ಪರಿಣಾಮವೂ ಹೌದು ಮತ್ತು ಭಾರತ ನಗರೀಕರಣವಾಗುತ್ತಿರುವ ಪರಿಣಾಮವೂ ಎಂದು ಅನಿಸುತ್ತದೆ. ಕತೆಗಳು ಮೇಲ್ಮಧ್ಯಮ ಅಥವಾ ಶ್ರೀಮಂತ ವರ್ಗಗಳ ಮನೆಗಳಲ್ಲಿ ನಡೆಯುತ್ತವೆ, ಓಟಿಟಿಯಲ್ಲಿ ನೋಡಿದ ತಮಿಳಿನ ಮೂರು ಆ್ಯಂಥಾಲಾಜಿ ಸಿನೆಮಾಗಳ ಬಗ್ಗೆ ‘ಇಂಗ್ಲೆಂಡ್‌ ಪತ್ರ’ ಬರೆದಿದ್ದಾರೆ ಕೇಶವ ಕುಲಕರ್ಣಿ

Read More

‘ಆಲ್ ಈಸ್ ಕಾಮ್’ ಎನ್ನುವ ಕ್ರಿಸ್ಮಸ್ ಹಬ್ಬ

ಅದು ಚಳಿಗಾಲದಲ್ಲಿ ಬರುವ ಒಂದು ಸಂಕ್ರಮಣದ ದಿನ. ಆ ದಿನದಿಂದ ಸೂರ್ಯನ ಬೆಳಕು ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ‘ಆಲ್ ಈಸ್ ಬ್ರೈಟ್’ ಎನ್ನುವ ಪದಗಳಿಗೆ ಹೊಸ ಅರ್ಥ ಹೊಳೆಯುತ್ತದೆ. ಹೊಸ ಬೆಳಕನ್ನ, ಸೂರ್ಯ ರಶ್ಮಿಯನ್ನ ತರುವ ಚೇತನವೊಂದು ಪ್ರಕೃತಿಯಲ್ಲಿ ಮೂಡಿತೇನೊ ಎನ್ನುವ ನಂಬಿಕೆ ಹುಟ್ಟುತ್ತದೆ. ರೋಮನ್ನರು ಆ ದಿನವನ್ನೇ ಪ್ರಶಸ್ತವೆಂದು ಆರಿಸಿಕೊಂಡರು. ಅವರು ‘ಧರ್ಮಬಾಹಿರ’ವೆಂದು ತಿಳಿದಿದ್ದ ಪೇಗನ್ ಸಂಸ್ಕೃತಿಯ ಹಬ್ಬಗಳ ಹುಟ್ಟಡಗಿಸಲು ಕೂಡ ಡಿಸೆಂಬರ್ ತಿಂಗಳನ್ನ….

Read More

ಯೂಲಿಸಿಸ್ ಕಾದಂಬರಿಗೆ ಶತಮಾನದ ಮೆರುಗು

ಇಂಗ್ಲೀಷ್ ಭಾಷೆಯ ಅತಿ ಕ್ಲಿಷ್ಟ ಕಾದಂಬರಿ ಎಂದೇ ಹೆಸರುವಾಸಿಯಾಗಿರುವ ಜೇಮ್ಸ್ ಜಾಯ್ಸ್‌ರ ಯೂಲಿಸಿಸ್ ಬಗ್ಗೆ ಎಷ್ಟು ಬರೆದರೂ ಸಾಕಾಗದೇನೋ. ಹದಿನೆಂಟು ಖಂಡಗಳಲ್ಲಿ ಒಂದೊಂದು ಅಧ್ಯಾಯವನ್ನೂ ಒಂದೊಂದು ಶೈಲಿಯಲ್ಲಿ ಬರೆಯಲಾಗಿದೆ. ಒಂದು ಚಾಪ್ಟರ್ ಸ್ವಗತದ ಶೈಲಿಯಲ್ಲಿದ್ದರೆ ಇನ್ನೊಂದು ಪ್ರಶ್ನೋತ್ತರದ ಮಾದರಿಯಲ್ಲಿದೆ. ಮತ್ತೊಂದು ನಾಟಕದ ಶೈಲಿಯಲ್ಲಿದೆ ಎನ್ನುವ  ಕಾವ್ಯಾ ಕಡಮೆ , ಈ ಓದು ಸುಲಭಕ್ಕೆ ದಕ್ಕುವಂತಹುದಲ್ಲ ಎನ್ನುತ್ತಾರೆ.  1922ನೇ ಇಸವಿಯಲ್ಲಿ ಪ್ಯಾರಿಸ್ಸಿನ ಶೇಕ್ಸ್‌ಪಿಯರ್…

Read More

ಹಬ್ಬಗಳಿರಬೇಕು… ಬದುಕನ್ನು ಸವಿಯಲು

ಹಬ್ಬಗಳ ಮಹತ್ವವನ್ನು ಇತ್ತೀಚಿನ ದಿನಗಳಲ್ಲಿ ನಾವು ಕಳೆದುಕೊಳ್ಳುತ್ತಿದ್ದೇವೆ. ಮಕ್ಕಳಿಗೆ ಹಬ್ಬಗಳ ಹೆಸರೆ ಸರಿಯಾಗಿ ಗೊತ್ತಾಗದಾಗಿರುವುದು ವಿಪರ್ಯಾಸ. ಹಬ್ಬಗಳ ಪರಿಚಯವೇ ತಿಳಿಯದಿದ್ದಾಗ, ಅದರ ಪರಂಪರೆ
ಅರಿಯುವುದು ದೂರದ ಮಾತು.  ಯಾವುದೇ ಹಬ್ಬವಿರಲಿ, ಯಾವುದೇ ಜನಾಂಗಕ್ಕೆ ಸೇರಿದ್ದಾಗಿರಲಿ, ಅದರ ಬಗ್ಗೆ ತಿಳಿದಾಗ ಆಚರಣೆ ಬಗ್ಗೆ ಗೌರವ ಹೆಚ್ಚುತ್ತದೆ. ಹಿಂದುಗಳಾದವರು ಕ್ರೈಸ್ತರ ಹಬ್ಬಕ್ಕೆ ನಿರ್ಲಕ್ಷ್ಯ ಮಾಡುವುದು, ಕ್ರೈಸ್ತರು ಮುಸಲ್ಮಾನರ ಹಬ್ಬಕ್ಕೆ ಅಗೌರವ ತೋರುವುದು, ಮುಸಲ್ಮಾನರು ಹಿಂದುಗಳ ಹಬ್ಬಕ್ಕೆ…

Read More

ಇರುಳಿನ ಹೊಸ ಬಣ್ಣ

ಆಗಾಗ ಊರಿನ ಬಂಧುಗಳು ತಂದು ಕೊಡುವ ಕುರ್ಲಿ ಸರಿಯಾಗಿ ಸ್ವಚ್ಛಗೊಳಿಸಿ ಹದವಾದ ಮಸಾಲೆಯೊಂದಿಗೆ ಬೇಯಿಸುವ ಕೆಲಸವು ರಾತ್ರಿಯಾದೊಡನೆ ಶುರುವಾಗುತ್ತದೆ. ಜೋರು ಮಳೆ ಬೀಳುವಾಗ, ಚಳಿ ತನ್ನ ಚಹರೆಯ ತೋರಿಸುತ್ತಿರುವಾಗ ಕಾಜುವಾಡಾದ ಯಾವುದೋ ಓಣಿಯ ಮನೆಯ ಬೆಂಕಿ ಒಲೆಯಲ್ಲಿ ತನ್ನ ತಾ ಹಸಿಯಾಗಿಯೆ ಕೆಂಡದಲ್ಲಿ ಸುಟ್ಟುಕೊಳ್ಳುವ ಏಡಿ ತನ್ನ ಅಮೋಘ ಪರಿಮಳವನ್ನು ಸುತ್ತಲಿನ ಲೋಕಕ್ಕೂ ಹರಡುತ್ತದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ