Advertisement

Category: ದಿನದ ಅಗ್ರ ಬರಹ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ

ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ. ಪಾಲಿಗೆ ಬಂದ ಕರ್ತವ್ಯವನ್ನು ಮಾಡಿ ಮುಗಿಸುವುದೊಂದೇ ನಮ್ಮ ಧರ್ಮ’ ಎಂದು ಎಷ್ಟು ಸಲ ನೊಂದು ಹೇಳುತಿದ್ದರೋ.
ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”

Read More

ಭಕ್ತೆ-ಕಾವ್ಯ: ಸುಕನ್ಯಾ ಕನಾರಳ್ಳಿ ಅಂಕಣ

ಪ್ರಾಪಂಚಿಕ ಮದುವೆಗೆ ಬೆಚ್ಚಿ ಬೀಳುತ್ತಿದ್ದ ನಿದರ್ಶನಗಳಲ್ಲಿ ಸುಮಾರು ಹದಿನೇಳನೆಯ ಶತಮಾನದ ಕೇರಳದಲ್ಲಿದ್ದ ಅನುಭಾವಿನಿ ನಂಗ ಪೆಣ್ಣು ಒಂದು ಉತ್ತಮ ಉದಾಹರಣೆ. ಕೊಚ್ಚಿನ್ ರಾಜಾಸ್ಥಾನವಾದ ತ್ರಿಪ್ಪುನಿತ್ತುರದಲ್ಲಿದ್ದ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದ್ದ ಈಕೆಯ ಮದುವೆಯ ದಿನ ಭರ್ಜರಿ ಮೆರವಣಿಗೆಯಲ್ಲಿ ವಧುವಿನ ಮನೆಗೆ ಬರುತ್ತಿದ್ದ ವರನಿಂದ ತಪ್ಪಿಸಿಕೊಳ್ಳಲು ಓಡಿ ಹೋಗಿ ತ್ರಿಪ್ಪುನಿತ್ತುರದಲ್ಲಿದ್ದ ದೇವಸ್ಥಾನದ ವಿಷ್ಣುವಿನಲ್ಲಿ ಲೀನವಾಗಿದ್ದಳು. ಈಗಲೂ ನಂಗ ಪೆಣ್ಣು ಹಬ್ಬದ ದಿನದಂದು ಮೂರ್ತಿಯನ್ನು ವರನಾಗಿ ಮೆರವಣಿಗೆಯಲ್ಲಿ ಅವಳ ತಂದೆಯ ಮನೆಗೆ ಹೊತ್ತೊಯ್ಯಲಾಗುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಆರನೆಯ ಬರಹ

Read More

ಸುಂದರ ಕಾಡಿನ ರೋಚಕ ಕಥೆಗಳು ಭಾಗ -೩: ರೂಪಾ ರವೀಂದ್ರ ಜೋಷಿ ಸರಣಿ

ಈ ಹೂವು ಪಾರಿಜಾತದಂತೇ ತಾನೇ ತಾನಾಗಿ ಮರದಿಂದ ಉದುರುವಂಥದ್ದು. ಅದಕ್ಕೇ ನಾವೆಲ್ಲಾ ಬೆಳಗ್ಗೆ ಬೇಗನೆ ಎದ್ದು, ಮುಖ ತೊಳೆದವರೇ, ಆ ಮರದತ್ತ ಓಡುತ್ತಿದ್ದೆವು. ಕಾರಣ, ಬೇರೆಯವರು ಬಂದು ಆರಿಸಿಕೊಂಡರೆ? ಎಂಬ ಆತಂಕ ಒಂದು ಇರುತ್ತಿತ್ತಲ್ಲಾ… ಓಡುತ್ತ ಹೋದವರೇ, ಮರದ ಬುಡಕ್ಕೆ ಬಿದ್ದ ಹೂವನ್ನು ಆರಿಸಿ, ಕಾಡು ಎಲೆಗಳ ಕೊಟ್ಟೆ ಮಾಡಿ ಅದರಲ್ಲಿ ತುಂಬಿಕೊಳ್ಳುತ್ತಿದ್ದೆವು. ಪುಟ್ಟ ವೃತ್ತಕಾರದ ಈ ಹೂವಿಗೆ ಸುತ್ತಲೂ ಕಣ್ಣು ರೆಪ್ಪೆಯಂಥ ಸೂಕ್ಷ್ಮವಾದ ಬೆಳ್ಳನೆಯ ಚೂಪನೆಯ ಎಸಳುಗಳು. ಮಧ್ಯದಲ್ಲಿ ಒಂದು ರಂದ್ರ. ಹಿಂಭಾಗ ಗುಮ್ಮಟೆಯಂತೆ ಇರುತ್ತದೆ. ಅದರ ಸುಗಂಧ ಅದ್ಭುತ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೆರಡನೆಯ ಕಂತು

Read More

ಕೋಮಾವೂ, ಮಂಜನ ಚಕ್ಕುಲಿಯೂ… : ವಿನಾಯಕ ಅರಳಸುರಳಿ ಅಂಕಣ

ತೊಡೆಯ ಮೇಲೆ ಪೆಟ್ಟು ತಿಂದ ಶಿವುವಿಗೆ ತಾನು ಮಂಜುವನ್ನು ಸೋಲಿಸಲಾರೆ ಎಂಬುದು ಅರ್ಥವಾಯಿತೋ ಏನೋ? ಇನ್ನೂ ಬೀಳಲಿರುವ ಒದೆಗಳಿಂದ ತಪ್ಪಿಸಿಕೊಳ್ಳಲು ಇರುವ ಏಕಮಾತ್ರ ಉಪಾಯವೆಂಬಂತೆ ಅವನು ತನ್ನ ಕಾಲು ಹಿಡಿದುಕೊಂಡು ನೆಲಕ್ಕೆ ಬಿದ್ದುಕೊಂಡು “ಅಯ್ಯೋ.. ಅಮ್ಮಾ.. ಅಯ್ಯಯ್ಯಮ್ಮಾ” ಎನ್ನುತ್ತಾ ಒದ್ದಾಡತೊಡಗಿದ. ತಾನಾಗಿ ಹೊಡೆಯಲಾಗದ ಮಂಜುವಿಗೆ ಮೇಷ್ಟರ ಕೈಯಿಂದ ಹೊಡೆಸುವ ಉಪಾಯವೂ ಅವನದಾಗಿತ್ತೋ ಏನೋ? ಪರಿಸ್ಥಿತಿಯ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿ, ಬೇಗ ಈ ವಿಷಯ ಮೇಷ್ಟರನ್ನು ಮುಟ್ಟುವಂತೆ ಮಾಡಲೆಂದು ಎದೆ, ಕಾಲು ಹಿಡಿದುಕೊಂಡು ಒದ್ದಾಡುತ್ತಾ “ಅಯ್ಯೋ.. ಅಮ್ಮಾ‌‌.. ನಂಗ್ ಉಸಿರಾಡುಕಾತಿಲ್ಯೋ.. ಅಪ್ಪಯ್ಯೋ.. ಅಬ್ಯೋ” ಎಂದು ಇನ್ನೇನು ಐಸಿಯುಗೆ ಸೇರಿಸಬೇಕಾದ ರೋಗಿಯಂತೆ ನಟಿಸತೊಡಗಿದ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಎಲ್ಲ ಧರ್ಮಗಳಾಚೆ ಮನುಷ್ಯರ ಮನಸ್ಸುಗಳು ಒಂದೇ ಆಗಿರುತ್ತವೆ! ಒಡವೆಗಳು ಸಂಕೋಲೆಗಳಾಗುವ ಹೊತ್ತಿಗೆ ಇಷ್ಟಪಟ್ಟು ಜೀಕಿದ ಜೋಕಾಲಿಯೇ ಎತ್ತಿ ದೂರ ಚಲ್ಲಿಬಿಡುತ್ತದೆ. ಇಷ್ಟೆಲ್ಲದರಾಚೆ ಹೊಂದಿಕೊಂಡು ಅವನೊಂದಿಗೆ ಸುಖವಾಗಿ ಎರಡು ಹೊತ್ತು ಉಂಡು ಆಕಾರವನ್ನೇ ಕಳೆದುಕೊಂಡು ನೆರಳಿನಂತೆ ಇದ್ದುಬಿಡುವುದು ನನಗೆ ಅಸಹ್ಯವೆನ್ನಿಸಲು ಶುರುವಾಗಿ ಎದ್ದು ತೌರುಮನೆಗೆ ತೌರು ಮನೆಯ ದಾರಿ ತುಳಿದಿದ್ದೆ. ನನ್ನ ಮಕ್ಕಳನ್ನು ತನ್ನ ಮಕ್ಕಳಂತೆ ಅವಳು ನೋಡಿಕೊಳ್ಳುತ್ತಾಳೆಂಬ ನಂಬುಗೆ ನನಗೆ.
ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ “ಬಿಡುಗಡೆ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ